AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ’ ಬಗ್ಗೆ ರಶ್ಮಿಕಾ ಮಂದಣ್ಣ ಮಾತು, ಹಳೆ ಹೇಳಿಕೆ ವೈರಲ್

Kantara: Chapter 1: ಪ್ರಭಾಸ್, ಜೂ ಎನ್​ಟಿಆರ್, ರಾಮ್ ಗೋಪಾಲ್ ವರ್ಮಾ, ಸಂದೀಪ್ ರೆಡ್ಡಿ ವಂಗಾ ಇನ್ನೂ ಹಲವಾರು ಮಂದಿ ಖ್ಯಾತ ತಾರೆಯರು ‘ಕಾಂತಾರ: ಚಾಪ್ಟರ್ 1’ ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಿಷಬ್ ಶೆಟ್ಟಿ ತಂಡದಿಂದಲೇ ಚಿತ್ರರಂಗಕ್ಕೆ ಪರಿಚಯಗೊಂಡು ಈಗ ಬಾಲಿವುಡ್​​ನಲ್ಲಿ ಸ್ಟಾರ್ ಆಗಿ ಮಿಂಚುತ್ತಿರುವ ರಶ್ಮಿಕಾ ಮಂದಣ್ಣ ಈ ಹಿಂದೆ ಬಿಡುಗಡೆ ಆಗಿದ್ದ ‘ಕಾಂತಾರ’ ಸಿನಿಮಾ ನೋಡಿದ್ದಾಗ ನೀಡಿದ್ದ ಹೇಳಿಕೆ ಈಗ ವೈರಲ್ ಆಗಿದೆ.

‘ಕಾಂತಾರ’ ಬಗ್ಗೆ ರಶ್ಮಿಕಾ ಮಂದಣ್ಣ ಮಾತು, ಹಳೆ ಹೇಳಿಕೆ ವೈರಲ್
Kantara Chapter 1
ಮಂಜುನಾಥ ಸಿ.
|

Updated on:Oct 09, 2025 | 12:47 PM

Share

ಕಾಂತಾರ: ಚಾಪ್ಟರ್ 1’ (Kantara: Chapter 1) ಸಿನಿಮಾ ಬಿಡುಗಡೆ ಆಗಿ ವಾರವಾಗಿದ್ದು ಬಾಕ್ಸ್ ಆಫೀಸ್​​ನಲ್ಲಿ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಪ್ರಭಾಸ್, ಜೂ ಎನ್​ಟಿಆರ್, ರಾಮ್ ಗೋಪಾಲ್ ವರ್ಮಾ, ಸಂದೀಪ್ ರೆಡ್ಡಿ ವಂಗಾ ಇನ್ನೂ ಹಲವಾರು ಮಂದಿ ಖ್ಯಾತ ತಾರೆಯರು ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಿಷಬ್ ಶೆಟ್ಟಿ ತಂಡದಿಂದಲೇ ಚಿತ್ರರಂಗಕ್ಕೆ ಪರಿಚಯಗೊಂಡು ಈಗ ಬಾಲಿವುಡ್​​ನಲ್ಲಿ ಸ್ಟಾರ್ ಆಗಿ ಮಿಂಚುತ್ತಿರುವ ರಶ್ಮಿಕಾ ಮಂದಣ್ಣ, ಈ ಹಿಂದೆ ‘ಕಾಂತಾರ’ ಸಿನಿಮಾ ನೋಡಿ ನೀಡಿದ್ದ ಹೇಳಿಕೆ ಈಗ ಮತ್ತೆ ವೈರಲ್ ಆಗಿದೆ.

‘ಸಿನಿಮಾ ಬಿಡುಗಡೆ ಆದ ಎರಡು ಮೂರು ದಿನಗಳಲ್ಲಿಯೇ ನನಗೆ ನೋಡಲು ಸಾಧ್ಯವಿಲ್ಲ. ಹಾಗಾಗಿ ಸಿನಿಮಾ ರಿಲೀಸ್ ಆದ ಕೂಡಲೇ ನಾನು ಸಿನಿಮಾ ವೀಕ್ಷಿಸಲಿಲ್ಲ. ಆದರೆ ಇತ್ತೀಚೆಗಷ್ಟೆ ಸಿನಿಮಾ ನೋಡಿದೆ. ನನಗೆ ಇಷ್ಟವಾಯ್ತು, ಚಿತ್ರತಂಡಕ್ಕೆ ಮೆಸೇಜ್ ಮಾಡಿದ್ದೆ, ಅವರು ಧನ್ಯವಾದ ಎಂದು ಪ್ರತಿಕ್ರಿಯೆ ನೀಡಿದ್ದಾರೆ’ ಎಂದಿದ್ದರು. ಆದರೆ ಈಗ ಬಿಡುಗಡೆ ಆಗಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾವನ್ನು ರಶ್ಮಿಕಾ ಇನ್ನೂ ನೋಡಿದಂತಿಲ್ಲ.

‘ಒಳಗೆ ಏನು ನಡೆಯುತ್ತಿದೆ ಎಂಬುದು ಸಮಾಜಕ್ಕೆ ಗೊತ್ತಿರುವುದಿಲ್ಲ. ನಮ್ಮ ಸುತ್ತಲೂ ನಡೆಯುತ್ತಿರುವ ಎಲ್ಲವನ್ನೂ ಕ್ಯಾಮೆರಾನಲ್ಲಿ ಸೆರೆ ಹಿಡಿದು ತೋರಿಸಲು ಆಗುವುದಿಲ್ಲ. ಏನು ನಡೆಯುತ್ತಿದೆ ಎಂಬುದು ದೇವರಿಗೆ ಮಾತ್ರವೇ ಗೊತ್ತಿರುತ್ತದೆ. ಅಲ್ಲದೆ, ನಡೆದ ಪ್ರತಿಯೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ವ್ಯಕ್ತಿತ್ವವೂ ನನ್ನದಲ್ಲ. ಏನು ಕಾಣುತ್ತಿದೆಯೋ ಅದಕ್ಕಿಂತಲೂ ಭಿನ್ನವಾದ ಕತೆ ಇರುತ್ತದೆ’ ಎಂದು ಹೇಳಿದ್ದರು ರಶ್ಮಿಕಾ ಮಂದಣ್ಣ. ಮುಂದುವರೆದು, ‘ನನ್ನ ಖಾಸಗಿ ಜೀವನದ ಬಗ್ಗೆ ಜನ ಏನು ಹೇಳುತ್ತಾರೆ ಎಂಬುದು ನನಗೆ ಮುಖ್ಯವಲ್ಲ. ಆದರೆ ನನ್ನ ವೃತ್ತಿ ಜೀವನದ ಬಗ್ಗೆ ಏನು ಹೇಳುತ್ತಾರೆ ಎನ್ನುವುದು ಮುಖ್ಯ. ಅಂಥಹಾ ಸಲಹೆಗಳನ್ನು ಸ್ವೀಕರಿಸಿ ನಾನು ಅವನ್ನು ಅಳವಡಿಸಿಕೊಳ್ಳುತ್ತೇನೆ. ಮಿಕ್ಕಿದ್ದನ್ನು ಬಿಟ್ಟು ಮುಂದೆ ಹೋಗುತ್ತೇನೆ’ ಎಂದು ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದರು.

ಇದನ್ನೂ ಓದಿ:ರಶ್ಮಿಕಾ ಮಂದಣ್ಣರ ಈ ಹಾಟ್ ಅವತಾರ ಹಿಂದೆಂದೂ ನೋಡಿರಲಾರಿರಿ

‘ಕಾಂತಾರ: ಚಾಪ್ಟರ್ 1’ ಸಿನಿಮಾ ನಿರ್ದೇಶಕ ರಿಷಬ್ ಶೆಟ್ಟಿ ನಿರ್ದೇಶಿಸಿದ್ದ ‘ಕಿರಿಕ್ ಪಾರ್ಟಿ’ ಸಿನಿಮಾ ಮೂಲಕ ರಶ್ಮಿಕಾ ಮಂದಣ್ಣ ನಟನೆಗೆ ಕಾಲಿರಿಸಿದರು. ಅದೇ ಸಿನಿಮಾದ ನಾಯಕ ರಕ್ಷಿತ್ ಶೆಟ್ಟಿ ಜೊತೆಗೆ ನಿಶ್ಚಿತಾರ್ಥವನ್ನೂ ಮಾಡಿಕೊಂಡರು. ಆದರೆ ನಿಶ್ಚಿತಾರ್ಥ ಮುರಿದುಕೊಂಡು ವೃತ್ತಿಯ ಮೇಲೆ ಗಮನ ಹರಿಸಿದರು. ಇದೇ ಕಾರಣಕ್ಕೆ ರಿಷಬ್ ಶೆಟ್ಟಿಗೆ ಮೊದಲಿನಿಂದಲೂ ರಶ್ಮಿಕಾ ಮೇಲೆ ವಿಪರೀತ ಸಿಟ್ಟು. ಈಗಲೂ ಸಹ ಕೆಲ ಸಂದರ್ಶನಗಳಲ್ಲಿ ರಶ್ಮಿಕಾ ಹೆಸರು ಹೇಳದೆ ಪರೋಕ್ಷವಾಗಿ ಟಾಂಗ್ ಕೊಡುತ್ತಲೇ ಇರುತ್ತಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:28 am, Thu, 9 October 25

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?