Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ರಶ್ಮಿಕಾ ಮಂದಣ್ಣ ನಟಿಸಿದ ಸ್ಟಾರ್ ಹೀರೋಗಳ ಪಟ್ಟಿ ಬಹುದೊಡ್ಡದಿದೆ

ರಶ್ಮಿಕಾ ಮಂದಣ್ಣ ಅವರು ಕನ್ನಡ, ತೆಲುಗು, ತಮಿಳು ಮತ್ತು ಹಿಂದಿ ಚಿತ್ರರಂಗದಲ್ಲಿ ಸಾಕಷ್ಟು ಜನಪ್ರಿಯರಾಗಿದ್ದಾರೆ. ಅವರು ರಕ್ಷಿತ್ ಶೆಟ್ಟಿ, ಪುನೀತ್ ರಾಜ್ಕುಮಾರ್, ದರ್ಶನ್, ಧ್ರುವ ಸರ್ಜಾ, ಅಲ್ಲು ಅರ್ಜುನ್, ವಿಜಯ್ ದೇವರಕೊಂಡ, ಮಹೇಶ್ ಬಾಬು, ಕಾರ್ತಿ, ವಿಜಯ್, ಧನುಷ್, ಸಿದ್ದಾರ್ಥ್ ಮಲ್ಹೋತ್ರ, ಅಮಿತಾಭ್ ಬಚ್ಚನ್, ವಿಕ್ಕಿ ಕೌಶಲ್, ರಣಬೀರ್ ಕಪೂರ್, ಮತ್ತು ಸಲ್ಮಾನ್ ಖಾನ್ ಮುಂತಾದ ಅನೇಕ ಪ್ರಮುಖ ನಟರೊಂದಿಗೆ ಅಭಿನಯಿಸಿದ್ದಾರೆ.

Rashmika Mandanna: ರಶ್ಮಿಕಾ ಮಂದಣ್ಣ ನಟಿಸಿದ ಸ್ಟಾರ್ ಹೀರೋಗಳ ಪಟ್ಟಿ ಬಹುದೊಡ್ಡದಿದೆ
ರಶ್ಮಿಕಾ
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Apr 05, 2025 | 7:41 AM

ರಶ್ಮಿಕಾ ಮಂದಣ್ಣ (Rashmika Mandanna) ಅವರಿಗೆ ಇಂದು (ಏಪ್ರಿಲ್ 5) ಜನ್ಮದಿನ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. ಅವರ ಅಭಿಮಾನಿ ಬಳಗ ಹಿರಿದಾಗಿರುವುದರಿಂದ ಅವರಿಗೆ ಎಲ್ಲರೂ ಹೆಚ್ಚಿನ ಪ್ರೀತಿ ತೋರಿಸುತ್ತಿದ್ದಾರೆ. ಅವರ ಹೆಸರಿನಲ್ಲಿ ಸೃಷ್ಟಿ ಆಗಿರುವ ಫ್ಯಾನ್ ಪೇಜ್​ಗಳಲ್ಲಿ ರಶ್ಮಿಕಾಗೆ ವಿಶ್​ಗಳು ಬರುತ್ತಿವೆ. ಅವರ ಫೋಟೋನ ಹಾಕಿ ವಿಶ್​ಗಳನ್ನು ತಿಳಿಸಲಾಗುತ್ತಿದೆ. ಈಗ ರಶ್ಮಿಕಾ ಮಂದಣ್ಣ ಅವರು ಯಾವ ಯಾವ ಸ್ಟಾರ್ ಹೀರೋ ಜೊತೆ ನಟಿಸಿದ್ದಾರೆ ಎಂಬುದನ್ನು ನೋಡೋಣ.

ರಶ್ಮಿಕಾ ನಟಿಸಿದ ಮೊದಲ ಸಿನಿಮಾ ಕನ್ನಡದ ‘ಕಿರಿಕ್ ಪಾರ್ಟಿ’. ಈ ಚಿತ್ರದಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಜೊತೆ ಅವರು ತೆರೆ ಹಂಚಿಕೊಂಡರು. ಆ ಬಳಿಕ ರಿಲೀಸ್ ಆದ ‘ಅಂಜನೀ ಪುತ್ರ’ ಚಿತ್ರದಲ್ಲಿ ಪುನೀತ್ ರಾಜ್​ಕುಮಾರ್ ಜೊತೆ ಅಭಿನಯಿಸಿದರು. ‘ಚಮಕ್’ ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಜೊತೆ ನಟಿಸಿದರು. ಈ ಸಿನಿಮಾ ಯಶಸ್ಸು ಕಂಡಿತ್ತು. ಕನ್ನಡದಲ್ಲಿ ಅವರು ‘ಯಜಮಾನ’ ಸಿನಿಮಾ ಮಾಡಿದ್ದು, ದರ್ಶನ್ ಜೊತೆ ತೆರೆ ಹಂಚಿಕೊಂಡಿದ್ದಾರೆ. ಅವರು ಮಾಡಿದ ಕನ್ನಡದ ಕೊನೆಯ ಸಿನಿಮಾ ‘ಪೊಗರು’. ಇದರಲ್ಲಿ ಧ್ರುವ ಜೊತೆ ನಟಿಸಿದರು.

ತೆಲುಗಿನಲ್ಲಿ ಅಕ್ಕಿನೇನಿ ನಾಗಾರ್ಜುನ ಜೊತೆ ‘ದೇವದಾಸ್’ ಸಿನಿಮಾ ಮಾಡಿದ್ದಾರೆ. ‘ಗೀತ ಗೋವಿಂದಂ’ ಸಿನಿಮಾದಲ್ಲಿ ವಿಜಯ್ ದೇವರಕೊಂಡ ಜೊತೆ ಬಣ್ಣ ಹಚ್ಚಿದ್ದಾರೆ. ಈ ಚಿತ್ರ ರಶ್ಮಿಕಾ ಅವರ ವೃತ್ತಿ ಜೀವನವನ್ನೇ ಬದಲಿಸಿತು ಎಂದರೂ ತಪ್ಪಾಗಲಾರದು. ತೆಲುಗಿನಲ್ಲಿ ರಶ್ಮಿಕಾಗೆ ಹೆಚ್ಚು ಜನಪ್ರಿಯತೆ ನೀಡಿತು. ‘ಸರಿಲೇರು ನೀಕೆವ್ವರು’ ಚಿತ್ರದಲ್ಲಿ ಮಹೇಶ್ ಬಾಬು ಜೊತೆ ರಶ್ಮಿಕಾ ನಟಿಸಿದ್ದಾರೆ. ‘ಪುಷ್ಪ’ ಹಾಗೂ ‘ಪುಷ್ಪ 2’ ಚಿತ್ರದಲ್ಲಿ ಅಲ್ಲು ಅರ್ಜುನ್ ಜೊತೆ ನಟಿಸಿದ್ದಾರೆ ಅವರು.

ಇದನ್ನೂ ಓದಿ
Image
ಒಮನ್​​ನಲ್ಲಿ ಜಿಮ್ ಟ್ರೇನರ್​ಗಳ ಕಣ್ಣು ಕೆಂಪು ಮಾಡಿದ ರಶ್ಮಿಕಾ ಮಂದಣ್ಣ
Image
ನಟಿ ರಶ್ಮಿಕಾ ಮಂದಣ್ಣ ಮುಟ್ಟಿದ್ದೆಲ್ಲವೂ ಚಿನ್ನ; ಅವರ ಯಶಸ್ಸಿನ ಗುಟ್ಟಿದು
Image
ಮಹೇಶ್ ಬಾಬು ಕಾರಣಕ್ಕೆ ಶಾಲೆ ಬಂಕ್ ಮಾಡ್ತಾರೆ ಸಿತಾರಾ
Image
‘ಬಜರಂಗಿ ಭಾಯಿಜಾನ್’ ಆಫರ್ ಮೊದಲು ಹೋಗಿದ್ದು ಆಮಿರ್ ಬಳಿ

ತಮಿಳಿನಲ್ಲಿ ಕಾರ್ತಿ ಜೊತೆ ‘ಸುಲ್ತಾನ್’ ಸಿನಿಮಾ ಮಾಡಿದ್ದಾರೆ. ‘ವಾರಿಸು ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ನಟಿಸಿದ್ದಾರೆ. ಈಗ ಅವರು ‘ಕುಬೇರ’ ಚಿತ್ರದಲ್ಲಿ ಧನುಷ್ ಜೊತೆ ತೆರೆ ಹಂಚಿಕೊಳ್ಳುತ್ತಾ ಇದ್ದಾರೆ. ಇದು ಅವರ ತಮಿಳು ಸಿನಿಮಾಗಳು.

ಇದನ್ನೂ ಓದಿ: ಒಮನ್​​ನಲ್ಲಿ ಜಿಮ್ ಟ್ರೇನರ್​ಗಳ ಕಣ್ಣು ಕೆಂಪು ಮಾಡಿದ ರಶ್ಮಿಕಾ ಮಂದಣ್ಣ

ಹಿಂದಿಯಲ್ಲಿ ‘ಮಿಷನ್ ಮಜ್ನು’ ಮಾಡಿದ್ದಾರೆ. ಇದರಲ್ಲಿ ಸಿದ್ದಾರ್ಥ್ ಮಲ್ಹೋತ್ರ ಜೊತೆ ಬಣ್ಣ ಹಚ್ಚಿದ್ದಾರೆ. ಅಮಿತಾಭ್ ಬಚ್ಚನ್ ನಟನೆಯ ‘ಗುಡ್​ಬೈ’ ಚಿತ್ರದಲ್ಲಿ ರಶ್ಮಿಕಾ ನಟಿಸಿದ್ದಾರೆ. ‘ಛಾವಾ’ ಸಿನಿಮಾದಲ್ಲಿ ವಿಕ್ಕಿ ಕೌಶಲ್ ಜೊತೆ, ‘ಅನಿಮಲ್’ ಸಿನಿಮಾದಲ್ಲಿ ರಣಬೀರ್ ಕಪೂರ್ ಜೊತೆ ಅಭಿನಯಿಸಿದ್ದಾರೆ. ಇತ್ತೀಚೆಗೆ ಬಿಡುಗಡೆ ಕಂಡ ‘ಸಿಕಂದರ್’ ಸಿನಿಮಾದಲ್ಲಿ ರಶ್ಮಿಕಾ ನಟಿಸಿದ್ದಾರೆ. ಇದರಲ್ಲಿ ಸಲ್ಮಾನ್​ಗೆ ಜೊತೆಯಾಗಿದ್ದಾರೆ. ಆದರೆ, ಸಿನಿಮಾ ದೊಡ್ಡ ಮಟ್ಟದಲ್ಲಿ ಗೆಲುವು ಕಂಡಿಲ್ಲ ಎಂಬುದು ಬೇಸರದ ವಿಚಾರ. ಇವಿಷ್ಟು ರಶ್ಮಿಕಾ ನಟಿಸಿದ ಸ್ಟಾರ್ ಹೀರೋ ಸಿನಿಮಾಗಳು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ಜೆಡಿಎಸ್ ಈಗಲೂ ಕರ್ನಾಟಕದಲ್ಲಿ ಸಾಕಷ್ಟು ಬಲಾಢ್ಯ: ನಿಖಿಲ್ ಕುಮಾರಸ್ವಾಮಿ
ಜೆಡಿಎಸ್ ಈಗಲೂ ಕರ್ನಾಟಕದಲ್ಲಿ ಸಾಕಷ್ಟು ಬಲಾಢ್ಯ: ನಿಖಿಲ್ ಕುಮಾರಸ್ವಾಮಿ
ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು ಜಮ್ಮು ಕಾಶ್ಮೀರದ ವಿಧಾನಸಭೆಯಲ್ಲಿ ಗಲಾಟೆ
ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು ಜಮ್ಮು ಕಾಶ್ಮೀರದ ವಿಧಾನಸಭೆಯಲ್ಲಿ ಗಲಾಟೆ
Video: ಕಚ್ಚಿದ್ದಕ್ಕೆ ಬೀದಿ ನಾಯಿಯನ್ನು ಗುಂಡಿಕ್ಕಿ ಕೊಂದ ವ್ಯಕ್ತಿ
Video: ಕಚ್ಚಿದ್ದಕ್ಕೆ ಬೀದಿ ನಾಯಿಯನ್ನು ಗುಂಡಿಕ್ಕಿ ಕೊಂದ ವ್ಯಕ್ತಿ
ಬೀದರ್ ಮತ್ತು ಕಲಬುರಗಿ ದರೋಡೆ ಪ್ರಕರಣಗಳ ನಡುವೆ ಲಿಂಕ್ ಇರೋ ಸಾಧ್ಯತೆ
ಬೀದರ್ ಮತ್ತು ಕಲಬುರಗಿ ದರೋಡೆ ಪ್ರಕರಣಗಳ ನಡುವೆ ಲಿಂಕ್ ಇರೋ ಸಾಧ್ಯತೆ
ಸಮಾಜ ಸ್ವಾಮೀಜಿಯನ್ನು ಕಡೆಗಣಿಸಿಲಾರಂಭಿಸಿದರೆ ಅಚ್ಚರಿಯಿಲ್ಲ: ವಿಜುಗೌಡ
ಸಮಾಜ ಸ್ವಾಮೀಜಿಯನ್ನು ಕಡೆಗಣಿಸಿಲಾರಂಭಿಸಿದರೆ ಅಚ್ಚರಿಯಿಲ್ಲ: ವಿಜುಗೌಡ
2 ಬಾರಿ ಫೈನ್ ಕಟ್ಟಿದ ಬಳಿಕ ಹೊಸ ಸೆಲೆಬ್ರೇಷನ್ ಪರಿಚಯಿಸಿದ ದಿಗ್ವೇಶ್ ರಾಠಿ
2 ಬಾರಿ ಫೈನ್ ಕಟ್ಟಿದ ಬಳಿಕ ಹೊಸ ಸೆಲೆಬ್ರೇಷನ್ ಪರಿಚಯಿಸಿದ ದಿಗ್ವೇಶ್ ರಾಠಿ
ಅಧಿವೇಶನದ ಬಗ್ಗೆ ಬೆಂಗಳೂರಲ್ಲಿ ಬ್ರೀಫ್ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ
ಅಧಿವೇಶನದ ಬಗ್ಗೆ ಬೆಂಗಳೂರಲ್ಲಿ ಬ್ರೀಫ್ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ