AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈ ಬಾರಿ ನಿಮ್ಮಿಂದ ಸ್ವಲ್ಪ ದೂರ, ಆದರೆ ಬೇಗ ಮರಳುವೆ’ ಎಂದು ವಿದೇಶಕ್ಕೆ ಹಾರಿದ ರಶ್ಮಿಕಾ ಮಂದಣ್ಣ  

ರಶ್ಮಿಕಾ ಅವರು ಬೋರ್ಡಿಂಗ್​ ಪಾಸ್ ಹಾಗೂ ಪಾಸ್​ಪೋರ್ಟ್​ ಫೋಟೋ ಹಾಕಿ ‘ಈ ಬಾರಿ ನಿಮ್ಮಿಂದ ಸ್ವಲ್ಪ ದೂರ, ಆದರೆ ಬೇಗ ಮರಳುವೆ’ ಎಂದು ಬರೆದುಕೊಂಡಿದ್ದಾರೆ.

‘ಈ ಬಾರಿ ನಿಮ್ಮಿಂದ ಸ್ವಲ್ಪ ದೂರ, ಆದರೆ ಬೇಗ ಮರಳುವೆ’ ಎಂದು ವಿದೇಶಕ್ಕೆ ಹಾರಿದ ರಶ್ಮಿಕಾ ಮಂದಣ್ಣ  
ರಶ್ಮಿಕಾ
TV9 Web
| Edited By: |

Updated on: Nov 24, 2021 | 1:30 PM

Share

ಅತ್ಯಂತ ಬ್ಯುಸಿಯಾಗಿರುವ ನಟಿಯರ ಪೈಕಿ ರಶ್ಮಿಕಾ ಮಂದಣ್ಣ ಒಬ್ಬರು. ಅವರ ಕಾಲ್​ಶೀಟ್​​ ಪಡೆಯೋದು ಅಷ್ಟು ಸುಲಭದ ಮಾತಲ್ಲ. ಒಟ್ಟೊಟ್ಟಿಗೆ ಮೂರು ಸಿನಿಮಾಗಳ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಬಾಲಿವುಡ್​ ಹಾಗೂ ಟಾಲಿವುಡ್​ ಸಿನಿಮಾ ಕೆಲಸಗಳನ್ನು ಒಟ್ಟೊಟ್ಟಿಗೆ ನಿರ್ವಹಿಸುತ್ತಿದ್ದಾರೆ. ಈ ಕಾರಣಕ್ಕೆ ಅವರು ಹೈದರಾಬಾದ್​ನಿಂದ ಮುಂಬೈಗೆ ಮುಂಬೈನಿಂದ ಹೈದರಾಬಾದ್​ಗೆ ಸುತ್ತಾಡಬೇಕಾಗಿತ್ತು. ಈಗ ಸಿನಿಮಾ ಕೆಲಸಗಳಿಂದ ರಶ್ಮಿಕಾ ಬ್ರೇಕ್​ ತೆಗೆದುಕೊಂಡು ವಿದೇಶಕ್ಕೆ ಹಾರಿದ್ದಾರೆ. ಅಷ್ಟೇ ಅಲ್ಲ ‘ನಾನು ಎಲ್ಲಿಗೆ ಹೋಗುತ್ತಿದ್ದೇನೆ ಎಂಬುದನ್ನು ಊಹಿಸಿ’  ಎಂದು ರಶ್ಮಿಕಾ ಬರೆದುಕೊಂಡಿದ್ದಾರೆ.

ರಶ್ಮಿಕಾ ನಟನೆಯ ‘ಪುಷ್ಪ’ ಸಿನಿಮಾ ಡಿಸೆಂಬರ್​ 17ರಂದು ತೆರೆಗೆ ಬರುತ್ತಿದೆ. ಈ ಸಿನಿಮಾದ ಸಂಪೂರ್ಣ ಕೆಲಸ ಪೂರ್ಣಗೊಳಿಸಿದ್ದಾರೆ ಅವರು. ಇದರ ಜತೆಗೆ ಹಿಂದಿಯ ‘ಮಿಷನ್​ ಮಜ್ನು’ ಹಾಗೂ ‘ಗುಡ್​ಬೈ’ ಸಿನಿಮಾ ಕೆಲಸಗಳು ಬಹುತೇಕ ಪೂರ್ಣಗೊಂಡಿವೆ. ಇದರ ಜತೆಗೆ ಇನ್ನೂ ಕೆಲ ಸಿನಿಮಾಗಳು ಮಾತುಕತೆ ಹಂತದಲ್ಲಿವೆ. ರಶ್ಮಿಕಾ ಶೀಘ್ರವೇ ‘ಪುಷ್ಪ’ ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಲಿದ್ದಾರೆ. ಅದಕ್ಕೂ ಮೊದಲು ಅವರು ವಿದೇಶಕ್ಕೆ ಪ್ರಯಾಣ ಬೆಳೆಸಿದ್ದಾರೆ.

ರಶ್ಮಿಕಾ ಅವರು ಬೋರ್ಡಿಂಗ್​ ಪಾಸ್ ಹಾಗೂ ಪಾಸ್​ಪೋರ್ಟ್​ ಫೋಟೋ ಹಾಕಿ ‘ಈ ಬಾರಿ ನಿಮ್ಮಿಂದ ಸ್ವಲ್ಪ ದೂರ, ಆದರೆ ಬೇಗ ಮರಳುವೆ’ ಎಂದು ಬರೆದುಕೊಂಡಿದ್ದಾರೆ. ಬೋರ್ಡಿಂಗ್​ ಪಾಸ್​ನಲ್ಲಿ ‘DU’ ಎಂದಷ್ಟೇ ಕಾಣಿಸಿದೆ. ಹೀಗಾಗಿ, ರಶ್ಮಿಕಾ ದುಬೈಗೆ ತೆರಳುತ್ತಿದ್ದಾರೆ ಎಂದು ಅಭಿಮಾನಿಗಳು ಊಹಿಸಿದ್ದಾರೆ. ಅವರು ಎಲ್ಲಿಗೆ ತೆರಳುತ್ತಿದ್ದಾರೆ ಎಂಬ ಪ್ರಶ್ನೆಗೆ ಅವರ ಕಡೆಯಿಂದಲೇ ಉತ್ತರ ಬರಬೇಕಿದೆ.

ರಶ್ಮಿಕಾ ಮಂದಣ್ಣ ಬಹುಬೇಡಿಕೆಯ ನಟಿಯಾಗಿದ್ದಾರೆ. ಸ್ಟಾರ್​ ನಟರ ಜತೆ ಅವರು ತೆರೆ ಹಂಚಿಕೊಳ್ಳುತ್ತಿದ್ದಾರೆ. ಬಾಲಿವುಡ್​ನಲ್ಲಿ ರಶ್ಮಿಕಾ 3ನೇ ಸಿನಿಮಾ ಒಪ್ಪಿಕೊಂಡಿರುವ ಸಾಧ್ಯತೆ ಇತ್ತೀಚೆಗೆ ದಟ್ಟವಾಗಿತ್ತು. ಹಿಂದಿ ಚಿತ್ರರಂಗದಲ್ಲಿ ವಿಶೇಷ ರೀತಿಯ ಸಿನಿಮಾಗಳನ್ನು ಮಾಡಿ ಸೈ ಎನಿಸಿಕೊಂಡವರು ನಿರ್ದೇಶಕ ಆನಂದ್​ ಎಲ್​. ರಾಯ್​. ಅವರು ನಿರ್ದೇಶಿಸಿದ ‘ತನು ವೆಡ್ಸ್​ ಮನು’ ಚಿತ್ರವನ್ನು ಪ್ರೇಕ್ಷಕರು ಸಖತ್​ ಮೆಚ್ಚಿಕೊಂಡಿದ್ದರು. ಸದ್ಯ ಅವರು ಅಕ್ಷಯ್​ ಕುಮಾರ್​ ಜೊತೆ ಎರಡು ಸಿನಿಮಾ ಮಾಡುತ್ತಿದ್ದಾರೆ. ಅಕ್ಷಯ್​ ಕುಮಾರ್​ ನಟನೆಯ ‘ರಕ್ಷಾ ಬಂಧನ್​’ ಮತ್ತು ‘ಅತರಂಗಿ ರೇ’ ಚಿತ್ರಕ್ಕೆ ಆನಂದ್​ ನಿರ್ದೇಶನ ಮಾಡುತ್ತಿದ್ದಾರೆ. ಅಂಥ ಪ್ರತಿಭಾನ್ವಿತ ನಿರ್ದೇಶಕನ ಕಚೇರಿ ಎಂದು ರಶ್ಮಿಕಾ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದರು.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಚಿತ್ರ-ವಿಚಿತ್ರ ಫೋಟೋ ಪೋಸ್

ಬೊಲೆರೋಗೆ ಡಿಕ್ಕಿ ಹೊಡೆದು ಅರ್ಧ ಕಿಮೀ ತಳ್ಳಿಕೊಂಡೋಗಿ ಉರುಳಿಬಿದ್ದ ಕಂಟೇನರ್!
ಬೊಲೆರೋಗೆ ಡಿಕ್ಕಿ ಹೊಡೆದು ಅರ್ಧ ಕಿಮೀ ತಳ್ಳಿಕೊಂಡೋಗಿ ಉರುಳಿಬಿದ್ದ ಕಂಟೇನರ್!
ದೊಡ್ಮನೆ ಹಬ್ಬದಲ್ಲಿ ಅಶ್ವಿನಿ ಗೌಡ ಸಿಕ್ಕಿದ್ರಾ? ಗಿಲ್ಲಿ ಉತ್ತರ ಏನು?
ದೊಡ್ಮನೆ ಹಬ್ಬದಲ್ಲಿ ಅಶ್ವಿನಿ ಗೌಡ ಸಿಕ್ಕಿದ್ರಾ? ಗಿಲ್ಲಿ ಉತ್ತರ ಏನು?
ಗ್ರಾಮದೇವತೆ ಜಾತ್ರೆ ವೇಳೆ ಹೆಣ್ಮಕ್ಳ ವಿಡಿಯೋ ಮಾಡಿದ್ರೆ 30 ಸಾವಿರ ರೂ. ದಂಡ!
ಗ್ರಾಮದೇವತೆ ಜಾತ್ರೆ ವೇಳೆ ಹೆಣ್ಮಕ್ಳ ವಿಡಿಯೋ ಮಾಡಿದ್ರೆ 30 ಸಾವಿರ ರೂ. ದಂಡ!
ಜಾರ್ಜಿಯಾದ ಜನನಿಬಿಡ ರಸ್ತೆಯಲ್ಲಿ ವಿಮಾನ ತುರ್ತು ಭೂಸ್ಪರ್ಶ
ಜಾರ್ಜಿಯಾದ ಜನನಿಬಿಡ ರಸ್ತೆಯಲ್ಲಿ ವಿಮಾನ ತುರ್ತು ಭೂಸ್ಪರ್ಶ
ತಂದೆ ತಾಯಿ ಮಾಡಿದ ಪುಣ್ಯ ಮಕ್ಕಳಿಗೆ ಅನ್ವಯಿಸುತ್ತಾ?
ತಂದೆ ತಾಯಿ ಮಾಡಿದ ಪುಣ್ಯ ಮಕ್ಕಳಿಗೆ ಅನ್ವಯಿಸುತ್ತಾ?
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಬಹುದು!
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಬಹುದು!
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ