AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರವಿಚಂದ್ರನ್ ತಂದೆಗೆ 14 ಮಕ್ಕಳಿದ್ದರು, ಬದುಕಿದ್ದು 5; ಕ್ರೇಜಿಸ್ಟಾರ್ ಹುಟ್ಟಿದ್ದೂ ಪವಾಡವೇ

ರವಿಚಂದ್ರನ್ ಅವರ ತಂದೆ ವೀರಸ್ವಾಮಿ ಅವರ ಬಗ್ಗೆ ಕಡಿಮೆ ಜನರಿಗೆ ತಿಳಿದಿರುವ ಅಪರೂಪದ ವಿಷಯಗಳನ್ನು ಇಲ್ಲಿ ಹೇಳುತ್ತಿದ್ದೇವೆ. ವೀರಸ್ವಾಮಿ 17 ಕನ್ನಡ ಮತ್ತು ಒಂದು ಹಿಂದಿ ಚಿತ್ರಗಳನ್ನು ನಿರ್ಮಿಸಿದ್ದರು. ಅವರಿಗೆ 14 ಮಕ್ಕಳಿದ್ದರು ಎಂಬುದು ರವಿಚಂದ್ರನ್ ಅವರು ಬಹಿರಂಗಪಡಿಸಿದ ಆಶ್ಚರ್ಯಕರ ಸಂಗತಿ.

ರವಿಚಂದ್ರನ್ ತಂದೆಗೆ 14 ಮಕ್ಕಳಿದ್ದರು, ಬದುಕಿದ್ದು 5; ಕ್ರೇಜಿಸ್ಟಾರ್ ಹುಟ್ಟಿದ್ದೂ ಪವಾಡವೇ
ರವಿಚಂದ್ರನ್
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on:Mar 05, 2025 | 7:49 AM

Share

ವಿ. ರವಿಚಂದ್ರನ್ ಅವರು ಕನ್ನಡದ ಖ್ಯಾತ ನಟ ಹಾಗೂ ನಿರ್ಮಾಪಕರು. ಅವರು ಹಲವು ಪ್ರಯೋಗಾತ್ಮಕ ಚಿತ್ರಗಳನ್ನು ನೀಡಿದ್ದಾರೆ. ಅವರ ಖ್ಯಾತಿ ಸದ್ಯಕ್ಕೆ ಕಡಿಮೆ ಆಗುವಂಥದ್ದಲ್ಲ. ರವಿಚಂದ್ರನ್ ತಂದೆಯ ಬಗ್ಗೆ ಬಹುತೇಕರಿಗೆ ಗೊತ್ತಿದೆ. ಅವರೇ ಎನ್​. ವೀರಸ್ವಾಮಿ. ಇವರು ಕನ್ನಡದ ಖ್ಯಾತ ನಿರ್ಮಾಪಕರು ಆಗಿದ್ದರು. ರವಿಚಂದ್ರನ್ ಅವರು ತಮ್ಮ ತಂದೆ ಹಾಗೂ ತಾಯಿ ಬಗ್ಗೆ ಕೆಲವು ಅಪರೂಪದ ಮಾಹಿತಿಯನ್ನು ಈ ಮೊದಲು ಹಂಚಿಕೊಂಡಿದ್ದರು.

ವೀರಸ್ವಾಮಿ ಕನ್ನಡದ ಖ್ಯಾತ ನಿರ್ಮಾಪಕರು. 1971ರ ‘ಕುಲ ಗೌರವ’ ಅವರ ನಿರ್ಮಾಣದ ಮೊದಲ ಸಿನಿಮಾ. 1972ರಲ್ಲಿ ರಿಲೀಸ್ ಆದ ‘ನಾಗರಹಾವು’ ಚಿತ್ರವನ್ನು ಅವರೇ ನಿರ್ಮಾಣ ಮಾಡಿದ್ದರು. ಈ ಚಿತ್ರದ ಗೆಲುವಿನ ನಂತರ ಅವರ ಖ್ಯಾತಿ ಹೆಚ್ಚಾಯಿತು. ‘ನಾ ನಿನ್ನ ಮರೆಯಲಾರೆ’, ‘ಪ್ರೇಮಲೋಕ’ ರೀತಿಯ ಚಿತ್ರಗಳನ್ನು ವೀರಸ್ವಾಮಿ ನಿರ್ಮಾಣ ಮಾಡಿದ್ದರು. ಒಟ್ಟೂ 17 ಕನ್ನಡ ಹಾಗೂ ಒಂದು ಹಿಂದಿ ಚಿತ್ರವನ್ನು ಅವರು ನಿರ್ಮಾಣ ಮಾಡಿದ್ದರು.

ವೀರಸ್ವಾಮಿ ಅವರಿಗೆ ಒಟ್ಟೂ 14 ಮಕ್ಕಳಿದ್ದರು! ಈ ಪೈಕಿ ಬದುಕಿದ್ದು ಕೇವಲ ಐದು ಮಂದಿ ಮಾತ್ರ! ಈ ವಿಚಾರವನ್ನು ರವಿಚಂದ್ರನ್ ಅವರು ಹೇಳಿಕೊಂಡಿದ್ದರು. ‘ನನ್ನ ತಂದೆಗೆ ಒಟ್ಟೂ 14 ಮಕ್ಕಳು. ಆ ಪೈಕಿ ಉಳಿದುಕೊಂಡಿದ್ದು 5. ನನ್ನ ಅಕ್ಕ ಹುಟ್ಟಿದ ಮೇಲೆ ನನ್ನ ತಾಯಿ ಪ್ರೆಗ್ನೆಂಟ್ ಆದರು. ಬೇಗ ಕಂಸೀವ್ ಆದರು ಎನ್ನುವ ಕಾರಣಕ್ಕೆ ಅವರು ಪಪ್ಪಾಯ ತಿಂದಿದ್ದರಂತೆ. ಮಗುನ ಹೊಟ್ಟೆಯಲ್ಲೇ ಕರಗಿಸುವ ಆಲೋಚನೆ ಅವರದ್ದಾಗಿತ್ತು’ ಎಂದಿದ್ದರು ರವಿಚಂದ್ರನ್.

ಇದನ್ನೂ ಓದಿ
Image
ರಶ್ಮಿಕಾ ಮಂದಣ್ಣ ಹಿಂಗೆಲ್ಲ ಮಾಡಿದರೂ ಕ್ಯೂಟ್ ಅಂತಾರೆ ಅಭಿಮಾನಿಗಳು
Image
ರಶ್ಮಿಕಾ ಮಂದಣ್ಣಗೆ ಗುಲಾಬಿ ಹೂವು ನೀಡಿದ ಪ್ರೇಮಿ: ಆ ವ್ಯಕ್ತಿ ಮೇಲೆ ಅನುಮಾನ
Image
ಬಿಗ್ ಬಾಸ್ ವೇದಿಕೆ ಮೇಲೆ ಸುದೀಪ್​ನ ಇಮಿಟೇಟ್ ಮಾಡಿದ್ದ ಪ್ರಿಯಾಮಣಿ

‘ಪಪ್ಪಾಯ ತನ್ನ ಗುಣವನ್ನು ಮರೆತೇಬಿಟ್ಟಿತ್ತು. ಪಪ್ಪಾಯ ಅದರ ಗುಣ ತೋರಿಸಿದ್ದರೆ ನಾನು ಹುಟ್ಟುತ್ತಾ ಇರಲಿಲ್ಲ. ಅದು ತನ್ನ ಗುಣ ಮರೆತಿದ್ದಕ್ಕೆ ನಾನು ಹುಟ್ಟಿದೆ’ ಎಂದು ರವಿಚಂದ್ರನ್ ವಿವರಿಸಿದ್ದರು. ಪ್ರೆಗ್ನೆಂಟ್ ಆದ ಬಳಿಕ ಪಪ್ಪಾಯ ತಿನ್ನಬಾರದು ಎಂದು ವೈದ್ಯರು ಗರ್ಭಿಣಿಯರಿಗೆ ಸಲಹೆ ನೀಡುತ್ತಾರೆ.

ಇದನ್ನೂ ಓದಿ: ‘ಶರ್ಟ್​ನ 3 ಬಟ್ ಓಪನ್ ಮಾಡೋದು ನಾನೊಬ್ನೆ’; ಸ್ಟೈಲ್ ಕಾಪಿ ಮಾಡಲು ಬಂದವರಿಗೆ ರವಿಚಂದ್ರನ್ ಎಚ್ಚರಿಕೆ

ರವಿಚಂದ್ರನ್ ಅವರು ‘ಪ್ರೇಮಲೋಕ 2’ ಸಿನಿಮಾ ಮಾಡೋದಾಗಿ ಈ ಮೊದಲು ಹೇಳಿದ್ದರು. ಆದರೆ, ಇನ್ನೂ ಆ ಬಗ್ಗೆ ಘೋಷಣೆ ಆಗಿಲ್ಲ. ಈ ಬಗ್ಗೆ ಅಭಿಮಾನಿಗಳು ನಿರಂತರವಾಗಿ ಕಾಯುತ್ತಾ ಇದ್ದಾರೆ. ಆದರೆ ಮಾಹಿತಿ ಮಾತ್ರ ಸಿಕ್ಕಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:48 am, Wed, 5 March 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ