AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನಗೆ ಆ ನಿರ್ದೇಶಕನ ಜೊತೆ ಸಿನಿಮಾ ಮಾಡಬೇಕು’; ಮನಸ್ಸಿನ ಬಯಕೆ ತಿಳಿಸಿದ ರಶ್ಮಿಕಾ ಮಂದಣ್ಣ   

ಇತ್ತೀಚೆಗೆ ವಿಜಯ್ ದೇವರಕೊಂಡ ಸಹೋದರ ಆನಂದ್ ದೇವರಕೊಂಡ ನಟನೆಯ ಸಿನಿಮಾ ‘ಗಂ ಗಂ ಗಣೇಶಾ’ ಈವೆಂಟ್​ಗೆ ಅತಿಥಿಯಾಗಿ ತೆರಳಿದ್ದರು. ಈ ವೇಳೆ ರಶ್ಮಿಕಾ ಅವರು ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಇದೇ ವೇಳೆ ಅವರು ‘ಬೇಬಿ’ ಸಿನಿಮಾ ಯಶಸ್ಸಿನ ಬಗ್ಗೆ ಮಾತನಾಡಿದ್ದಾರೆ.

‘ನನಗೆ ಆ ನಿರ್ದೇಶಕನ ಜೊತೆ ಸಿನಿಮಾ ಮಾಡಬೇಕು’; ಮನಸ್ಸಿನ ಬಯಕೆ ತಿಳಿಸಿದ ರಶ್ಮಿಕಾ ಮಂದಣ್ಣ   
ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on: May 28, 2024 | 11:58 AM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ಕಾಲ್​ಶೀಟ್ ಪಡೆಯಲು ಅನೇಕ ನಿರ್ದೇಶಕರು ಹಾಗೂ ನಿರ್ಮಾಪಕರು ಕಾದು ಕುಳಿತಿದ್ದಾರೆ. ಅವರ ಜೊತೆ ಸಿನಿಮಾ ಮಾಡೋದು ಅಷ್ಟು ಸುಲಭವಿಲ್ಲ. ಕಥೆ ಹಾಗೂ ಪಾತ್ರ ಎರಡೂ ಇಷ್ಟ ಆದರೆ ಮಾತ್ರ ಸಿನಿಮಾ ಮಾಡೋಕೆ ಗ್ರೀನ್ ಸಿಗ್ನಲ್ ಕೊಡುತ್ತಾರೆ. ಅಚ್ಚರಿ ಎಂದರೆ ರಶ್ಮಿಕಾ ಅವರಿಗೆ ಓರ್ವ ನಿರ್ದೇಶಕರ ಕೆಲಸ ಸಾಕಷ್ಟು ಇಷ್ಟ ಆಗಿದೆ. ಅವರ ಜೊತೆ ಕೆಲಸ ಮಾಡಬೇಕು ಎಂದು ರಶ್ಮಿಕಾ ಬಯಸಿದ್ದಾರೆ.

ಇತ್ತೀಚೆಗೆ ವಿಜಯ್ ದೇವರಕೊಂಡ ಸಹೋದರ ಆನಂದ್ ದೇವರಕೊಂಡ ನಟನೆಯ ಸಿನಿಮಾ ‘ಗಂ ಗಂ ಗಣೇಶಾ’ ಈವೆಂಟ್​ಗೆ ಅತಿಥಿಯಾಗಿ ತೆರಳಿದ್ದರು. ಈ ವೇಳೆ ರಶ್ಮಿಕಾ ಅವರು ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಇದೇ ವೇಳೆ ಅವರು ‘ಬೇಬಿ’ ಸಿನಿಮಾ ಯಶಸ್ಸಿನ ಬಗ್ಗೆ ಮಾತನಾಡಿದ್ದಾರೆ. ಈ ಚಿತ್ರ ನಿರ್ದೇಶಕ ಸಾಯಿ ರಾಜೇಶ್ ನೀಲಂ ಜೊತೆ ಸಿನಿಮಾ ಮಾಡೋ ಬಯಕೆ ವ್ಯಕ್ತಪಡಿಸಿದ್ದಾರೆ.

‘ನಾನು ಬೇಬಿ ಸಿನಿಮಾ ನೋಡಿ ಕಣ್ಣೀರು ಹಾಕಿದೆ. ಅವರ ಜೊತೆ ಕೆಲಸ ಮಾಡಬೇಕು ಎನ್ನುವ ಬಯಕೆ ಇದೆ. ಸಾಯಿ ರಾಜೇಶ್ ನಿರ್ದೇಶನ ನಿಜಕ್ಕೂ ಮೆಚ್ಚಿಕೊಳ್ಳುವಂಥದ್ದು. ಅವರ ನಿರ್ದೇಶನದಲ್ಲಿ ಒಂದು ಸಂಕೀರ್ಣ ಪಾತ್ರವನ್ನು ಮಾಡುವ ಬಯಕೆ ನನ್ನದು’ ಎಂದಿದ್ದಾರೆ ರಶ್ಮಿಕಾ ಮಂದಣ್ಣ.

ನಿರ್ದೇಶಕರಿಗೆ ಈ ರೀತಿಯ ಮೆಚ್ಚುಗೆ ಸಿಕ್ಕರೆ ಅವರಿಗೆ ಖುಷಿ ಆಗುತ್ತದೆ. ಅಲ್ಲದೆ, ರಾಷ್ಟ್ರ ಮಟ್ಟದಲ್ಲಿ ಖ್ಯಾತಿ ಪಡೆದಿರೋ ರಶ್ಮಿಕಾ ಮಂದಣ್ಣ ಅವರು ಈ ರೀತಿಯ ಕಮೆಂಟ್ ಮಾಡಿದಾಗ ಸಹಜವಾಗಿಯೇ ನಿರ್ದೇಶಕರಿಗೆ ಖುಷಿ ಆಗುತ್ತದೆ. ಹೀಗಾಗಿ ರಶ್ಮಿಕಾ ಅವರು ಬಯಸಿದ ರೀತಿಯಲ್ಲಿ ಸಾಯಿ ರಾಜೇಶ್ ಕಥೆ ಸಿದ್ಧಪಡಿಸುತ್ತಾರಾ ಎನ್ನುವ ಕುತೂಹಲ ಮೂಡಿದೆ.

ಇದನ್ನೂ ಓದಿ: ಆನಂದ್ ದೇವರಕೊಂಡ ನನ್ನ ಕುಟುಂಬದ ಸದಸ್ಯ ಎಂದ ರಶ್ಮಿಕಾ; ಇದರ ಒಳಾರ್ಥ ಗೊತ್ತಾಯ್ತಾ?

‘ಗಂ ಗಂ ಗಣೇಶಾ’ ಸಿನಿಮಾದಲ್ಲಿ ಆನಂದ್ ದೇವರಕೊಂಡ, ವೆನ್ನೆಲ್ಲಾ ಕಿಶೋರ್, ರಾಜ್ ಅರ್ಜುನ್ ಮೊದಲಾದವರು ನಟಿಸಿದ್ದಾರೆ. ಉದಯ್ ಶೆಟ್ಟಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ‘ಬೇಬಿ’ ಬಳಿಕ ಬರುತ್ತಿರುವ ಸಿನಿಮಾ ಇದಾಗಿರುವುದರಿಂದ ನಿರೀಕ್ಷೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ