AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿದ್ದಾರೆ ನೋಡಿ ರಶ್ಮಿಕಾ ಮಂದಣ್ಣ ತಾಯಿ; ಮಿಸ್ಸಿಂಗ್ ಫೀಲ್​ನಲ್ಲಿ ನಟಿ

ಈ ಫೋಟೋ ಅಭಿಮಾನಿಗಳಿಗೆ ಸಾಕಷ್ಟು ಇಷ್ಟ ಆಗಿದೆ. ರಶ್ಮಿಕಾ ಹಾಗೂ ಅವರ ತಾಯಿ ಸುಮನ್ ಇಬ್ಬರೂ ನಗುತ್ತಿದ್ದಾರೆ. ಈ ಫೋಟೋ ನೋಡಿದ ಅನೇಕರು ದೃಷ್ಟಿ ತೆಗೆಸಿಕೊಳ್ಳುವಂತೆ ಇವರಿಗೆ ಕೋರಿದ್ದಾರೆ. ಇನ್ನೂ ಕೆಲವರು ‘ತಾಯಿಯಂತೆ ಮಗಳು’ ಎಂದು ಕಮೆಂಟ್ ಮಾಡಿದ್ದಾರೆ.

ಹೇಗಿದ್ದಾರೆ ನೋಡಿ ರಶ್ಮಿಕಾ ಮಂದಣ್ಣ ತಾಯಿ; ಮಿಸ್ಸಿಂಗ್ ಫೀಲ್​ನಲ್ಲಿ ನಟಿ
ಸುಮನ್-ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on:Oct 04, 2023 | 10:29 AM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರಿಗೆ ಕುಟುಂಬದ ಮೇಲೆ ಸಾಕಷ್ಟು ಪ್ರೀತಿ ಇದೆ. ಇವರ ಮನೆಯಲ್ಲಿ ಅಮ್ಮ, ಅಪ್ಪ, ತಂಗಿ ಇದ್ದಾರೆ. ಆದರೆ, ರಶ್ಮಿಕಾ ಮಂದಣ್ಣ ಶೂಟಿಂಗ್ ಕಾರಣದಿಂದ ಬೇರೆ ಬೇರೆ ನಗರಗಳಿಗೆ ತೆರಳುತ್ತಾ ಇರುತ್ತಾರೆ. ಸಮಯ ಸಿಗದ ಕಾರಣ ಅವರಿಗೆ ಕೊಡಗಿನಲ್ಲಿರುವ ಮನೆಗೆ ಬರೋಕೆ ಆಗುತ್ತಿಲ್ಲ. ತಾಯಿಯನ್ನು ಅವರು ಸಖತ್ ಮಿಸ್ ಮಾಡಿಕೊಳ್ಳುತ್ತಾ ಇದ್ದಾರೆ. ಈ ಕುರಿತು ಫೋಟೋ ಒಂದನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ 12 ಗಂಟೆಯಲ್ಲಿ 9 ಲಕ್ಷ ಲೈಕ್ಸ್ ಸಿಕ್ಕಿದೆ.

ರಶ್ಮಿಕಾ ಮಂದಣ್ಣ ಇನ್​ಸ್ಟಾಗ್ರಾಮ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಆಗಾಗ ಅವರು ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ. ಅವರ ತಾಯಿ ಸುಮನ್ ಜೊತೆ ಇರುವ ಫೋಟೋನ ರಶ್ಮಿಕಾ ಮಂದಣ್ಣ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಅವರು ‘ಅಮ್ಮನ ಜೊತೆ ಗಾಸಿಪ್ ಮಾಡುತ್ತಿದ್ದೇನೆ. ನಾಲ್ಕು ವರ್ಷ ಹಿಂದಿನ ಫೋಟೋ. ಮಿಸ್ಸಿಂಗ್ ಫೀಲ್ ಆರಂಭ ಆಗಿದೆ’ ಎಂದು ಅವರು ಕ್ಯಾಪ್ಶನ್ ನೀಡಿದ್ದಾರೆ.

ಈ ಫೋಟೋ ಅಭಿಮಾನಿಗಳಿಗೆ ಸಾಕಷ್ಟು ಇಷ್ಟ ಆಗಿದೆ. ರಶ್ಮಿಕಾ ಹಾಗೂ ಅವರ ತಾಯಿ ಸುಮನ್ ಇಬ್ಬರೂ ನಗುತ್ತಿದ್ದಾರೆ. ಈ ಫೋಟೋ ನೋಡಿದ ಅನೇಕರು ದೃಷ್ಟಿ ತೆಗೆಸಿಕೊಳ್ಳುವಂತೆ ಇವರಿಗೆ ಕೋರಿದ್ದಾರೆ. ಇನ್ನೂ ಕೆಲವರು ‘ತಾಯಿಯಂತೆ ಮಗಳು’ ಎಂದು ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: ಮೂರನೇ ಬಾರಿಗೆ ಒಂದಾದ ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ; ಅಭಿಮಾನಿಗಳಲ್ಲಿ ಮೂಡಿದೆ ನಿರೀಕ್ಷೆ

ರಶ್ಮಿಕಾ ಮಂದಣ್ಣ ಅವರು ಸದ್ಯ ಸಾಲು ಸಾಲು ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ. ಅವರು ಗೀತಾಂಜಲಿ ಆಗಿ ನಟಿಸಿರುವ ‘ಅನಿಮಲ್’ ಚಿತ್ರ ರಿಲೀಸ್​ಗೆ ರೆಡಿ ಇದೆ. ಡಿಸೆಂಬರ್ 1ರಂದು ಸಿನಿಮಾ ಬಿಡುಗಡೆ ಆಗಲಿದೆ. ಈ ಚಿತ್ರಕ್ಕೆ ರಣಬೀರ್ ಕಪೂರ್  ಹೀರೋ. ಇನ್ನು, ‘ಪುಷ್ಪ 2’ ಚಿತ್ರದ ಕೆಲಸಗಳು ಭರದಿಂದ ಸಾಗುತ್ತಿವೆ. ಈ ಸಿನಿಮಾ ಮುಂದಿನ ವರ್ಷ ಆಗಸ್ಟ್ 15ರಂದು ರಿಲೀಸ್ ಆಗಲಿದೆ. ತಮಿಳಿನ ಧನುಷ್ ಚಿತ್ರಕ್ಕೂ ರಶ್ಮಿಕಾ ನಾಯಕಿ. ಈ ಕಾರಣದಿಂದ ಅವರು ಮುಂಬೈ, ಹೈದರಾಬಾದ್ ಹಾಗೂ ಚೆನ್ನೈ ಓಡಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:59 am, Wed, 4 October 23

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ