AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Happy Birthday Ravichandran: ರವಿಚಂದ್ರನ್​ 60ನೇ ಹುಟ್ಟುಹಬ್ಬ; ಕನಸುಗಾರನ ಜನ್ಮದಿನಕ್ಕೆ 3 ಹೊಸ ಕನಸುಗಳ ಅನಾವರಣ

Ravichandran Birthday: ನಟನೆ ಜೊತೆಗೆ ನಿರ್ದೇಶನದಲ್ಲೂ ರವಿಚಂದ್ರನ್​ ಯಶಸ್ಸು ಕಂಡವರು. ಹಾಗಾಗಿ ಅವರ ನಿರ್ದೇಶಿಸುವ ಸಿನಿಮಾಗಳ ಬಗ್ಗೆ ಅಭಿಮಾನಿಗಳಿಗೆ ವಿಶೇಷವಾದ ನಿರೀಕ್ಷೆ ಇದ್ದೇ ಇರುತ್ತದೆ.

Happy Birthday Ravichandran: ರವಿಚಂದ್ರನ್​ 60ನೇ ಹುಟ್ಟುಹಬ್ಬ; ಕನಸುಗಾರನ ಜನ್ಮದಿನಕ್ಕೆ 3 ಹೊಸ ಕನಸುಗಳ ಅನಾವರಣ
ರವಿಚಂದ್ರನ್​
ಮದನ್​ ಕುಮಾರ್​
|

Updated on: May 30, 2021 | 8:21 AM

Share

ಕನ್ನಡ ಚಿತ್ರರಂಗದ ಕನಸುಗಾರ ರವಿಚಂದ್ರನ್​ ಅವರಿಗೆ ಇಂದು (ಮೇ 30) ಜನ್ಮದಿನ. ಇಂದು ಅವರು 60ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಸ್ಯಾಂಡಲ್​ವುಡ್​ನಲ್ಲಿ ಹಲವು ಹೊಸಹೊಸ ಕನಸುಗಳನ್ನು ಕಂಡು ಅವುಗಳನ್ನು ನನಸು ಮಾಡಿದ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಕೊರೊನಾ ವೈರಸ್​ ಹಾವಳಿ ಹೆಚ್ಚಾಗಿರುವುದರಿಂದ ಸಾರ್ವಜನಿಕವಾಗಿ ‘ಕ್ರೇಜಿ ಸ್ಟಾರ್​’ ಹುಟ್ಟುಹಬ್ಬವನ್ನು ಆಚರಿಸಲು ಅಭಿಮಾನಿಗಳಿಗೆ ಸಾಧ್ಯವಾಗುತ್ತಿಲ್ಲ. ಸೋಶಿಯಲ್​ ಮೀಡಿಯಾ ಮೂಲಕವೇ ಅವರಿಗೆ ಜನ್ಮದಿನದ ಶುಭ ಹಾರೈಸಲಾಗುತ್ತಿದೆ. ಬರ್ತ್​ಡೇ ಪ್ರಯುಕ್ತ ಅಭಿಮಾನಿಗಳಿಗೆ ರವಿಚಂದ್ರನ್​ ಒಂದು ಗಿಫ್ಟ್​ ನೀಡಿದ್ದಾರೆ.

ಬಣ್ಣದ ಲೋಕಕ್ಕೆ ಕಾಲಿಡುವ ಎಷ್ಟೋ ಜನರಿಗೆ ರವಿಚಂದ್ರನ್​ ಸ್ಫೂರ್ತಿ. ಸೋಲು-ಗೆಲುವು ಏನೇ ಇದ್ದರೂ ರವಿಚಂದ್ರನ್​ ಕನಸು ಕಾಣುವುದನ್ನು ನಿಲ್ಲಿಸಿಲ್ಲ. ಹೊಸ ಉತ್ಸಾಹದೊಂದಿಗೆ ಅವರು ಹೊಸ ಸಿನಿಮಾಗಳನ್ನು ಅನೌನ್ಸ್​ ಮಾಡುತ್ತಲೇ ಇದ್ದಾರೆ. ಸದ್ಯ ‘ರವಿ ಬೋಪಣ್ಣ’, ‘ಕನ್ನಡಿಗ’ ಚಿತ್ರಗಳಲ್ಲಿ ತೊಡಗಿಕೊಂಡಿರುವ ಅವರು ಇನ್ನೂ ಮೂರು ಹೊಸ ಸಿನಿಮಾಗಳ ಬಗ್ಗೆ ಒಂದು ವಿಶೇಷ ವಿಡಿಯೋ ಟೀಸರ್​ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ತಮ್ಮದೇ ಯೂಟ್ಯೂಬ್​ ಚಾನೆಲ್​ ಮೂಲಕ ಮೂರು ಹೊಸ ಪ್ರಾಜೆಕ್ಟ್​ಗಳ ಝಲಕ್​ ತೋರಿಸಿದ್ದಾರೆ.

ನಟನೆ ಜೊತೆಗೆ ನಿರ್ದೇಶನದಲ್ಲೂ ರವಿಚಂದ್ರನ್​ ಯಶಸ್ಸು ಕಂಡವರು. ಹಾಗಾಗಿ ಅವರ ನಿರ್ದೇಶನದ ಸಿನಿಮಾಗಳ ಬಗ್ಗೆ ಅಭಿಮಾನಿಗಳಿಗೆ ವಿಶೇಷವಾದ ನಿರೀಕ್ಷೆ ಇದ್ದೇ ಇರುತ್ತದೆ. ಸದ್ಯ ಅವರು ‘ರವಿ ಬೋಪಣ್ಣ’ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಆ ಬಳಿಕ ‘ಗಾಡ್​’, ‘60’ ಮತ್ತು ‘ಬ್ಯಾಡ್​ ಬಾಯ್ಸ್​’ ಎಂಬ ಸಿನಿಮಾಗಳನ್ನು ನಿರ್ದೇಶಿಸಲಿದ್ದಾರೆ. ಈ ಬಗ್ಗೆ ಅವರು ಟೀಸರ್​ ಮೂಲಕ ಸುಳಿವು ನೀಡಿದ್ದಾರೆ.

ಬಿಎಂ ಗಿರಿರಾಜ್​ ನಿರ್ದೇಶನದ ‘ಕನ್ನಡಿಗ’ ಸಿನಿಮಾದಲ್ಲಿ ರವಿಚಂದ್ರನ್​ ನಟಿಸುತ್ತಿದ್ದಾರೆ. ಕಳೆದ ವರ್ಷ ಲಾಕ್​ಡೌನ್​ ಸಡಿಲಿಕೆ ಆದಾಗ ಶೂಟಿಂಗ್​ ಆರಂಭಿಸಿದ ಈ ಸಿನಿಮಾ ಸೆನ್ಸಾರ್​ ಪ್ರಮಾಣಪತ್ರವನ್ನೂ ಪಡೆದುಕೊಂಡಿತ್ತು. ಇನ್ನೇನು ರಿಲೀಸ್​ ಬಗ್ಗೆ ಆಲೋಚನೆ​ ಮಾಡಬೇಕು ಎಂಬಷ್ಟರಲ್ಲಿ ಕೊರೊನಾ ವೈರಸ್​ ಎರಡನೇ ಅಲೆ ಆರಂಭ ಆಯಿತು. ಈಗ ಮತ್ತೆ ಎಲ್ಲ ಕಡೆ ಲಾಕ್​ಡೌನ್​ ಜಾರಿಯಲ್ಲಿದೆ. ಈ ಸಿನಿಮಾದಲ್ಲಿ ಎರಡು ಶೇಡ್​ನ ಪಾತ್ರವನ್ನು ರವಿಚಂದ್ರನ್​ ನಿಭಾಯಿಸಿದ್ದಾರೆ. ಈ ಚಿತ್ರಕ್ಕೆ ಒಂದು ಹಾಡು ಸೇರಿಸಲಾಗಿದ್ದು, ಅದರ ಶೂಟಿಂಗ್​ ಬಾಕಿ ಇದೆ. ರವಿಚಂದ್ರನ್​ ಜನ್ಮದಿನದ ಪ್ರಯುಕ್ತ ‘ಕನ್ನಡಿಗ’ನ ಮೊದಲ ಟೀಸರ್ ​ಇಂದು ಆನಂದ್​ ಆಡಿಯೋ ಯೂಟ್ಯೂಬ್​ ಚಾನೆಲ್​ನಲ್ಲಿ ಬಿಡುಗಡೆ ಆಗಲಿದೆ.

ಇದನ್ನೂ ಓದಿ:

ರವಿಚಂದ್ರನ್​ ಜನ್ಮದಿನಕ್ಕೆ ‘ಕನ್ನಡಿಗ’ ಟೀಸರ್​; ಹೇಗಿರಲಿದೆ ಗುಣಭದ್ರನ ಝಲಕ್?​

ಮತ್ತೆ ಹಳ್ಳಿ ಹೈದನಾಗೋಕೆ ರವಿಚಂದ್ರನ್​ ರೆಡಿ; ಆದರೆ ಸಿನಿಮಾ ಶುರುವಾಗೋಕೆ ಎದುರಾಯ್ತು ವಿಘ್ನ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು