AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಬ್ಲಾಕ್​ ಟಿಕೆಟ್​ ಮಾರುತ್ತಿದ್ದ ರವಿ ಡಿ. ಚನ್ನಣ್ಣನವರ್​: ‘ದಿಲ್​ ಪಸಂದ್​’ ವೇದಿಕೆಯಲ್ಲಿ ಅಚ್ಚರಿ ವಿಚಾರ ಬಹಿರಂಗ

‘ದಿಲ್​ ಪಸಂದ್​’ ಸಿನಿಮಾದ ಸುದ್ದಿಗೋಷ್ಠಿಗೆ ಮುಖ್ಯ ಅತಿಥಿಯಾಗಿ ಪೊಲೀಸ್​ ಅಧಿಕಾರಿ ರವಿ ಡಿ. ಚನ್ನಣ್ಣನವರ್​ ಆಗಮಿಸಿದ್ದರು. ಆ ವೇದಿಕೆಯಲ್ಲಿ ಹಲವು ವಿಚಾರಗಳನ್ನು ಅವರು ಹಂಚಿಕೊಂಡರು. ಯಾರಿಗೂ ಗೊತ್ತಿಲ್ಲದ ಬ್ಲಾಕ್​ ಟಿಕೆಟ್​ ಕಹಾನಿಯನ್ನೂ ಅವರು ತೆರೆದಿಟ್ಟರು.

ಸಿನಿಮಾ ಬ್ಲಾಕ್​ ಟಿಕೆಟ್​ ಮಾರುತ್ತಿದ್ದ ರವಿ ಡಿ. ಚನ್ನಣ್ಣನವರ್​: ‘ದಿಲ್​ ಪಸಂದ್​’ ವೇದಿಕೆಯಲ್ಲಿ ಅಚ್ಚರಿ ವಿಚಾರ ಬಹಿರಂಗ
ರವಿ ಡಿ. ಚನ್ನಣ್ಣನವರ್
TV9 Web
| Updated By: ಮದನ್​ ಕುಮಾರ್​|

Updated on:Sep 28, 2021 | 1:11 PM

Share

ಕರ್ನಾಟಕ ಕಂಡ ಧಕ್ಷ ಅಧಿಕಾರಿಗಳಲ್ಲಿ ರವಿ ಡಿ. ಚನ್ನಣ್ಣನವರ್​ ಕೂಡ ಒಬ್ಬರು. ಅವರು ಮಾಡಿದ ಕೆಲಸಗಳಿಗೆ ಜನರು ಫಿದಾ ಆಗಿದ್ದಾರೆ. ಅವರ ಭಾಷಣಗಳನ್ನು ಕೇಳಿ ಅಪಾರ ಸಂಖ್ಯೆಯ ಜನರು ಸ್ಫೂರ್ತಿ ಪಡೆದುಕೊಂಡಿದ್ದಾರೆ. ಅನೇಕರಿಗೆ ರವಿ ಡಿ. ಚನ್ನಣ್ಣನವರ್​ ಮಾದರಿ ವ್ಯಕ್ತಿ. ಪೊಲೀಸ್​ ಇಲಾಖೆಗೆ ಸೇರಬೇಕು ಎಂಬ ಎಷ್ಟೋ ಯುವಕರಿಗೆ ಅವರೇ ಪ್ರೇರಣೆ. ಇಷ್ಟೆಲ್ಲ ಜನರ ಪ್ರೀತಿ ಗಳಿಸಿರುವ ರವಿ ಡಿ. ಚನ್ನಣ್ಣನವರ್​ ಒಂದು ಕಾಲದಲ್ಲಿ ಸಿನಿಮಾದ ಬ್ಲಾಕ್​ ಟಿಕೆಟ್​ ಮಾರುತ್ತಿದ್ದರು ಎಂಬುದು ಅಚ್ಚರಿಯ ವಿಚಾರ. ಈ ಬಗ್ಗೆ ಸ್ವತಃ ರವಿ ಚನ್ನಣ್ಣನವರ್​ ಹೇಳಿಕೊಂಡಿದ್ದಾರೆ!

ಡಾರ್ಲಿಂಗ್​ ಕೃಷ್ಣ, ನಿಶ್ವಿಕಾ ಕಾಯ್ಡು ಮತ್ತು ಮೇಘಾ ಶೆಟ್ಟಿ ನಟಿಸಲಿರುವ ‘ದಿಲ್​ ಪಸಂದ್​’ ಸಿನಿಮಾದ ಸುದ್ದಿಗೋಷ್ಠಿ ಸೋಮವಾರ (ಸೆ.27) ನಡೆಯಿತು. ಅದಕ್ಕೆ ಮುಖ್ಯ ಅತಿಥಿಯಾಗಿ ರವಿ ಡಿ. ಚನ್ನಣ್ಣನವರ್​ ಆಗಮಿಸಿದ್ದರು. ಅವರ 13 ವರ್ಷಗಳ ಸರ್ವೀಸ್​ನಲ್ಲಿ ಒಂದು ಸಿನಿಮಾ ಕಾರ್ಯಕ್ರಮಕ್ಕೆ ಅತಿಥಿಯಾಗಿ ಬಂದಿದ್ದು ಇದೇ ಮೊದಲು. ಆ ವೇದಿಕೆಯಲ್ಲಿ ಹಲವು ವಿಚಾರಗಳನ್ನು ಅವರು ಹಂಚಿಕೊಂಡರು. ಯಾರಿಗೂ ಗೊತ್ತಿಲ್ಲದ ಬ್ಲಾಕ್​ ಟಿಕೆಟ್​ ಕಹಾನಿಯನ್ನೂ ಅವರು ತೆರೆದಿಟ್ಟರು.

ರವಿ ಡಿ. ಚನ್ನಣ್ಣನವರ್​ ಅವರಿಗೆ ನಟನೆ, ಬರವಣಿಗೆ, ಸಿನಿಮಾ ಬಗ್ಗೆ ಅಪಾರ ಆಸಕ್ತಿ ಇದೆ. ಹಲವು ನಾಟಕಗಳಲ್ಲಿ ಅವರು ಅಭಿನಯಿಸಿದ್ದಾರೆ. ಕಾಲೇಜು ದಿನಗಳಿಂದಲೂ ಅವರ ಮೇಲೆ ಸಿನಿಮಾಗಳು ಬಹಳ ಪ್ರಭಾವ ಬೀರಿವೆ. ಡಾ. ರಾಜ್​ಕುಮಾರ್​ ಅವರ ‘ಮಯೂರ’ ಸಿನಿಮಾ ನೋಡಿ ಅವರು ಸ್ವಾಭಿಮಾನದ ಪಾಠ ಕಲಿತರು. ಈ ಎಲ್ಲ ಘಟನೆಗಳನ್ನು ಅವರು ಮೆಲುಕು ಹಾಕಿದರು.

‘ಎಲ್ಲೂ ಹೇಳಲಾರದ ಒಂದು ಸತ್ಯವನ್ನು ನಾನು ಇಂದು ಹೇಳುತ್ತಿದ್ದೇನೆ. ನಾನು ಗದಗದಲ್ಲಿ ಬ್ಲಾಕ್​ ಟಿಕೆಟ್​ ಮಾರುತ್ತಿದ್ದೆ. ಮಹಾಲಕ್ಷ್ಮೀ, ಶಾಂತಿ ಚಿತ್ರಮಂದಿಗಳಲ್ಲಿ ಬ್ಲಾಕ್​ ಟಿಕೆಟ್​ ಮಾರಿದ್ದೆ. ‘ಅಸುರ’ ಸಿನಿಮಾ ರಿಲೀಸ್​ ಆದಾಗ ನಾನು ಪ್ರಥಮ ಪಿಯುಸಿ ಹುಡುಗ. ಯಜಮಾನ, ದಿಲ್​ ಕಾ ರಿಶ್ತಾ, ಅಂಜಲಿ ಗೀತಾಂಜಲಿ ಸಿನಿಮಾಗಳು ಬಂದಾಗ ಹುಬ್ಬಳ್ಳಿಯಿಂದ ತೆಗೆದುಕೊಂಡು ಬರುತ್ತಿದ್ದೆ’ ಎಂದು ಅವರು ಹೇಳಿದರು.

ಮೊದಲಿನಿಂದಲೂ ನಾಟಕಗಳ ಜೊತೆ ನಂಟು ಹೊಂದಿರುವ ರವಿ ಡಿ. ಚನ್ನಣ್ಣನವರ್​ ಇತ್ತೀಚೆಗೆ ಬರಹಗಳನ್ನು ಕೂಡ ಆರಂಭಿಸಿದ್ದಾರೆ. ಅನೇಕ ಕಥೆಗಳನ್ನು ಅವರು ಬರೆದಿದ್ದಾರೆ. ಅವು ಇನ್ನೂ ಪ್ರಕಟಗೊಂಡಿಲ್ಲ. ‘ಬರೆದ ಪುಸ್ತಕವನ್ನು ಜನರು ಓದುತ್ತಾರೋ ಇಲ್ಲವೋ ಗೊತ್ತಿಲ್ಲ. ಆದರೆ ಸಿನಿಮಾವನ್ನು ಎಲ್ಲರೂ ನೋಡುತ್ತಾರೆ’ ಎನ್ನುವ ಮೂಲಕ ಈ ಮಾಧ್ಯಮದ ಪ್ರಭಾವವನ್ನು ಅವರು ಶ್ಲಾಘಿಸಿದರು.

‘ದಿಲ್​ ಪಸಂದ್​’ ಚಿತ್ರಕ್ಕೆ ಸುಮಂತ್ ಕ್ರಾಂತಿ ಬಂಡವಾಳ ಹೂಡುತ್ತಿದ್ದಾರೆ. ಶಿವ ತೇಜಸ್​ ನಿರ್ದೇಶನ ಮಾಡುತ್ತಿದ್ದಾರೆ. ತಬಲ ನಾಣಿ, ಸಾಧುಕೋಕಿಲ ಮುಂತಾದ ಖ್ಯಾತ ನಟರು ಅಭಿನಯಿಸುತ್ತಿದ್ದಾರೆ. ಅರ್ಜುನ್​ ಜನ್ಯ ಸಂಗೀತ ನಿರ್ದೇಶನ ಹಾಗೂ ಶೇಖರ್​ ಚಂದ್ರ ಛಾಯಾಗ್ರಹಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಶೀಘ್ರದಲ್ಲೇ ಇದರ ಶೂಟಿಂಗ್​ ಆರಂಭ ಆಗಲಿದೆ.

ಇದನ್ನೂ ಓದಿ:

ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ಫೋಟೋ ತೋರಿಸಿ ವಂಚಿಸಿದ ಅರ್ಚಕ; ಎಫ್ಐಆರ್ ದಾಖಲಾಗುತ್ತಿದ್ದಂತೆ ಆರೋಪಿ ಎಸ್ಕೇಪ್

ಅನಗತ್ಯ ಓಡಾಡುವವರಿಗೆ ಬ್ರೇಕ್ ಹಾಕಲು ಫೀಲ್ಡಿಗಿಳಿದ ಎಸ್ಪಿ ರವಿ ಚನ್ನಣ್ಣನವರ್

Published On - 8:15 am, Tue, 28 September 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ