ಶೀಘ್ರವೇ ಆರಂಭಗೊಳ್ಳಲಿದೆ ‘ಕಾಫಿ ವಿತ್ ಕರಣ್’ ಶೋ; ಅತಿಥಿಯಾಗಿ ಬರಲಿದ್ದಾರೆ ರಶ್ಮಿಕಾ ಮಂದಣ್ಣ

ಮೇ ತಿಂಗಳಲ್ಲಿ ‘ಕಾಫಿ ವಿತ್ ಕರಣ್’ ಚ್ಯಾಟ್ ಶೋನ ಶೂಟಿಂಗ್ ಆರಂಭಗೊಳ್ಳಲಿದೆ. ಸ್ಟಾರ್ ನೆಟ್ವರ್ಕ್​ನಲ್ಲಿ ಜೂನ್ ವೇಳೆಗೆ ಈ ಶೋ ಪ್ರಸಾರಗೊಳ್ಳಲಿದೆ ಎನ್ನಲಾಗುತ್ತಿದೆ.

ಶೀಘ್ರವೇ ಆರಂಭಗೊಳ್ಳಲಿದೆ ‘ಕಾಫಿ ವಿತ್ ಕರಣ್’ ಶೋ; ಅತಿಥಿಯಾಗಿ ಬರಲಿದ್ದಾರೆ ರಶ್ಮಿಕಾ ಮಂದಣ್ಣ
ರಶ್ಮಿಕಾ-ಕರಣ್
Follow us
| Updated By: ರಾಜೇಶ್ ದುಗ್ಗುಮನೆ

Updated on: Apr 26, 2022 | 6:00 AM

ಕರಣ್ ಜೋಹರ್ (Karan Johar) ನಡೆಸಿಕೊಡುವ ‘ಕಾಫಿ ವಿತ್ ಕರಣ್’ ಶೋ (Koffee With Karan) ತುಂಬಾನೇ ಫೇಮಸ್. ಈ ಚ್ಯಾಟ್ ಶೋಗೆ ದೊಡ್ಡ ಅಭಿಮಾನಿ ಬಳಗ ಇದೆ. ಕಳೆದ ಬಾರಿ ಪ್ರಸಾರವಾಗಿದ್ದ ಈ ಸೀಸನ್ ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು. ಸಾಕಷ್ಟು ಚರ್ಚೆಗಳು ಹುಟ್ಟು ಹಾಕಲು ಈ ಶೋ ಕಾರಣವಾಗಿತ್ತು. ಕರಣ್ ಜೋಹರ್ ನಡೆಸಿಕೊಡುವ ಈ ಶೋ ಸಾಕಷ್ಟು ವಿವಾದಾತ್ಮಕ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಈಗ ಹೊಸ ಸೀಸನ್ ಆರಂಭಿಸೋಕೆ ಸಿದ್ಧತೆ ನಡೆದಿದೆ ಎನ್ನಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ಇನ್ನೂ ಹಲವರು ಅತಿಥಿಯಾಗಿ ಬರಲಿದ್ದಾರೆ.

ಕರಣ್ ಜೋಹರ್ ಅವರು ನಿರ್ದೇಶನಕ್ಕೆ ಕಂಬ್ಯಾಕ್ ಮಾಡಿದ್ದಾರೆ. ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾವನ್ನು ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಬಹುತೇಕ ಕೆಲಸಗಳು ಪೂರ್ಣಗೊಂಡಿವೆ. ಮೇ ವೇಳೆಗೆ ಸಿನಿಮಾದ ಸಂಪೂರ್ಣ ಕೆಲಸ ಪೂರ್ಣಗೊಳ್ಳಲಿದೆ. ಇದಾದ ಬಳಿಕ ಮೇ ತಿಂಗಳಲ್ಲಿ ‘ಕಾಫಿ ವಿತ್ ಕರಣ್’ ಚ್ಯಾಟ್ ಶೋನ ಶೂಟಿಂಗ್ ಆರಂಭಗೊಳ್ಳಲಿದೆ. ಸ್ಟಾರ್ ನೆಟ್ವರ್ಕ್​ನಲ್ಲಿ ಜೂನ್ ವೇಳೆಗೆ ಈ ಶೋ ಪ್ರಸಾರಗೊಳ್ಳಲಿದೆ ಎನ್ನಲಾಗುತ್ತಿದೆ.

ಈ ಬಾರಿ ಕರಣ್ ಜೋಹರ್ ಶೋ ತುಂಬಾನೇ ವಿಶೇಷವಾಗಿರಲಿದೆ. ವಿವಾದಕ್ಕೆ ಬ್ರೇಕ್ ಹಾಕಲು ಕರಣ್ ಚಿಂತನೆ ನಡೆಸಿದ್ದು, ಅದೇ ರೀತಿಯಲ್ಲಿ ಈ ಶೋ ಸಿದ್ಧಪಡಿಸಲು ಚಿಂತನೆ ನಡೆದಿದೆ. ಈ ಬಾರಿ ಹಲವು ಸ್ಟಾರ್​ಗಳು ಪಾಲ್ಗೊಳ್ಳುತ್ತಿದ್ದಾರೆ. ಅಕ್ಷಯ್ ಕುಮಾರ್, ವರುಣ್ ಧವನ್​, ಸಿದ್ದಾರ್ಥ್ ಮಲ್ಹೋತ್ರಾ, ನೀತು ಕಪೂರ್, ಅನಿಲ್ ಕಪೂರ್, ಕಿಯಾರಾ ಅಡ್ವಾಣಿ ಮೊದಲಾದವರು ಈ ಶೋನಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ರಶ್ಮಿಕಾ ಮಂದಣ್ಣ ಅವರು ಕೂಡ ಈ ಶೋಗೆ ಕಾಲಿಡಲಿದ್ದಾರೆ.

ಸಿದ್ದಾರ್ಥ್​ ಮತ್ತು ಕಿಯಾರಾ  ನಡುವೆ ಬ್ರೇಕಪ್ ಆಗಿದೆ ಎನ್ನುವ ಮಾತಿದೆ. ಈ ವಿಚಾರ ಕೂಡ ಈ ಶೋನಲ್ಲಿ ಚರ್ಚೆಗೆ ಬರುವ ನಿರೀಕ್ಷೆ ಇದೆ. ಇನ್ನು, ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಅವರು ಮದುವೆ ಆಗಿದ್ದಾರೆ. ವಿವಾಹದ ಬಳಿಕ ಅವರು ಇದೇ ಮೊದಲ ಬಾರಿಗೆ ಈ ಶೋನಲ್ಲಿ ಪಾಲ್ಗೊಳ್ಳಲಿದ್ದಾರೆ.

‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಚಿತ್ರದಲ್ಲಿ ರಣವೀರ್​ ಸಿಂಗ್, ಆಲಿಯಾ ಭಟ್​, ಧರ್ಮೇಂದ್ರ, ಜಯಾ ಬಚ್ಚನ್ ಮತ್ತು ಶಬಾನಾ ಆಜ್ಮಿ ನಟಿಸುತ್ತಿದ್ದಾರೆ. ಈ ಚಿತ್ರ 2023ರ ಫೆಬ್ರವರಿ 10ರಂದು ತೆರೆಗೆ ಬರುತ್ತಿದೆ. ಧರ್ಮ ಪ್ರೊಡಕ್ಷನ್ ಇದನ್ನು ನಿರ್ಮಾಣ ಮಾಡುತ್ತಿದೆ.

ಇದನ್ನೂ ಓದಿ: ಬಿಗ್​ಬಾಸ್​ ಒಟಿಟಿ ನಿರೂಪಕ ಕರಣ್ ಜೋಹರ್ ವಿರುದ್ಧ ಜೋರಾಯ್ತು ಅಸಮಾಧಾನ; ಕಾರಣವೇನು?

‘ತಲೆ ಉಪಯೋಗಿಸಿ ಸ್ವಂತವಾಗಿ ಏನನ್ನಾದರೂ ಮಾಡಿ’; ಕರಣ್ ಜೋಹರ್​ಗೆ ನೆಟ್ಟಿಗರ ಟೀಕೆ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ