AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ.19ಕ್ಕೆ ಬಿಡುಗಡೆ ಆಗಲಿದೆ ‘ಕಡಲ್​’ ಸಿನಿಮಾ; ಇದು ರವಿ ಬಸ್ರೂರು ನಿರ್ದೇಶನದ ಚಿತ್ರ

‘ಕಡಲ್​ ಚಿತ್ರದ ಖಾಸಗಿ ಪ್ರದರ್ಶನ ಯಶಸ್ವಿ ಆದ ಬಳಿಕ ಇದನ್ನು ಬಿಡುಗಡೆ ಮಾಡಿ ಎಲ್ಲರಿಗೂ ತೋರಿಸಿ ಎಂಬ ಬೇಡಿಕೆ ಬಂತು. ಹಾಗಾಗಿ ಇದೇ 19ರಿಂದ ನಮ್ಮ ಕಡಲ್​ ಸಿನಿಮಾ ರಾಜ್ಯಾದ್ಯಂತ ರಿಲೀಸ್​ ಆಗಲಿದೆ. ನಮ್ಮ ಈ ಹಿಂದಿನ ಸಿನಿಮಾಗಳಿಗೆ ಬೆಂಬಲ ನೀಡಿದ ರೀತಿಯೇ ಈ ಸಿನಿಮಾಗೂ ನಿಮ್ಮ ಶುಭ ಹಾರೈಕೆ ಇರಲಿ’ ಎಂದು ರವಿ ಬಸ್ರೂರು ಹೇಳಿದ್ದಾರೆ.

ಜ.19ಕ್ಕೆ ಬಿಡುಗಡೆ ಆಗಲಿದೆ ‘ಕಡಲ್​’ ಸಿನಿಮಾ; ಇದು ರವಿ ಬಸ್ರೂರು ನಿರ್ದೇಶನದ ಚಿತ್ರ
ಕಡಲ್​ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
|

Updated on: Jan 16, 2024 | 7:11 PM

Share

ರವಿ ಬಸ್ರೂರು (Ravi Basrur) ಅವರು ಕೇವಲ ಸಂಗೀತ ನಿರ್ದೇಶಕ ಮಾತ್ರವಲ್ಲ, ಸಿನಿಮಾ ನಿರ್ದೇಶಕನಾಗಿಯೂ ಅವರು ಸಕ್ರಿಯರಾಗಿದ್ದಾರೆ. ಈಗಾಗಲೇ ಒಂದಷ್ಟು ಸಿನಿಮಾಗಳಿಗೆ ಆ್ಯಕ್ಷನ್​-ಕಟ್​ ಹೇಳಿರುವ ಅವರು ಈಗ ಹೊಸ ಸಿನಿಮಾದೊಂದಿಗೆ ಜನರ ಎದುರು ಬರುತ್ತಿದ್ದಾರೆ. ‘ಗರ್ ಗರ್ ಮಂಡ್ಲ’, ‘ಕಟಕ’, ‘ಬಿಲಿಂಡರ್’, ‘ಗಿರ್ಮಿಟ್’ ಸಿನಿಮಾಗಳನ್ನು ನಿರ್ದೇಶಿಸಿ ಗಮನ ಸೆಳೆದಿದ್ದ ರವಿ ಬಸ್ರೂರು ಅವರು ಈಗ ‘ಕಡಲ್​’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದ ಬಿಡುಗಡೆ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಜನವರಿ 19ರಂದು ‘ಕಡಲ್​’ ಚಿತ್ರ (Kadal Movie) ತೆರೆಕಾಣಲಿದೆ.

ಹೆಸರೇ ಸೂಚಿಸುವಂತೆ ‘ಕಡಲ್​’ ಸಿನಿಮಾದಲ್ಲಿ ಕರಾವಳಿಯ ಮೀನುಗಾರರ ಜೀವನದ ಕಹಾನಿ ಇದೆ. ಸಮುದ್ರ ಜೊತೆ ಹೊಂದಿಕೊಂಡಿರುವ ಜನರ ಬದುಕಿನ ಕಥೆ ಇದರಲ್ಲಿ ಇದೆ. ಈ ಚಿತ್ರದ ಟ್ರೇಲರ್ ಗಮನ ಸೆಳೆದಿದೆ. ಸಂಕ್ರಾಂತಿ ಸಂದರ್ಭದಲ್ಲಿ ರವಿ ಬಸ್ರೂರು ಮ್ಯೂಸಿಕ್ ಚಾನಲ್​ನಲ್ಲಿ ‘ಕಡಲ್​’ ಟ್ರೇಲರ್​ ಬಿಡುಗಡೆಯಾಗಿದೆ. ಈಗಾಗಲೇ ಒಂದಷ್ಟು ಬಾರಿ ಈ ಸಿನಿಮಾದ ಪ್ರೈವೇಟ್​ ಸ್ಕ್ರೀನಿಂಗ್​ ನಡೆದಿದೆ. ಪ್ರತಿ ಬಾರಿ ಪ್ರದರ್ಶನ ಆದಾಗಲೂ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.

ಇದನ್ನೂ ಓದಿ: ತನ್ನ ಹೆಸರು ಕೈಬಿಟ್ಟು ಮರುಜೀವ ಕೊಟ್ಟ ಪುಣ್ಯಾತ್ಮನ ಹೆಸರು ಇಟ್ಟುಕೊಂಡ ರವಿ ಬಸ್ರೂರು: ಯಾರು ಆ ರವಿ? ಎಲ್ಲಿದ್ದಾರೆ?

‘ಕಡಲ್​’ ಸಿನಿಮಾದಲ್ಲಿ ಸೌರಭ ಭಂಡಾರಿ, ಸೂಚನ್ ಶೆಟ್ಟಿ, ಚಿರಶ್ರೀ ಅಂಚನ್ ಅವರು ಮುಖ್ಯಭೂಮಿಕೆ ನಿಭಾಯಿಸಿದ್ದಾರೆ. ನಾಗೇಂದ್ರ ಕೋಟೆ, ಭಾಸ್ಕರ್ ಬಸ್ರೂರು, ವಿಜಯ್ ಬಸ್ರೂರು, ಸುಜಾತಾ ಅಂದ್ರದೆ ಸೇರಿದಂತೆ ಅನೇಕರು ನಟಿಸಿದ್ದಾರೆ. ಮೀನುಗಾರರ ಕಥೆಯ ಜೊತೆ ಪ್ರೀತಿ, ಪ್ರೇಮ ದ್ವೇಷದ ಕಹಾನಿಯೂ ಈ ಸಿನಿಮಾದಲ್ಲಿದೆ.

ಕಡಲ್​ ಸಿನಿಮಾದಲ್ಲಿ ಸೂಚನ್​ ಶೆಟ್ಟಿ

‘ಓಂಕಾರ್ ಮೂವೀಸ್ ಬ್ಯಾನರ್’ ಮೂಲಕ ಈ ಸಿನಿಮಾಗೆ ಎನ್‌.ಎಸ್. ರಾಜ್​ಕುಮಾರ್ ಅವರು ಬಂಡವಾಳ ಹೂಡಿದ್ದಾರೆ. ಸಚಿನ್ ಬಸ್ರೂರು ಛಾಯಾಗ್ರಹಣ ಮಾಡಿದ್ದಾರೆ. ನಿರ್ದೇಶಕನ, ಸಂಗೀತ ಹಾಗೂ ಸಂಕಲನದ ಜವಾಬ್ದಾರಿಯನ್ನು ರವಿ ಬಸ್ರೂರು ನಿಭಾಯಿಸಿದ್ದಾರೆ.

‘ನಮ್ಮ ತಂಡದ 5ನೇ ಪ್ರಯತ್ನ ಕಡಲ್​ ಸಿನಿಮಾ. ಖಾಸಗಿ ಪ್ರದರ್ಶನ ಯಶಸ್ವಿ ಆದ ಬಳಿಕ ಇದನ್ನು ಬಿಡುಗಡೆ ಮಾಡಿ ಎಲ್ಲರಿಗೂ ತೋರಿಸಿ ಎಂಬ ಬೇಡಿಕೆ ಬಂತು. ಹಾಗಾಗಿ ಇದೇ 19ರಿಂದ ನಮ್ಮ ಕಡಲ್​ ಸಿನಿಮಾ ರಾಜ್ಯಾದ್ಯಂತ ರಿಲೀಸ್​ ಆಗಲಿದೆ. ನಮ್ಮ ಈ ಹಿಂದಿನ ಸಿನಿಮಾಗಳಿಗೆ ಬೆಂಬಲ ನೀಡಿದ ರೀತಿಯೇ ಈ ಸಿನಿಮಾಗೂ ನಿಮ್ಮ ಶುಭ ಹಾರೈಕೆ ಇರಲಿ. ಒಂದು ಸಿನಿಮಾದಿಂದ 2 ಸಾವಿರ ಜನರ ಬದುಕು ಕಟ್ಟುತ್ತದೆ. ಆ ಉದ್ದೇಶದಿಂದ ವರ್ಷಕ್ಕೊಂದು ಸಿನಿಮಾ ಮಾಡುವ ಹವ್ಯಾಸ ಇಟ್ಟುಕೊಂಡಿದ್ದೇವೆ. ಇದರಿಂದ ಒಂದಷ್ಟು ತಂತ್ರಜ್ಞರಿಗೆ, ಕಲಾವಿದರಿಗೆ ಬೆಳಕು ಸಿಗುತ್ತದೆ. ದಯವಿಟ್ಟು ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಿ’ ಎಂದು ರವಿ ಬಸ್ರೂರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ