AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಮನ ಸೆಳೆದ ‘ದಿಂಸೋಲ್’ ಸಿನಿಮಾ ಮೋಷನ್ ಪೋಸ್ಟರ್; ಇದು ಕರಾವಳಿ ಭಾಗದ ಕಥೆ

‘ದಿಂಸೋಲ್’ ಚಿತ್ರವು ಸಚಿನ್ ವಿ. ಅವರ ನಿರ್ಮಾಣದಲ್ಲಿ ಮೂಡಿಬರುತ್ತಿದೆ. ಟೈಟಲ್ ಮೂಲಕ ಗಮನ ಸೆಳೆದಿದೆ. ಈ ಚಿತ್ರಕ್ಕೆ ಸಂದೀಪ್ ವಲ್ಲೂರಿ ಛಾಯಾಗ್ರಹಣ ಮಾಡುತ್ತಿದ್ದಾರೆ. ರವಿ ಬಸ್ರೂರು ಅವರು ಸಂಗೀತ ನೀಡುತ್ತಿದ್ದಾರೆ. ರಥ ಕಿರಣ್, ಶಿವಾನಿ ರೈ, ರಂಗಾಯಣ ರಘು, ಮಾನಸಿ ಸುಧೀರ್ ಮುಂತಾದವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಗಮನ ಸೆಳೆದ ‘ದಿಂಸೋಲ್’ ಸಿನಿಮಾ ಮೋಷನ್ ಪೋಸ್ಟರ್; ಇದು ಕರಾವಳಿ ಭಾಗದ ಕಥೆ
Dimsol
ಮದನ್​ ಕುಮಾರ್​
|

Updated on: Sep 09, 2025 | 10:31 PM

Share

‘ದಿಂಸೋಲ್’ (Dimsol) ಎಂಬ ಡಿಫರೆಂಟ್ ಶೀರ್ಷಿಕೆಯಲ್ಲಿ ಸಿನಿಮಾ ನಿರ್ಮಾಣ ಆಗುತ್ತಿದೆ. ಈ ಚಿತ್ರವನ್ನು ಅದ್ದೂರಿಯಾಗಿ ನಿರ್ಮಿಸಲಾಗುತ್ತಿದೆ. ಗೌರಿ ಗಣೇಶ ಹಬ್ಬದ ಪ್ರಯುಕ್ತ ‘ದಿಂಸೋಲ್’ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಲಾಗಿತ್ತು. ಈಗ ಈ ಸಿನಿಮಾದ ಮೋಷನ್ ಪೋಸ್ಟರ್ (Dimsol Motion Poster) ಬಿಡುಗಡೆ ಮಾಡಲಾಗಿದೆ. ಮೋಷನ್ ಪೋಸ್ಟರ್ ನೋಡಿದರೆ ಸಿನಿಮಾ ಮೇಲೆ ಕುತೂಹಲ ಹೆಚ್ಚುತ್ತದೆ. ನಾಗೇಂದ್ರ ಗಾಣಿಗ ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ‘ದಿಂಸೋಲ್’ ಸಿನಿಮಾದಲ್ಲಿ ಕರಾವಳಿಯ ಸಂಸ್ಕೃತಿ ಬಗ್ಗೆ ತೋರಿಸಲಾಗುತ್​ತದೆ.

‘ಕಾಂತಾರ’ ಬಳಿಕ ಕರಾವಳಿ ಸಂಸ್ಕೃತಿಯ ಸೊಡಗನ್ನು ಸಾರುವ ಒಂದಷ್ಟು ಸಿನಿಮಾಗಳು ಬರುತ್ತಿವೆ. ಅಂಥ ಸಿನಿಮಾಗಳ ಸಾಲಿಗೆ ‘ದಿಂಸೋಲ್’ ಕೂಡ ಸೇರ್ಪಡೆ ಆಗುತ್ತಿದೆ. ರಥ ಕಿರಣ್ ಅವರು ನಾಯನಾಗಿ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ನಾಯಕಿಯಾಗಿ ಶಿವಾನಿ ರೈ ಅವರು ಅಭಿನಯಿಸುತ್ತಿದ್ದಾರೆ. ಈ ಮೊದಲು ‘ಅಭಿರಾಮಚಂದ್ರ’ ಸಿನಿಮಾದಲ್ಲಿ ಅವರಿಬ್ಬರು ಒಟ್ಟಿಗೆ ನಟಿಸಿದ್ದರು.

‘ಅಭಿರಾಮಚಂದ್ರ’ ಸಿನಿಮಾದ ಬಳಿಕ ರಥ ಕಿರಣ್ ಮತ್ತು ಶಿವಾನಿ ರೈ ‘ದಿಂಸೋಲ್’ ಸಿನಿಮಾದಲ್ಲಿ ಮತ್ತೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಈ ಸಿನಿಮಾದ ಒಂದು ಪ್ರಮುಖ ಪಾತ್ರದಲ್ಲಿ ರಾಕೇಶ್ ಅಡಿಗ ಅಭಿನಯಿಸುತ್ತಿದ್ದಾರೆ. ರಂಗಾಯಣ ರಘು, ಮಾನಸಿ ಸುಧೀರ್, ಕಿರುತೆರೆ ನಟಿ ಅಮೃತಾ ಮುಂತಾದವರು ಕೂಡ ಪಾತ್ರವರ್ಗದಲ್ಲಿ ಇದ್ದಾರೆ.

‘ದಿಂಸೋಲ್’ ಮೋಷನ್ ಪೋಸ್ಟರ್:

ಅಷ್ಟಕ್ಕೂ ‘ದಿಂಸೋಲ್’ ಎಂದರೆ ಏನು? ಕರಾವಳಿ ಭಾಗದಲ್ಲಿ ಶಿವರಾತ್ರಿ ಸಂದರ್ಭದಲ್ಲಿ ನಡೆಯುವ ಆಚರಣೆ ಇದು. ಕರಾವಳಿಯ ಎಲ್ಲ ಸಂಸ್ಕೃತಿಯನ್ನು ಈ ಸಿನಿಮಾದ ಮೂಲಕ ನಿರ್ದೇಶಕ ನಾಗೇಂದ್ರ ಗಾಣಿಗ ಅವರು ದೃಶ್ಯ ರೂಪಕ್ಕೆ ತರುತ್ತಿದ್ದಾರೆ. ಮೊದಲ ಪೋಸ್ಟರ್ ಕೂಡ ಸಿಕ್ಕಾಪಟ್ಟೆ ಗಮನ ಸೆಳೆದಿತ್ತು. ದೇವಿ ರಕ್ತೇಶ್ವರಿ ಇರುವ ಮೋಷನ್ ಪೋಸ್ಟರ್ ಸಿನಿಮಾದ ಮೇಲಿನ ಕುತೂಹಲವನ್ನು ಹೆಚ್ಚಿಸಿದೆ.

ಇದನ್ನೂ ಓದಿ: ಪ್ರಜ್ವಲ್ ದೇವರಾಜ್, ರಾಜ್ ಬಿ. ಶೆಟ್ಟಿ ನಟನೆಯ ‘ಕರಾವಳಿ’ ಸಿನಿಮಾಗೆ ಶೂಟಿಂಗ್ ಪೂರ್ಣ

ಈ ಸಿನಿಮಾದ ಕಥೆಯು ದೇವರ ಬಗ್ಗೆ ಇದೆ ಎಂಬುದು ಈ ಪೋಸ್ಟರ್ ನೋಡಿದರೆ ತಿಳಿಯುತ್ತದೆ. ಸಿನಿಮಾದಲ್ಲಿ ಇನ್ನೂ ಏನೆಲ್ಲ ಇರಲಿದೆ ಎಂಬುದನ್ನು ನೋಡುವ ಕೌತುಕ ಹೆಚ್ಚಿದೆ. ಸದ್ಯ ಪೋಸ್ಟರ್ ರಿಲೀಸ್ ಮಾಡಿರುವ ಚಿತ್ರತಂಡ ಶೀಘ್ರದಲ್ಲೇ ಶೂಟಿಂಗ್ ಪ್ರಾರಂಭ ಮಾಡಲಿದೆ. ಕರಾವಳಿಯ ಸುತ್ತಮುತ್ತ ಸಿನಿಮಾದ ಚಿತ್ರೀಕರಣ ಮಾಡಲು ಪ್ಲಾನ್ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ