AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರವಿಚಂದ್ರನ್ ತಂದೆಗೆ 14 ಮಕ್ಕಳಿದ್ದರು, ಬದುಕಿದ್ದು 5; ಕ್ರೇಜಿಸ್ಟಾರ್ ಹುಟ್ಟಿದ್ದೂ ಪವಾಡವೇ

ರವಿಚಂದ್ರನ್ ಅವರ ತಂದೆ ವೀರಸ್ವಾಮಿ ಅವರ ಬಗ್ಗೆ ಕಡಿಮೆ ಜನರಿಗೆ ತಿಳಿದಿರುವ ಅಪರೂಪದ ವಿಷಯಗಳನ್ನು ಇಲ್ಲಿ ಹೇಳುತ್ತಿದ್ದೇವೆ. ವೀರಸ್ವಾಮಿ 17 ಕನ್ನಡ ಮತ್ತು ಒಂದು ಹಿಂದಿ ಚಿತ್ರಗಳನ್ನು ನಿರ್ಮಿಸಿದ್ದರು. ಅವರಿಗೆ 14 ಮಕ್ಕಳಿದ್ದರು ಎಂಬುದು ರವಿಚಂದ್ರನ್ ಅವರು ಬಹಿರಂಗಪಡಿಸಿದ ಆಶ್ಚರ್ಯಕರ ಸಂಗತಿ.

ರವಿಚಂದ್ರನ್ ತಂದೆಗೆ 14 ಮಕ್ಕಳಿದ್ದರು, ಬದುಕಿದ್ದು 5; ಕ್ರೇಜಿಸ್ಟಾರ್ ಹುಟ್ಟಿದ್ದೂ ಪವಾಡವೇ
ರವಿಚಂದ್ರನ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Mar 05, 2025 | 7:49 AM

Share

ವಿ. ರವಿಚಂದ್ರನ್ ಅವರು ಕನ್ನಡದ ಖ್ಯಾತ ನಟ ಹಾಗೂ ನಿರ್ಮಾಪಕರು. ಅವರು ಹಲವು ಪ್ರಯೋಗಾತ್ಮಕ ಚಿತ್ರಗಳನ್ನು ನೀಡಿದ್ದಾರೆ. ಅವರ ಖ್ಯಾತಿ ಸದ್ಯಕ್ಕೆ ಕಡಿಮೆ ಆಗುವಂಥದ್ದಲ್ಲ. ರವಿಚಂದ್ರನ್ ತಂದೆಯ ಬಗ್ಗೆ ಬಹುತೇಕರಿಗೆ ಗೊತ್ತಿದೆ. ಅವರೇ ಎನ್​. ವೀರಸ್ವಾಮಿ. ಇವರು ಕನ್ನಡದ ಖ್ಯಾತ ನಿರ್ಮಾಪಕರು ಆಗಿದ್ದರು. ರವಿಚಂದ್ರನ್ ಅವರು ತಮ್ಮ ತಂದೆ ಹಾಗೂ ತಾಯಿ ಬಗ್ಗೆ ಕೆಲವು ಅಪರೂಪದ ಮಾಹಿತಿಯನ್ನು ಈ ಮೊದಲು ಹಂಚಿಕೊಂಡಿದ್ದರು.

ವೀರಸ್ವಾಮಿ ಕನ್ನಡದ ಖ್ಯಾತ ನಿರ್ಮಾಪಕರು. 1971ರ ‘ಕುಲ ಗೌರವ’ ಅವರ ನಿರ್ಮಾಣದ ಮೊದಲ ಸಿನಿಮಾ. 1972ರಲ್ಲಿ ರಿಲೀಸ್ ಆದ ‘ನಾಗರಹಾವು’ ಚಿತ್ರವನ್ನು ಅವರೇ ನಿರ್ಮಾಣ ಮಾಡಿದ್ದರು. ಈ ಚಿತ್ರದ ಗೆಲುವಿನ ನಂತರ ಅವರ ಖ್ಯಾತಿ ಹೆಚ್ಚಾಯಿತು. ‘ನಾ ನಿನ್ನ ಮರೆಯಲಾರೆ’, ‘ಪ್ರೇಮಲೋಕ’ ರೀತಿಯ ಚಿತ್ರಗಳನ್ನು ವೀರಸ್ವಾಮಿ ನಿರ್ಮಾಣ ಮಾಡಿದ್ದರು. ಒಟ್ಟೂ 17 ಕನ್ನಡ ಹಾಗೂ ಒಂದು ಹಿಂದಿ ಚಿತ್ರವನ್ನು ಅವರು ನಿರ್ಮಾಣ ಮಾಡಿದ್ದರು.

ವೀರಸ್ವಾಮಿ ಅವರಿಗೆ ಒಟ್ಟೂ 14 ಮಕ್ಕಳಿದ್ದರು! ಈ ಪೈಕಿ ಬದುಕಿದ್ದು ಕೇವಲ ಐದು ಮಂದಿ ಮಾತ್ರ! ಈ ವಿಚಾರವನ್ನು ರವಿಚಂದ್ರನ್ ಅವರು ಹೇಳಿಕೊಂಡಿದ್ದರು. ‘ನನ್ನ ತಂದೆಗೆ ಒಟ್ಟೂ 14 ಮಕ್ಕಳು. ಆ ಪೈಕಿ ಉಳಿದುಕೊಂಡಿದ್ದು 5. ನನ್ನ ಅಕ್ಕ ಹುಟ್ಟಿದ ಮೇಲೆ ನನ್ನ ತಾಯಿ ಪ್ರೆಗ್ನೆಂಟ್ ಆದರು. ಬೇಗ ಕಂಸೀವ್ ಆದರು ಎನ್ನುವ ಕಾರಣಕ್ಕೆ ಅವರು ಪಪ್ಪಾಯ ತಿಂದಿದ್ದರಂತೆ. ಮಗುನ ಹೊಟ್ಟೆಯಲ್ಲೇ ಕರಗಿಸುವ ಆಲೋಚನೆ ಅವರದ್ದಾಗಿತ್ತು’ ಎಂದಿದ್ದರು ರವಿಚಂದ್ರನ್.

ಇದನ್ನೂ ಓದಿ
Image
ರಶ್ಮಿಕಾ ಮಂದಣ್ಣ ಹಿಂಗೆಲ್ಲ ಮಾಡಿದರೂ ಕ್ಯೂಟ್ ಅಂತಾರೆ ಅಭಿಮಾನಿಗಳು
Image
ರಶ್ಮಿಕಾ ಮಂದಣ್ಣಗೆ ಗುಲಾಬಿ ಹೂವು ನೀಡಿದ ಪ್ರೇಮಿ: ಆ ವ್ಯಕ್ತಿ ಮೇಲೆ ಅನುಮಾನ
Image
ಬಿಗ್ ಬಾಸ್ ವೇದಿಕೆ ಮೇಲೆ ಸುದೀಪ್​ನ ಇಮಿಟೇಟ್ ಮಾಡಿದ್ದ ಪ್ರಿಯಾಮಣಿ

‘ಪಪ್ಪಾಯ ತನ್ನ ಗುಣವನ್ನು ಮರೆತೇಬಿಟ್ಟಿತ್ತು. ಪಪ್ಪಾಯ ಅದರ ಗುಣ ತೋರಿಸಿದ್ದರೆ ನಾನು ಹುಟ್ಟುತ್ತಾ ಇರಲಿಲ್ಲ. ಅದು ತನ್ನ ಗುಣ ಮರೆತಿದ್ದಕ್ಕೆ ನಾನು ಹುಟ್ಟಿದೆ’ ಎಂದು ರವಿಚಂದ್ರನ್ ವಿವರಿಸಿದ್ದರು. ಪ್ರೆಗ್ನೆಂಟ್ ಆದ ಬಳಿಕ ಪಪ್ಪಾಯ ತಿನ್ನಬಾರದು ಎಂದು ವೈದ್ಯರು ಗರ್ಭಿಣಿಯರಿಗೆ ಸಲಹೆ ನೀಡುತ್ತಾರೆ.

ಇದನ್ನೂ ಓದಿ: ‘ಶರ್ಟ್​ನ 3 ಬಟ್ ಓಪನ್ ಮಾಡೋದು ನಾನೊಬ್ನೆ’; ಸ್ಟೈಲ್ ಕಾಪಿ ಮಾಡಲು ಬಂದವರಿಗೆ ರವಿಚಂದ್ರನ್ ಎಚ್ಚರಿಕೆ

ರವಿಚಂದ್ರನ್ ಅವರು ‘ಪ್ರೇಮಲೋಕ 2’ ಸಿನಿಮಾ ಮಾಡೋದಾಗಿ ಈ ಮೊದಲು ಹೇಳಿದ್ದರು. ಆದರೆ, ಇನ್ನೂ ಆ ಬಗ್ಗೆ ಘೋಷಣೆ ಆಗಿಲ್ಲ. ಈ ಬಗ್ಗೆ ಅಭಿಮಾನಿಗಳು ನಿರಂತರವಾಗಿ ಕಾಯುತ್ತಾ ಇದ್ದಾರೆ. ಆದರೆ ಮಾಹಿತಿ ಮಾತ್ರ ಸಿಕ್ಕಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:48 am, Wed, 5 March 25

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು