AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿನಿಮಾ ಇಂಡಸ್ಟ್ರಿಗೆ ದಾರಿ ತೋರಿಸಿದ್ದು ರಕ್ಷಿತ್, ರಿಷಬ್’; ರಶ್ಮಿಕಾ ಮಂದಣ್ಣ ನೇರ ಮಾತು

Rashmika Mandanna: ರಶ್ಮಿಕಾ ಮಂದಣ್ಣ ಅವರಿಗೆ ಮೊದಲ ಎರಡು ಸಿನಿಮಾಗಳ ಬಗ್ಗೆ ಪ್ರಶ್ನೆ ಎದುರಾಗಿದೆ. ಇದಕ್ಕೆ ರಶ್ಮಿಕಾ ಯಾವುದೇ ಹಿಂಜರಿಕೆ ಇಲ್ಲದೆ ಉತ್ತರಿಸಿದ್ದಾರೆ.

‘ಸಿನಿಮಾ ಇಂಡಸ್ಟ್ರಿಗೆ ದಾರಿ ತೋರಿಸಿದ್ದು ರಕ್ಷಿತ್, ರಿಷಬ್’; ರಶ್ಮಿಕಾ ಮಂದಣ್ಣ ನೇರ ಮಾತು
ರಕ್ಷಿತ್-ರಶ್ಮಿಕಾ-ರಿಷಬ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jan 18, 2023 | 4:06 PM

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಬೇಡಿಕೆಯ ನಟಿಯರಲ್ಲಿ ಒಬ್ಬರು. ತೆಲುಗು, ತಮಿಳು, ಹಿಂದಿ ಹಾಗೂ ಕನ್ನಡ ಚಿತ್ರದಲ್ಲಿ ಅವರು ನಟಿಸಿದ್ದಾರೆ. ಈ ತಿಂಗಳು ಅವರ ನಟನೆಯ ಎರಡು ಸಿನಿಮಾಗಳು ರಿಲೀಸ್ ಆಗುತ್ತಿವೆ. ಈ ಬಗ್ಗೆ ಅವರ ಫ್ಯಾನ್ಸ್​​ಗೆ ಖುಷಿ ಇದೆ. ಈಗಾಗಲೇ ‘ವಾರಿಸು’ ಸಿನಿಮಾ ರಿಲೀಸ್ ಆಗಿ ಹಿಟ್ ಆಗಿದೆ. ‘ಮಿಷನ್ ಮಜ್ನು’ ಸಿನಿಮಾ (Mission Majnu Movie) ರಿಲೀಸ್​ಗೆ ರೆಡಿ ಇದೆ. ಈ ಮಧ್ಯೆ ರಶ್ಮಿಕಾ ಮಂದಣ್ಣ ಅವರು ರಕ್ಷಿತ್, ರಿಷಬ್ ಶೆಟ್ಟಿ ಹಾಗೂ ಪುನೀತ್ ರಾಜ್​ಕುಮಾರ್ ಅವರನ್ನು ನೆನಪಿಸಿಕೊಂಡಿದ್ದಾರೆ. ಅವರಿಗೆ ಧನ್ಯವಾದ ಹೇಳಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ಪ್ರೇಮಾ ದಿ ಜರ್ನಲಿಸ್ಟ್ ಯೂಟ್ಯೂಬ್ ಚಾನೆಲ್​ಗೆ ನೀಡಿದ ಸಂದರ್ಶನದಲ್ಲಿ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಅವರಿಗೆ ಮೊದಲ ಎರಡು ಸಿನಿಮಾಗಳ ಬಗ್ಗೆ ಪ್ರಶ್ನೆ ಎದುರಾಗಿದೆ. ಇದಕ್ಕೆ ರಶ್ಮಿಕಾ ಯಾವುದೇ ಹಿಂಜರಿಕೆ ಇಲ್ಲದೆ ಉತ್ತರಿಸಿದ್ದಾರೆ.

ರಶ್ಮಿಕಾ ಮಂದಣ್ಣ ನಟಿಸಿದ ಮೊದಲ ಸಿನಿಮಾ ‘ಕಿರಿಕ್ ಪಾರ್ಟಿ’. ಈ ಚಿತ್ರವನ್ನು ರಿಷಬ್ ನಿರ್ದೇಶನ ಮಾಡಿದರೆ, ರಕ್ಷಿತ್ ನಿರ್ಮಾಣ ಮಾಡಿ ನಟಿಸಿದ್ದರು. ಎರಡನೇ ಸಿನಿಮಾ ‘ಅಂಜನಿಪುತ್ರ’ದಲ್ಲಿ ಪುನೀತ್ ರಾಜ್​ಕುಮಾರ್ ಜತೆ ರಶ್ಮಿಕಾ ನಟಿಸಿದ್ದರು. ಈ ಸಿನಿಮಾಗಳ ಬಗ್ಗೆ ಪ್ರೇಮಾ ಪ್ರಶ್ನೆ ಮಾಡಿದರು. ಇದಕ್ಕೆ ರಶ್ಮಿಕಾ ಉತ್ತರ ನೀಡಿದ್ದಾರೆ.

ಇದನ್ನೂ ಓದಿ
Image
Rashmika Mandanna: ಎದೆ ಮೇಲೆ ಆಟೋಗ್ರಾಫ್​ ಹಾಕಿ ಅಂತ ಹಠ ಹಿಡಿದ ರಶ್ಮಿಕಾ ಮಂದಣ್ಣ ಅಭಿಮಾನಿ; ಮುಂದೇನಾಯ್ತು?
Image
Rashmika Mandanna: ‘ಇಂದು ನಾನೇ ಗೋಲ್ಡನ್​ ಗರ್ಲ್​’ ಅಂತ ಪೋಸ್​ ನೀಡಿದ ರಶ್ಮಿಕಾ ಮಂದಣ್ಣ; ಆದ್ರೆ ಜನ ಹೇಳಿದ್ದೇನು?
Image
Rashmika Mandanna: ಬಾಲಿವುಡ್​ ಸೇರಿದ ರಶ್ಮಿಕಾ ಮಂದಣ್ಣ ಹೊಸ ಅವತಾರ ಹೇಗಿದೆ ನೋಡಿ; ಫೋಟೋ ವೈರಲ್​
Image
Rashmika Mandanna: ಸೆಲ್ಫಿ ಕೇಳಿದ ಅಭಿಮಾನಿಗಳ ಜತೆ ರಶ್ಮಿಕಾ ಮಂದಣ್ಣ ನಡೆದುಕೊಂಡಿದ್ದು ಹೇಗೆ? ವಿಡಿಯೋ ವೈರಲ್​

‘ರಕ್ಷಿತ್ ಹಾಗೂ ರಿಷಬ್ ಅವರು ಸಿನಿಮಾ ಇಂಡಸ್ಟ್ರಿಯ ದಾರಿ ತೋರಿಸಿದರು. ಅವರು ನನಗೆ ಅವಕಾಶ ನೀಡಿದರು. ಅಂಜನಿಪುತ್ರ ಸಿನಿಮಾದಲ್ಲಿ ಪುನೀತ್ ಜತೆ ನಟಿಸಿದೆ. ಅವರು ವಿಶಾಲವಾಗಿ ಆಲೋಚಿಸುವುದನ್ನು ಹೇಳಿಕೊಟ್ಟರು. ನಾನು ನಾಲ್ಕು ಇಂಡಸ್ಟ್ರಿಯಲ್ಲಿ ಕೆಲಸ ಮಾಡುತ್ತಿದ್ದೇನೆ. ನಾನೇ ಅಚ್ಚರಿಗೊಳ್ಳುತ್ತೇನೆ. ನನ್ನ ಕಡೆಯಿಂದ ಧನ್ಯವಾದ’ ಎಂದಿದ್ದಾರೆ ರಶ್ಮಿಕಾ.

ಇದನ್ನೂ ಓದಿ: Rashmika Mandanna: ಅಭಿಮಾನಿಗಳ ಬಳಿ ಕ್ಷಮೆ ಕೇಳಿದ ನಟಿ ರಶ್ಮಿಕಾ ಮಂದಣ್ಣ; ಅಂಥದ್ದೇನಾಯ್ತು?

ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡುವಾಗ ಮೊದಲ ಸಿನಿಮಾದ ನಿರ್ಮಾಣ ಸಂಸ್ಥೆಯ ಹೆಸರನ್ನು ಹೇಳಲು ಹಿಂದೇಟು ಹಾಕಿದ್ದರು. ಇದಕ್ಕೆ ಸಾಕಷ್ಟು ಟೀಕೆ ಬಂದಿತ್ತು. ರಶ್ಮಿಕಾ ಮಂದಣ್ಣ ಅವರನ್ನು ಬ್ಯಾನ್ ಮಾಡಬೇಕು ಎನ್ನುವ ಆಗ್ರಹ ಕೂಡ ಕೇಳಿ ಬಂದಿತ್ತು. ಈಗ ಅವರ ಹೊಸ ಹೇಳಿಕೆಯಿಂದ ಟ್ರೋಲ್ ಕಡಿಮೆ ಆಗುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ