AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡವ ಭಾಷೆಯಲ್ಲಿ ಪ್ರೀತಿ ಹೊರಹಾಕಿದ ರಶ್ಮಿಕಾ ಮಂದಣ್ಣ; ಆ ಸಾಲುಗಳ ಅರ್ಥವೇನು?

ನಟಿ ರಶ್ಮಿಕಾ ಮಂದಣ್ಣ ಅವರ ಮಾತೃಭಾಷೆ ಕೊಡವ. ಆದರೆ, ಅವರು ಅದನ್ನು ಮಾತನಾಡಿದ್ದು ತುಂಬಾನೇ ಕಡಿಮೆ. ಈಗ ಅವರು ಈ ಭಾಷೆಯಲ್ಲಿ ಮಾತನಾಡಿ ವಿಡಿಯೋ ಹಂಚಿಕೊಂಡಿದ್ದಾರೆ. ಅವರು ಮಾತನಾಡಿದ್ದು ಅನೇಕರಿಗೆ ಅರ್ಥ ಆಗಿಲ್ಲ. ರಶ್ಮಿಕಾ ಅವರು ಹೇಳಿದ ಶಬ್ದಗಳ ಅರ್ಥ ಇಲ್ಲಿದೆ.

ಕೊಡವ ಭಾಷೆಯಲ್ಲಿ ಪ್ರೀತಿ ಹೊರಹಾಕಿದ ರಶ್ಮಿಕಾ ಮಂದಣ್ಣ; ಆ ಸಾಲುಗಳ ಅರ್ಥವೇನು?
ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on: Jul 02, 2024 | 8:55 AM

Share

ನಟಿ ರಶ್ಮಿಕಾ ಮಂದಣ್ಣ ಅವರು ಕೊಡಗಿನವರು. ಕೊಡಗಿನ ಬಗ್ಗೆ ಅವರಿಗೆ ವಿಶೇಷ ಪ್ರೀತಿ ಇದೆ. ಅವರು ಸಿನಿಮಾ ಕೆಲಸಕ್ಕಾಗಿ ಮುಂಬೈ, ಹೈದರಾಬಾದ್, ಚೆನ್ನೈ ಹೀಗೆ ಬೇರೆ ಬೇರೆ ನಗರಗಳಿಗೆ ಸುತ್ತುತ್ತಿರುತ್ತಾರೆ. ಸಮಯ ಸಿಕ್ಕಾಗ ಅವರು ಹುಟ್ಟೂರಿಗೆ ಬರುತ್ತಾರೆ. ಅಲ್ಲಿ ಸಮಯ ಕಳೆಯುತ್ತಾರೆ. ಇತ್ತೀಚೆಗೆ ರಶ್ಮಿಕಾ ಅವರು ಫ್ರೆಂಡ್ ಮದುವೆಗೆ ತೆರಳಿದ್ದರು. ಈ ವೇಳೆ ಅವರು ಕೊಡವ ಸ್ಟೈಲ್​ನಲ್ಲಿ ಮಿಂಚಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್ ಆಗಿದೆ.

ಫ್ರೆಂಡ್ ಮದುವೆಗಾಗಿ ರಶ್ಮಿಕಾ ಮಂದಣ್ಣ ಅವರು ಕೊಡಗಿಗೆ ಬಂದಿದ್ದರು. ಈ ಸಂದರ್ಭದಲ್ಲಿ ಕೊಡವ ಶೈಲಿಯಲ್ಲಿ ಸೀರೆ ಉಟ್ಟಿದ್ದಾರೆ. ಅಷ್ಟೇ ಅಲ್ಲ ತಮ್ಮ ಮಾತೃಭಾಷೆ ಕೊಡವದಲ್ಲಿ ಮಾತನಾಡಿದ್ದಾರೆ. ಈ ಸಂದರ್ಭದ ವಿಡಿಯೋನ ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ. ಅವರು ಮಾತನಾಡಿದ್ದು ಅನೇಕರಿಗೆ ಅರ್ಥ ಆಗಿಲ್ಲ. ಅವರು ಹೇಳಿದ ಶಬ್ದಗಳ ಅರ್ಥ ಇಲ್ಲಿದೆ.

‘ಎಲ್ಲರಿಗೂ ನಮಸ್ಕಾರ. ಕೊಡಗಿನಲ್ಲಿ ಫ್ರೆಂಡ್​ ಮದುವೆಗೆ ಬಂದ್ದೀನಿ. ಕೊಡಗಿನಲ್ಲಿರುವಾಗ ನಿಮ್ಮ ಜೊತೆ ಮಾತನಾಡೋದು ಖುಷಿ ವಿಚಾರ ಹೀಗಾಗಿ ಈ ವಿಡಿಯೋ ಮಾಡಿದ್ದೇನೆ. ನಿಮ್ಮ ಆಶೀರ್ವಾದಿಂದ ಇಷ್ಟು ಮುಂದೆ ಬಂದಿದೀನಿ. ಈಗಲೂ ನಾನು ಕಾವೇರಮ್ಮ ಮತ್ತು ಇಗ್ಗುತಪ್ಪ ಆಶೀರ್ವಾದಿಂದ ಮುಂದುವರಿಯುತ್ತಿದ್ದೇನೆ. ನೀವು ಯಾವಾಗಲೂ ನನಗೆ ಸಪೋರ್ಟ್ ಮಾಡಿದೀರಾ. ಇನ್ನಷ್ಟು ಹಾರ್ಡ್​ವರ್ಕ್ ಮಾಡಿ ನಾನು ಮುಂದೆ ಮತ್ತಷ್ಟು ಸಾಧಿಸುತ್ತೇನೆ ಎಂದು ಪ್ರಾಮಿಸ್ ಮಾಡುತ್ತೇನೆ. ನಿಮ್ಮೆಲ್ಲರ ಸಪೋರ್ಟ್​ಗೆ ಥ್ಯಾಂಕ್ಸ್. ನೀವು ಯಾವಾಗಲೂ ನಮ್ಮ ಮನಸ್ಸಲ್ಲಿ ಇರುತ್ತೀರಾ. ಧನ್ಯವಾದ’ ಎಂದಿದ್ದಾರೆ ರಶ್ಮಿಕಾ.

ಇದನ್ನೂ ಓದಿ: ಸ್ಟಾರ್ ನಟನೊಟ್ಟಿಗೆ ಸಿನಿಮಾ ಮುಹೂರ್ತ, ರಶ್ಮಿಕಾ ಮಂದಣ್ಣ ಗೈರು

ರಶ್ಮಿಕಾ ಅವರು ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರ ಆಗಸ್ಟ್ 15ರಂದು ರಿಲೀಸ್ ಆಗಬೇಕಿತ್ತು. ಆದರೆ, ಸಿನಿಮಾ ಬಿಡುಗಡೆ ದಿನಾಂಕ ಡಿಸೆಂಬರ್​ಗೆ ಮುಂದೂಡಲ್ಪಟ್ಟಿದೆ. ಈ ಬಗ್ಗೆ ಅಭಿಮಾನಿಗಳಿಗೆ ಬೇಸರ ಇದೆ. ಇದಲ್ಲದೆ ಇನ್ನೂ ಹಲವು ಸಿನಿಮಾಗಳಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ