AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಡವಾಗಿ ಫೋಟೋ ಪೋಸ್ಟ್​ ಮಾಡಿದರೂ ಸಿಕ್ಕಿಬಿದ್ದ ರಶ್ಮಿಕಾ; ದೇವರಕೊಂಡ ಜೊತೆ ಟರ್ಕಿಯಲ್ಲಿ ಸುತ್ತಾಟ?

ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಪೋಸ್ಟ್​ ಮಾಡಿದ್ದಾರೆ. ಸುತ್ತಾಟವನ್ನು ಮಿಸ್ ಮಾಡಿಕೊಳ್ಳುತ್ತಿರುವುದಾಗಿ ಅವರು ಹೇಳಿದ್ದಾರೆ. ಅವರು ಕ್ಲಿಕ್ಕಿಸಿಕೊಂಡ ಫೋಟೋದ ಬ್ಯಾಕ್​ಗ್ರೌಂಡ್ ವಿಜಯ್ ದೇವರಕೊಂಡ ಟರ್ಕಿಯಿಂದ ಪೋಸ್ಟ್ ಮಾಡಿದ್ದ ಫೋಟೋ ಜೊತೆ ಸಾಮ್ಯತೆ ಹೊಂದಿದೆ.

ತಡವಾಗಿ ಫೋಟೋ ಪೋಸ್ಟ್​ ಮಾಡಿದರೂ ಸಿಕ್ಕಿಬಿದ್ದ ರಶ್ಮಿಕಾ; ದೇವರಕೊಂಡ ಜೊತೆ ಟರ್ಕಿಯಲ್ಲಿ ಸುತ್ತಾಟ?
ವಿಜಯ್-ರಶ್ಮಿಕಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 08, 2023 | 7:06 AM

Share

ವಿಜಯ್ ದೇವರಕೊಂಡ (Vijay Devarakonda) ಹಾಗೂ ರಶ್ಮಿಕಾ ಮಂದಣ್ಣ ಪ್ರೀತಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಅವರು ಈ ವಿಚಾರವನ್ನು ಒಪ್ಪಿಕೊಂಡಿಲ್ಲ. ಅಭಿಮಾನಿಗಳ ವಲಯದಲ್ಲಿ ಈ ಬಗ್ಗೆ ಭರ್ಜರಿ ಚರ್ಚೆಗಳು ಆಗುತ್ತಲೇ ಇರುತ್ತವೆ. ಇಬ್ಬರೂ ಒಂದೇ ಸ್ಥಳಕ್ಕೆ ತೆರಳಿರುತ್ತಾರೆ. ಆದರೆ, ಸೋಶಿಯಲ್ ಮೀಡಿಯಾದಲ್ಲಿ ಬೇರೆ ಬೇರೆ ದಿನಗಳಂದು ಫೋಟೋ ಪೋಸ್ಟ್ ಮಾಡುತ್ತಾರೆ. ಆದಾಗ್ಯೂ ಅಭಿಮಾನಿಗಳ ಕೈಲಿ ಸಿಕ್ಕಿ ಬೀಳುತ್ತಾರೆ. ಈಗ ರಶ್ಮಿಕಾ ಮಂದಣ್ಣ ಅವರನ್ನು ಅಭಿಮಾನಿಗಳು ಸಾಕ್ಷಿ ಸಮೇತ ಹಿಡಿದಿದ್ದಾರೆ. ವಿಜಯ್ ಹಾಗೂ ರಶ್ಮಿಕಾ ಟರ್ಕಿಯಲ್ಲಿ ಸುತ್ತಾಟ ನಡೆಸುತ್ತಿದ್ದರು ಎನ್ನಲಾಗಿದೆ.

‘ಗೀತ ಗೋವಿಂದಂ’ ಸಿನಿಮಾದಲ್ಲಿ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಒಟ್ಟಾಗಿ ನಟಿಸಿದರು. ಆ ಬಳಿಕ ‘ಡಿಯರ್ ಕಾಮ್ರೇಡ್’ ಚಿತ್ರದಲ್ಲಿ ಮತ್ತೆ ತೆರೆ ಹಂಚಿಕೊಂಡರು. ಇವರ ಕೆಮಿಸ್ಟ್ರಿ ಅಭಿಮಾನಿಗಳಿಗೆ ಇಷ್ಟವಾಗಿದೆ. ಇವರು ಒಟ್ಟಾಗಿ ಮತ್ತೊಂದು ಸಿನಿಮಾದಲ್ಲಿ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ವಿಜಯ್ ಹಾಗೂ ರಶ್ಮಿಕಾ ಲಿವ್ ಇನ್ ರಿಲೇಶನ್​ಶಿಪ್​ನಲ್ಲಿದ್ದಾರೆ ಎಂಬುದಕ್ಕೆ ಹಲವು ಸಾಕ್ಷ್ಯಗಳು ಸಿಕ್ಕಿವೆ. ಆದರೆ, ಈ ವಿಚಾರವನ್ನು ಅವರು ಒಪ್ಪಿಕೊಳ್ಳುತ್ತಿಲ್ಲ.

ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಪೋಸ್ಟ್​ ಮಾಡಿದ್ದಾರೆ. ಸುತ್ತಾಟವನ್ನು ಮಿಸ್ ಮಾಡಿಕೊಳ್ಳುತ್ತಿರುವುದಾಗಿ ಅವರು ಹೇಳಿದ್ದಾರೆ. ಅವರು ಕ್ಲಿಕ್ಕಿಸಿಕೊಂಡ ಫೋಟೋದ ಬ್ಯಾಕ್​ಗ್ರೌಂಡ್ ವಿಜಯ್ ದೇವರಕೊಂಡ ಟರ್ಕಿಯಿಂದ ಪೋಸ್ಟ್ ಮಾಡಿದ್ದ ಫೋಟೋ ಜೊತೆ ಸಾಮ್ಯತೆ ಹೊಂದಿದೆ.

ವಿಜಯ್ ದೇವರಕೊಂಡ ನಟನೆಯ ‘ಖುಷಿ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈ ಚಿತ್ರದ ಶೂಟಿಂಗ್​ ಟರ್ಕಿಯಲ್ಲಿ ನಡೆದಿತ್ತು. ವಿಜಯ್ ಸ್ವಲ್ಪ ದಿನ ಅಲ್ಲಿ ಸಮಯ ಕಳೆದಿದ್ದರು. ವಿಜಯ್ ಜೊತೆ ರಶ್ಮಿಕಾ ಮಂದಣ್ಣ ಕೂಡ ಜಾಯಿನ್ ಆಗಿದ್ದರು ಎನ್ನಲಾಗುತ್ತಿದೆ. ಶೂಟಿಂಗ್ ಸಂದರ್ಭದಲ್ಲೇ ವಿಜಯ್ ದೇವರಕೊಂಡ ಫೋಟೋ ಪೋಸ್ಟ್​ ಮಾಡಿದ್ದರು. ಆದರೆ, ರಶ್ಮಿಕಾ ಮಂದಣ್ಣ ಅವರು ತಡವಾಗಿ ಫೋಟೋ ಶೇರ್ ಮಾಡಿ ಸಿಕ್ಕಿ ಬಿದ್ದಿದ್ದಾರೆ.

ವಿಜಯ್ ದೇವರಕೊಂಡ ಹಾಕಿದ್ದ ಫೋಟೋ ಹಾಗೂ ರಶ್ಮಿಕಾ ಮಂದಣ್ಣ ಹಾಕಿದ್ದ ಫೋಟೋಗಳನ್ನು ಜೋಡಿಸಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗುತ್ತಿದೆ. ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ಬೇಗ ಮದುವೆ ಆಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಇದನ್ನೂ ಓದಿ: ಮೂರನೇ ಬಾರಿಗೆ ಒಂದಾದ ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ; ಅಭಿಮಾನಿಗಳಲ್ಲಿ ಮೂಡಿದೆ ನಿರೀಕ್ಷೆ

ಈ ಮೊದಲು ಈ ರೀತಿಯ ಸಾಕಷ್ಟು ಫೋಟೋಗಳು ವೈರಲ್ ಆಗಿವೆ. ರಶ್ಮಿಕಾ ಮಂದಣ್ಣ ಬೀಚ್ ಸೈಡ್​ನಲ್ಲಿ ಪೋಸ್ ಕೊಟ್ಟಿದ್ದರು.  ವಿಜಯ್ ದೇವರಕೊಂಡ ಕೂಡ ಇಲ್ಲಿಯೇ ಫೋಟೋ ಹಾಕಿದ್ದರು. ಇತ್ತೀಚೆಗೆ ರಶ್ಮಿಕಾ ಮಂದಣ್ಣ ಅವರು ಸಹಾಯಕನ ಮದುವೆಗೆ ತೆರಳಿದ್ದರು. ಸಾರಿಯಲ್ಲಿ ಅವರು ಗಮನ ಸೆಳೆದಿದ್ದರು. ಮನೆಯ ಸಮೀಪ ಒಂದು ಫೋಟೋನ ಕ್ಲಿಕ್ ಮಾಡಿಕೊಂಡಿದ್ದರು. ಇದು ವಿಜಯ್ ದೇವರಕೊಂಡ ಮನೆ ಎಂದು ಅನೇಕರು ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್