AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನಗೆ ಆ ನಿರ್ದೇಶಕನ ಜೊತೆ ಸಿನಿಮಾ ಮಾಡಬೇಕು’; ಮನಸ್ಸಿನ ಬಯಕೆ ತಿಳಿಸಿದ ರಶ್ಮಿಕಾ ಮಂದಣ್ಣ   

ಇತ್ತೀಚೆಗೆ ವಿಜಯ್ ದೇವರಕೊಂಡ ಸಹೋದರ ಆನಂದ್ ದೇವರಕೊಂಡ ನಟನೆಯ ಸಿನಿಮಾ ‘ಗಂ ಗಂ ಗಣೇಶಾ’ ಈವೆಂಟ್​ಗೆ ಅತಿಥಿಯಾಗಿ ತೆರಳಿದ್ದರು. ಈ ವೇಳೆ ರಶ್ಮಿಕಾ ಅವರು ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಇದೇ ವೇಳೆ ಅವರು ‘ಬೇಬಿ’ ಸಿನಿಮಾ ಯಶಸ್ಸಿನ ಬಗ್ಗೆ ಮಾತನಾಡಿದ್ದಾರೆ.

‘ನನಗೆ ಆ ನಿರ್ದೇಶಕನ ಜೊತೆ ಸಿನಿಮಾ ಮಾಡಬೇಕು’; ಮನಸ್ಸಿನ ಬಯಕೆ ತಿಳಿಸಿದ ರಶ್ಮಿಕಾ ಮಂದಣ್ಣ   
ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on: May 28, 2024 | 11:58 AM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ಕಾಲ್​ಶೀಟ್ ಪಡೆಯಲು ಅನೇಕ ನಿರ್ದೇಶಕರು ಹಾಗೂ ನಿರ್ಮಾಪಕರು ಕಾದು ಕುಳಿತಿದ್ದಾರೆ. ಅವರ ಜೊತೆ ಸಿನಿಮಾ ಮಾಡೋದು ಅಷ್ಟು ಸುಲಭವಿಲ್ಲ. ಕಥೆ ಹಾಗೂ ಪಾತ್ರ ಎರಡೂ ಇಷ್ಟ ಆದರೆ ಮಾತ್ರ ಸಿನಿಮಾ ಮಾಡೋಕೆ ಗ್ರೀನ್ ಸಿಗ್ನಲ್ ಕೊಡುತ್ತಾರೆ. ಅಚ್ಚರಿ ಎಂದರೆ ರಶ್ಮಿಕಾ ಅವರಿಗೆ ಓರ್ವ ನಿರ್ದೇಶಕರ ಕೆಲಸ ಸಾಕಷ್ಟು ಇಷ್ಟ ಆಗಿದೆ. ಅವರ ಜೊತೆ ಕೆಲಸ ಮಾಡಬೇಕು ಎಂದು ರಶ್ಮಿಕಾ ಬಯಸಿದ್ದಾರೆ.

ಇತ್ತೀಚೆಗೆ ವಿಜಯ್ ದೇವರಕೊಂಡ ಸಹೋದರ ಆನಂದ್ ದೇವರಕೊಂಡ ನಟನೆಯ ಸಿನಿಮಾ ‘ಗಂ ಗಂ ಗಣೇಶಾ’ ಈವೆಂಟ್​ಗೆ ಅತಿಥಿಯಾಗಿ ತೆರಳಿದ್ದರು. ಈ ವೇಳೆ ರಶ್ಮಿಕಾ ಅವರು ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಇದೇ ವೇಳೆ ಅವರು ‘ಬೇಬಿ’ ಸಿನಿಮಾ ಯಶಸ್ಸಿನ ಬಗ್ಗೆ ಮಾತನಾಡಿದ್ದಾರೆ. ಈ ಚಿತ್ರ ನಿರ್ದೇಶಕ ಸಾಯಿ ರಾಜೇಶ್ ನೀಲಂ ಜೊತೆ ಸಿನಿಮಾ ಮಾಡೋ ಬಯಕೆ ವ್ಯಕ್ತಪಡಿಸಿದ್ದಾರೆ.

‘ನಾನು ಬೇಬಿ ಸಿನಿಮಾ ನೋಡಿ ಕಣ್ಣೀರು ಹಾಕಿದೆ. ಅವರ ಜೊತೆ ಕೆಲಸ ಮಾಡಬೇಕು ಎನ್ನುವ ಬಯಕೆ ಇದೆ. ಸಾಯಿ ರಾಜೇಶ್ ನಿರ್ದೇಶನ ನಿಜಕ್ಕೂ ಮೆಚ್ಚಿಕೊಳ್ಳುವಂಥದ್ದು. ಅವರ ನಿರ್ದೇಶನದಲ್ಲಿ ಒಂದು ಸಂಕೀರ್ಣ ಪಾತ್ರವನ್ನು ಮಾಡುವ ಬಯಕೆ ನನ್ನದು’ ಎಂದಿದ್ದಾರೆ ರಶ್ಮಿಕಾ ಮಂದಣ್ಣ.

ನಿರ್ದೇಶಕರಿಗೆ ಈ ರೀತಿಯ ಮೆಚ್ಚುಗೆ ಸಿಕ್ಕರೆ ಅವರಿಗೆ ಖುಷಿ ಆಗುತ್ತದೆ. ಅಲ್ಲದೆ, ರಾಷ್ಟ್ರ ಮಟ್ಟದಲ್ಲಿ ಖ್ಯಾತಿ ಪಡೆದಿರೋ ರಶ್ಮಿಕಾ ಮಂದಣ್ಣ ಅವರು ಈ ರೀತಿಯ ಕಮೆಂಟ್ ಮಾಡಿದಾಗ ಸಹಜವಾಗಿಯೇ ನಿರ್ದೇಶಕರಿಗೆ ಖುಷಿ ಆಗುತ್ತದೆ. ಹೀಗಾಗಿ ರಶ್ಮಿಕಾ ಅವರು ಬಯಸಿದ ರೀತಿಯಲ್ಲಿ ಸಾಯಿ ರಾಜೇಶ್ ಕಥೆ ಸಿದ್ಧಪಡಿಸುತ್ತಾರಾ ಎನ್ನುವ ಕುತೂಹಲ ಮೂಡಿದೆ.

ಇದನ್ನೂ ಓದಿ: ಆನಂದ್ ದೇವರಕೊಂಡ ನನ್ನ ಕುಟುಂಬದ ಸದಸ್ಯ ಎಂದ ರಶ್ಮಿಕಾ; ಇದರ ಒಳಾರ್ಥ ಗೊತ್ತಾಯ್ತಾ?

‘ಗಂ ಗಂ ಗಣೇಶಾ’ ಸಿನಿಮಾದಲ್ಲಿ ಆನಂದ್ ದೇವರಕೊಂಡ, ವೆನ್ನೆಲ್ಲಾ ಕಿಶೋರ್, ರಾಜ್ ಅರ್ಜುನ್ ಮೊದಲಾದವರು ನಟಿಸಿದ್ದಾರೆ. ಉದಯ್ ಶೆಟ್ಟಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ‘ಬೇಬಿ’ ಬಳಿಕ ಬರುತ್ತಿರುವ ಸಿನಿಮಾ ಇದಾಗಿರುವುದರಿಂದ ನಿರೀಕ್ಷೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ