ದೀಪಿಕಾರನ್ನು ಕಾಪಿ ಮಾಡಿ ಸಿಕ್ಕಿ ಬಿದ್ರಾ ರಶ್ಮಿಕಾ ಮಂದಣ್ಣ? ಸೈಮಾದಲ್ಲಿ ಕಣ್ಣು ಕುಕ್ಕಿದ ಗೌನ್​

2018ರಲ್ಲಿ ದೀಪಿಕಾ ಧರಿಸಿದ್ದ ಗೌನ್​ ನೋಡಿ ಫ್ಯಾಷನ್​ ಪ್ರಿಯರು ಖುಷಿ ಆಗಿದ್ದರು. ಅದೇ ವಿನ್ಯಾಸವನ್ನು ಈಗ ರಶ್ಮಿಕಾ ಮಂದಣ್ಣ ಕಾಪಿ ಮಾಡಿದ್ದಾರೆ ಎಂದು ಒಂದು ವರ್ಗದ ನೆಟ್ಟಿಗರು ಕಮೆಂಟ್​ ಮಾಡುತ್ತಿದ್ದಾರೆ.

ದೀಪಿಕಾರನ್ನು ಕಾಪಿ ಮಾಡಿ ಸಿಕ್ಕಿ ಬಿದ್ರಾ ರಶ್ಮಿಕಾ ಮಂದಣ್ಣ? ಸೈಮಾದಲ್ಲಿ ಕಣ್ಣು ಕುಕ್ಕಿದ ಗೌನ್​
ದೀಪಿಕಾ ಪಡುಕೋಣೆ, ರಶ್ಮಿಕಾ ಮಂದಣ್ಣ
Follow us
| Updated By: ಮದನ್​ ಕುಮಾರ್​

Updated on: Sep 24, 2021 | 12:34 PM

ನಟಿ ರಶ್ಮಿಕಾ ಮಂದಣ್ಣ ಏನೇ ಮಾಡಿದರೂ ಅದು ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತದೆ. ಅಷ್ಟರಮಟ್ಟಿಗೆ ಅವರು ಜನಪ್ರಿಯತೆ ಪಡೆದುಕೊಂಡಿದ್ದಾರೆ. ಇತ್ತೀಚೆಗೆ ಅವರು ಸೈಮಾ ಅವಾರ್ಡ್ಸ್​ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆ ವೇಳೆ ಅವರು ಧರಿಸಿದ್ದ ಗೌನ್​ ಸಖತ್​ ಗಮನ ಸೆಳೆಯಿತು. ಅಭಿಮಾನಿಗಳಿಂದ ಮೆಚ್ಚುಗೆಯೂ ವ್ಯಕ್ತವಾಯಿತು. ಕೆಂಪು ಬಣ್ಣದ ಆ ಗೌನ್​ನಲ್ಲಿ ಕಂಗೊಳಿಸಿದ ರಶ್ಮಿಕಾ ಅವರು ರೆಡ್​ ಕಾರ್ಪೆಟ್​ನಲ್ಲಿ ಹೆಜ್ಜೆ ಹಾಕಿ ಸಂಭ್ರಮಿಸಿದರು. ಆದರೆ ಅದರ ಬೆನ್ನಲ್ಲೇ ಕಾಪಿ ಎಂಬ ಆರೋಪ ಕೇಳಿಬಂದಿದೆ. ಈ ಗೌನ್​ ನೋಡಿದ ಬಹುತೇಕರು ದೀಪಿಕಾ ಪಡುಕೋಣೆ ಅವರನ್ನು ನೆನಪು ಮಾಡಿಕೊಂಡಿದ್ದಾರೆ.

ದೀಪಿಕಾ ಪಡುಕೋಣೆ ಅವರು 2018ರಲ್ಲಿ ನಡೆದ ಮೆಟ್​ ಗಾಲಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗ ಇದೇ ರೀತಿಯ ಗೌನ್​ ಧರಿಸಿದ್ದರು. ಅದು ಕೂಡ ಕೆಂಪು ಬಣ್ಣದ್ದಾಗಿತ್ತು. ಮೆಟ್​ ಗಾಲಾ ಎಂಬುದು ಪ್ರತಿ ವರ್ಷ ನ್ಯೂಯಾರ್ಕ್​ನಲ್ಲಿ ನಡೆಯುವ ಒಂದು ಫ್ಯಾಷನ್​ ಹಬ್ಬ. ಈ ಸಮಾರಂಭದಲ್ಲಿ ಜಗತ್ತಿನ ಹಲವು ಖ್ಯಾತ ಸೆಲೆಬ್ರಿಟಿಗಳು ಭಾಗವಹಿಸುತ್ತಾರೆ. ಅದರಲ್ಲಿ ಪಾಲ್ಗೊಳ್ಳುವ ನಟ-ನಟಿಯರು ಧರಿಸುವ ಬಟ್ಟೆ ಸಿಕ್ಕಾಪಟ್ಟೆ ಹೈಲೈಟ್​ ಆಗುತ್ತದೆ.

2018ರಲ್ಲಿ ದೀಪಿಕಾ ಧರಿಸಿದ್ದ ಗೌನ್​ ನೋಡಿ ಫ್ಯಾಷನ್​ ಪ್ರಿಯರು ಖುಷಿ ಆಗಿದ್ದರು. ಅದೇ ವಿನ್ಯಾಸವನ್ನು ಈಗ ರಶ್ಮಿಕಾ ಕಾಪಿ ಮಾಡಿದ್ದಾರೆ ಎಂದು ಒಂದು ವರ್ಗದ ನೆಟ್ಟಿಗರು ಕಮೆಂಟ್​ ಮಾಡುತ್ತಿದ್ದಾರೆ. ಆದರೆ ಅದರ ಬಗ್ಗೆ ರಶ್ಮಿಕಾ ಯಾವುದೇ ಪ್ರತಿಕ್ರಿಯೆ ನೀಡುವ ಗೋಜಿಗೆ ಕೈ ಹಾಕಿಲ್ಲ.

ಈ ಟೀಕೆಗಳೆಲ್ಲ ಏನೇ ಇರಲಿ, ರಶ್ಮಿಕಾ ಪಡೆದಿರುವ ಪ್ರಶಸ್ತಿಗಳ ಮುಂದೆ ಬೇರೇನೂ ಮುಖ್ಯವಾಗುತ್ತಿಲ್ಲ. ಸೈಮಾ ಸಮಾರಂಭದಲ್ಲಿ ಅವರಿಗೆ ಎರಡು ಪ್ರಶಸ್ತಿ ಸಿಕ್ಕಿವೆ. ಕನ್ನಡದಲ್ಲಿ ನಟಿಸಿದ ‘ಯಜಮಾನ’ ಹಾಗೂ ತೆಲುಗಿನಲ್ಲಿ ನಟಿಸಿದ ‘ಡಿಯರ್​ ಕಾಮ್ರೇಡ್​’ ಚಿತ್ರಗಳಿಗೆ ರಶ್ಮಿಕಾ ಪ್ರಶಸ್ತಿ ಪಡೆದಿದ್ದಾರೆ. ಅತ್ಯುತ್ತಮ ನಟಿ (ಕ್ರಿಟಿಕ್ಸ್​) ಅವಾರ್ಡ್​ ಅವರಿಗೆ ಸಿಕ್ಕಿದೆ. ಇದು ಅವರ ಅಭಿಮಾನಿಗಳಿಗೂ ಹೆಮ್ಮೆ ತಂದಿದೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದ ರಶ್ಮಿಕಾ, ಸಂತಸ ವ್ಯಕ್ತಪಡಿಸಿದ್ದರು.

‘ಕಳೆದ ರಾತ್ರಿ ಸ್ಪೆಷಲ್​ ಆಗಿತ್ತು. ಯಜಮಾನ ಮತ್ತು ಡಿಯರ್​ ಕಾಮ್ರೇಡ್​ ಚಿತ್ರಗಳಿಗಾಗಿ ಕನ್ನಡ ಹಾಗೂ ತೆಲುಗಿನಲ್ಲಿ ಪ್ರಶಸ್ತಿ ಪಡೆದಿದ್ದೇನೆ. ಮುಂದೊಂದು ದಿನ ಹಿಂದಿ, ಮಲಯಾಳಂ ಮತ್ತು ತಮಿಳಿನಲ್ಲಿಯೂ ಪಡೆಯುತ್ತೇನೆ. ಥ್ಯಾಂಕ್ಯೂ ಸೈಮಾ. ನನ್ನನ್ನು ನಟಿಯಾಗಿಸಿದ ಪ್ರೀತಿಪಾತ್ರರಿಗೆಲ್ಲ ಧನ್ಯವಾದಗಳು’ ಎಂದು ಅವರು ಪೋಸ್ಟ್​ ಮಾಡಿದ್ದರು.

ಇದನ್ನೂ ಓದಿ:

ಮಾಡೋಕೆ ಏನೂ ಕೆಲಸ ಇಲ್ಲದಿದ್ದರೆ ರಶ್ಮಿಕಾ ಮಂದಣ್ಣ ಏನು ಮಾಡ್ತಾರೆ? ಫೋಟೋ ಸಹಿತ ಸಿಕ್ತು ಉತ್ತರ

ಕನ್ನಡ ಸಿನಿಮಾ ಮಾಡೋಕೆ ಈಗ ಟೈಮ್​ ಇಲ್ಲ; ರಶ್ಮಿಕಾ ಮಂದಣ್ಣ ನೇರ ಉತ್ತರ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ