AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಯೂ.ಎನ್​ಟಿಆರ್​ಗೆ ಇರುವ ಕನ್ನಡ ಪ್ರೇಮ ರಶ್ಮಿಕಾಗೇಕಿಲ್ಲ? ಅಭಿಮಾನಿಗಳ ಪ್ರಶ್ನೆಗೆ ಉತ್ತರಿಸ್ತಾರಾ ಕೊಡಗಿನ ಬೆಡಗಿ?

ಇತ್ತೀಚೆಗೆ ‘ಪುಷ್ಪ’ ಸಿನಿಮಾದ ಟ್ರೇಲರ್ ರಿಲೀಸ್​ ಆಗಿದೆ. ಈ ಚಿತ್ರಕ್ಕೆ ರಶ್ಮಿಕಾ ನಾಯಕಿ. ‘ಪುಷ್ಪ’ದಲ್ಲಿ ಅವರು ಭಿನ್ನ ಗೆಟಪ್​ ತಾಳಿದ್ದಾರೆ. ಹೀಗಾಗಿ, ಅವರ ಅಭಿಮಾನಿಗಳು ಈ ಸಿನಿಮಾ ನೋಡೋಕೆ ಕಾದು ಕೂತಿದ್ದಾರೆ.

ಜ್ಯೂ.ಎನ್​ಟಿಆರ್​ಗೆ ಇರುವ ಕನ್ನಡ ಪ್ರೇಮ ರಶ್ಮಿಕಾಗೇಕಿಲ್ಲ? ಅಭಿಮಾನಿಗಳ ಪ್ರಶ್ನೆಗೆ ಉತ್ತರಿಸ್ತಾರಾ ಕೊಡಗಿನ ಬೆಡಗಿ?
ಜ್ಯೂ.ಎನ್​ಟಿಆರ್​-ರಶ್ಮಿಕಾ
TV9 Web
| Edited By: |

Updated on: Dec 11, 2021 | 7:00 AM

Share

ರಶ್ಮಿಕಾ ಮಂದಣ್ಣ ಸಿನಿಮಾ ವಿಚಾರದಲ್ಲಿ ಸಾಕಷ್ಟು ಖ್ಯಾತಿ ಗಳಿಸಿರಬಹುದು. ಪರಭಾಷೆಯಲ್ಲಿ ಅವರಿಗೆ ದೊಡ್ಡ ಮಟ್ಟದಲ್ಲಿ ಬೇಡಿಕೆ ಇರಬಹುದು. ಆದರೆ, ರಶ್ಮಿಕಾ ಭಾಷಾ ವಿಚಾರಕ್ಕೆ ಟ್ರೋಲ್​ ಆಗುತ್ತಲೇ ಇರುತ್ತಾರೆ. ಅವರಿಗೆ ಕನ್ನಡದ ಬಗ್ಗೆ ಗೌರವ ಇಲ್ಲ ಎನ್ನುವ ಆರೋಪ ಆಗಾಗ ಕೇಳಿ ಬರುತ್ತಲೇ ಇರುತ್ತದೆ. ಇದಕ್ಕೆ ನಟಿಯ ಕಡೆಯಿಂದ ಯಾವ ಸಂದರ್ಭದಲ್ಲೂ ಸ್ಪಷ್ಟನೆ ಸಿಕ್ಕಿಲ್ಲ. ಈಗ ರಶ್ಮಿಕಾ ಇದೇ ವಿಚಾರದಲ್ಲಿ ಸುದ್ದಿಯಾಗಿದ್ದಾರೆ. ಅಷ್ಟಕ್ಕೂ ಏನದು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಇತ್ತೀಚೆಗೆ ‘ಪುಷ್ಪ’ ಸಿನಿಮಾದ ಟ್ರೇಲರ್ ರಿಲೀಸ್​ ಆಗಿದೆ. ಈ ಚಿತ್ರಕ್ಕೆ ರಶ್ಮಿಕಾ ನಾಯಕಿ. ‘ಪುಷ್ಪ’ದಲ್ಲಿ ಅವರು ಭಿನ್ನ ಗೆಟಪ್​ ತಾಳಿದ್ದಾರೆ. ಹೀಗಾಗಿ, ಅವರ ಅಭಿಮಾನಿಗಳು ಈ ಸಿನಿಮಾ ನೋಡೋಕೆ ಕಾದು ಕೂತಿದ್ದಾರೆ. ಈ ಚಿತ್ರ ತೆಲುಗು ಮಾತ್ರವಲ್ಲದೆ, ಕನ್ನಡದಲ್ಲೂ ತೆರೆಗೆ ಬರುತ್ತಿದೆ. ಹೀಗಾಗಿ ಟ್ರೇಲರ್​ಅನ್ನು ಕನ್ನಡದಲ್ಲೂ ರಿಲೀಸ್​ ಮಾಡಲಾಗಿದೆ. ಆದರೆ, ರಶ್ಮಿಕಾ ಕನ್ನಡ ಅವತರಣಿಕೆಗೆ ಡಬ್​ ಮಾಡಿಲ್ಲ.

ಡಿಸೆಂಬರ್​ 9ರಂದು ‘ಆರ್​ಆರ್​ಆರ್​’ ಸಿನಿಮಾದ ಟ್ರೇಲರ್​ ರಿಲೀಸ್​ ಆಗಿದೆ. ಈ ಚಿತ್ರದ ಟ್ರೇಲರ್ ನೋಡಿದ ಫ್ಯಾನ್ಸ್ ಫಿದಾ ಆಗಿದ್ದಾರೆ. ಇಲ್ಲೊಂದು ಅಚ್ಚರಿ ವಿಚಾರವಿದೆ. ‘ಆರ್​ಆರ್​ಆರ್​’ ಚಿತ್ರದ ಕನ್ನಡ ಅವತರಣಿಕೆಗೆ ಜ್ಯೂ.ಎನ್​ಟಿಆರ್, ರಾಮ್​ ಚರಣ್​ ಅವರೇ ಡಬ್​ ಮಾಡಿದ್ದಾರೆ. ಇದಕ್ಕೆ ಸಾಕಷ್ಟು ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಈಗ ‘ಪುಷ್ಪ’ ಮತ್ತು ‘ಆರ್​ಆರ್​ಆರ್​’ ಟ್ರೇಲರ್​ ವಿಚಾರ ಇಟ್ಟುಕೊಂಡು ಚರ್ಚೆ ಮಾಡಲಾಗುತ್ತಿದೆ.

ಜ್ಯೂ.ಎನ್​ಟಿಆರ್​ ಅಂತಹ ಪರಭಾಷೆ ಕಲಾವಿದರು ಕನ್ನಡದಲ್ಲಿ ಡಬ್​ ಮಾಡಿದ್ದಾರೆ. ಪರಭಾಷೆಯವರು ಕಷ್ಟವಾದರೂ ಆದಷ್ಟು ಪ್ರಯತ್ನಿಸಿ ಕನ್ನಡ ಮಾತನಾಡುತ್ತಿದ್ದಾರೆ. ಹೀಗಿರುವಾಗ, ಕರ್ನಾಟಕದವರಾಗಿ, ಕನ್ನಡ ಅವತರಣಿಕೆಯನ್ನು ರಶ್ಮಿಕಾ ಡಬ್​ ಮಾಡುವುದಿಲ್ಲ ಎಂದರೆ ಅದು ಎಷ್ಟು ಸರಿ? ಎಂದು ಅನೇಕರು ಪ್ರಶ್ನೆ ಮಾಡುತ್ತಿದ್ದಾರೆ. ಇದಕ್ಕೆ ರಶ್ಮಿಕಾ ಕಡೆಯಿಂದ ಇನ್ನೂ ಉತ್ತರ ಬಂದಿಲ್ಲ. ಅವರು ಈ ಕಮೆಂಟ್​ಗಳಿಗೆ ಹೇಗೆ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

‘ಪುಷ್ಪ’ ಚಿತ್ರಕ್ಕೆ ಸುಕುಮಾರ್​ ಅವರ ನಿರ್ದೇಶನವಿದೆ. ಡಾಲಿ ಧನಂಜಯ್​, ಫಹಾದ್​ ಫಾಸಿಲ್​, ಜಗಪತಿ ಬಾಬು ಪ್ರಕಾಶ್​ ರಾಜ್​ ಮುಂತಾದ ಸ್ಟಾರ್​ ಕಲಾವಿದರು ಕೂಡ ‘ಪುಷ್ಪ’ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ. ಎರಡು ಪಾರ್ಟ್​ಗಳಲ್ಲಿ ಈ ಚಿತ್ರ ತಯಾರಾಗಿದ್ದು, ಡಿ.17ರಂದು ಮೊದಲ ಪಾರ್ಟ್​ ಮಾತ್ರ ಬಿಡುಗಡೆ ಆಗುತ್ತಿದೆ.

ಇದನ್ನೂ ಓದಿ: ‘ಪುಷ್ಪ’ ಐಟಂ ಸಾಂಗ್​ನಲ್ಲಿ ಹಾಟ್ ಆಗಿ ಮಿಂಚಿದ ಸಮಂತಾ; ಇಲ್ಲಿದೆ ವಿಶೇಷ ಹಾಡು

‘ಪುಷ್ಪ’ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಡಿಫರೆಂಟ್​ ಗೆಟಪ್​

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ