AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ‘ನಮ್ಮ ಊರಿಗೆ ಬಂದು ತುಂಬಾ ಸಮಯವಾಯ್ತು’; ಬೆಂಗಳೂರ ಬಗ್ಗೆ ರಶ್ಮಿಕಾ ಮಂದಣ್ಣ ಮಾತು

Rashmika Mandanna | Pushpa: ‘ಪುಷ್ಪ’ ಚಿತ್ರಕ್ಕೆ ರಶ್ಮಿಕಾ ನಾಯಕಿ. ಈ ಚಿತ್ರದಲ್ಲಿ ಅವರು ಭಿನ್ನ ಗೆಟಪ್​ ತಾಳಿದ್ದಾರೆ. ಹೀಗಾಗಿ, ಅವರ ಅಭಿಮಾನಿಗಳು ಈ ಸಿನಿಮಾ ನೋಡೋಕೆ ಕಾದು ಕೂತಿದ್ದಾರೆ. ಈ ಚಿತ್ರ ತೆಲುಗು ಮಾತ್ರವಲ್ಲದೆ, ಕನ್ನಡದಲ್ಲೂ ತೆರೆಗೆ ಬರುತ್ತಿದೆ.

Rashmika Mandanna: ‘ನಮ್ಮ ಊರಿಗೆ ಬಂದು ತುಂಬಾ ಸಮಯವಾಯ್ತು’; ಬೆಂಗಳೂರ ಬಗ್ಗೆ ರಶ್ಮಿಕಾ ಮಂದಣ್ಣ ಮಾತು
ರಶ್ಮಿಕಾ
TV9 Web
| Edited By: |

Updated on:Dec 15, 2021 | 4:12 PM

Share

ರಶ್ಮಿಕಾ ಮಂದಣ್ಣ (Rashmika Mandanna) ಅವರು ಈಗ ಇಡೀ ಭಾರತಾದ್ಯಂತ ಫೇಮಸ್​ ಆಗಿದ್ದಾರೆ. ಅವರಿಗೆ ಟಾಲಿವುಡ್​, ಬಾಲಿವುಡ್​ಗಳಲ್ಲೂ ಆಫರ್ ಇದೆ. ಕನ್ನಡದ ಬಗ್ಗೆ ಅವರು ಅಷ್ಟು ಒಲವು ತೋರುವುದಿಲ್ಲ ಎನ್ನುವ ಆಪಾದನೆ ಇದೆ. ಇದರ ಮಧ್ಯೆಯೂ ರಶ್ಮಿಕಾಗೆ ಸಾಕಷ್ಟು ಫ್ಯಾನ್ಸ್​ ಇದ್ದಾರೆ. ‘ಪುಷ್ಪ’ ಸಿನಿಮಾ ಮೂಲಕ ರಶ್ಮಿಕಾ ಮಂದಣ್ಣ ಪ್ರೇಕ್ಷಕರ ಎದುರು ಬರುತ್ತಿದ್ದಾರೆ. ಈ ಸಿನಿಮಾದ ಪ್ರಚಾರಕ್ಕೆ ಅವರು ಬೆಂಗಳೂರಿಗೆ ಬಂದಿದ್ದರು. ಈ ವೇಳೆ ಅವರು ಬೆಂಗಳೂರ ಬಗ್ಗೆ ಮಾತನಾಡಿದ್ದಾರೆ. ‘ಪುಷ್ಪ’ ಚಿತ್ರಕ್ಕೆ ರಶ್ಮಿಕಾ ನಾಯಕಿ. ಈ ಚಿತ್ರದಲ್ಲಿ ಅವರು ಭಿನ್ನ ಗೆಟಪ್​ ತಾಳಿದ್ದಾರೆ. ಹೀಗಾಗಿ, ಅವರ ಅಭಿಮಾನಿಗಳು ಈ ಸಿನಿಮಾ ನೋಡೋಕೆ ಕಾದು ಕೂತಿದ್ದಾರೆ. ಈ ಚಿತ್ರ ತೆಲುಗು ಮಾತ್ರವಲ್ಲದೆ, ಕನ್ನಡದಲ್ಲೂ ತೆರೆಗೆ ಬರುತ್ತಿದೆ. ಈ ಚಿತ್ರಕ್ಕೆ ಈಗಾಗಲೇ ಸಾಕಷ್ಟು ಪ್ರಚಾರ ನೀಡಲಾಗಿದೆ. ಹೈದರಾಬಾದ್​, ಚೆನ್ನೈ ಮೊದಲಾದ ಕಡೆಗಳಲ್ಲಿ ಚಿತ್ರದ ಪ್ರಚಾರ ಕಾರ್ಯ ನಡೆಯುತ್ತಿದೆ. ಇಂದು (ಡಿಸೆಂಬರ್​ 15) ಬೆಂಗಳೂರಿಗೆ ಸಿನಿಮಾ ತಂಡ ಆಗಮಿಸಿತ್ತು. ಈ ವೇಳೆ ಸಿನಿಮಾ ಬಗ್ಗೆ ಒಂದಷ್ಟು ಮಾಹಿತಿ ಹಂಚಿಕೊಂಡಿದೆ. ರಶ್ಮಿಕಾ ಮಂದಣ್ಣ, ಅಲ್ಲು ಅರ್ಜುನ್​ ವೇದಿಕೆ ಏರಿ ಮಾತನಾಡಿದ್ದಾರೆ.

ರಶ್ಮಿಕಾ ಸಾಲುಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಮುಂಬೈ, ಹೈದರಾಬಾದ್​ ಎಂದು ಸುತ್ತಾಟ ನಡೆಸುತ್ತಿದ್ದಾರೆ. ಇದರ ಮಧ್ಯೆ ಅವರಿಗೆ ಬೆಂಗಳೂರಿಗೆ ಹಾಗೂ ಊರಿಗೆ ಹೋಗೋಕೆ ಟೈಮ್​ ಸಿಕ್ಕಿಲ್ಲ. ಈ ಬಗ್ಗೆ ರಶ್ಮಿಕಾ ಮಾತನಾಡಿದ್ದಾರೆ. ‘ಬೆಂಗಳೂರಿಗೆ, ನಮ್ಮೂರಿಗೆ ಹೋಗದೆ ತುಂಬಾ ಸಮಯವಾಯ್ತು. ಸಿನಿಮಾ ಕೆಲಸಗಳಲ್ಲೇ ನಾನು ಬ್ಯುಸಿಯಾದೆ’ ಎಂದಿದ್ದಾರೆ ಅವರು.

‘ಪುಷ್ಪ’ ಸಿನಿಮಾದ ಬುಕಿಂಗ್​ ಈಗಾಗಲೇ ಆರಂಭಗೊಂಡಿದೆ. ಸಿನಿಮಾಗೆ ಅದ್ದೂರಿಯಾಗಿ ಓಪನಿಂಗ್​ ಸಿಗುವ ಸಾಧ್ಯತೆ ಇದೆ. ಬಹುತೇಕ ಶೋಗಳು ಈಗಾಗಲೇ ಹೌಸ್​ಫುಲ್​ ಆಗುತ್ತಿದೆ. ‘ಪುಷ್ಪ’ ಚಿತ್ರಕ್ಕೆ ಸುಕುಮಾರ್​ ಅವರ ನಿರ್ದೇಶನವಿದೆ. ಡಾಲಿ ಧನಂಜಯ್​, ಫಹಾದ್​ ಫಾಸಿಲ್​, ಜಗಪತಿ ಬಾಬು ಪ್ರಕಾಶ್​ ರಾಜ್​ ಮುಂತಾದ ಸ್ಟಾರ್​ ಕಲಾವಿದರು ಕೂಡ ‘ಪುಷ್ಪ’ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ. ಎರಡು ಪಾರ್ಟ್​ಗಳಲ್ಲಿ ಈ ಚಿತ್ರ ತಯಾರಾಗಿದ್ದು, ಡಿ.17ರಂದು ಮೊದಲ ಪಾರ್ಟ್​ ಮಾತ್ರ ಬಿಡುಗಡೆ ಆಗುತ್ತಿದೆ.

ಇದನ್ನೂ ಓದಿ: Pushpa Movie: ರಶ್ಮಿಕಾ, ಅಲ್ಲು ಅರ್ಜುನ್​ ನಟನೆಯ ‘ಪುಷ್ಪ’ ಸುದ್ದಿಗೋಷ್ಠಿ ಲೈವ್​ ನೋಡಲು ಇಲ್ಲಿ ಕ್ಲಿಕ್​ ಮಾಡಿ

Published On - 3:06 pm, Wed, 15 December 21

Follow Us
ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ?
ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ?
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್