AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಬ್ಬಾ, ಇದು ತುಂಬಾ ನೋವುಂಟು ಮಾಡುತ್ತೆ’; ಬಣ್ಣದ ಲೋಕದ ಕಷ್ಟ ತೆರೆದಿಟ್ಟ ನಟಿ

ಹೀರೋಯಿನ್​ಗಳು ತಮ್ಮ ಬ್ಯೂಟಿಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಾರೆ. ಇದಕ್ಕಾಗಿ ದೊಡ್ಡ ಮೊತ್ತದ ಹಣ ಖರ್ಚು ಮಾಡುತ್ತಾರೆ. ಬ್ಯೂಟಿ ಪಾರ್ಲರ್​ಗೆ ತೆರಳಿ ನಾನಾ ರೀತಿಯ ಪ್ರಕ್ರಿಯೆಗೆ ಒಳಗಾಗುತ್ತಾರೆ. ರಶ್ಮಿಕಾ ಮಂದಣ್ಣ ಕೂಡ ಇದಕ್ಕೆ ಹೊರತಾಗಿಲ್ಲ.

‘ಅಬ್ಬಾ, ಇದು ತುಂಬಾ ನೋವುಂಟು ಮಾಡುತ್ತೆ’; ಬಣ್ಣದ ಲೋಕದ ಕಷ್ಟ ತೆರೆದಿಟ್ಟ ನಟಿ
ರಶ್ಮಿಕಾ
TV9 Web
| Edited By: |

Updated on: Dec 21, 2021 | 5:46 PM

Share

ರಶ್ಮಿಕಾ ಮಂದಣ್ಣ (Rashmika Mandanna) ಅವರು ‘ಪುಷ್ಪ’ ಸಿನಿಮಾದ (Pushpa Movie) ಗೆಲುವಿನ ಖುಷಿಯಲ್ಲಿದ್ದಾರೆ. ಚಿತ್ರಕ್ಕೆ ಎಲ್ಲ ಕಡೆಗಳಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ. ಸಿನಿಮಾ ನೋಡಿ ಅನೇಕರು ರಶ್ಮಿಕಾ ಪಾತ್ರದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಈಗ ರಶ್ಮಿಕಾ ಇನ್​​ಸ್ಟಾಗ್ರಾಮ್​​ನಲ್ಲಿ ಸ್ಟೋರಿ ಒಂದನ್ನು ಹಂಚಿಕೊಂಡಿದ್ದಾರೆ. ನಟ/ನಟಿಯರ ಬದುಕು ತುಂಬಾನೇ ಅದ್ಭುತವಾಗಿ ಕಾಣುತ್ತದೆ. ನಾವೂ ಅವರಂತೆ ಆಗಬೇಕು ಎಂದು ಅನೇಕರು ಬಯಸುತ್ತಾರೆ. ಆದರೆ, ಹೀರೋಯಿನ್​ ಆಗೋದು ಅಷ್ಟು ಸುಲಭದ ಮಾತಲ್ಲ. ಅದಕ್ಕಾಗಿ ತುಂಬಾನೇ ಕಷ್ಟಪಡಬೇಕಾಗುತ್ತದೆ. ಈ ಮಾತನ್ನು ರಶ್ಮಿಕಾ ಮಂದಣ್ಣ ಹೆಳಿದ್ದಾರೆ.

ಹೀರೋಯಿನ್​ಗಳು ತಮ್ಮ ಬ್ಯೂಟಿಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಾರೆ. ಇದಕ್ಕಾಗಿ ದೊಡ್ಡ ಮೊತ್ತದ ಹಣ ಖರ್ಚು ಮಾಡುತ್ತಾರೆ. ಬ್ಯೂಟಿ ಪಾರ್ಲರ್​ಗೆ ತೆರಳಿ ನಾನಾ ರೀತಿಯ ಪ್ರಕ್ರಿಯೆಗೆ ಒಳಗಾಗುತ್ತಾರೆ. ರಶ್ಮಿಕಾ ಮಂದಣ್ಣ ಕೂಡ ಇದಕ್ಕೆ ಹೊರತಾಗಿಲ್ಲ. ಅವರು ಹೀರೋಯಿನ್​ ಆದ ನಂತರದಲ್ಲಿ ತಮ್ಮ ಫಿಟ್​ನೆಸ್​ ಹಾಗೂ ಸೌಂದರ್ಯಕ್ಕೆ ಹೆಚ್ಚು ಪ್ರಾಮುಖ್ಯತೆ ಕೊಡುತ್ತಿದ್ದಾರೆ. ಈ ಬಗ್ಗೆ ಅವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

‘ಒಳ್ಳೆಯ ಪಾರ್ಟ್​ ಮಾತ್ರ ನೋಡಿ ನೀವು ನಟರಾಗಲು ಬಯಸುತ್ತೀರಾ? ಬೇಡ. ಆದರೆ, ಇದರಲ್ಲಿ ಬಹಳ ವಿಚಾರ ಇದೆ. ಉದಾಹರಣೆ ನೀವು ಹಲವು ಬಾರಿ ಲೇಸರ್ ಪ್ರಕ್ರಿಯೆಗೆ ಒಳಪಡಬೇಕು. ಅಬ್ಬಾ, ಇದು ತುಂಬಾ ನೋವುಂಟುಮಾಡುತ್ತದೆ’ ಎಂದು ರಶ್ಮಿಕಾ ಕೈ ಚಿತ್ರ ಹಾಕಿಕೊಂಡಿದ್ದಾರೆ.

ವಿಜಯ್​ ದೇವರಕೊಂಡ  ಹಾಗೂ ರಶ್ಮಿಕಾ ಮಂದಣ್ಣ ಬೆಸ್ಟ್ ಫ್ರೆಂಡ್ಸ್​​. ‘ಗೀತ ಗೋವಿಂದಂ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದ ಇವರ ನಡುವೆ ಒಳ್ಳೆಯ ಬಾಂಧವ್ಯ ಬೆಳೆದಿತ್ತು. ಇಬ್ಬರೂ ಸಾಕಷ್ಟು ಬಾರಿ ಒಟ್ಟಾಗಿ ಕಾಣಿಸಿಕೊಂಡ ಉದಾಹರಣೆ ಕೂಡ ಇದೆ. ಈಗ ರಶ್ಮಿಕಾ ಮಂದಣ್ಣ ಹಾಗೂ ವಿಜಯ್​ ದೇವರಕೊಂಡ ಮುಂಬೈ ಹೋಟೆಲ್​ ಒಂದರಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ರಶ್ಮಿಕಾ ಮಂದಣ್ಣ ಹಾಗೂ ವಿಜಯ್​ ಇಬ್ಬರೂ ತಮ್ಮ ತಮ್ಮ ಸಿನಿಮಾ ಕೆಲಸಗಳಿಗಾಗಿ ಮುಂಬೈಗೆ ತೆರಳಿದ್ದಾರೆ. ಈ ವೇಳೆ ಇಬ್ಬರೂ ಬಿಡುವು ಮಾಡಿಕೊಂಡು ಒಂದು ಕಡೆ ಸೇರಿದ್ದಾರೆ. ಇಬ್ಬರೂ ಮುಂಬೈನಲ್ಲಿ ಒಟ್ಟಾಗಿ ಊಟ ಸವಿದಿದ್ದಾರೆ.

ಇದನ್ನೂ ಓದಿ:  ರಶ್ಮಿಕಾ ಜತೆ ತೆರೆಹಂಚಿಕೊಳ್ಳುವ ಬಗ್ಗೆ ಪ್ರತಿಕ್ರಿಯಿಸಿದ ಧನಂಜಯ

ತೆಲುಗು ಬಿಗ್​ ಬಾಸ್​ ಫಿನಾಲೆ; ವೇದಿಕೆ ಮೇಲೆ ರಶ್ಮಿಕಾ, ರಾಜಮೌಳಿ, ಆಲಿಯಾ ಭಟ್​, ರಣಬೀರ್​ ಕಪೂರ್

ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು