ಅಜಾತಶತ್ರು ಎನಿಸಿಕೊಂಡಿದ್ದ ರತನ್ ಟಾಟಾ ಸಾವಿಗೆ ಚಿತ್ರರಂಗದ ಕಂಬನಿ

ಏಕೆಂದರೆ ಶತಕೋಟಿ ಮತ್ತು ಟ್ರಿಲಿಯನ್‌ಗಳಷ್ಟು ಮೌಲ್ಯದ ವ್ಯಾಪಾರ ಸಾಮ್ರಾಜ್ಯವನ್ನು ನಿರ್ವಹಿಸಿದ ರತನ್ ಟಾಟಾ ಇದೇ ದಿನ ಜಗತ್ತಿಗೆ ವಿದಾಯ ಹೇಳಿದ್ದಾರೆ. ಅವರ ಸಾವಿನ ಬಗ್ಗೆ ಎಲ್ಲರೂ ಸಂತಾಪ ಸೂಚಿಸುತ್ತಿದ್ದಾರೆ. ಕನ್ನಡ ಚಿತ್ರರಂಗದವರು ಸೇರಿ ಎಲ್ಲರೂ ಸಂತಾಪ ಸೂಚಿಸಿದ್ದಾರೆ.

ಅಜಾತಶತ್ರು ಎನಿಸಿಕೊಂಡಿದ್ದ ರತನ್ ಟಾಟಾ ಸಾವಿಗೆ ಚಿತ್ರರಂಗದ ಕಂಬನಿ
ಅಜಾತಶತ್ರು ಎನಿಸಿಕೊಂಡಿದ್ದ ರತನ್ ಟಾಟಾ ಸಾವಿಗೆ ಚಿತ್ರರಂಗದ ಕಂಬನಿ
Follow us
|

Updated on: Oct 10, 2024 | 9:00 AM

ಖ್ಯಾತ ಉದ್ಯಮಿ, ಕರುಣಾಮಯಿ, ಅಜಾತಶತ್ರು ಎನಿಸಿಕೊಂಡಿದ್ದ ರತನ್ ಟಾಟಾ ನಿಧನವಾರ್ತೆ ಎಲ್ಲರಿಗೂ ಶಾಕ್ ಕೊಟ್ಟಿದೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ರತನ್ ಟಾಟಾ ಅವರು ತಮ್ಮ ಒಳಿತಿಗಿಂತ ಸಮಾಜದ ಒಳಿತಿಗಾಗಿ ಹೆಚ್ಚು ಶ್ರಮಿಸಿದ್ದರು. ಟಾಟಾ ಸಂಸ್ಥೆಯನ್ನು ಕಟ್ಟಿ ಬೆಳೆಸಿದ್ದ ಅವರು, ಇಂದು ನಮ್ಮ ಜೊತೆ ಇಲ್ಲ. ಇದಕ್ಕೆ ಚಿತ್ರರಂಗದವರು​ ಸಂತಾಪ ಸೂಚಿಸಿದ್ದಾರೆ.

ರತನ್ ಟಾಟಾ ಅವರು ಅಕ್ಟೋಬರ್ 9ರಂದು ನಿಧನ ಹೊಂದಿದರು. ಅವರ ಸಾವು ಉದ್ಯಮ ರಂಗಕ್ಕೆ ಶಾಕಿಂಗ್ ಎನಿಸಿದೆ. ಸೆಲೆಬ್ರಿಟಿಗಳು ಸೋಶಿಯಲ್ ಮೀಡಿಯಾ ಮೂಲಕ ಸಂತಾಪ ಸೂಚಿಸುತ್ತಿದ್ದಾರೆ. ‘ಭಾರತದ ಹೆಮ್ಮೆಯ ಪುತ್ರ ರತನ್ ನಾವಲ್ ಟಾಟಾ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ’ ಎಂದು ಶಿವಣ್ಣ ಟ್ವೀಟ್ ಮಾಡಿದ್ದಾರೆ. ‘ರತನ್ ಟಾಟಾ ನಿಧನವಾರ್ತೆ ಕೇಳಿ ದುಃಖವಾಗಿದೆ’ ಎಂದು ಸಲ್ಮಾನ್ ಖಾನ್ ಬರೆದುಕೊಂಡಿದ್ದಾರೆ.

‘ನಿಮ್ಮ ದಯೆಯಿಂದ ನೀವು ಲಕ್ಷಾಂತರ ಜನರ ಜೀವಗಳನ್ನು ತಲುಪಿದ್ದೀರಿ. ನಿಮ್ಮ ನಾಯಕತ್ವ ಮತ್ತು ಉದಾರತೆಯ ಪರಂಪರೆಯು ಮುಂದಿನ ತಲೆಮಾರಿಗೆ ಸ್ಫೂರ್ತಿ ನೀಡುತ್ತದೆ. ನಮ್ಮ ದೇಶಕ್ಕಾಗಿ ನೀವು ನೀಡಿದ ಕೊಡುಗೆ, ನಿಮ್ಮ ಸಾಟಿಯಿಲ್ಲದ ಉತ್ಸಾಹ ಮತ್ತು ಸಮರ್ಪಣೆಗಾಗಿ ಧನ್ಯವಾದಗಳು. ನೀವು ನಮಗೆಲ್ಲರಿಗೂ ಸ್ಫೂರ್ತಿಯಾಗಿದ್ದೀರಿ. ನಿಮ್ಮನ್ನು ನಾವು ಮಿಸ್ ಮಾಡಿಕೊಳ್ಳುತ್ತೇವೆ’ ಎಂದು ಪ್ರಿಯಾಂಕಾ ಚೋಪ್ರಾ ಬರೆದುಕೊಂಡಿದ್ದಾರೆ.

ಇದನ್ನೂ ಓದಿ:  ಸಾಕು ನಾಯಿಗೋಸ್ಕರ ಬ್ರಿಟನ್ ರಾಜಮನೆತನದ ಪ್ರತಿಷ್ಠಿತ ಪ್ರಶಸ್ತಿ ತಿರಸ್ಕರಿಸಿದ್ದ ರತನ್ ಟಾಟಾ

‘ಉದ್ಯಮದ ಟೈಟಾನ್ ರತನ್ ಟಾಟಾ ಅವರ ನಿಸ್ವಾರ್ಥ ಲೋಕೋಪಕಾರ ಮತ್ತು ದೂರದೃಷ್ಟಿಯ ನಾಯಕತ್ವವು ಅಸಂಖ್ಯಾತ ಜೀವನವನ್ನು ಪರಿವರ್ತಿಸಿದೆ. ಅವರು ಶಾಂತಿಯಿಂದ ವಿಶ್ರಾಂತಿ ಪಡೆಯಲಿ’ ಎಂದು ಜೂನಿಯರ್ ಎನ್​ಟಿಆರ್ ಟ್ವೀಟ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Navaratri 2024: ನವರಾತ್ರಿ 8ನೇ ದಿನ ಪೂಜಿಸಲಾಗುವ ಮಹಾಗೌರಿ ಮಹತ್ವವೇನು?
Navaratri 2024: ನವರಾತ್ರಿ 8ನೇ ದಿನ ಪೂಜಿಸಲಾಗುವ ಮಹಾಗೌರಿ ಮಹತ್ವವೇನು?
ಈ ರಾಶಿಯವರಿಗೆ ಮರೆವಿನ ಕಾರಣಕ್ಕೆ ಉದ್ಯೋಗದಲ್ಲಿ ಹಿನ್ನಡೆಯೆನಿಸುವುದು
ಈ ರಾಶಿಯವರಿಗೆ ಮರೆವಿನ ಕಾರಣಕ್ಕೆ ಉದ್ಯೋಗದಲ್ಲಿ ಹಿನ್ನಡೆಯೆನಿಸುವುದು
ಬಾಂಗ್ಲಾ ಬೌಲರ್​ಗಳ ಬೆಂಡೆತ್ತಿದ ಭಾರತೀಯರು: ಇಲ್ಲಿದೆ ನೋಡಿ ಹೈಲೈಟ್ಸ್
ಬಾಂಗ್ಲಾ ಬೌಲರ್​ಗಳ ಬೆಂಡೆತ್ತಿದ ಭಾರತೀಯರು: ಇಲ್ಲಿದೆ ನೋಡಿ ಹೈಲೈಟ್ಸ್
ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ
ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ
ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ
ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ
ಟೋಲ್​ನಲ್ಲಿ ಲಾರಿ ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾ ಸಿಬ್ಬಂದಿಯ ಹತ್ಯೆ
ಟೋಲ್​ನಲ್ಲಿ ಲಾರಿ ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾ ಸಿಬ್ಬಂದಿಯ ಹತ್ಯೆ
ದರ್ಶನ್​ ಜತೆ ಉಂಟಾದ ಮನಸ್ತಾಪದ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ
ದರ್ಶನ್​ ಜತೆ ಉಂಟಾದ ಮನಸ್ತಾಪದ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ
ಕೊಲ್ಕತ್ತಾದಲ್ಲಿ ಜನರ ಮನಸೆಳೆಯುತ್ತಿದೆ ಮಳೆಹನಿ ಥೀಮ್​ನ ದುರ್ಗಾ ಪೆಂಡಾಲ್
ಕೊಲ್ಕತ್ತಾದಲ್ಲಿ ಜನರ ಮನಸೆಳೆಯುತ್ತಿದೆ ಮಳೆಹನಿ ಥೀಮ್​ನ ದುರ್ಗಾ ಪೆಂಡಾಲ್
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?
ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್
ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್