Sign In

By signing in or creating an account, you agree with Associated Broadcasting Company's Terms & Conditions and Privacy Policy.

Ravi Kishan: ಭಾರತೀಯ ಸೇನೆ ಸೇರಿದ ನಟ ರವಿ ಕಿಶನ್ ಮಗಳು ಇಶಿತಾ; ಮಾದರಿ ಆದ ‘ಹೆಬ್ಬುಲಿ’ ವಿಲನ್

ಸುದೀಪ್ ನಟನೆಯ ‘ಹೆಬ್ಬುಲಿ’ ಸಿನಿಮಾ ಮೂಲಕ ನಟ ರವಿ ಕಿಶನ್ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಈಗ ಅವರ ಮಗಳು ಸೇನೆ ಸೇರಿದ್ದಾರೆ.

Ravi Kishan: ಭಾರತೀಯ ಸೇನೆ ಸೇರಿದ ನಟ ರವಿ ಕಿಶನ್ ಮಗಳು ಇಶಿತಾ; ಮಾದರಿ ಆದ ‘ಹೆಬ್ಬುಲಿ’ ವಿಲನ್
ಇಶಿತಾ-ರವಿ ಕಿಶನ್
Follow us
ರಾಜೇಶ್ ದುಗ್ಗುಮನೆ
|

Updated on:Jun 28, 2023 | 10:02 AM

ಸೆಲೆಬ್ರಿಟಿ ಮಕ್ಕಳು ಚಿತ್ರರಂಗದಲ್ಲೇ ಮುಂದುವರೆಯಲು ಇಷ್ಟಪಡುತ್ತಾರೆ. ಪಾಲಕರ ಹೆಸರಲ್ಲಿ ಸಿನಿಮಾ ರಂಗಕ್ಕೆ ಬಂದು ಒಂದಷ್ಟು ಸಿನಿಮಾ ಮಾಡುತ್ತಾರೆ. ಆದರೆ, ನಟ, ಸಂಸದ ರವಿ ಕಿಶನ್ (Ravi Kishan)  ಮಗಳು ಈ ವಿಚಾರದಲ್ಲಿ ಭಿನ್ನ. ಅವರ ಮಗಳು ಇಶಿತಾ ಶುಕ್ಲಾ (Ishita Shukla) ಸೇನೆ ಸೇರಿದ್ದಾರೆ. ಈ ಮೂಲಕ ಎಲ್ಲರೂ ಹೆಮ್ಮೆ ಪಡುವಂತೆ ಮಾಡಿದ್ದಾರೆ. ಎಲ್ಲರೂ ಇಶಿತಾ ಹಾಗೂ ರವಿ ಕಿಶನ್​ಗೆ ಅಭಿನಂದನೆ ತಿಳಿಸುತ್ತಿದ್ದಾರೆ. ಈ ವಿಚಾರದಲ್ಲಿ ಕುಟುಂಬ ತೆಗೆದುಕೊಂಡ ನಿರ್ಧಾರ ಶ್ಲಾಘನೀಯ ಎಂದು ಅನೇಕರು ಹೇಳಿದ್ದಾರೆ.

ಸುದೀಪ್ ನಟನೆಯ ‘ಹೆಬ್ಬುಲಿ’ ಸಿನಿಮಾ 2017ರಲ್ಲಿ ರಿಲೀಸ್ ಆಯಿತು. ಈ ಚಿತ್ರದ ಮೂಲಕ ಭೋಜ್​ಪುರಿ ನಟ ರವಿ ಕಿಶನ್ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಈ ಚಿತ್ರದಿಂದ ಅವರಿಗೆ ಸಾಕಷ್ಟು ಹೆಸರು ಬಂತು. ಆ ಬಳಿಕ ಅವರು ಕೆಲವು ಕನ್ನಡ ಸಿನಿಮಾಗಳಲ್ಲಿ ನಟಿಸಿದರು. ಹಿಂದಿ, ತೆಲುಗು ಚಿತ್ರರಂಗದಲ್ಲೂ ಅವರು ಫೇಮಸ್. ಅಲ್ಲು ಅರ್ಜುನ್ ಅಭಿನಯದ ಸೂಪರ್ ಹಿಟ್ ಸಿನಿಮಾ ‘ರೇಸ್ ಗುರ್ರಂ’ ಚಿತ್ರದಲ್ಲಿ ಅವರು ಮಾಡಿದ ವಿಲನ್ ಪಾತ್ರ ಸಾಕಷ್ಟು ಗಮನ ಸಳೆಯಿತು. 2019ರ ಲೋಕಸಭೆ ಚುನಾವಣೆಯಲ್ಲಿ ಗೋರಖ್‌ಪುರ ಕ್ಷೇತ್ರದಿಂದ ಬಿಜೆಪಿ ಪರವಾಗಿ ಸ್ಪರ್ಧಿಸಿ ಗೆದ್ದು ಸಂಸದರಾಗಿದ್ದಾರೆ. ಈಗ ರವಿ ಕಿಶನ್ ಮಗಳು ಇಶಿತಾ ಸೇನೆಗೆ ಸೇರಿರುವುದಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಕೇಂದ್ರ ಸರ್ಕಾರ ಇತ್ತೀಚೆಗೆ ಅಗ್ನಿಪಥ್ ಯೋಜನೆ ಜಾರಿಗೆ ತಂದಿದೆ. ಈ ಯೋಜನೆ ಅಡಿಯಲ್ಲಿ ಇಶಿತಾ  ಭಾರತೀಯ ಸೇನೆ ಸೇರಿದ್ದಾರೆ. ಇದನ್ನು ರವಿ ಕಿಶನ್ ಸಾಮಾಜಿಕ ಜಾಲತಾಣಗಳ ಮೂಲಕ ಬಹಿರಂಗಪಡಿಸಿದ್ದಾರೆ. ಇಶಿತಾಗೆ ಈಗ ಕೇವಲ 21 ವರ್ಷ. ದೇಶ ಸೇವೆ ಮಾಡುವ ಅವಕಾಶ ಇಶಿತಾಗೆ ಸಿಕ್ಕಿದೆ.

ಇದನ್ನೂ ಓದಿ: ನಾನು ನಾಲ್ಕು ಮಕ್ಕಳನ್ನು ಹೊಂದಿರುವುದಕ್ಕೆ ಕಾಂಗ್ರೆಸ್ ಕಾರಣ: ಬಿಜೆಪಿ ಸಂಸದ ರವಿ ಕಿಶನ್ ನೀಡಿದ ವಿವರಣೆ, ಕಾರಣ ಇಲ್ಲಿದೆ 

ಸಾಮಾನ್ಯವಾಗಿ ಸೆಲೆಬ್ರಿಟಿ ಮಕ್ಕಳು ಇಂಥ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ ಎಂದಾದಾಗ ಪಾಲಕರೇ ಅಡ್ಡಗಾಲು ಹಾಕುತ್ತಾರೆ. ಆದರೆ, ಮಗಳನ್ನು ರವಿಕಿಶನ್ ಪ್ರೋತ್ಸಾಹಿಸಿದ್ದಾರೆ. ರಾಜಕಾರಣಿ ಮಕ್ಕಳು, ಸೆಲೆಬ್ರಿಟಿ ಮಕ್ಕಳು ಸೇನೆ ಸೇರುವುದಿಲ್ಲ ಎನ್ನುವ ಮಾತನ್ನು ಸುಳ್ಳು ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:53 am, Wed, 28 June 23

ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ