AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್ 2’ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಸಿಗುತ್ತಿದ್ದಂತೆ ಬಾಲಿವುಡ್​​ನಲ್ಲಿ ನಡೆದ ಬೆಳವಣಿಗೆ ಏನು?

ರವೀನಾ ಟಂಡನ್ ಅವರು ರಾಷ್ಟ್ರ ಪ್ರಶಸ್ತಿ ಗೆದ್ದ ‘ಕೆಜಿಎಫ್ 2’ನ ಭಾಗವಾಗಿದ್ದರು. ಇದು ಅವರಿಗೆ ಹಾಗೂ ಇದನ್ನು ಹಿಂದಿಯಲ್ಲಿ ಹಂಚಿಕೆ ಮಾಡಿದ ಅವರ ಪತಿಗೆ ಖುಷಿ ತಂದಿದೆ. ಈ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಅವರು ಈ ಮೊದಲು ರಾಷ್ಟ್ರಪ್ರಶಸ್ತಿ ಪಡೆದುಕೊಂಡಿದ್ದರು.

‘ಕೆಜಿಎಫ್ 2’ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಸಿಗುತ್ತಿದ್ದಂತೆ ಬಾಲಿವುಡ್​​ನಲ್ಲಿ ನಡೆದ ಬೆಳವಣಿಗೆ ಏನು?
ರಾಜೇಶ್ ದುಗ್ಗುಮನೆ
|

Updated on: Aug 18, 2024 | 6:59 AM

Share

ಇತ್ತೀಚೆಗಷ್ಟೇ ರಾಷ್ಟ್ರ ಪ್ರಶಸ್ತಿ ಘೋಷಣೆ ಆಗಿದೆ. ‘ಕೆಜಿಎಫ್ 2’ ಚಿತ್ರಕ್ಕೆ ಎರಡು ಪ್ರಶಸ್ತಿಗಳು ಸಿಕ್ಕಿವೆ. ಈ ಮೂಲಕ ನಿರ್ದೇಶಕ ಪ್ರಶಾಂತ್ ನೀಲ್ ಖ್ಯಾತಿ ಹೆಚ್ಚಾಗಿದೆ. ಈ ಸಿನಿಮಾಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ ಎಂಬ ವಿಚಾರ ತಿಳಿಯುತ್ತಿದ್ದಂತೆ ಪ್ರಶಾಂತ್ ನೀಲ್ ಅವರನ್ನು ಭೇಟಿ ಮಾಡಲು ರವೀನಾ ಟಂಡನ್ ಪತಿ ಅನಿಲ್ ತಡಾನಿ ಹೈದರಾಬಾದ್​ಗೆ ಓಡಿದ್ದಾರಂತೆ. ಈ ವಿಚಾರವನ್ನು ರವೀನಾ ತಿಳಿಸಿದ್ದಾರೆ. ಬಾಲಿವುಡ್​ನಲ್ಲಿ ಪ್ರಶಾಂತ್ ನೀಲ್ ನಿರ್ದೇಶನ ಮಾಡುವ ಮುಂದಿನ ಚಿತ್ರಗಳ ಹಂಚಿಕೆ ಹಕ್ಕನ್ನು ತಮಗೆ ನೀಡಬೇಕು ಎಂದು ಅವರು ಕೋರಿದ್ದಾರೆ ಎನ್ನಲಾಗುತ್ತಿದೆ.

‘ಕೆಜಿಎಫ್ 2’ ಚಿತ್ರದಲ್ಲಿ ರವೀನಾ ಟಂಡನ್ ನಟಿಸಿದ್ದರು. ಅವರ ಪತಿ ಅನಿಲ್ ಅವರು ಈ ಚಿತ್ರವನ್ನು ಹಿಂದಿಯಲ್ಲಿ ಹಂಚಿಕೆ ಮಾಡಿದ್ದರು. ಈ ಚಿತ್ರ ಹಿಂದಿ ಭಾಗದಲ್ಲಿ 500 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಕಾರಣಕ್ಕೆ ಅವರಿಗೆ ಸಿನಿಮಾ ಮೇಲೆ ವಿಶೇಷ ಪ್ರೀತಿ. ಹೀಗಾಗಿ, ಈ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ ಎಂಬ ವಿಚಾರ ತಿಳಿಯುತ್ತಿದ್ದಂತೆ ಅವರು ಹೈದರಾಬಾದ್​ಗೆ ಹಾರಿದ್ದಾರೆ.

ಈ ಬಗ್ಗೆ ಅವರು ನ್ಯೂಸ್ 18 ಇಂಗ್ಲಿಷ್ ಜೊತೆ ರವೀನಾ ಮಾತನಾಡಿದ್ದಾರೆ. ‘ಇದು ನಿಜಕ್ಕೂ ಹೆಮ್ಮೆಯ ವಿಚಾರ. ನನಗೆ ಟೀಂನ ಯಾರ ಜೊತೆಯೂ ಮಾತನಾಡೋಕೆ ಸಾಧ್ಯವಾಗಿಲ್ಲ. ನನ್ನ ಪತಿ ಪ್ರಶಾಂತ್ ನೀಲ್ ಅವರನ್ನು ಭೇಟಿ ಮಾಡಲು ಹೈದರಾಬಾದ್​ಗೆ ತೆರಳಿದ್ದಾರೆ’ ಎಂದಿದ್ದಾರೆ ಅವರು. ರವೀನಾ ಟಂಡನ್ ಅವರಿಗೆ 2001ರಲ್ಲಿ ‘ದಮನ್’ ಚಿತ್ರಕ್ಕೆ ಅತ್ಯುತ್ತಮ ನಟಿ ಅವಾರ್ಡ್ ಸಿಕ್ಕಿತ್ತು.

ಇದನ್ನೂ ಓದಿ: ಶಾರುಖ್ ಖಾನ್ ಜತೆಗಿನ ಸಿನಿಮಾವನ್ನೂ ಮುಲಾಜಿಲ್ಲದೇ ರಿಜೆಕ್ಟ್ ಮಾಡಿದ್ದ ರವೀನಾ ಟಂಡನ್; ಕಾರಣ?

‘ಪ್ರಶಸ್ತಿಗಳು ಈಗಲೂ ನನಗೆ ಎಗ್ಸೈಟಿಂಗ್ ಅನಿಸುತ್ತವೆ. ಕೆಜಿಎಫ್ ಎರಡನೇ ಚಾಪ್ಟರ್ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಗಳಿಕೆ ಮಾಡಿತು, ವಿಮರ್ಶಕರಿಂದಲೂ ಮೆಚ್ಚುಗೆ ಪಡೆಯಿತು. ಈಗ ಸಿನಿಮಾಗೆ ಎರಡು ರಾಷ್ಟ್ರ ಪ್ರಶಸ್ತಿ ಪಡೆದಿರೋದು ನಿಜಕ್ಕೂ ಖುಷಿಯ ವಿಚಾರ’ ಎಂದಿದ್ದಾರೆ ರವೀನಾ.

‘ಕೆಜಿಎಫ್ 2’ ಚಿತ್ರಕ್ಕೆ ಪ್ರಶಾಂತ್ ನೀಲ್ ನಿರ್ದೇಶನ ಇದೆ. ಈ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ಬಂಡವಾಳ ಹೂಡಿದೆ. ಈ ಸಂಸ್ಥೆ ಬಂಡವಾಳ ಹೂಡಿದ ಸಿನಿಮಾಗಳಿಂದ ನಾಲ್ಕು ಅವಾರ್ಡ್​ಗಳು ಲಭ್ಯವಾಗಿವೆ. ‘ಕಾಂತಾರ’ ಚಿತ್ರಕ್ಕೆ 2 ಅವಾರ್ಡ್ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಅಸ್ಸಾಂನಲ್ಲಿ ಬಿಜೆಪಿ ಬರುತ್ತೆ ಎಂದು ನಾವೂ ಹೇಳ್ತೀವಿ: ಪರಮೇಶ್ವರ!
ಅಸ್ಸಾಂನಲ್ಲಿ ಬಿಜೆಪಿ ಬರುತ್ತೆ ಎಂದು ನಾವೂ ಹೇಳ್ತೀವಿ: ಪರಮೇಶ್ವರ!