AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಕನ್ನಡಕ್ಕೆ ಮೊದಲ ಆದ್ಯತೆ ಕೊಟ್ಟ ರಶ್ಮಿಕಾ ಮಂದಣ್ಣ; ಆದರೂ ಆಗಲಿಲ್ಲ ಸಮಾಧಾನ

ರಶ್ಮಿಕಾ ಮಂದಣ್ಣ ಅವರು ಸಂಕ್ರಾಂತಿ ಹಬ್ಬದ ನಿಮಿತ್ತ ಟ್ವೀಟ್ ಮಾಡಿದ್ದಾರೆ. ಸಾಂಪ್ರದಾಯಿಕ ಉಡುಗೆತೊಟ್ಟು ಕೈ ಮುಗಿದಿದ್ದಾರೆ. ಹಣೆಗೆ ಕುಂಕುಮ ಇಟ್ಟುಕೊಂಡಿದ್ದಾರೆ. ಹಲವು ಭಾಷೆಗಳಲ್ಲಿ ರಶ್ಮಿಕಾ ಶುಭಾಶಯ ತಿಳಿಸಿದ್ದಾರೆ.

Rashmika Mandanna: ಕನ್ನಡಕ್ಕೆ ಮೊದಲ ಆದ್ಯತೆ ಕೊಟ್ಟ ರಶ್ಮಿಕಾ ಮಂದಣ್ಣ; ಆದರೂ ಆಗಲಿಲ್ಲ ಸಮಾಧಾನ
ರಶ್ಮಿಕಾ ಮಂದಣ್ಣ
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Jan 16, 2023 | 7:52 AM

Share

ರಶ್ಮಿಕಾ ಮಂದಣ್ಣ (Rashmika Mandanna)  ಕೆಲವೇ ವರ್ಷಗಳಲ್ಲಿ ಸಾಕಷ್ಟು ಎತ್ತರಕ್ಕೆ ಬೆಳೆದಿದ್ದಾರೆ. ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು ಹಾಗೂ ಹಿಂದಿಯಲ್ಲಿ ಸ್ಟಾರ್​ ನಟರ ಜತೆ ಅವರು ತೆರೆಹಂಚಿಕೊಂಡಿದ್ದಾರೆ. ರಶ್ಮಿಕಾ ಇಷ್ಟೊಂದು ಎತ್ತರಕ್ಕೆ ಬೆಳೆದ ಬಗ್ಗೆ ಅವರ ಅಭಿಮಾನಿಗಳಿಗೆ ಖುಷಿ ಇದೆ. ಆದರೆ, ಒಂದು ವರ್ಗದ ಜನರು ಮಾತ್ರ ರಶ್ಮಿಕಾ ಏನೇ ಮಾಡಿದರೂ ಟೀಕೆ ಮಾಡುವುದನ್ನು ಮುಂದುವರಿಸಿದ್ದಾರೆ. ರಶ್ಮಿಕಾ ಮಾಡಿದ್ದೆಲ್ಲವೂ ತಪ್ಪು ಎಂದು ಬೆಟ್ಟು ಮಾಡಿ ತೋರಿಸುತ್ತಾರೆ. ಅವರು ಸಂಕ್ರಾಂತಿ (Sankranti Festival) ಶುಭಾಶಯ ಕೋರಲು ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ. ಆದಾಗ್ಯೂ ಅನೇಕರಿಗೆ ಸಮಾಧಾನ ಆದಂತಿಲ್ಲ.

ರಶ್ಮಿಕಾ ಮಂದಣ್ಣ ಅವರು ಸಂಕ್ರಾಂತಿ ಹಬ್ಬದ ನಿಮಿತ್ತ ಟ್ವೀಟ್ ಮಾಡಿದ್ದಾರೆ. ಸಾಂಪ್ರದಾಯಿಕ ಉಡುಗೆತೊಟ್ಟು ಕೈ ಮುಗಿದಿದ್ದಾರೆ. ಹಣೆಗೆ ಕುಂಕುಮ ಇಟ್ಟುಕೊಂಡಿದ್ದಾರೆ. ಹಲವು ಭಾಷೆಗಳಲ್ಲಿ ರಶ್ಮಿಕಾ ಶುಭಾಶಯ ತಿಳಿಸಿದ್ದಾರೆ. ವಿಶೇಷ ಎಂದರೆ ಅವರು ಮೊದಲು ಕನ್ನಡದಲ್ಲಿ ಬರೆದುಕೊಂಡಿದ್ದಾರೆ. ‘ಸಂಕ್ರಾಂತಿಯ ಶುಭಾಶಯಗಳು’ ಎಂದು ರಶ್ಮಿಕಾ ಬರೆದಿದ್ದಾರೆ. ಆ ಬಳಿಕ ತಮಿಳು, ಹಿಂದಿ, ತೆಲುಗು, ಮಲಯಾಳಂ ಹಾಗೂ ಇಂಗ್ಲಿಷ್​ನಲ್ಲಿ ರಶ್ಮಿಕಾ ವಿಷ್ ಮಾಡಿದ್ದಾರೆ.

ಇದನ್ನೂ ಓದಿ
Image
Rashmika Mandanna: ಎದೆ ಮೇಲೆ ಆಟೋಗ್ರಾಫ್​ ಹಾಕಿ ಅಂತ ಹಠ ಹಿಡಿದ ರಶ್ಮಿಕಾ ಮಂದಣ್ಣ ಅಭಿಮಾನಿ; ಮುಂದೇನಾಯ್ತು?
Image
Rashmika Mandanna: ‘ಇಂದು ನಾನೇ ಗೋಲ್ಡನ್​ ಗರ್ಲ್​’ ಅಂತ ಪೋಸ್​ ನೀಡಿದ ರಶ್ಮಿಕಾ ಮಂದಣ್ಣ; ಆದ್ರೆ ಜನ ಹೇಳಿದ್ದೇನು?
Image
Rashmika Mandanna: ಬಾಲಿವುಡ್​ ಸೇರಿದ ರಶ್ಮಿಕಾ ಮಂದಣ್ಣ ಹೊಸ ಅವತಾರ ಹೇಗಿದೆ ನೋಡಿ; ಫೋಟೋ ವೈರಲ್​
Image
Rashmika Mandanna: ಸೆಲ್ಫಿ ಕೇಳಿದ ಅಭಿಮಾನಿಗಳ ಜತೆ ರಶ್ಮಿಕಾ ಮಂದಣ್ಣ ನಡೆದುಕೊಂಡಿದ್ದು ಹೇಗೆ? ವಿಡಿಯೋ ವೈರಲ್​

ರಶ್ಮಿಕಾ ಕನ್ನಡದಲ್ಲಿ ಬರೆದುಕೊಂಡ ಬಗ್ಗೆ ಅನೇಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಎಲ್ಲರೂ ನಟಿಗೆ ಮರಳಿ ಶುಭಾಶಯ ತಿಳಿಸಿದ್ದಾರೆ. ಆದರೆ, ಇನ್ನೂ ಕೆಲವರು ಅಸಮಾಧಾನ ತೋರಿದ್ದಾರೆ. ‘ರಶ್ಮಿಕಾ ಅವರೇ ನೀವು ಈ ಮೊದಲು ಮಾಡಿದ್ದನ್ನು ನಾವು ಮರೆಯುವುದಿಲ್ಲ. ಏನೇ ಮಾಡಿದರೂ ನೀವು ನಮಗೆ ಇಷ್ಟವಾಗುವುದಿಲ್ಲ’ ಎಂದು ಕೆಲವರು ಬರೆದುಕೊಂಡಿದ್ದಾರೆ. ಆದರೆ, ಈ ಟ್ರೋಲ್​ಗಳ ಬಗ್ಗೆ ರಶ್ಮಿಕಾ ತಲೆಕೆಡಿಸಿಕೊಂಡಿಲ್ಲ.

ರಶ್ಮಿಕಾ ಮಂದಣ್ಣ ನಟನೆಯ ‘ವಾರಿಸು’ ಸಿನಿಮಾ ಸಂಕ್ರಾಂತಿ ನಿಮಿತ್ತ ರಿಲೀಸ್ ಆಗಿದೆ. ಈ ಚಿತ್ರ ಒಳ್ಳೆಯ ರೀತಿಯಲ್ಲಿ ಕಮಾಯಿ ಮಾಡುತ್ತಿದೆ. ಆದರೆ, ರಶ್ಮಿಕಾ ಮಂದಣ್ಣ ಪಾತ್ರಕ್ಕೆ ಹೆಚ್ಚು ತೂಕ ಇಲ್ಲ ಎಂಬ ವಿಚಾರ ಫ್ಯಾನ್ಸ್​ಗೆ ಬೇಸರ ತರಿಸಿದೆ.

ಇದನ್ನೂ ಓದಿ: Mission Majnu: ಅಂಧ ಯುವತಿ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ; ‘ಮಿಷನ್​ ಮಜ್ನು’ ಚಿತ್ರದ ತೆರೆ ಹಿಂದಿನ ಕಹಾನಿ ಇಲ್ಲಿದೆ..

ರಶ್ಮಿಕಾ ಮಂದಣ್ಣ ನಟನೆಯ ‘ಮಿಷನ್​ ಮಜ್ನು’ ಚಿತ್ರ ರಿಲೀಸ್​ಗೆ ರೆಡಿ ಇದೆ. ಜನವರಿ 20ರಂದು ಈ ಚಿತ್ರ ನೇರವಾಗಿ ನೆಟ್​ಫ್ಲಿಕ್ಸ್ ಒಟಿಟಿ ಮೂಲಕ ರಿಲೀಸ್ ಆಗುತ್ತಿದೆ. ಸಿದ್ದಾರ್ಥ್​ ಮಲ್ಹೋತ್ರ ಈ ಚಿತ್ರದ ನಾಯಕ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:07 am, Mon, 16 January 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ