AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ವಿಜಯ್​ ದೇವರಕೊಂಡ ಅಲ್ಲ; ಉಂಗುರ ತೋರಿಸಿ ಬಾಯ್​ಫ್ರೆಂಡ್​ ಯಾರು ಅಂತ ಹೇಳಿದ ರಶ್ಮಿಕಾ

ಸಿನಿಮಾ ಕೆಲಸಗಳಿಗಾಗಿ ಹೈದರಾಬಾದ್​ನಲ್ಲಿ ರಶ್ಮಿಕಾ ವಾಸವಾಗಿದ್ದಾರೆ. ಇನ್​ಸ್ಟಾಗ್ರಾಮ್​ ಲೈವ್​ ವೇಳೆ ಅವರು ಧರಿಸಿದ ಒಂದು ಉಂಗುರ ಎಲ್ಲರ ಗಮನ ಸೆಳೆದಿದೆ. ಅದರ ಬಗ್ಗೆ ನೆಟ್ಟಿಗರು ಪ್ರಶ್ನೆ ಕೇಳಿದ್ದಾರೆ.

Rashmika Mandanna: ವಿಜಯ್​ ದೇವರಕೊಂಡ ಅಲ್ಲ; ಉಂಗುರ ತೋರಿಸಿ ಬಾಯ್​ಫ್ರೆಂಡ್​ ಯಾರು ಅಂತ ಹೇಳಿದ ರಶ್ಮಿಕಾ
ರಶ್ಮಿಕಾ ಮಂದಣ್ಣ
ಮದನ್​ ಕುಮಾರ್​
| Edited By: |

Updated on:Apr 27, 2021 | 2:05 PM

Share

ನಟಿ ರಶ್ಮಿಕಾ ಮಂದಣ್ಣ ರಾಷ್ಟ್ರಮಟ್ಟದಲ್ಲಿ ಸುದ್ದಿ ಆಗುತ್ತಿದ್ದಾರೆ. ಕನ್ನಡದಿಂದ ಸಿನಿಮಾ ಪಯಣ ಆರಂಭಿಸಿದ ಈ ಚೆಲುವೆ ಈಗ ಬಾಲಿವುಡ್​ನಲ್ಲಿ ಮಿಂಚುತ್ತಿದ್ದಾರೆ. ಸಿನಿಮಾ ಮಾತ್ರವಲ್ಲದೇ ವೈಯಕ್ತಿಕ ಕಾರಣಕ್ಕಾಗಿಯೂ ರಶ್ಮಿಕಾ ಸುದ್ದಿ ಆಗುತ್ತಿರುತ್ತಾರೆ. ನಟ ವಿಜಯ್​ ದೇವರಕೊಂಡ ಜೊತೆಗಿನ ಒಡನಾಟದ ಕಾರಣದಿಂದ ಕೆಲವು ಗಾಸಿಪ್​ಗಳು ಹಬ್ಬಿದ್ದೂ ಉಂಟು. ರಕ್ಷಿತ್​ ಶೆಟ್ಟಿ ಜೊತೆ ನಿಶ್ಚಿತಾರ್ಥ ಮುರಿದುಬಿದ್ದ ಬಳಿಕ ರಶ್ಮಿಕಾ ಸಿಂಗಲ್​ ಆಗಿದ್ದಾರೆ. ಆದರೂ ಇತ್ತೀಚೆಗೆ ಅವರ ಬಾಯ್​ ಫ್ರೆಂಡ್​ ಯಾರು ಎಂಬ ಬಗ್ಗೆ ಪ್ರಶ್ನೆ ಎದುರಾಯಿತು.

ತಮಿಳು, ತೆಲುಗು, ಹಿಂದಿಯಲ್ಲಿ ಸಿನಿಮಾ ಮಾಡಲು ಆರಂಭಿಸಿದ ಬಳಿಕ ರಶ್ಮಿಕಾ ಅವರಿಗೆ ದೇಶಾದ್ಯಂತ ಅಭಿಮಾನಿಗಳು ಸಿಕ್ಕಿದ್ದಾರೆ. ಅವರೆಲ್ಲರ ಜೊತೆಗೂ ಸೋಶಿಯಲ್​ ಮೀಡಿಯಾ ಮೂಲಕ ಈ ಕಿರಿಕ್​ ಬೆಡಗಿ ಸಂಪರ್ಕದಲ್ಲಿ ಇದ್ದಾರೆ. ಅಭಿಮಾನಿಗಳ ಜೊತೆ ಮಾತನಾಡುವ ಸಲುವಾಗಿ ಅವರು ಇತ್ತೀಚೆಗೆ ಇನ್​ಸ್ಟಾಗ್ರಾಮ್​ನಲ್ಲಿ ಲೈವ್​ ಬಂದಿದ್ದರು. ಒಂದೂವರೆ ಲಕ್ಷಕ್ಕೂ ಅಧಿಕ ಜನರು ಈ ಲೈವ್​ ವೀಕ್ಷಿಸಿದ್ದಾರೆ. ಈ ವೇಳೆ ಹಲವು ಪ್ರಶ್ನೆಗಳನ್ನು ರಶ್ಮಿಕಾಗೆ ಕೇಳಲಾಯಿತು. ಆಗ ಬಾಯ್​ಫ್ರೆಂಡ್​ ವಿಷಯ ಕೂಡ ಪ್ರಸ್ತಾಪ ಆಯಿತು.

‘ನಿಮ್ಮ ಭಾಯ್​ಫ್ರೆಂಡ್​ ಯಾರು’ ಎಂದು ಅಭಿಮಾನಿಯೊಬ್ಬರು ಪ್ರಶ್ನೆ ಕೇಳಿಯೇ ಬಿಟ್ಟರು. ಅದಕ್ಕೆ ರಶ್ಮಿಕಾ ಕಿಂಚಿತ್ತೂ ಬೇಜಾರು ಮಾಡಿಕೊಳ್ಳಲಿಲ್ಲ. ನೇರವಾಗಿ ವಿಷಯಕ್ಕೆ ಬಂದ ಅವರು, ‘ಕೆಲಸವೇ ನನ್ನ ಬಾಯ್​ಫ್ರೆಂಡ್​. ಅದನ್ನು ಬಿಟ್ಟರೆ ನನಗೆ ಬೇರೆ ಯಾವುದಕ್ಕೂ ಸಮಯ ಇಲ್ಲ’ ಎಂದು ಹೇಳಿದರು. ಅಲ್ಲಿಗೆ ತಾವು ಸಿಂಗಲ್​ ಎಂಬುದನ್ನು ರಶ್ಮಿಕಾ ಸ್ಪಷ್ಟಪಡಿಸಿದರು. ವಿಜಯ್​ ದೇವರಕೊಂಡ ಜೊತೆ ಮತ್ತೆ ಯಾವಾಗ ಸಿನಿಮಾ ಮಾಡುತ್ತೀರಿ ಎಂಬ ಪ್ರಶ್ನೆಗೆ, ‘ನೀವು ಈ ಮಾತನ್ನು ಅವರಿಗೇ ಕೇಳಿಬೇಕು ಅಥವಾ ನಿರ್ದೇಶಕರಿಗೆ ಕೇಳಬೇಕು’ ಎಂದು ಉತ್ತರಿಸಿದ್ದಾರೆ.

ಸದ್ಯ ಸಿನಿಮಾ ಕೆಲಸಗಳಿಗಾಗಿ ಹೈದರಾಬಾದ್​ನಲ್ಲಿ ರಶ್ಮಿಕಾ ವಾಸವಾಗಿದ್ದಾರೆ. ಇನ್​ಸ್ಟಾಗ್ರಾಮ್​ ಲೈವ್​ ವೇಳೆ ಅವರು ಧರಿಸಿದ ಒಂದು ಉಂಗುರ ಎಲ್ಲರ ಗಮನ ಸೆಳೆದಿದೆ. ಅದರ ಬಗ್ಗೆಯೂ ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ. ಅದು ರಶ್ಮಿಕಾ ಪಾಲಿನ ಸ್ಪೆಷಲ್​ ಉಂಗುರವಂತೆ! ‘ಈ ರಿಂಗ್​ ಕೊಟ್ಟಿದ್ದಕ್ಕೆ ಧನ್ಯವಾದಗಳು. ಎಲ್ಲ ಅಭಿಮಾನಿಗಳ ಪರವಾಗಿ ನಾನು ಇದನ್ನು ಸ್ವೀಕರಿಸಿದ್ದೇನೆ. ಇದು ಯಾವಾಗಲೂ ನನ್ನ ಜೊತೆಗೆ ಇರುತ್ತದೆ. ನೀವೆಲ್ಲ ನನಗೆ ತುಂಬ ಸ್ಪೆಷಲ್​. ಅದೇ ಕಾರಣಕ್ಕಾಗಿ ಇದು ನನ್ನ ಜೀವನದ ಭಾಗ ಆಗಿದೆ. ನನ್ನ ಜನರು ಇದನ್ನು ನನಗೆ ಕೊಟ್ಟಿದ್ದು’ ಎಂದು ಅಭಿಮಾನಿಗಳ ಬಗ್ಗೆ ಪ್ರೀತಿಯ ಮಾತುಗಳನ್ನು ಆಡಿದ್ದಾರೆ ರಶ್ಮಿಕಾ.

ಸದ್ಯ ಲಾಕ್​ಡೌನ್​ ಇರುವ ಕಾರಣಕ್ಕೆ ರಶ್ಮಿಕಾ ಕರ್ನಾಟಕ್ಕೆ ಬರಲು ಸಾಧ್ಯವಾಗಿಲ್ಲ. ಅಲ್ಲು ಅರ್ಜುನ್​ ಜೊತೆಗಿನ ‘ಪುಷ್ಪ’ ಸೇರಿದಂತೆ ಅನೇಕ ಸಿನಿಮಾ ಕೆಲಸಗಳ ಸಲುವಾಗಿ ಹೈದರಾಬಾದ್​ನಲ್ಲೇ ಅವರು ಕಾಲ ಕಳೆಯುತ್ತಿದ್ದಾರೆ. ಕುಟುಂಬದವರನ್ನು ಭೇಟಿ ಮಾಡದೇ ತಿಂಗಳುಗಳೇ ಕಳೆದಿವೆ ಎಂದು ಅವರು ಹೇಳಿದ್ದಾರೆ. ಬಾಲಿವುಡ್​ನಲ್ಲಿ ‘ಗುಡ್​ ಬೈ’, ‘ಮಿಷನ್​ ಮಜ್ನು’ ಮುಂತಾದ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ.

ಇದನ್ನೂ ಓದಿ: Rashmika Mandanna: ರಶ್ಮಿಕಾಗೆ ಮಂಡಿಯೂರಿ ಪ್ರಪೋಸ್ ಮಾಡಿದ ವಿಜಯ್ ದೇವರಕೊಂಡ; ವಿಡಿಯೋ ವೈರಲ್

Rashmika Mandanna: ನ್ಯಾಷನಲ್​ ಕ್ರಶ್​ ರಶ್ಮಿಕಾ ಮಂದಣ್ಣ ಬದುಕು ಬದಲಾಯಿಸಿದ ಐದು ಪ್ರಮುಖ ಘಟನೆಗಳು!​

Published On - 1:20 pm, Tue, 27 April 21

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ