AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಕರ್ನಾಟಕದವಳು’ ಎಂದಿದ್ದಕ್ಕೂ ರಶ್ಮಿಕಾ ಮಂದಣ್ಣ ಹಿಗ್ಗಾಮುಗ್ಗಾ ಟ್ರೋಲ್

ರಶ್ಮಿಕಾ ಮಂದಣ್ಣ ಅವರು ಬಾಲಿವುಡ್‌ನಲ್ಲಿ ಯಶಸ್ವಿಯಾಗಿದ್ದಾರೆ, ಆದರೆ ಅವರ ಹೇಳಿಕೆಗಳಿಂದಾಗಿ ಟ್ರೋಲ್ ಆಗುತ್ತಿದ್ದಾರೆ. ‘ನಾನು ಕರ್ನಾಟಕದವಳು’ ಎಂದು ಹೇಳಿದ್ದಕ್ಕೆ ಅವರನ್ನು ಟೀಕಿಸಲಾಗಿದೆ. ರಶ್ಮಿಕಾ ಮಂದಣ್ಣ ಅವರು ಈ ಮೊದಲು ನೀಡಿದ ಸಂದರ್ಶನ ಒಂದರಲ್ಲಿ ‘ನಾನು ಹೈದರಾಬಾದ್​ನವಳು’ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದರು. ಈಗ ರಶ್ಮಿಕಾ ಕರ್ನಾಟಕದವರು ಎಂದಿದ್ದಾರೆ. ಇದು ಟ್ರೋಲ್ ಆಗಲು ಕಾರಣ,

‘ನಾನು ಕರ್ನಾಟಕದವಳು’ ಎಂದಿದ್ದಕ್ಕೂ ರಶ್ಮಿಕಾ ಮಂದಣ್ಣ ಹಿಗ್ಗಾಮುಗ್ಗಾ ಟ್ರೋಲ್
ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on: Mar 31, 2025 | 3:15 PM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರಿಗೆ ಬಾಲಿವುಡ್​ನಲ್ಲಿ ಬೇಡಿಕೆ ಸೃಷ್ಟಿ ಆಗಿದೆ. ಅವರು ದುಬಾರಿ ಕಾರುಗಳನ್ನು ಖರೀದಿ ಮಾಡುತ್ತಿದ್ದಾರೆ. 500+ ಕೋಟಿ ರೂಪಾಯಿ ಗಳಿಕೆ ಮಾಡಿದ ಮೂರು ಚಿತ್ರಗಳ (ಅನಿಮಲ್, ಪುಷ್ಪ 2, ಛಾವಾ) ಭಾಗವಾಗಿದ್ದಾರೆ ಅವರು. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು ನಾಲ್ಕುವರೆ ಕೋಟಿಗೂ ಅಧಿಕ ಜನರು ಫಾಲೋ ಮಾಡುತ್ತಿದ್ದಾರೆ. ಹೀಗಿದ್ದರೂ ರಶ್ಮಿಕಾ ಮಂದಣ್ಣ ಅವರು ಟ್ರೋಲ್ ಆಗುವುದಂತೂ ನಿಂತಿಲ್ಲ. ಈಗ ಅವರು ‘ನಾನು ಕರ್ನಾಕದವಳು’ ಎಂದಿದ್ದಕ್ಕೂ ಟ್ರೋಲ್ ಮಾಡಲಾಗಿದೆ. ಆ ಬಗ್ಗೆ ಇಲ್ಲಿದೆ ವಿವರ.

ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ಸಂದರ್ಶನ ಒಂದನ್ನು ನೀಡಿದ್ದರು. ಸಲ್ಮಾನ್ ಖಾನ್ ಕೂಡ ಇದರಲ್ಲಿ ಜೊತೆಗೆ ಇದ್ದರು. ಈ ವೇಳೆ ಭಾಷೆ ಕಲಿಯೋದು ಎಷ್ಟು ಕಷ್ಟ ಎಂಬುದನ್ನು ರಶ್ಮಿಕಾ ಮಂದಣ್ಣ ವಿವರಿಸಿದ್ದರು. ಕರ್ನಾಟಕದವರಾಗಿ ಕನ್ನಡ ಮಾತ್ರ ಬರುತ್ತಿತ್ತು ಎಂದು ರಶ್ಮಿಕಾ ಹೇಳಿರುವ ಸಾಲುಗಳನ್ನು ತೆಗೆದುಕೊಂಡು ಟೀಕೆ ಮಾಡಲಾಗಿದೆ.

ಇದನ್ನೂ ಓದಿ
Image
ಸಿತಾರಾ ಘಟ್ಟಮನೇನಿ ಸಿನಿಮಾ ರಂಗಕ್ಕೆ ಕಾಲಿಡೋದು ಯಾವಾಗ? ಉತ್ತರಿಸಿದ ತಾಯಿ
Image
ತೆಲುಗು ಚಿತ್ರರಂಗದಲ್ಲಿ ನೆಪೋಟಿಸಂ ಇಲ್ಲವೇ ಇಲ್ಲ ಎಂದ ಖ್ಯಾತ ನಿರ್ಮಾಪಕ
Image
ಚಿತ್ರರಂಗದ ಕರಾಳ ಮುಖ ತೆರೆದಿಟ್ಟ ಅಜಯ್ ರಾವ್; ಎದುರಿಸುವ ಸಮಸ್ಯೆಗಳೇನು?
Image
ಗಳಿಕೆಯಲ್ಲಿ ಮೊದಲ ದಿನವೇ ಮಕಾಡೆ ಮಲಗಿದ ‘ಸಿಕಂದರ್’

ರಶ್ಮಿಕಾ ಅವರ ಈ ಹಿಂದಿನ ಸಂದರ್ಶನ

ರಶ್ಮಿಕಾ ಮಂದಣ್ಣ ಅವರು ಈ ಮೊದಲು ನೀಡಿದ ಸಂದರ್ಶನ ಒಂದರಲ್ಲಿ ‘ನಾನು ಹೈದರಾಬಾದ್​ನವಳು’ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದರು. ಈಗ ರಶ್ಮಿಕಾ ಕರ್ನಾಟಕದವರು ಎಂದಿದ್ದಾರೆ. ಅವರು ಸಿಂಪತಿ ಪಡೆದುಕೊಳ್ಳಲು ಹಾಗೂ ಪರಿಸ್ಥಿತಿಗೆ ತಕ್ಕಂತೆ ಊರನ್ನು ಬದಲಾಯಿಸುತ್ತಾರೆ ಎಂಬ ಕಾಮೆಂಟ್​ಗಳು ವ್ಯಕ್ತವಾಗಿದೆ.

ರಿಷಬ್ ಶೆಟ್ಟಿಗೆ ಈಗಲೂ ಇದೆ ಸಿಟ್ಟು

ರಶ್ಮಿಕಾ ಮಂದಣ್ಣ ಅವರು ಚಿತ್ರರಂಗಕ್ಕೆ ಪರಿಚಯ ಆಗಿದ್ದು ‘ಕಿರಿಕ್ ಪಾರ್ಟಿ’ ಚಿತ್ರದ ಮೂಲಕ. ಈ ಚಿತ್ರಕ್ಕೆ ರಕ್ಷಿತ್ ಶೆಟ್ಟಿ ಹೀರೋ. ಸಿನಿಮಾ ಸಂದರ್ಭದಲ್ಲಿ ರಶ್ಮಿಕಾ ಹಾಗೂ ರಕ್ಷಿತ್ ಪ್ರೀತಿಯಲ್ಲಿ ಬಿದ್ದರು. ನಿಶ್ಚಿತಾರ್ಥ ಮಾಡಿಕೊಂಡು ಅದನ್ನು ಮುರಿದುಕೊಂಡರು. ಈ ವಿಚಾರದಲ್ಲಿ ರಿಷಬ್​ಗೆ ಈಗಲೂ ಸಿಟ್ಟಿದೆ. ಈ ಕಾರಣಕ್ಕೆ ಕಿರಿಕ್ ಪಾರ್ಟಿಗೆ ಸಂಬಂಧಿಸಿದ ಯಾವುದೇ ಪೋಸ್ಟ್ ಹಾಕುವುದಿದ್ದರು ಅವರು ರಶ್ಮಿಕಾನ ಟ್ಯಾಗ್ ಮಾಡುವುದೇ ಇಲ್ಲ.

ಇದನ್ನೂ ಓದಿ: ‘ಸಿಕಂದರ್’ ಫ್ಲಾಪ್ ಆಗಿದ್ದಕ್ಕೆ ಬೇಸರದ ಮುಖ ಮಾಡಿಕೊಂಡ ರಶ್ಮಿಕಾ ಮಂದಣ್ಣ

‘ಸಿಕಂದರ್’ ಸೋಲು

ರಶ್ಮಿಕಾ ಮಂದಣ್ಣ ಅವರು ಸಲ್ಮಾನ್ ಖಾನ್ ನಟನೆಯ ‘ಸಿಕಂದರ್’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರ ಮಾರ್ಚ್ 30ರಂದು ರಿಲೀಸ್ ಆಗಿದೆ. ಆದರೆ, ಸಿನಿಮಾ ಹೇಳಿಕೊಳ್ಳುವಂಥ ದೊಡ್ಡ ಯಶಸ್ಸು ಕಾಣುವ ಸೂಚನೆ ಸಿಕ್ಕಿಲ್ಲ. ಈ ಚಿತ್ರ ಮೊದಲ ದಿನ 26 ಕೋಟಿ ರೂಪಾಯಿ ಮಾತ್ರ ಗಳಿಸಲು ಶಕ್ಯವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ