AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್ 2’ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಸಿಗುತ್ತಿದ್ದಂತೆ ಬಾಲಿವುಡ್​​ನಲ್ಲಿ ನಡೆದ ಬೆಳವಣಿಗೆ ಏನು?

ರವೀನಾ ಟಂಡನ್ ಅವರು ರಾಷ್ಟ್ರ ಪ್ರಶಸ್ತಿ ಗೆದ್ದ ‘ಕೆಜಿಎಫ್ 2’ನ ಭಾಗವಾಗಿದ್ದರು. ಇದು ಅವರಿಗೆ ಹಾಗೂ ಇದನ್ನು ಹಿಂದಿಯಲ್ಲಿ ಹಂಚಿಕೆ ಮಾಡಿದ ಅವರ ಪತಿಗೆ ಖುಷಿ ತಂದಿದೆ. ಈ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಅವರು ಈ ಮೊದಲು ರಾಷ್ಟ್ರಪ್ರಶಸ್ತಿ ಪಡೆದುಕೊಂಡಿದ್ದರು.

‘ಕೆಜಿಎಫ್ 2’ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಸಿಗುತ್ತಿದ್ದಂತೆ ಬಾಲಿವುಡ್​​ನಲ್ಲಿ ನಡೆದ ಬೆಳವಣಿಗೆ ಏನು?
ರಾಜೇಶ್ ದುಗ್ಗುಮನೆ
|

Updated on: Aug 18, 2024 | 6:59 AM

Share

ಇತ್ತೀಚೆಗಷ್ಟೇ ರಾಷ್ಟ್ರ ಪ್ರಶಸ್ತಿ ಘೋಷಣೆ ಆಗಿದೆ. ‘ಕೆಜಿಎಫ್ 2’ ಚಿತ್ರಕ್ಕೆ ಎರಡು ಪ್ರಶಸ್ತಿಗಳು ಸಿಕ್ಕಿವೆ. ಈ ಮೂಲಕ ನಿರ್ದೇಶಕ ಪ್ರಶಾಂತ್ ನೀಲ್ ಖ್ಯಾತಿ ಹೆಚ್ಚಾಗಿದೆ. ಈ ಸಿನಿಮಾಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ ಎಂಬ ವಿಚಾರ ತಿಳಿಯುತ್ತಿದ್ದಂತೆ ಪ್ರಶಾಂತ್ ನೀಲ್ ಅವರನ್ನು ಭೇಟಿ ಮಾಡಲು ರವೀನಾ ಟಂಡನ್ ಪತಿ ಅನಿಲ್ ತಡಾನಿ ಹೈದರಾಬಾದ್​ಗೆ ಓಡಿದ್ದಾರಂತೆ. ಈ ವಿಚಾರವನ್ನು ರವೀನಾ ತಿಳಿಸಿದ್ದಾರೆ. ಬಾಲಿವುಡ್​ನಲ್ಲಿ ಪ್ರಶಾಂತ್ ನೀಲ್ ನಿರ್ದೇಶನ ಮಾಡುವ ಮುಂದಿನ ಚಿತ್ರಗಳ ಹಂಚಿಕೆ ಹಕ್ಕನ್ನು ತಮಗೆ ನೀಡಬೇಕು ಎಂದು ಅವರು ಕೋರಿದ್ದಾರೆ ಎನ್ನಲಾಗುತ್ತಿದೆ.

‘ಕೆಜಿಎಫ್ 2’ ಚಿತ್ರದಲ್ಲಿ ರವೀನಾ ಟಂಡನ್ ನಟಿಸಿದ್ದರು. ಅವರ ಪತಿ ಅನಿಲ್ ಅವರು ಈ ಚಿತ್ರವನ್ನು ಹಿಂದಿಯಲ್ಲಿ ಹಂಚಿಕೆ ಮಾಡಿದ್ದರು. ಈ ಚಿತ್ರ ಹಿಂದಿ ಭಾಗದಲ್ಲಿ 500 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಕಾರಣಕ್ಕೆ ಅವರಿಗೆ ಸಿನಿಮಾ ಮೇಲೆ ವಿಶೇಷ ಪ್ರೀತಿ. ಹೀಗಾಗಿ, ಈ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ ಎಂಬ ವಿಚಾರ ತಿಳಿಯುತ್ತಿದ್ದಂತೆ ಅವರು ಹೈದರಾಬಾದ್​ಗೆ ಹಾರಿದ್ದಾರೆ.

ಈ ಬಗ್ಗೆ ಅವರು ನ್ಯೂಸ್ 18 ಇಂಗ್ಲಿಷ್ ಜೊತೆ ರವೀನಾ ಮಾತನಾಡಿದ್ದಾರೆ. ‘ಇದು ನಿಜಕ್ಕೂ ಹೆಮ್ಮೆಯ ವಿಚಾರ. ನನಗೆ ಟೀಂನ ಯಾರ ಜೊತೆಯೂ ಮಾತನಾಡೋಕೆ ಸಾಧ್ಯವಾಗಿಲ್ಲ. ನನ್ನ ಪತಿ ಪ್ರಶಾಂತ್ ನೀಲ್ ಅವರನ್ನು ಭೇಟಿ ಮಾಡಲು ಹೈದರಾಬಾದ್​ಗೆ ತೆರಳಿದ್ದಾರೆ’ ಎಂದಿದ್ದಾರೆ ಅವರು. ರವೀನಾ ಟಂಡನ್ ಅವರಿಗೆ 2001ರಲ್ಲಿ ‘ದಮನ್’ ಚಿತ್ರಕ್ಕೆ ಅತ್ಯುತ್ತಮ ನಟಿ ಅವಾರ್ಡ್ ಸಿಕ್ಕಿತ್ತು.

ಇದನ್ನೂ ಓದಿ: ಶಾರುಖ್ ಖಾನ್ ಜತೆಗಿನ ಸಿನಿಮಾವನ್ನೂ ಮುಲಾಜಿಲ್ಲದೇ ರಿಜೆಕ್ಟ್ ಮಾಡಿದ್ದ ರವೀನಾ ಟಂಡನ್; ಕಾರಣ?

‘ಪ್ರಶಸ್ತಿಗಳು ಈಗಲೂ ನನಗೆ ಎಗ್ಸೈಟಿಂಗ್ ಅನಿಸುತ್ತವೆ. ಕೆಜಿಎಫ್ ಎರಡನೇ ಚಾಪ್ಟರ್ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಗಳಿಕೆ ಮಾಡಿತು, ವಿಮರ್ಶಕರಿಂದಲೂ ಮೆಚ್ಚುಗೆ ಪಡೆಯಿತು. ಈಗ ಸಿನಿಮಾಗೆ ಎರಡು ರಾಷ್ಟ್ರ ಪ್ರಶಸ್ತಿ ಪಡೆದಿರೋದು ನಿಜಕ್ಕೂ ಖುಷಿಯ ವಿಚಾರ’ ಎಂದಿದ್ದಾರೆ ರವೀನಾ.

‘ಕೆಜಿಎಫ್ 2’ ಚಿತ್ರಕ್ಕೆ ಪ್ರಶಾಂತ್ ನೀಲ್ ನಿರ್ದೇಶನ ಇದೆ. ಈ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ಬಂಡವಾಳ ಹೂಡಿದೆ. ಈ ಸಂಸ್ಥೆ ಬಂಡವಾಳ ಹೂಡಿದ ಸಿನಿಮಾಗಳಿಂದ ನಾಲ್ಕು ಅವಾರ್ಡ್​ಗಳು ಲಭ್ಯವಾಗಿವೆ. ‘ಕಾಂತಾರ’ ಚಿತ್ರಕ್ಕೆ 2 ಅವಾರ್ಡ್ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಸಂಪರ್ಕ ಕ್ರಾಂತಿ ರೈಲಿನಲ್ಲಿ ಗಾಂಜಾ ಸೇವನೆ: ಯುವಕರ ದರ್ಬಾರ್ ವಿಡಿಯೋ ವೈರಲ್!
ಸಂಪರ್ಕ ಕ್ರಾಂತಿ ರೈಲಿನಲ್ಲಿ ಗಾಂಜಾ ಸೇವನೆ: ಯುವಕರ ದರ್ಬಾರ್ ವಿಡಿಯೋ ವೈರಲ್!
ತವರಿನಿಂದ ಹೊರಗೆ RCBಗೆ ಮೊದಲ ಪಂದ್ಯ, ಹೇಗಿದೆ ಉಭಯ ತಂಡಗಳ ಬಲಾಬಲ?
ತವರಿನಿಂದ ಹೊರಗೆ RCBಗೆ ಮೊದಲ ಪಂದ್ಯ, ಹೇಗಿದೆ ಉಭಯ ತಂಡಗಳ ಬಲಾಬಲ?
ಕಾಲಾಷ್ಟಮಿಯನ್ನು ಯಾಕೆ ಆಚರಿಸಬೇಕು?
ಕಾಲಾಷ್ಟಮಿಯನ್ನು ಯಾಕೆ ಆಚರಿಸಬೇಕು?