700 ಬ್ಯಾಕ್​ಗ್ರೌಂಡ್ ಡಾನ್ಸರ್​ಗಳ ಜೊತೆ ನೃತ್ಯ ಮಾಡಲಿದ್ದಾರೆ ರಶ್ಮಿಕಾ ಮಂದಣ್ಣ

ಡ್ಯಾನ್ಸ್​ ಮಾಡುವಾಗ ಸಾಮನ್ಯವಾಗಿ ಬ್ಯಾಕ್​ಗ್ರೌಂಡ್​ನಲ್ಲಿ ಡ್ಯಾನ್ಸರ್​ಗಳು ಇರುತ್ತಾರೆ. ಈ ವೇಳೆ 50-100 ಮಂದಿ ಕಾಣಿಸಿಕೊಳ್ಳೋದು ಸಾಮಾನ್ಯ. ಆದರೆ, ಬರೋಬ್ಬರಿ 700 ಮಂದಿ ಕಾಣಿಸಿಕೊಂಡರೆ? ಹೀಗೊಂದು ಅಪರೂಪದ ಘಟನೆಗೆ ‘ಛವ್ವಾ’ ಸಿನಿಮಾ ಸಾಕ್ಷಿ ಆಗಲಿದೆ.

700 ಬ್ಯಾಕ್​ಗ್ರೌಂಡ್ ಡಾನ್ಸರ್​ಗಳ ಜೊತೆ ನೃತ್ಯ ಮಾಡಲಿದ್ದಾರೆ ರಶ್ಮಿಕಾ ಮಂದಣ್ಣ
ರಶ್ಮಿಕಾ
Follow us
|

Updated on: Sep 28, 2024 | 12:01 PM

ಲಕ್ಷ್ಮಣ್ ಉಟೇಕರ್ ನಿರ್ದೇಶನದ ‘ಛವ್ವಾ’ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಚಿತ್ರದಲ್ಲಿ ವಿಕ್ಕಿ ಕೌಶಲ್, ರಶ್ಮಿಕಾ ಮಂದಣ್ಣ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾದಲ್ಲಿ ಛತ್ರಪತಿ ಸಾಂಬಾಜಿ ಪಾತ್ರದಲ್ಲಿ ವಿಕ್ಕಿ ನಟಿಸಿದರೆ ಅವರ ಪತ್ನಿ ಯೇಸುಬಾಯಿ ಪಾತ್ರದಲ್ಲಿ ರಶ್ಮಿಕಾ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಬಗ್ಗೆ ಒಂದು ದೊಡ್ಡ ಅಪ್​​ಡೇಟ್ ಸಿಕ್ಕಿದೆ.

ಡ್ಯಾನ್ಸ್​ ಮಾಡುವಾಗ ಸಾಮನ್ಯವಾಗಿ ಬ್ಯಾಕ್​ಗ್ರೌಂಡ್​ನಲ್ಲಿ ಡ್ಯಾನ್ಸರ್​ಗಳು ಇರುತ್ತಾರೆ. ಈ ವೇಳೆ 50-100 ಮಂದಿ ಕಾಣಿಸಿಕೊಳ್ಳೋದು ಸಾಮಾನ್ಯ. ಆದರೆ, ಬರೋಬ್ಬರಿ 700 ಮಂದಿ ಕಾಣಿಸಿಕೊಂಡರೆ? ಹೀಗೊಂದು ಅಪರೂಪದ ಘಟನೆಗೆ ‘ಛವ್ವಾ’ ಸಿನಿಮಾ ಸಾಕ್ಷಿ ಆಗಲಿದೆ. ಎಆರ್​ ರೆಹಮಾನ್ ಕಂಪೋಸ್​ನಲ್ಲಿ ಈ ಹಾಡು ಮೂಡಿ ಬಂದಿದೆ. ಈ ಹಾಡಿನ ಶೂಟ್​ಗೆ ಸಿದ್ಧತೆ ನಡೆದಿದೆ.

ಮರಾಠಿ ಜಾನಪದ ಮ್ಯೂಸಿಕ್​ನಲ್ಲಿ ಈ ಹಾಡು ಮೂಡಿ ಬರುತ್ತಿದೆ. ಈ ಹಾಡಿನ ಶೂಟ್​ಗೆ ಸಿದ್ಧತೆ ನಡೆದಿದೆ. ರಾಜರ ಕಾಲವನ್ನು ರೀ ಕ್ರಿಯೇಟ್ ಮಾಡಬೇಕಾಗಿರುವುದರಿಂದ ಹೆಚ್ಚಿನ ಸಂಖ್ಯೆ ಬ್ಯಾಕ್​ಡ್ಯಾನ್ಸರ್​ಗಳು ಇರಲಿದ್ದಾರೆ. ಬ್ಯಾಕ್​ಗ್ರೌಂಡ್​ನಲ್ಲಿ ಬರೋಬ್ಬರಿ 700ಕ್ಕೂ ಅಧಿಕ ಮಂದಿ ಡ್ಯಾನ್ಸ್ ಮಾಡಲಿದ್ದಾರೆ ಎನ್ನಲಾಗಿದೆ.

ವಿಜಯ್ ಗಂಗೂಲಿ ಅವರು ಈ ಹಾಡಿಗೆ ಕೊರಿಯೋಗ್ರಫಿ ಮಾಡುತ್ತಿದ್ದಾರೆ. ಅವರು ಈ ಮೊದಲು ‘ಸ್ತ್ರೀ 2’ ಸಾಂಗ್​ಗಳನ್ನು ಕೊರಿಯೋಗ್ರಫಿ ಮಾಡಿದ್ದರು. ಈ ಹಾಡಿಗಾಗಿ ಸುಮಾರು 1500 ಜನರು ಒಟ್ಟಿಗೆ ಸೇರಲಿದ್ದಾರೆ. ಹಿನ್ನೆಲೆಯಲ್ಲಿ 700ಕ್ಕೂ ಅಧಿಕ ಜನರು ಕಾಣಿಸಲಿದ್ದಾರೆ.

ಇದನ್ನೂ ಓದಿ: 2.74 ಲಕ್ಷ ರೂಪಾಯಿ ಬೆಲೆಯ ಬ್ಯಾಗ್​ ಹಿಡಿದು ಬಂದ ರಶ್ಮಿಕಾ ಮಂದಣ್ಣ

ಈ ಸಿನಿಮಾದ ಕಥೆ 1681ರಲ್ಲಿ ಸಾಗಲಿದೆ. ಇದಕ್ಕಾಗಿ ಬೃಹತ್ ಸೆಟ್​ಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಈ ಚಿತ್ರ ಡಿಸೆಂಬರ್ 6ರಂದು ರಿಲೀಸ್ ಆಗಲಿದೆ. ಅದೇ ದಿನ ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ 2’ ಕೂಡ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್