AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಯ್ಸಳ ಸಿನಿಮಾಕ್ಕೆ ರಶ್ಮಿಕಾ ಹಾರೈಕೆ, ಆದರೆ ನೋಡಲು ಕಾಯುತ್ತಿರುವುದು ತೆಲುಗು ಸಿನಿಮಾವನ್ನು!

ಕನ್ನಡ ಚಿತ್ರರಂಗದಿಂದ ಅಂತರ ಕಾಯ್ದುಕೊಂಡಿರುವ ನಟಿ ರಶ್ಮಿಕಾ ಮಂದಣ್ಣ ಅಪರೂಪಕ್ಕೆ ಕನ್ನಡದ ಹೊಯ್ಸಳ ಸಿನಿಮಾಕ್ಕೆ ಶುಭ ಹಾರೈಸಿದ್ದಾರೆ. ಆದರೆ ತೆಲುಗು ಸಿನಿಮಾ ನೋಡಲು ಕಾತರಳಾಗಿರುವುದಾಗಿ ಹೇಳಿದ್ದಾರೆ!

ಹೊಯ್ಸಳ ಸಿನಿಮಾಕ್ಕೆ ರಶ್ಮಿಕಾ ಹಾರೈಕೆ, ಆದರೆ ನೋಡಲು ಕಾಯುತ್ತಿರುವುದು ತೆಲುಗು ಸಿನಿಮಾವನ್ನು!
ರಶ್ಮಿಕಾ ಮಂದಣ್ಣ
ಮಂಜುನಾಥ ಸಿ.
|

Updated on:Mar 29, 2023 | 11:10 PM

Share

ಡಾಲಿ ಧನಂಜಯ್ (Daali Dhananjay) ನಟನೆಯ ಹೊಯ್ಸಳ  (Hoysala) ಸಿನಿಮಾ ಮಾರ್ಚ್ 30 ರಂದು ಅದ್ಧೂರಿಯಾಗೆ ತೆರೆಗೆ ಬರುತ್ತಿದೆ. ನಟ ಕಿಚ್ಚ ಸುದೀಪ್ (Sudeep) ಸೇರಿದಂತೆ ಕನ್ನಡ ಚಿತ್ರರಂಗದ ಅನೇಕ ಗಣ್ಯರು ಸಿನಿಮಾಕ್ಕೆ ಶುಭ ಹಾರೈಸಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶಗಳನ್ನು ಪ್ರಕಟಿಸಿದ್ದಾರೆ. ವಿಶೇಷವೆಂದರೆ ಕನ್ನಡ ಚಿತ್ರರಂಗದಿಂದ ಬಹುತೇಕ ದೂರವಾಗಿರುವ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಸಹ ಈ ಸಿನಿಮಾಕ್ಕೆ ಶುಭ ಹಾರೈಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.

ಹೊಯ್ಸಳ ಸಿನಿಮಾದ 17 ಸೆಕೆಂಡ್​ನ ವಿಡಿಯೋವನ್ನು ಇನ್​ಸ್ಟಾಗ್ರಾಂ ಸ್ಟೋರಿಯಲ್ಲಿ ಹಂಚಿಕೊಂಡಿರುವ ನಟಿ ರಶ್ಮಿಕಾ ಮಂದಣ್ಣ, ನಟ ಡಾಲಿ ಧನಂಜಯ್​ ಅನ್ನು ಟ್ಯಾಗ್ ಮಾಡಿ ಹೊಯ್ಸಳ ಸಿನಿಮಾಕ್ಕೆ ಒಳ್ಳೆಯದಾಗಲಿ ಎಂದಿದ್ದಾರೆ. ಅದೇ ಪೋಸ್ಟ್ ಅನ್ನು ನಿರ್ಮಾಪಕ ವಿಜಯ್ ಕಿರಗಂದೂರು, ನಾಯಕಿ ಅಮೃತಾ ಐಯ್ಯಂಗಾರ್, ಕೆಆರ್​ಜಿ ಸ್ಟುಡಿಯೋಸ್, ನಿರ್ದೇಶಕ ವಿಜಯ್, ಕಾರ್ತಿಕ್ ಗೌಡ, ನಿರ್ಮಾಪಕ ಯೋಗಿರಾಜು, ಸಿನಿಮಾಟೊಗ್ರಾಫರ್ ಕಾರ್ತಿಕ್, ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಹಾಗೂ ಆನಂದ್ ಆಡಿಯೋ ಅನ್ನು ಸಹ ಟ್ಯಾಗ್ ಮಾಡಿದ್ದಾರೆ.

ಹೊಯ್ಸಳ ಸಿನಿಮಾಕ್ಕೆ ಶುಭ ಹಾರೈಸಿ ಸ್ಟೋರಿ ಹಾಕಿರುವ ಜೊತೆಗೆ ನಾಳೆ ಹೊಯ್ಸಳ ಸಿನಿಮಾದ ಜೊತೆಗೇ ಬಿಡುಗಡೆ ಆಗುತ್ತಿರುವ ತೆಲುಗು ಸಿನಿಮಾ ದಸರಾ ಬಗ್ಗೆಯೂ ಸ್ಟೋರಿ ಹಾಕಿದ್ದಾರೆ. ‘ನಾನಿ, ಕೀರ್ತಿ ಸುರೇಶ್, ದೀಕ್ಷಿತ್ ಹಾಗೂ ಇಡೀಯ ದಸರಾ ಚಿತ್ರತಂಡಕ್ಕೆ ದೊಡ್ಡ ಚಪ್ಪಾಳೆ. ನಿಮ್ಮೆಲ್ಲರಿಗೂ ನನ್ನ ಕಡೆಯಿಂದ ಶುಭ ಹಾರೈಕೆಗಳು. ಸಿನಿಮಾದ ಪೋಸ್ಟರ್ ಸಖತ್ ಆಗಿದೆ ಆಗಿದೆ. ಚಿತ್ರಮಂದಿರಗಳಲ್ಲಿ ಸಿನಿಮಾ ನೋಡಲು ಕಾತರಳಾಗಿ ಕಾಯುತ್ತಿದ್ದೇನೆ” ಎಂದು ಬರೆದುಕೊಂಡಿದ್ದಾರೆ. ನಟ ನಾನಿ, ಕೀರ್ತಿ ಸುರೇಶ್ ಹಾಗೂ ಕನ್ನಡಿಗರಾಗಿರುವ ದೀಕ್ಷಿತ್​ಗೆ ಪೋಸ್ಟ್ ಅನ್ನು ಟ್ಯಾಗ್ ಮಾಡಿದ್ದಾರೆ.

ಹೊಯ್ಸಳ ಸಿನಿಮಾದ ಜೊತೆಗೆ ದಸರಾ ಸಿನಿಮಾ ಸಹ ಮಾರ್ಚ್ 30 ರಂದೇ ಬಿಡುಗಡೆ ಆಗುತ್ತಿದೆ. ದೊಡ್ಡ ಬಜೆಟ್​ನ ಇದು ಪ್ಯಾನ್​ ಇಂಡಿಯಾ ಸಿನಿಮಾ ಸಹ ಆಗಿದೆ. ಬಹುತೇಕ ತೆಲುಗು ಚಿತ್ರರಂಗದಲ್ಲಿಯೇ ಹೆಚ್ಚು ಗುರುತಿಸಿಕೊಳ್ಳುತ್ತಿರುವ ರಶ್ಮಿಕಾ ಸಹಜವಾಗಿಯೇ ತೆಲುಗು ಸಿನಿಮಾದ ಬಗ್ಗೆ ತುಸು ಹೆಚ್ಚೇ ಕಾಳಜಿ, ಪ್ರೇಮ ತೋರಿಸಿದ್ದಾರೆ ತಮ್ಮ ಇನ್​ಸ್ಟಾ ಸ್ಟೋರಿಯಲ್ಲಿ.

ಇದನ್ನೂ ಓದಿಬೆಂಗಳೂರಲ್ಲಿ ಹೊಯ್ಸಳಕ್ಕಿಂತಲೂ ಪರಭಾಷೆ ಸಿನಿಮಾಗಳದ್ದೇ ಅಬ್ಬರ! ಯಾವ ಸಿನಿಮಾಕ್ಕೆ ಎಷ್ಟು ಶೋ?

ರಶ್ಮಿಕಾರ ಸಿನಿಮಾ ವಿಷಯಕ್ಕೆ ಬರುವುದಾದರೆ, ರಶ್ಮಿಕಾ ಇದೀಗ ಬಾಲಿವುಡ್​ನಲ್ಲಿ ಸೆಟಲ್ ಆಗುವ ಯೋಜನೆಯಲ್ಲಿದ್ದಾರೆ. ಈಗಾಗಲೇ ಎರಡು ಹಿಂದಿ ಸಿನಿಮಾಗಳಲ್ಲಿ ನಟಿಸಿದ್ದು ಎರಡು ಬಿಡುಗಡೆ ಆಗಿವೆ. ಇದೀಗ ಬಾಲಿವುಡ್ ಸ್ಟಾರ್ ರಣಬೀರ್ ಕಪೂರ್ ಜೊತೆಗೆ ಅನಿಮಲ್ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಟೈಗರ್ ಶ್ರಾಫ್ ಜೊತೆಗೆ ಒಂದು ಸಿನಿಮಾದಲ್ಲಿ ನಟಿಸಲಿದ್ದಾರೆ. ಇನ್ನು ತೆಲುಗಿನಲ್ಲಿ ಪುಷ್ಪ 2 ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ನಟ ನಿತಿನ್ ಜೊತೆಗೆ ಇತ್ತೀಚೆಗಷ್ಟೆ ಹೊಸ ಸಿನಿಮಾಕ್ಕೆ ಸಹಿ ಹಾಕಿದ್ದು ಸಿನಿಮಾದ ಮುಹೂರ್ತವೂ ಇತ್ತೀಚೆಗಷ್ಟೆ ಮುಗಿದು ಚಿತ್ರೀಕರಣ ಪ್ರಾರಂಭವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:09 pm, Wed, 29 March 23

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್