AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದ ರವಿ ಬಸ್ರೂರ್​​ಗೆ ಹಾಲಿವುಡ್​ ಕಡೆಯಿಂದ ಬಂತು ಆಫರ್

ರವಿ ಬಸ್ರೂರ್ ಅವರು ಕೆಜಿಎಫ್ ಮತ್ತು ಸಲಾರ್ ಚಿತ್ರಗಳ ಮೂಲಕ ಖ್ಯಾತಿ ಪಡೆದ ಸಂಗೀತ ನಿರ್ದೇಶಕರು. ಅವರ ಸಂಗೀತ ಸಾಕಷ್ಟು ಜನಪ್ರಿಯತೆ ಪಡೆದಿದ್ದು, ಹಾಲಿವುಡ್ ನಿಂದಲೂ ಆಫರ್‌ಗಳು ಬಂದಿವೆ. ‘ವೀರಚಂದ್ರಹಾಸ’ ತೆಲುಗು ಚಿತ್ರದ ಬಿಡುಗಡೆ ಸಮಯದಲ್ಲಿ ಅವರು ತಮಗೆ ಬಂದ ಹಾಲಿವುಡ್ ಆಫರ್​ಗಳ ಬಗ್ಗೆ ಮಾತನಾಡಿದ್ದಾರೆ.

ಕನ್ನಡದ ರವಿ ಬಸ್ರೂರ್​​ಗೆ ಹಾಲಿವುಡ್​ ಕಡೆಯಿಂದ ಬಂತು ಆಫರ್
ರವಿ
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on: Sep 18, 2025 | 10:33 AM

Share

‘ಕೆಜಿಎಫ್’ ಸಿನಿಮಾ ಮೂಲಕ ಬೇರೆಯದೇ ಹಂತಕ್ಕೆ ಹೋದವರು ರವಿ ಬಸ್ರೂರು (Ravi Basruru) ಅವರು. ಅವರು ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಮಾಸ್ ಸಿನಿಮಾಗಳು ಎಂದಾದಾಗ ಅವರಿಗೆ ಆಫರ್​​ ಹೋಗೋದು ಹೆಚ್ಚು. ಅವರು ನಿರ್ದೇಶನ ಮಾಡಿದ ‘ವೀರಚಂದ್ರಹಾಸ’ ಸಿನಿಮಾ ಸೆಪ್ಟೆಂಬರ್ 19ರಂದು ತೆಲುಗಿನಲ್ಲಿ ರಿಲೀಸ್ ಆಗುತ್ತಿದೆ. ಈ ವೇಳೆ ಅವರು ತೆಲುಗು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ಆಗ ಹಲವು ವಿಚಾರಗಳನ್ನು ಬಿಚ್ಚಿಟ್ಟಿದ್ದಾರೆ.

‘ಉಗ್ರಂ’, ‘ಕೆಜಿಎಫ್’, ಸಲಾರ್ ರೀತಿಯ ಸಿನಿಮಾಗಳಿಗೆ ರವಿ ಬಸ್ರೂರು ಅವರು ಸಂಗೀತ ಸಂಯೋಜನೆ ಮಾಡಿದರು. ಈ ಸಿನಿಮಾಗಳ ಹಿನ್ನೆಲೆ ಸಂಗೀತ ಸಾಕಷ್ಟು ಗಮನ ಸೆಳೆಯಿತು. ಈ ಕಾರಣ ಅವರು ಸಾಕಷ್ಟು ಜನಪ್ರಿಯತೆ ಪಡೆದರು. ‘ಸಲಾರ್’ ಚಿತ್ರದಿಂದ ಅವರಿಗೆ ಸಾಕಷ್ಟು ಆಫರ್​ಗಳು ಬಂದವಂತೆ.

‘ಸಲಾರ್’ ಸಿನಿಮಾದ ಹಿನ್ನೆಲೆ ಸಂಗೀತ ಕೆಲವರಿಗೆ ಇಷ್ಟ ಆಗಿಲ್ಲ. ‘ಕೆಜಿಎಫ್’ ಚಿತ್ರದ ಪವರ್ ಫುಲ್ ಆಗಿಲ್ಲ ಎಂದು ಅನೇಕರು ಹೇಳಿದ್ದು ಇದೆ. ಆದರೆ, ರವಿ ಬಸ್ರೂರು ಜೀವನದಲ್ಲಿ ಈ ಚಿತ್ರ ಬದಲಾವಣೆ ತಂದಿತ್ತು. ‘ಸಲಾರ್ ಸಿನಿಮಾ ರಿಲೀಸ್ ಆದ ಬಳಿಕ ನನಗೆ ಅಮೆರಿಕ ಪ್ರೊಡಕ್ಷನ್ ಹೌಸ್​ಗಳಿಂದ 3-4 ಫೋನ್​ಗಳು ಬಂದವು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ
Image
ವಿಷ್ಣು ನಟನೆಯ ‘ಬಂಧನ’ ಸಿನಿಮಾ ತಡೆಯಲು ನಡೆದ ಪ್ರಯತ್ನಗಳು ಒಂದೆರಡಲ್ಲ
Image
ಇನ್ನೂ ಕಡಿಮೆ ಆಗಿಲ್ಲ ಮಾಲಾಶ್ರೀ ಖದರ್; ಈ ವಿಡಿಯೋನೇ ಸಾಕ್ಷಿ
Image
ವಿಷ್ಣು, ಉಪ್ಪಿ, ಶ್ರುತಿ ಜನ್ಮದಿನ; ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ
Image
ವಿಷ್ಣುವರ್ಧನ್-ರಜನಿಕಾಂತ್  ಒಟ್ಟಾಗಿ ನಟಿಸಿದ್ದ ಸಿನಿಮಾದ ದೃಶ್ಯ ನೆನಪಿದೆಯೇ?

ರವಿ ಬಸ್ರೂರು ಅವರು ಸದ್ಯ ಸಾಕಷ್ಟು ಆಫರ್ ಪಡೆಯುತ್ತಿದ್ದಾರೆ. ಆದರೆ, ಮೊದಲಿನಷ್ಟು ಸಿನಿಮಾ ಹಿಟ್ ಆಗುತ್ತಿಲ್ಲ. ಈಗ ಅವರು ಪ್ರಶಾಂತ್ ನೀಲ್ ಹಾಗೂ ಜೂನಿಯರ್ ಎನ್​ಟಿಆರ್ ಸಿನಿಮಾ ಜೊತೆ ಕೆಲಸ ಮಾಡುತ್ತಿದ್ದಾರೆ. ಈಗಾಗಲೇ ಅವರು 3-4 ವರ್ಷನ್​ಗಳ ಮ್ಯೂಸಿಕ್​ನ ಕಂಪೋಸ್ ಮಾಡಿಯಾಗಿದೆ. ಅವರು ಈ ಬಾರಿ ನಿರೀಕ್ಷೆಯನ್ನು ಮೀರುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: s‘ಸಲಾರ್’ ಸಂಗೀತ ಹಿಟ್ ಆಗದಿರಲು ‘ಕೆಜಿಎಫ್’ ಕಾರಣ: ರವಿ ಬಸ್ರೂರು ವಿಶ್ಲೇಷಣೆ ಏನು?

ರವಿ ಬಸ್ರೂರು ಅವರು ಸಿನಿಮಾ ನಿರ್ಮಾಣ, ನಿರ್ದೇಶನದಲ್ಲೂ ತೊಡಗಿಕೊಂಡಿದ್ದಾರೆ. ಪ್ರಯೋಗಾತ್ಮಕ ಸಿನಿಮಾಗಳನ್ನು ಅವರು ನಿರ್ದೇಶನ ಮಾಡುತ್ತಾರೆ. ಈ ಮೊದಲು ಸಣ್ಣ ಮಕ್ಕಳ ಸಿನಿಮಾ ನಿರ್ದೇಶನ ಮಾಡಿದ್ದರು. ಈ ಪಾತ್ರಧಾರಿಗಳಿಗೆ ಯಶ್, ರಾಧಿಕಾ ಪಂಡಿತ್ ಮೊದಲಾದವರಿಂದ ವಾಯ್ಸ್ ಕೊಡಿಸಿದ್ದರು. ಆದರೆ, ಈ ಪ್ರಯತ್ನ ಯಶಸ್ಸು ಕಂಡಿರಲಿಲ್ಲ. ಈಗ ವೀರಚಂದ್ರಹಾಸ ಯಕ್ಷಗಾನ ಆಧರಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.