AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್​ ಅಭಿಮಾನಿಗಳಿಗೆ ನೋವಾಗುವಂತೆ ಮಾತಾಡಿದ ರವಿತೇಜ; ಕ್ಷಮೆ ಕೇಳುವಂತೆ ಫ್ಯಾನ್ಸ್​ ಒತ್ತಾಯ

‘ರವಿತೇಜ ಅವರೇ.. ನಿಮ್ಮ ಬಗ್ಗೆ ನಮಗೆ ಬಹಳ ಗೌರವ ಇದೆ. ಬಳಸುವ ಪದಗಳು ತುಂಬ ಮುಖ್ಯ. ಅವು ನಿಮಗೆ ನೋವು ಉಂಟುಮಾಡಬಹುದು. ಯಶ್​ ಬಗ್ಗೆ ನೀವು ಹೇಳಿದ್ದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ನಿಮ್ಮಂತಹ ಹಿರಿಯ ನಟರಿಂದ ಈ ಮಾತು ಕೇಳಿ ನಿರಾಸೆ ಆಯಿತು’ ಎಂದು ಯಶ್​ ಅಭಿಮಾನಿಯೊಬ್ಬರು ಪೋಸ್ಟ್ ಮಾಡಿದ್ದಾರೆ.

ಯಶ್​ ಅಭಿಮಾನಿಗಳಿಗೆ ನೋವಾಗುವಂತೆ ಮಾತಾಡಿದ ರವಿತೇಜ; ಕ್ಷಮೆ ಕೇಳುವಂತೆ ಫ್ಯಾನ್ಸ್​ ಒತ್ತಾಯ
ರವಿತೇಜ, ಯಶ್​
ಮದನ್​ ಕುಮಾರ್​
|

Updated on: Oct 11, 2023 | 4:33 PM

Share

ತೆಲುಗಿನಲ್ಲಿ ಮಾಸ್​ ಸಿನಿಮಾಗಳ ಮೂಲಕ ಹೆಸರು ಮಾಡಿರುವ ನಟ ರವಿತೇಜ (Ravi Teja) ಅವರು ದೇಶಾದ್ಯಂತ ಅಭಿಮಾನಿಗಳನ್ನು ಹೊಂದಿದ್ದಾರೆ. ಕರ್ನಾಟಕದಲ್ಲೂ ಅವರ ಸಿನಿಮಾಗಳು ಉತ್ತಮವಾಗಿ ಪ್ರದರ್ಶನವಾದ ಉದಾಹರಣೆ ಇದೆ. ಈಗ ಅವರು ನಟಿಸಿರುವ ‘ಟೈಗರ್​ ನಾಗೇಶ್ವರ ರಾವ್​’ (Tiger Nageswara Rao) ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಈ ಚಿತ್ರ ಅಕ್ಟೋಬರ್​ 20ರಂದು ರಿಲೀಸ್​ ಆಗಲಿದೆ. ಅದಕ್ಕೂ ಮುನ್ನ ಅವರೊಂದು ಕಿರಿಕ್​ ಮಾಡಿಕೊಂಡಿದ್ದಾರೆ. ನಟ ಯಶ್​ (Yash) ಬಗ್ಗೆ ರವಿತೇಜ ನೀಡಿದ ಒಂದು ಹೇಳಿಕೆ ಬಗ್ಗೆ ವಿರೋಧ ವ್ಯಕ್ತವಾಗಿದೆ. ರವಿತೇಜ ಕ್ಷಮೆ ಕೇಳಬೇಕು ಎಂದು ಯಶ್​ ಫ್ಯಾನ್ಸ್​ ಪಟ್ಟು ಹಿಡಿದಿದ್ದಾರೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

ರವಿತೇಜ ಅವರು ‘ಟೈಗರ್ ನಾಗೇಶ್ವರ ರಾವ್​’ ಸಿನಿಮಾದ ಪ್ರಚಾರಕ್ಕಾಗಿ ಅನೇಕ ಕಡೆಗಳಲ್ಲಿ ಸಂದರ್ಶನ ನೀಡುತ್ತಿದ್ದಾರೆ. ಈ ವೇಳೆ ಅವರಿಗೆ ಹಲವು ಬಗೆಯ ಪ್ರಶ್ನೆಗಳು ಎದುರಾಗುತ್ತಿದೆ. ದಕ್ಷಿಣ ಭಾರತದ ಬಗ್ಗೆ ತಮಗೆ ಇರುವ ಅಭಿಪ್ರಾಯವನ್ನು ರವಿತೇಜ ವ್ಯಕ್ತಪಡಿಸಿದ್ದಾರೆ. ಈ ವೇಳೆ ‘ಯಶ್​ ತುಂಬ ಲಕ್ಕಿ’ ಎಂದು ಅವರು ಹೇಳಿದ್ದಾರೆ. ಇದೇ ಹೇಳಿಕೆ ಈಗ ವಿವಾದಕ್ಕೆ ಕಾರಣ ಆಗಿದೆ. ರವಿತೇಜ ಅವರು ಈ ಮಾತನ್ನು ಯಶ್​ ಫ್ಯಾನ್ಸ್​ ಒಪ್ಪಿಲ್ಲ.

‘ಪ್ರಭಾಸ್​, ರಾಮ್​ ಚರಣ್​, ರಾಜಮೌಳಿ, ಯಶ್​, ದಳಪತಿ ವಿಜಯ್​ ಅವರಿಂದ ನೀವು ಏನನ್ನು ಕದಿಯುತ್ತೀರಿ’ ಎಂದು ಪ್ರಶ್ನೆ ಕೇಳಲಾಯಿತು. ಅದಕ್ಕೆ ಉತ್ತರಿಸಿದ ರವಿತೇಜ ಅವರು, ‘ಪ್ರಭಾಸ್​ ಅವರಿಂದ ಅಪಿಯರೆನ್ಸ್​, ರಾಮ್​ ಚರಣ್​ ಅವರಿಂದ ಡ್ಯಾನ್ಸ್​, ರಾಜಮೌಳಿ ಅವರಿಂದ ವಿಷನ್​ ಹಾಗೂ ವಿಜಯ್​ ಅವರಿಂದ ಡ್ಯಾನ್ಸ್ ಕದಿಯುತ್ತೇನೆ’ ಎಂದರು. ‘ಯಶ್​ ಅವರನ್ನು ನಾನು ಕೆಜಿಎಫ್​ ಸಿನಿಮಾದಲ್ಲಿ ಮಾತ್ರ ನೋಡಿದ್ದು. ಅಂಥ ಸಿನಿಮಾದಲ್ಲಿ ನಟಿಸಲು ಅವರು ಲಕ್ಕಿ ಆಗಿದ್ದರು’ ಎಂದು ರವಿತೇಜ ಹೇಳಿದ್ದಾರೆ.

ಇದನ್ನೂ ಓದಿ: Yash: ಯಶ್​ ನಟನೆಯ ಸಿನಿಮಾಗಳನ್ನು ನೋಡಿ ‘ಜವಾನ್​’ ಚಿತ್ರಕ್ಕಾಗಿ ತಯಾರಿ ಮಾಡಿಕೊಂಡಿದ್ದ ಶಾರುಖ್​ ಖಾನ್​

‘ರವಿತೇಜ ಅವರೇ.. ನಿಮ್ಮ ಬಗ್ಗೆ ನಮಗೆ ಬಹಳ ಗೌರವ ಇದೆ. ಬಳಸುವ ಪದಗಳು ತುಂಬ ಮುಖ್ಯ. ಅವು ನಿಮಗೆ ನೋವು ಉಂಟುಮಾಡಬಹುದು. ಯಶ್​ ಬಗ್ಗೆ ನೀವು ಹೇಳಿದ್ದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ನಿಮ್ಮಂತಹ ಹಿರಿಯ ನಟರಿಂದ ಈ ಮಾತು ಕೇಳಿ ನಿರಾಸೆ ಆಯಿತು. ಬಸ್​ ಚಾಲಕನ ಮಗನಾಗಿ ಪ್ಯಾನ್​ ಇಂಡಿಯಾ ಸ್ಟಾರ್​ ಆಗುವ ಮಟ್ಟಕ್ಕೆ ಬೆಳೆದವರು ಯಶ್​. ಅವರು ಪ್ರತಿಭಾವಂತರು, ಶ್ರಮಜೀವಿ ಮತ್ತು ವಿನಯವಂತರು. ಅವರು ಲಕ್ಕಿ ಅಲ್ಲ. ಕೆಜಿಎಫ್​ ಸಿನಿಮಾವನ್ನು ಪಡೆದಿದ್ದಕ್ಕೆ ನಾವು ಲಕ್ಕಿ’ ಎಂದು ನೆಟ್ಟಿಗರೊಬ್ಬರು ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ: ಅಂದು ಯಶ್​, ಈಗ ಮಹೇಶ್​ ಬಾಬು; ರೇಂಜ್​ ರೋವರ್​ ಕಾರು ಖರೀದಿಸಿದ ಸೂಪರ್​ ಸ್ಟಾರ್ಸ್​

‘ಕೆಜಿಎಫ್​ ಚಿತ್ರ ಬರುವುದಕ್ಕೂ ಮುನ್ನ ಯಶ್​ 16 ಸಿನಿಮಾ ಮಾಡಿದ್ದರು. ಕೆಜಿಎಫ್​​ಗೂ ಮೊದಲು ಅವರು ಸ್ಟಾರ್​ ಆಗಿದ್ದರು. ಕನ್ನಡ ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರ. ಕೆಜಿಎಫ್​ಗಾಗಿ ಅವರು 8 ವರ್ಷ ಮೀಸಲಿಟ್ಟರು’ ಎಂದು ಹೇಳುವ ಮೂಲಕ ಯಶ್​ ಅವರು ಅದೃಷ್ಟದಿಂದ ಈ ಗೆಲುವು ಪಡೆದಿಲ್ಲ ಎಂಬುದನ್ನು ರವಿತೇಜಗೆ ಫ್ಯಾನ್ಸ್​ ನೆನಪಿಸಿದ್ದಾರೆ. ಸದ್ಯ ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ