AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈ ಬಾರಿ ನಿಮ್ಮಿಂದ ಸ್ವಲ್ಪ ದೂರ, ಆದರೆ ಬೇಗ ಮರಳುವೆ’ ಎಂದು ವಿದೇಶಕ್ಕೆ ಹಾರಿದ ರಶ್ಮಿಕಾ ಮಂದಣ್ಣ  

ರಶ್ಮಿಕಾ ಅವರು ಬೋರ್ಡಿಂಗ್​ ಪಾಸ್ ಹಾಗೂ ಪಾಸ್​ಪೋರ್ಟ್​ ಫೋಟೋ ಹಾಕಿ ‘ಈ ಬಾರಿ ನಿಮ್ಮಿಂದ ಸ್ವಲ್ಪ ದೂರ, ಆದರೆ ಬೇಗ ಮರಳುವೆ’ ಎಂದು ಬರೆದುಕೊಂಡಿದ್ದಾರೆ.

‘ಈ ಬಾರಿ ನಿಮ್ಮಿಂದ ಸ್ವಲ್ಪ ದೂರ, ಆದರೆ ಬೇಗ ಮರಳುವೆ’ ಎಂದು ವಿದೇಶಕ್ಕೆ ಹಾರಿದ ರಶ್ಮಿಕಾ ಮಂದಣ್ಣ  
ರಶ್ಮಿಕಾ
TV9 Web
| Edited By: |

Updated on: Nov 24, 2021 | 1:30 PM

Share

ಅತ್ಯಂತ ಬ್ಯುಸಿಯಾಗಿರುವ ನಟಿಯರ ಪೈಕಿ ರಶ್ಮಿಕಾ ಮಂದಣ್ಣ ಒಬ್ಬರು. ಅವರ ಕಾಲ್​ಶೀಟ್​​ ಪಡೆಯೋದು ಅಷ್ಟು ಸುಲಭದ ಮಾತಲ್ಲ. ಒಟ್ಟೊಟ್ಟಿಗೆ ಮೂರು ಸಿನಿಮಾಗಳ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಬಾಲಿವುಡ್​ ಹಾಗೂ ಟಾಲಿವುಡ್​ ಸಿನಿಮಾ ಕೆಲಸಗಳನ್ನು ಒಟ್ಟೊಟ್ಟಿಗೆ ನಿರ್ವಹಿಸುತ್ತಿದ್ದಾರೆ. ಈ ಕಾರಣಕ್ಕೆ ಅವರು ಹೈದರಾಬಾದ್​ನಿಂದ ಮುಂಬೈಗೆ ಮುಂಬೈನಿಂದ ಹೈದರಾಬಾದ್​ಗೆ ಸುತ್ತಾಡಬೇಕಾಗಿತ್ತು. ಈಗ ಸಿನಿಮಾ ಕೆಲಸಗಳಿಂದ ರಶ್ಮಿಕಾ ಬ್ರೇಕ್​ ತೆಗೆದುಕೊಂಡು ವಿದೇಶಕ್ಕೆ ಹಾರಿದ್ದಾರೆ. ಅಷ್ಟೇ ಅಲ್ಲ ‘ನಾನು ಎಲ್ಲಿಗೆ ಹೋಗುತ್ತಿದ್ದೇನೆ ಎಂಬುದನ್ನು ಊಹಿಸಿ’  ಎಂದು ರಶ್ಮಿಕಾ ಬರೆದುಕೊಂಡಿದ್ದಾರೆ.

ರಶ್ಮಿಕಾ ನಟನೆಯ ‘ಪುಷ್ಪ’ ಸಿನಿಮಾ ಡಿಸೆಂಬರ್​ 17ರಂದು ತೆರೆಗೆ ಬರುತ್ತಿದೆ. ಈ ಸಿನಿಮಾದ ಸಂಪೂರ್ಣ ಕೆಲಸ ಪೂರ್ಣಗೊಳಿಸಿದ್ದಾರೆ ಅವರು. ಇದರ ಜತೆಗೆ ಹಿಂದಿಯ ‘ಮಿಷನ್​ ಮಜ್ನು’ ಹಾಗೂ ‘ಗುಡ್​ಬೈ’ ಸಿನಿಮಾ ಕೆಲಸಗಳು ಬಹುತೇಕ ಪೂರ್ಣಗೊಂಡಿವೆ. ಇದರ ಜತೆಗೆ ಇನ್ನೂ ಕೆಲ ಸಿನಿಮಾಗಳು ಮಾತುಕತೆ ಹಂತದಲ್ಲಿವೆ. ರಶ್ಮಿಕಾ ಶೀಘ್ರವೇ ‘ಪುಷ್ಪ’ ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಲಿದ್ದಾರೆ. ಅದಕ್ಕೂ ಮೊದಲು ಅವರು ವಿದೇಶಕ್ಕೆ ಪ್ರಯಾಣ ಬೆಳೆಸಿದ್ದಾರೆ.

ರಶ್ಮಿಕಾ ಅವರು ಬೋರ್ಡಿಂಗ್​ ಪಾಸ್ ಹಾಗೂ ಪಾಸ್​ಪೋರ್ಟ್​ ಫೋಟೋ ಹಾಕಿ ‘ಈ ಬಾರಿ ನಿಮ್ಮಿಂದ ಸ್ವಲ್ಪ ದೂರ, ಆದರೆ ಬೇಗ ಮರಳುವೆ’ ಎಂದು ಬರೆದುಕೊಂಡಿದ್ದಾರೆ. ಬೋರ್ಡಿಂಗ್​ ಪಾಸ್​ನಲ್ಲಿ ‘DU’ ಎಂದಷ್ಟೇ ಕಾಣಿಸಿದೆ. ಹೀಗಾಗಿ, ರಶ್ಮಿಕಾ ದುಬೈಗೆ ತೆರಳುತ್ತಿದ್ದಾರೆ ಎಂದು ಅಭಿಮಾನಿಗಳು ಊಹಿಸಿದ್ದಾರೆ. ಅವರು ಎಲ್ಲಿಗೆ ತೆರಳುತ್ತಿದ್ದಾರೆ ಎಂಬ ಪ್ರಶ್ನೆಗೆ ಅವರ ಕಡೆಯಿಂದಲೇ ಉತ್ತರ ಬರಬೇಕಿದೆ.

ರಶ್ಮಿಕಾ ಮಂದಣ್ಣ ಬಹುಬೇಡಿಕೆಯ ನಟಿಯಾಗಿದ್ದಾರೆ. ಸ್ಟಾರ್​ ನಟರ ಜತೆ ಅವರು ತೆರೆ ಹಂಚಿಕೊಳ್ಳುತ್ತಿದ್ದಾರೆ. ಬಾಲಿವುಡ್​ನಲ್ಲಿ ರಶ್ಮಿಕಾ 3ನೇ ಸಿನಿಮಾ ಒಪ್ಪಿಕೊಂಡಿರುವ ಸಾಧ್ಯತೆ ಇತ್ತೀಚೆಗೆ ದಟ್ಟವಾಗಿತ್ತು. ಹಿಂದಿ ಚಿತ್ರರಂಗದಲ್ಲಿ ವಿಶೇಷ ರೀತಿಯ ಸಿನಿಮಾಗಳನ್ನು ಮಾಡಿ ಸೈ ಎನಿಸಿಕೊಂಡವರು ನಿರ್ದೇಶಕ ಆನಂದ್​ ಎಲ್​. ರಾಯ್​. ಅವರು ನಿರ್ದೇಶಿಸಿದ ‘ತನು ವೆಡ್ಸ್​ ಮನು’ ಚಿತ್ರವನ್ನು ಪ್ರೇಕ್ಷಕರು ಸಖತ್​ ಮೆಚ್ಚಿಕೊಂಡಿದ್ದರು. ಸದ್ಯ ಅವರು ಅಕ್ಷಯ್​ ಕುಮಾರ್​ ಜೊತೆ ಎರಡು ಸಿನಿಮಾ ಮಾಡುತ್ತಿದ್ದಾರೆ. ಅಕ್ಷಯ್​ ಕುಮಾರ್​ ನಟನೆಯ ‘ರಕ್ಷಾ ಬಂಧನ್​’ ಮತ್ತು ‘ಅತರಂಗಿ ರೇ’ ಚಿತ್ರಕ್ಕೆ ಆನಂದ್​ ನಿರ್ದೇಶನ ಮಾಡುತ್ತಿದ್ದಾರೆ. ಅಂಥ ಪ್ರತಿಭಾನ್ವಿತ ನಿರ್ದೇಶಕನ ಕಚೇರಿ ಎಂದು ರಶ್ಮಿಕಾ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದರು.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಚಿತ್ರ-ವಿಚಿತ್ರ ಫೋಟೋ ಪೋಸ್

Follow Us
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ