AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾರ್ಲಿಂಗ್​ ಕೃಷ್ಣಗೆ ನಾಯಕಿ ಆದ ಮೇಘಾ ಶೆಟ್ಟಿ; ಟೈಟಲ್​ ಲಾಂಚ್​ ಮಾಡಲಿದ್ದಾರೆ ರವಿ ಚನ್ನಣ್ಣನವರ್

‘ಜೊತೆ ಜೊತೆಯಲಿ’ ಧಾರಾವಾಹಿ ಮೇಘಾ ಶೆಟ್ಟಿ ವೃತ್ತಿ ಜೀವನಕ್ಕೆ ಸಾಕಷ್ಟು ಮೈಲೇಜ್​ ನೀಡಿದೆ. ಅವರು ಈಗ ಹಿರಿತೆರೆಯಲ್ಲೂ ಮಿಂಚೋಕೆ ರೆಡಿ ಆಗಿದ್ದಾರೆ.

ಡಾರ್ಲಿಂಗ್​ ಕೃಷ್ಣಗೆ ನಾಯಕಿ ಆದ ಮೇಘಾ ಶೆಟ್ಟಿ; ಟೈಟಲ್​ ಲಾಂಚ್​ ಮಾಡಲಿದ್ದಾರೆ ರವಿ ಚನ್ನಣ್ಣನವರ್
ಮೇಘಾ ಶೆಟ್ಟಿ-ಡಾರ್ಲಿಂಗ್​ ಕೃಷ್ಣ- ರವಿ ಚನ್ನಣ್ಣನವರ್
TV9 Web
| Edited By: |

Updated on: Sep 25, 2021 | 1:51 PM

Share

‘ಜೊತೆ ಜೊತೆಯಲಿ’ ಧಾರಾವಾಹಿ ಖ್ಯಾತಿಯ ಮೇಘಾ ಶೆಟ್ಟಿ ಇತ್ತೀಚೆಗಷ್ಟೇ ‘ತ್ರಿಬಲ್​ ರೈಡಿಂಗ್​’ ಶೂಟಿಂಗ್​ ಪೂರ್ಣಗೊಳಿಸಿದ್ದರು. ಈ ವೇಳೆ ಮಾತನಾಡುವಾಗ ಹೊಸ ಸಿನಿಮಾ ಬಗ್ಗೆ ಶೀಘ್ರವೇ ಅಪ್​ಡೇಟ್​ ನೀಡುತ್ತೇನೆ ಎಂದಿದ್ದರು. ಅಂತೆಯೇ ಅವರು, ಅವರ ಮುಂದಿನ ಸಿನಿಮಾ ಬಗ್ಗೆ ಮಾಹಿತಿ ನೀಡಿದ್ದಾರೆ. ಡಾರ್ಲಿಂಗ್​ ಕೃಷ್ಣ ಜತೆಗೆ ಮೇಘಾ ಶೆಟ್ಟಿ ತೆರೆ ಹಂಚಿಕೊಳ್ಳಲಿದ್ದಾರೆ. ಸೆಪ್ಟೆಂಬರ್​  27ರಂದು ಸಿನಿಮಾದ ಟೈಟಲ್​ ಲಾಂಚ್​ ಆಗಲಿದೆ.

‘ಜೊತೆ ಜೊತೆಯಲಿ’ ಧಾರಾವಾಹಿ ಮೇಘಾ ಶೆಟ್ಟಿ ವೃತ್ತಿ ಜೀವನಕ್ಕೆ ಸಾಕಷ್ಟು ಮೈಲೇಜ್​ ನೀಡಿದೆ. ಅವರು ಈಗ ಹಿರಿತೆರೆಯಲ್ಲೂ ಮಿಂಚೋಕೆ ರೆಡಿ ಆಗಿದ್ದಾರೆ. ‘ತ್ರಿಬಲ್​ ರೈಡಿಂಗ್​’ ಸಿನಿಮಾ ಶೂಟಿಂಗ್​ ಈಗಾಗಲೇ ಪೂರ್ಣಗೊಂಡಿದ್ದು, ಶೀಘ್ರವೇ ತೆರೆಗೆ ಬರುವ ನಿರೀಕ್ಷೆ ಇದೆ. ಹೀಗಿರುವಾಗಲೇ ಅವರು ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ.

‘ಲವ್​ ಮಾಕ್ಟೇಲ್​’ ಸಿನಿಮಾ ನಿರ್ದೇಶಿಸಿ, ನಟಿಸಿದ್ದ ಡಾರ್ಲಿಂಗ್​ ಕೃಷ್ಣ ಸ್ಯಾಂಡಲ್​ವುಡ್​ನ ಬೇಡಿಕೆಯ ನಟರಲ್ಲಿ ಒಬ್ಬರು. ಅವರು ಈಗ ಸಾಲುಸಾಲು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಈಗ ಅವರು ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರಕ್ಕೆ ಮೇಘಾ ಶೆಟ್ಟಿ ಹಾಗೂ ನಿಶ್ವಿಕಾ ನಾಯ್ಡು ನಾಯಕಿಯರು. ಸೆಪ್ಟೆಂಬರ್​ 27ರಂದು ದಕ್ಷ ಪೊಲೀಸ್​​ ಅಧಿಕಾರಿ ರವಿ ಡಿ. ಚೆನ್ನಣ್ಣನವರ್​ ಟೈಟಲ್​ ಲಾಂಚ್ ಮಾಡಲಿದ್ದಾರೆ. ಪೊಲೀಸ್​ ಅಧಿಕಾರಿ ಕೈಯಲ್ಲಿ ಟೈಟಲ್​ ಲಾಂಚ್​ ಮಾಡಿಸುತ್ತಿರುವುದರಿಂದ ಸಿನಿಮಾ ಕಥೆ ಪೊಲೀಸ್​ ಕಥಾಹಂದರ ಹೊಂದಿರಲಿದೆಯೆ ಎನ್ನುವ ಕುತೂಹಲ ಮೂಡಿದೆ. ಇದಕ್ಕೆ ಚಿತ್ರತಂಡ ಉತ್ತರ ನೀಡಬೇಕಿದೆ. ಸುಮಂತ್​ ಕ್ರಾಂತಿ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಶಿವ ತೇಜಸ್​ ಅವರು ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ರವಿ ವರ್ಮಾ ಅವರ ಆ್ಯಕ್ಷನ್​ ನಿರ್ದೇಶನ​ ಸಿನಿಮಾಗೆ ಇರಲಿದೆ.

ಒಂದೊಮ್ಮೆ ಸಿನಿಮಾ ಆಫರ್​ ಹೆಚ್ಚಾದರೆ ಕಿರುತೆರೆ ತೊರೆಯುತ್ತೀರಾ ಎನ್ನುವ ಪ್ರಶ್ನೆಗೆ ಇತ್ತೀಚೆಗೆ ಮೇಘಾ ಶೆಟ್ಟಿ ಅವರು ಉತ್ತರ ನೀಡಿದ್ದರು. ‘ಸಿನಿಮಾ ಸೀರಿಯಲ್​ ಎರಡನ್ನೂ ನಾನು ನಿಭಾಯಿಸಿಕೊಂಡು ಹೋಗುತ್ತೇನೆ. ಧಾರಾವಾಹಿ ನನಗೆ ಲೈಫ್​ ಕೊಟ್ಟಿದೆ. ಅದರ ಜತೆಗಿನ ಒಡನಾಟ ಎಲ್ಲಕ್ಕಿಂತ ಹೆಚ್ಚು. ಹಾಗಾಗಿ ಎರಡನ್ನೂ ಬ್ಯಾಲೆನ್ಸ್​ ಮಾಡಿಕೊಂಡು ಹೋಗುತ್ತೇನೆ’ ಎಂದಿದ್ದರು ಮೇಘಾ ಶೆಟ್ಟಿ.

ಇದನ್ನೂ ಓದಿ: Megha Shetty: ‘ಜೊತೆ ಜೊತೆಯಲಿ’ ಮೇಘಾ ಶೆಟ್ಟಿ ಸಿನಿಮಾಗಾಗಿ ಕಾಯ್ತಾ ಇದೀರಾ?; ಇಲ್ಲಿದೆ ಗುಡ್​ ನ್ಯೂಸ್

‘ಧಾರಾವಾಹಿ ನನಗೆ ಲೈಫ್​ ಕೊಟ್ಟಿದೆ, ಅದರ ಜತೆಗಿನ ಒಡನಾಟ ಎಲ್ಲಕಿಂತ ಹೆಚ್ಚು’; ಮೇಘಾ ಶೆಟ್ಟಿ

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ