AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ravi Kishan: ಭಾರತೀಯ ಸೇನೆ ಸೇರಿದ ನಟ ರವಿ ಕಿಶನ್ ಮಗಳು ಇಶಿತಾ; ಮಾದರಿ ಆದ ‘ಹೆಬ್ಬುಲಿ’ ವಿಲನ್

ಸುದೀಪ್ ನಟನೆಯ ‘ಹೆಬ್ಬುಲಿ’ ಸಿನಿಮಾ ಮೂಲಕ ನಟ ರವಿ ಕಿಶನ್ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಈಗ ಅವರ ಮಗಳು ಸೇನೆ ಸೇರಿದ್ದಾರೆ.

Ravi Kishan: ಭಾರತೀಯ ಸೇನೆ ಸೇರಿದ ನಟ ರವಿ ಕಿಶನ್ ಮಗಳು ಇಶಿತಾ; ಮಾದರಿ ಆದ ‘ಹೆಬ್ಬುಲಿ’ ವಿಲನ್
ಇಶಿತಾ-ರವಿ ಕಿಶನ್
ರಾಜೇಶ್ ದುಗ್ಗುಮನೆ
|

Updated on:Jun 28, 2023 | 10:02 AM

Share

ಸೆಲೆಬ್ರಿಟಿ ಮಕ್ಕಳು ಚಿತ್ರರಂಗದಲ್ಲೇ ಮುಂದುವರೆಯಲು ಇಷ್ಟಪಡುತ್ತಾರೆ. ಪಾಲಕರ ಹೆಸರಲ್ಲಿ ಸಿನಿಮಾ ರಂಗಕ್ಕೆ ಬಂದು ಒಂದಷ್ಟು ಸಿನಿಮಾ ಮಾಡುತ್ತಾರೆ. ಆದರೆ, ನಟ, ಸಂಸದ ರವಿ ಕಿಶನ್ (Ravi Kishan)  ಮಗಳು ಈ ವಿಚಾರದಲ್ಲಿ ಭಿನ್ನ. ಅವರ ಮಗಳು ಇಶಿತಾ ಶುಕ್ಲಾ (Ishita Shukla) ಸೇನೆ ಸೇರಿದ್ದಾರೆ. ಈ ಮೂಲಕ ಎಲ್ಲರೂ ಹೆಮ್ಮೆ ಪಡುವಂತೆ ಮಾಡಿದ್ದಾರೆ. ಎಲ್ಲರೂ ಇಶಿತಾ ಹಾಗೂ ರವಿ ಕಿಶನ್​ಗೆ ಅಭಿನಂದನೆ ತಿಳಿಸುತ್ತಿದ್ದಾರೆ. ಈ ವಿಚಾರದಲ್ಲಿ ಕುಟುಂಬ ತೆಗೆದುಕೊಂಡ ನಿರ್ಧಾರ ಶ್ಲಾಘನೀಯ ಎಂದು ಅನೇಕರು ಹೇಳಿದ್ದಾರೆ.

ಸುದೀಪ್ ನಟನೆಯ ‘ಹೆಬ್ಬುಲಿ’ ಸಿನಿಮಾ 2017ರಲ್ಲಿ ರಿಲೀಸ್ ಆಯಿತು. ಈ ಚಿತ್ರದ ಮೂಲಕ ಭೋಜ್​ಪುರಿ ನಟ ರವಿ ಕಿಶನ್ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಈ ಚಿತ್ರದಿಂದ ಅವರಿಗೆ ಸಾಕಷ್ಟು ಹೆಸರು ಬಂತು. ಆ ಬಳಿಕ ಅವರು ಕೆಲವು ಕನ್ನಡ ಸಿನಿಮಾಗಳಲ್ಲಿ ನಟಿಸಿದರು. ಹಿಂದಿ, ತೆಲುಗು ಚಿತ್ರರಂಗದಲ್ಲೂ ಅವರು ಫೇಮಸ್. ಅಲ್ಲು ಅರ್ಜುನ್ ಅಭಿನಯದ ಸೂಪರ್ ಹಿಟ್ ಸಿನಿಮಾ ‘ರೇಸ್ ಗುರ್ರಂ’ ಚಿತ್ರದಲ್ಲಿ ಅವರು ಮಾಡಿದ ವಿಲನ್ ಪಾತ್ರ ಸಾಕಷ್ಟು ಗಮನ ಸಳೆಯಿತು. 2019ರ ಲೋಕಸಭೆ ಚುನಾವಣೆಯಲ್ಲಿ ಗೋರಖ್‌ಪುರ ಕ್ಷೇತ್ರದಿಂದ ಬಿಜೆಪಿ ಪರವಾಗಿ ಸ್ಪರ್ಧಿಸಿ ಗೆದ್ದು ಸಂಸದರಾಗಿದ್ದಾರೆ. ಈಗ ರವಿ ಕಿಶನ್ ಮಗಳು ಇಶಿತಾ ಸೇನೆಗೆ ಸೇರಿರುವುದಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಕೇಂದ್ರ ಸರ್ಕಾರ ಇತ್ತೀಚೆಗೆ ಅಗ್ನಿಪಥ್ ಯೋಜನೆ ಜಾರಿಗೆ ತಂದಿದೆ. ಈ ಯೋಜನೆ ಅಡಿಯಲ್ಲಿ ಇಶಿತಾ  ಭಾರತೀಯ ಸೇನೆ ಸೇರಿದ್ದಾರೆ. ಇದನ್ನು ರವಿ ಕಿಶನ್ ಸಾಮಾಜಿಕ ಜಾಲತಾಣಗಳ ಮೂಲಕ ಬಹಿರಂಗಪಡಿಸಿದ್ದಾರೆ. ಇಶಿತಾಗೆ ಈಗ ಕೇವಲ 21 ವರ್ಷ. ದೇಶ ಸೇವೆ ಮಾಡುವ ಅವಕಾಶ ಇಶಿತಾಗೆ ಸಿಕ್ಕಿದೆ.

ಇದನ್ನೂ ಓದಿ: ನಾನು ನಾಲ್ಕು ಮಕ್ಕಳನ್ನು ಹೊಂದಿರುವುದಕ್ಕೆ ಕಾಂಗ್ರೆಸ್ ಕಾರಣ: ಬಿಜೆಪಿ ಸಂಸದ ರವಿ ಕಿಶನ್ ನೀಡಿದ ವಿವರಣೆ, ಕಾರಣ ಇಲ್ಲಿದೆ 

ಸಾಮಾನ್ಯವಾಗಿ ಸೆಲೆಬ್ರಿಟಿ ಮಕ್ಕಳು ಇಂಥ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ ಎಂದಾದಾಗ ಪಾಲಕರೇ ಅಡ್ಡಗಾಲು ಹಾಕುತ್ತಾರೆ. ಆದರೆ, ಮಗಳನ್ನು ರವಿಕಿಶನ್ ಪ್ರೋತ್ಸಾಹಿಸಿದ್ದಾರೆ. ರಾಜಕಾರಣಿ ಮಕ್ಕಳು, ಸೆಲೆಬ್ರಿಟಿ ಮಕ್ಕಳು ಸೇನೆ ಸೇರುವುದಿಲ್ಲ ಎನ್ನುವ ಮಾತನ್ನು ಸುಳ್ಳು ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:53 am, Wed, 28 June 23

Follow Us
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಆಟಗಾರರು
ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಆಟಗಾರರು