AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಯ್ಸಳ ಸಿನಿಮಾಕ್ಕೆ ರಶ್ಮಿಕಾ ಹಾರೈಕೆ, ಆದರೆ ನೋಡಲು ಕಾಯುತ್ತಿರುವುದು ತೆಲುಗು ಸಿನಿಮಾವನ್ನು!

ಕನ್ನಡ ಚಿತ್ರರಂಗದಿಂದ ಅಂತರ ಕಾಯ್ದುಕೊಂಡಿರುವ ನಟಿ ರಶ್ಮಿಕಾ ಮಂದಣ್ಣ ಅಪರೂಪಕ್ಕೆ ಕನ್ನಡದ ಹೊಯ್ಸಳ ಸಿನಿಮಾಕ್ಕೆ ಶುಭ ಹಾರೈಸಿದ್ದಾರೆ. ಆದರೆ ತೆಲುಗು ಸಿನಿಮಾ ನೋಡಲು ಕಾತರಳಾಗಿರುವುದಾಗಿ ಹೇಳಿದ್ದಾರೆ!

ಹೊಯ್ಸಳ ಸಿನಿಮಾಕ್ಕೆ ರಶ್ಮಿಕಾ ಹಾರೈಕೆ, ಆದರೆ ನೋಡಲು ಕಾಯುತ್ತಿರುವುದು ತೆಲುಗು ಸಿನಿಮಾವನ್ನು!
ರಶ್ಮಿಕಾ ಮಂದಣ್ಣ
ಮಂಜುನಾಥ ಸಿ.
|

Updated on:Mar 29, 2023 | 11:10 PM

Share

ಡಾಲಿ ಧನಂಜಯ್ (Daali Dhananjay) ನಟನೆಯ ಹೊಯ್ಸಳ  (Hoysala) ಸಿನಿಮಾ ಮಾರ್ಚ್ 30 ರಂದು ಅದ್ಧೂರಿಯಾಗೆ ತೆರೆಗೆ ಬರುತ್ತಿದೆ. ನಟ ಕಿಚ್ಚ ಸುದೀಪ್ (Sudeep) ಸೇರಿದಂತೆ ಕನ್ನಡ ಚಿತ್ರರಂಗದ ಅನೇಕ ಗಣ್ಯರು ಸಿನಿಮಾಕ್ಕೆ ಶುಭ ಹಾರೈಸಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶಗಳನ್ನು ಪ್ರಕಟಿಸಿದ್ದಾರೆ. ವಿಶೇಷವೆಂದರೆ ಕನ್ನಡ ಚಿತ್ರರಂಗದಿಂದ ಬಹುತೇಕ ದೂರವಾಗಿರುವ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಸಹ ಈ ಸಿನಿಮಾಕ್ಕೆ ಶುಭ ಹಾರೈಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.

ಹೊಯ್ಸಳ ಸಿನಿಮಾದ 17 ಸೆಕೆಂಡ್​ನ ವಿಡಿಯೋವನ್ನು ಇನ್​ಸ್ಟಾಗ್ರಾಂ ಸ್ಟೋರಿಯಲ್ಲಿ ಹಂಚಿಕೊಂಡಿರುವ ನಟಿ ರಶ್ಮಿಕಾ ಮಂದಣ್ಣ, ನಟ ಡಾಲಿ ಧನಂಜಯ್​ ಅನ್ನು ಟ್ಯಾಗ್ ಮಾಡಿ ಹೊಯ್ಸಳ ಸಿನಿಮಾಕ್ಕೆ ಒಳ್ಳೆಯದಾಗಲಿ ಎಂದಿದ್ದಾರೆ. ಅದೇ ಪೋಸ್ಟ್ ಅನ್ನು ನಿರ್ಮಾಪಕ ವಿಜಯ್ ಕಿರಗಂದೂರು, ನಾಯಕಿ ಅಮೃತಾ ಐಯ್ಯಂಗಾರ್, ಕೆಆರ್​ಜಿ ಸ್ಟುಡಿಯೋಸ್, ನಿರ್ದೇಶಕ ವಿಜಯ್, ಕಾರ್ತಿಕ್ ಗೌಡ, ನಿರ್ಮಾಪಕ ಯೋಗಿರಾಜು, ಸಿನಿಮಾಟೊಗ್ರಾಫರ್ ಕಾರ್ತಿಕ್, ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಹಾಗೂ ಆನಂದ್ ಆಡಿಯೋ ಅನ್ನು ಸಹ ಟ್ಯಾಗ್ ಮಾಡಿದ್ದಾರೆ.

ಹೊಯ್ಸಳ ಸಿನಿಮಾಕ್ಕೆ ಶುಭ ಹಾರೈಸಿ ಸ್ಟೋರಿ ಹಾಕಿರುವ ಜೊತೆಗೆ ನಾಳೆ ಹೊಯ್ಸಳ ಸಿನಿಮಾದ ಜೊತೆಗೇ ಬಿಡುಗಡೆ ಆಗುತ್ತಿರುವ ತೆಲುಗು ಸಿನಿಮಾ ದಸರಾ ಬಗ್ಗೆಯೂ ಸ್ಟೋರಿ ಹಾಕಿದ್ದಾರೆ. ‘ನಾನಿ, ಕೀರ್ತಿ ಸುರೇಶ್, ದೀಕ್ಷಿತ್ ಹಾಗೂ ಇಡೀಯ ದಸರಾ ಚಿತ್ರತಂಡಕ್ಕೆ ದೊಡ್ಡ ಚಪ್ಪಾಳೆ. ನಿಮ್ಮೆಲ್ಲರಿಗೂ ನನ್ನ ಕಡೆಯಿಂದ ಶುಭ ಹಾರೈಕೆಗಳು. ಸಿನಿಮಾದ ಪೋಸ್ಟರ್ ಸಖತ್ ಆಗಿದೆ ಆಗಿದೆ. ಚಿತ್ರಮಂದಿರಗಳಲ್ಲಿ ಸಿನಿಮಾ ನೋಡಲು ಕಾತರಳಾಗಿ ಕಾಯುತ್ತಿದ್ದೇನೆ” ಎಂದು ಬರೆದುಕೊಂಡಿದ್ದಾರೆ. ನಟ ನಾನಿ, ಕೀರ್ತಿ ಸುರೇಶ್ ಹಾಗೂ ಕನ್ನಡಿಗರಾಗಿರುವ ದೀಕ್ಷಿತ್​ಗೆ ಪೋಸ್ಟ್ ಅನ್ನು ಟ್ಯಾಗ್ ಮಾಡಿದ್ದಾರೆ.

ಹೊಯ್ಸಳ ಸಿನಿಮಾದ ಜೊತೆಗೆ ದಸರಾ ಸಿನಿಮಾ ಸಹ ಮಾರ್ಚ್ 30 ರಂದೇ ಬಿಡುಗಡೆ ಆಗುತ್ತಿದೆ. ದೊಡ್ಡ ಬಜೆಟ್​ನ ಇದು ಪ್ಯಾನ್​ ಇಂಡಿಯಾ ಸಿನಿಮಾ ಸಹ ಆಗಿದೆ. ಬಹುತೇಕ ತೆಲುಗು ಚಿತ್ರರಂಗದಲ್ಲಿಯೇ ಹೆಚ್ಚು ಗುರುತಿಸಿಕೊಳ್ಳುತ್ತಿರುವ ರಶ್ಮಿಕಾ ಸಹಜವಾಗಿಯೇ ತೆಲುಗು ಸಿನಿಮಾದ ಬಗ್ಗೆ ತುಸು ಹೆಚ್ಚೇ ಕಾಳಜಿ, ಪ್ರೇಮ ತೋರಿಸಿದ್ದಾರೆ ತಮ್ಮ ಇನ್​ಸ್ಟಾ ಸ್ಟೋರಿಯಲ್ಲಿ.

ಇದನ್ನೂ ಓದಿಬೆಂಗಳೂರಲ್ಲಿ ಹೊಯ್ಸಳಕ್ಕಿಂತಲೂ ಪರಭಾಷೆ ಸಿನಿಮಾಗಳದ್ದೇ ಅಬ್ಬರ! ಯಾವ ಸಿನಿಮಾಕ್ಕೆ ಎಷ್ಟು ಶೋ?

ರಶ್ಮಿಕಾರ ಸಿನಿಮಾ ವಿಷಯಕ್ಕೆ ಬರುವುದಾದರೆ, ರಶ್ಮಿಕಾ ಇದೀಗ ಬಾಲಿವುಡ್​ನಲ್ಲಿ ಸೆಟಲ್ ಆಗುವ ಯೋಜನೆಯಲ್ಲಿದ್ದಾರೆ. ಈಗಾಗಲೇ ಎರಡು ಹಿಂದಿ ಸಿನಿಮಾಗಳಲ್ಲಿ ನಟಿಸಿದ್ದು ಎರಡು ಬಿಡುಗಡೆ ಆಗಿವೆ. ಇದೀಗ ಬಾಲಿವುಡ್ ಸ್ಟಾರ್ ರಣಬೀರ್ ಕಪೂರ್ ಜೊತೆಗೆ ಅನಿಮಲ್ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಟೈಗರ್ ಶ್ರಾಫ್ ಜೊತೆಗೆ ಒಂದು ಸಿನಿಮಾದಲ್ಲಿ ನಟಿಸಲಿದ್ದಾರೆ. ಇನ್ನು ತೆಲುಗಿನಲ್ಲಿ ಪುಷ್ಪ 2 ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ನಟ ನಿತಿನ್ ಜೊತೆಗೆ ಇತ್ತೀಚೆಗಷ್ಟೆ ಹೊಸ ಸಿನಿಮಾಕ್ಕೆ ಸಹಿ ಹಾಕಿದ್ದು ಸಿನಿಮಾದ ಮುಹೂರ್ತವೂ ಇತ್ತೀಚೆಗಷ್ಟೆ ಮುಗಿದು ಚಿತ್ರೀಕರಣ ಪ್ರಾರಂಭವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:09 pm, Wed, 29 March 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ