AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

700 ಬ್ಯಾಕ್​ಗ್ರೌಂಡ್ ಡಾನ್ಸರ್​ಗಳ ಜೊತೆ ನೃತ್ಯ ಮಾಡಲಿದ್ದಾರೆ ರಶ್ಮಿಕಾ ಮಂದಣ್ಣ

ಡ್ಯಾನ್ಸ್​ ಮಾಡುವಾಗ ಸಾಮನ್ಯವಾಗಿ ಬ್ಯಾಕ್​ಗ್ರೌಂಡ್​ನಲ್ಲಿ ಡ್ಯಾನ್ಸರ್​ಗಳು ಇರುತ್ತಾರೆ. ಈ ವೇಳೆ 50-100 ಮಂದಿ ಕಾಣಿಸಿಕೊಳ್ಳೋದು ಸಾಮಾನ್ಯ. ಆದರೆ, ಬರೋಬ್ಬರಿ 700 ಮಂದಿ ಕಾಣಿಸಿಕೊಂಡರೆ? ಹೀಗೊಂದು ಅಪರೂಪದ ಘಟನೆಗೆ ‘ಛವ್ವಾ’ ಸಿನಿಮಾ ಸಾಕ್ಷಿ ಆಗಲಿದೆ.

700 ಬ್ಯಾಕ್​ಗ್ರೌಂಡ್ ಡಾನ್ಸರ್​ಗಳ ಜೊತೆ ನೃತ್ಯ ಮಾಡಲಿದ್ದಾರೆ ರಶ್ಮಿಕಾ ಮಂದಣ್ಣ
ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on: Sep 28, 2024 | 12:01 PM

Share

ಲಕ್ಷ್ಮಣ್ ಉಟೇಕರ್ ನಿರ್ದೇಶನದ ‘ಛವ್ವಾ’ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಚಿತ್ರದಲ್ಲಿ ವಿಕ್ಕಿ ಕೌಶಲ್, ರಶ್ಮಿಕಾ ಮಂದಣ್ಣ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾದಲ್ಲಿ ಛತ್ರಪತಿ ಸಾಂಬಾಜಿ ಪಾತ್ರದಲ್ಲಿ ವಿಕ್ಕಿ ನಟಿಸಿದರೆ ಅವರ ಪತ್ನಿ ಯೇಸುಬಾಯಿ ಪಾತ್ರದಲ್ಲಿ ರಶ್ಮಿಕಾ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಬಗ್ಗೆ ಒಂದು ದೊಡ್ಡ ಅಪ್​​ಡೇಟ್ ಸಿಕ್ಕಿದೆ.

ಡ್ಯಾನ್ಸ್​ ಮಾಡುವಾಗ ಸಾಮನ್ಯವಾಗಿ ಬ್ಯಾಕ್​ಗ್ರೌಂಡ್​ನಲ್ಲಿ ಡ್ಯಾನ್ಸರ್​ಗಳು ಇರುತ್ತಾರೆ. ಈ ವೇಳೆ 50-100 ಮಂದಿ ಕಾಣಿಸಿಕೊಳ್ಳೋದು ಸಾಮಾನ್ಯ. ಆದರೆ, ಬರೋಬ್ಬರಿ 700 ಮಂದಿ ಕಾಣಿಸಿಕೊಂಡರೆ? ಹೀಗೊಂದು ಅಪರೂಪದ ಘಟನೆಗೆ ‘ಛವ್ವಾ’ ಸಿನಿಮಾ ಸಾಕ್ಷಿ ಆಗಲಿದೆ. ಎಆರ್​ ರೆಹಮಾನ್ ಕಂಪೋಸ್​ನಲ್ಲಿ ಈ ಹಾಡು ಮೂಡಿ ಬಂದಿದೆ. ಈ ಹಾಡಿನ ಶೂಟ್​ಗೆ ಸಿದ್ಧತೆ ನಡೆದಿದೆ.

ಮರಾಠಿ ಜಾನಪದ ಮ್ಯೂಸಿಕ್​ನಲ್ಲಿ ಈ ಹಾಡು ಮೂಡಿ ಬರುತ್ತಿದೆ. ಈ ಹಾಡಿನ ಶೂಟ್​ಗೆ ಸಿದ್ಧತೆ ನಡೆದಿದೆ. ರಾಜರ ಕಾಲವನ್ನು ರೀ ಕ್ರಿಯೇಟ್ ಮಾಡಬೇಕಾಗಿರುವುದರಿಂದ ಹೆಚ್ಚಿನ ಸಂಖ್ಯೆ ಬ್ಯಾಕ್​ಡ್ಯಾನ್ಸರ್​ಗಳು ಇರಲಿದ್ದಾರೆ. ಬ್ಯಾಕ್​ಗ್ರೌಂಡ್​ನಲ್ಲಿ ಬರೋಬ್ಬರಿ 700ಕ್ಕೂ ಅಧಿಕ ಮಂದಿ ಡ್ಯಾನ್ಸ್ ಮಾಡಲಿದ್ದಾರೆ ಎನ್ನಲಾಗಿದೆ.

ವಿಜಯ್ ಗಂಗೂಲಿ ಅವರು ಈ ಹಾಡಿಗೆ ಕೊರಿಯೋಗ್ರಫಿ ಮಾಡುತ್ತಿದ್ದಾರೆ. ಅವರು ಈ ಮೊದಲು ‘ಸ್ತ್ರೀ 2’ ಸಾಂಗ್​ಗಳನ್ನು ಕೊರಿಯೋಗ್ರಫಿ ಮಾಡಿದ್ದರು. ಈ ಹಾಡಿಗಾಗಿ ಸುಮಾರು 1500 ಜನರು ಒಟ್ಟಿಗೆ ಸೇರಲಿದ್ದಾರೆ. ಹಿನ್ನೆಲೆಯಲ್ಲಿ 700ಕ್ಕೂ ಅಧಿಕ ಜನರು ಕಾಣಿಸಲಿದ್ದಾರೆ.

ಇದನ್ನೂ ಓದಿ: 2.74 ಲಕ್ಷ ರೂಪಾಯಿ ಬೆಲೆಯ ಬ್ಯಾಗ್​ ಹಿಡಿದು ಬಂದ ರಶ್ಮಿಕಾ ಮಂದಣ್ಣ

ಈ ಸಿನಿಮಾದ ಕಥೆ 1681ರಲ್ಲಿ ಸಾಗಲಿದೆ. ಇದಕ್ಕಾಗಿ ಬೃಹತ್ ಸೆಟ್​ಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಈ ಚಿತ್ರ ಡಿಸೆಂಬರ್ 6ರಂದು ರಿಲೀಸ್ ಆಗಲಿದೆ. ಅದೇ ದಿನ ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ 2’ ಕೂಡ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ