AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಬ್ಬಾ, ಇದು ತುಂಬಾ ನೋವುಂಟು ಮಾಡುತ್ತೆ’; ಬಣ್ಣದ ಲೋಕದ ಕಷ್ಟ ತೆರೆದಿಟ್ಟ ನಟಿ

ಹೀರೋಯಿನ್​ಗಳು ತಮ್ಮ ಬ್ಯೂಟಿಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಾರೆ. ಇದಕ್ಕಾಗಿ ದೊಡ್ಡ ಮೊತ್ತದ ಹಣ ಖರ್ಚು ಮಾಡುತ್ತಾರೆ. ಬ್ಯೂಟಿ ಪಾರ್ಲರ್​ಗೆ ತೆರಳಿ ನಾನಾ ರೀತಿಯ ಪ್ರಕ್ರಿಯೆಗೆ ಒಳಗಾಗುತ್ತಾರೆ. ರಶ್ಮಿಕಾ ಮಂದಣ್ಣ ಕೂಡ ಇದಕ್ಕೆ ಹೊರತಾಗಿಲ್ಲ.

‘ಅಬ್ಬಾ, ಇದು ತುಂಬಾ ನೋವುಂಟು ಮಾಡುತ್ತೆ’; ಬಣ್ಣದ ಲೋಕದ ಕಷ್ಟ ತೆರೆದಿಟ್ಟ ನಟಿ
ರಶ್ಮಿಕಾ
TV9 Web
| Edited By: |

Updated on: Dec 21, 2021 | 5:46 PM

Share

ರಶ್ಮಿಕಾ ಮಂದಣ್ಣ (Rashmika Mandanna) ಅವರು ‘ಪುಷ್ಪ’ ಸಿನಿಮಾದ (Pushpa Movie) ಗೆಲುವಿನ ಖುಷಿಯಲ್ಲಿದ್ದಾರೆ. ಚಿತ್ರಕ್ಕೆ ಎಲ್ಲ ಕಡೆಗಳಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ. ಸಿನಿಮಾ ನೋಡಿ ಅನೇಕರು ರಶ್ಮಿಕಾ ಪಾತ್ರದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಈಗ ರಶ್ಮಿಕಾ ಇನ್​​ಸ್ಟಾಗ್ರಾಮ್​​ನಲ್ಲಿ ಸ್ಟೋರಿ ಒಂದನ್ನು ಹಂಚಿಕೊಂಡಿದ್ದಾರೆ. ನಟ/ನಟಿಯರ ಬದುಕು ತುಂಬಾನೇ ಅದ್ಭುತವಾಗಿ ಕಾಣುತ್ತದೆ. ನಾವೂ ಅವರಂತೆ ಆಗಬೇಕು ಎಂದು ಅನೇಕರು ಬಯಸುತ್ತಾರೆ. ಆದರೆ, ಹೀರೋಯಿನ್​ ಆಗೋದು ಅಷ್ಟು ಸುಲಭದ ಮಾತಲ್ಲ. ಅದಕ್ಕಾಗಿ ತುಂಬಾನೇ ಕಷ್ಟಪಡಬೇಕಾಗುತ್ತದೆ. ಈ ಮಾತನ್ನು ರಶ್ಮಿಕಾ ಮಂದಣ್ಣ ಹೆಳಿದ್ದಾರೆ.

ಹೀರೋಯಿನ್​ಗಳು ತಮ್ಮ ಬ್ಯೂಟಿಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಾರೆ. ಇದಕ್ಕಾಗಿ ದೊಡ್ಡ ಮೊತ್ತದ ಹಣ ಖರ್ಚು ಮಾಡುತ್ತಾರೆ. ಬ್ಯೂಟಿ ಪಾರ್ಲರ್​ಗೆ ತೆರಳಿ ನಾನಾ ರೀತಿಯ ಪ್ರಕ್ರಿಯೆಗೆ ಒಳಗಾಗುತ್ತಾರೆ. ರಶ್ಮಿಕಾ ಮಂದಣ್ಣ ಕೂಡ ಇದಕ್ಕೆ ಹೊರತಾಗಿಲ್ಲ. ಅವರು ಹೀರೋಯಿನ್​ ಆದ ನಂತರದಲ್ಲಿ ತಮ್ಮ ಫಿಟ್​ನೆಸ್​ ಹಾಗೂ ಸೌಂದರ್ಯಕ್ಕೆ ಹೆಚ್ಚು ಪ್ರಾಮುಖ್ಯತೆ ಕೊಡುತ್ತಿದ್ದಾರೆ. ಈ ಬಗ್ಗೆ ಅವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

‘ಒಳ್ಳೆಯ ಪಾರ್ಟ್​ ಮಾತ್ರ ನೋಡಿ ನೀವು ನಟರಾಗಲು ಬಯಸುತ್ತೀರಾ? ಬೇಡ. ಆದರೆ, ಇದರಲ್ಲಿ ಬಹಳ ವಿಚಾರ ಇದೆ. ಉದಾಹರಣೆ ನೀವು ಹಲವು ಬಾರಿ ಲೇಸರ್ ಪ್ರಕ್ರಿಯೆಗೆ ಒಳಪಡಬೇಕು. ಅಬ್ಬಾ, ಇದು ತುಂಬಾ ನೋವುಂಟುಮಾಡುತ್ತದೆ’ ಎಂದು ರಶ್ಮಿಕಾ ಕೈ ಚಿತ್ರ ಹಾಕಿಕೊಂಡಿದ್ದಾರೆ.

ವಿಜಯ್​ ದೇವರಕೊಂಡ  ಹಾಗೂ ರಶ್ಮಿಕಾ ಮಂದಣ್ಣ ಬೆಸ್ಟ್ ಫ್ರೆಂಡ್ಸ್​​. ‘ಗೀತ ಗೋವಿಂದಂ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದ ಇವರ ನಡುವೆ ಒಳ್ಳೆಯ ಬಾಂಧವ್ಯ ಬೆಳೆದಿತ್ತು. ಇಬ್ಬರೂ ಸಾಕಷ್ಟು ಬಾರಿ ಒಟ್ಟಾಗಿ ಕಾಣಿಸಿಕೊಂಡ ಉದಾಹರಣೆ ಕೂಡ ಇದೆ. ಈಗ ರಶ್ಮಿಕಾ ಮಂದಣ್ಣ ಹಾಗೂ ವಿಜಯ್​ ದೇವರಕೊಂಡ ಮುಂಬೈ ಹೋಟೆಲ್​ ಒಂದರಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ರಶ್ಮಿಕಾ ಮಂದಣ್ಣ ಹಾಗೂ ವಿಜಯ್​ ಇಬ್ಬರೂ ತಮ್ಮ ತಮ್ಮ ಸಿನಿಮಾ ಕೆಲಸಗಳಿಗಾಗಿ ಮುಂಬೈಗೆ ತೆರಳಿದ್ದಾರೆ. ಈ ವೇಳೆ ಇಬ್ಬರೂ ಬಿಡುವು ಮಾಡಿಕೊಂಡು ಒಂದು ಕಡೆ ಸೇರಿದ್ದಾರೆ. ಇಬ್ಬರೂ ಮುಂಬೈನಲ್ಲಿ ಒಟ್ಟಾಗಿ ಊಟ ಸವಿದಿದ್ದಾರೆ.

ಇದನ್ನೂ ಓದಿ:  ರಶ್ಮಿಕಾ ಜತೆ ತೆರೆಹಂಚಿಕೊಳ್ಳುವ ಬಗ್ಗೆ ಪ್ರತಿಕ್ರಿಯಿಸಿದ ಧನಂಜಯ

ತೆಲುಗು ಬಿಗ್​ ಬಾಸ್​ ಫಿನಾಲೆ; ವೇದಿಕೆ ಮೇಲೆ ರಶ್ಮಿಕಾ, ರಾಜಮೌಳಿ, ಆಲಿಯಾ ಭಟ್​, ರಣಬೀರ್​ ಕಪೂರ್

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್