AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Happy Birthday Ravichandran: ರವಿಚಂದ್ರನ್​ 60ನೇ ಹುಟ್ಟುಹಬ್ಬ; ಕನಸುಗಾರನ ಜನ್ಮದಿನಕ್ಕೆ 3 ಹೊಸ ಕನಸುಗಳ ಅನಾವರಣ

Ravichandran Birthday: ನಟನೆ ಜೊತೆಗೆ ನಿರ್ದೇಶನದಲ್ಲೂ ರವಿಚಂದ್ರನ್​ ಯಶಸ್ಸು ಕಂಡವರು. ಹಾಗಾಗಿ ಅವರ ನಿರ್ದೇಶಿಸುವ ಸಿನಿಮಾಗಳ ಬಗ್ಗೆ ಅಭಿಮಾನಿಗಳಿಗೆ ವಿಶೇಷವಾದ ನಿರೀಕ್ಷೆ ಇದ್ದೇ ಇರುತ್ತದೆ.

Happy Birthday Ravichandran: ರವಿಚಂದ್ರನ್​ 60ನೇ ಹುಟ್ಟುಹಬ್ಬ; ಕನಸುಗಾರನ ಜನ್ಮದಿನಕ್ಕೆ 3 ಹೊಸ ಕನಸುಗಳ ಅನಾವರಣ
ರವಿಚಂದ್ರನ್​
ಮದನ್​ ಕುಮಾರ್​
|

Updated on: May 30, 2021 | 8:21 AM

Share

ಕನ್ನಡ ಚಿತ್ರರಂಗದ ಕನಸುಗಾರ ರವಿಚಂದ್ರನ್​ ಅವರಿಗೆ ಇಂದು (ಮೇ 30) ಜನ್ಮದಿನ. ಇಂದು ಅವರು 60ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಸ್ಯಾಂಡಲ್​ವುಡ್​ನಲ್ಲಿ ಹಲವು ಹೊಸಹೊಸ ಕನಸುಗಳನ್ನು ಕಂಡು ಅವುಗಳನ್ನು ನನಸು ಮಾಡಿದ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಕೊರೊನಾ ವೈರಸ್​ ಹಾವಳಿ ಹೆಚ್ಚಾಗಿರುವುದರಿಂದ ಸಾರ್ವಜನಿಕವಾಗಿ ‘ಕ್ರೇಜಿ ಸ್ಟಾರ್​’ ಹುಟ್ಟುಹಬ್ಬವನ್ನು ಆಚರಿಸಲು ಅಭಿಮಾನಿಗಳಿಗೆ ಸಾಧ್ಯವಾಗುತ್ತಿಲ್ಲ. ಸೋಶಿಯಲ್​ ಮೀಡಿಯಾ ಮೂಲಕವೇ ಅವರಿಗೆ ಜನ್ಮದಿನದ ಶುಭ ಹಾರೈಸಲಾಗುತ್ತಿದೆ. ಬರ್ತ್​ಡೇ ಪ್ರಯುಕ್ತ ಅಭಿಮಾನಿಗಳಿಗೆ ರವಿಚಂದ್ರನ್​ ಒಂದು ಗಿಫ್ಟ್​ ನೀಡಿದ್ದಾರೆ.

ಬಣ್ಣದ ಲೋಕಕ್ಕೆ ಕಾಲಿಡುವ ಎಷ್ಟೋ ಜನರಿಗೆ ರವಿಚಂದ್ರನ್​ ಸ್ಫೂರ್ತಿ. ಸೋಲು-ಗೆಲುವು ಏನೇ ಇದ್ದರೂ ರವಿಚಂದ್ರನ್​ ಕನಸು ಕಾಣುವುದನ್ನು ನಿಲ್ಲಿಸಿಲ್ಲ. ಹೊಸ ಉತ್ಸಾಹದೊಂದಿಗೆ ಅವರು ಹೊಸ ಸಿನಿಮಾಗಳನ್ನು ಅನೌನ್ಸ್​ ಮಾಡುತ್ತಲೇ ಇದ್ದಾರೆ. ಸದ್ಯ ‘ರವಿ ಬೋಪಣ್ಣ’, ‘ಕನ್ನಡಿಗ’ ಚಿತ್ರಗಳಲ್ಲಿ ತೊಡಗಿಕೊಂಡಿರುವ ಅವರು ಇನ್ನೂ ಮೂರು ಹೊಸ ಸಿನಿಮಾಗಳ ಬಗ್ಗೆ ಒಂದು ವಿಶೇಷ ವಿಡಿಯೋ ಟೀಸರ್​ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ತಮ್ಮದೇ ಯೂಟ್ಯೂಬ್​ ಚಾನೆಲ್​ ಮೂಲಕ ಮೂರು ಹೊಸ ಪ್ರಾಜೆಕ್ಟ್​ಗಳ ಝಲಕ್​ ತೋರಿಸಿದ್ದಾರೆ.

ನಟನೆ ಜೊತೆಗೆ ನಿರ್ದೇಶನದಲ್ಲೂ ರವಿಚಂದ್ರನ್​ ಯಶಸ್ಸು ಕಂಡವರು. ಹಾಗಾಗಿ ಅವರ ನಿರ್ದೇಶನದ ಸಿನಿಮಾಗಳ ಬಗ್ಗೆ ಅಭಿಮಾನಿಗಳಿಗೆ ವಿಶೇಷವಾದ ನಿರೀಕ್ಷೆ ಇದ್ದೇ ಇರುತ್ತದೆ. ಸದ್ಯ ಅವರು ‘ರವಿ ಬೋಪಣ್ಣ’ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಆ ಬಳಿಕ ‘ಗಾಡ್​’, ‘60’ ಮತ್ತು ‘ಬ್ಯಾಡ್​ ಬಾಯ್ಸ್​’ ಎಂಬ ಸಿನಿಮಾಗಳನ್ನು ನಿರ್ದೇಶಿಸಲಿದ್ದಾರೆ. ಈ ಬಗ್ಗೆ ಅವರು ಟೀಸರ್​ ಮೂಲಕ ಸುಳಿವು ನೀಡಿದ್ದಾರೆ.

ಬಿಎಂ ಗಿರಿರಾಜ್​ ನಿರ್ದೇಶನದ ‘ಕನ್ನಡಿಗ’ ಸಿನಿಮಾದಲ್ಲಿ ರವಿಚಂದ್ರನ್​ ನಟಿಸುತ್ತಿದ್ದಾರೆ. ಕಳೆದ ವರ್ಷ ಲಾಕ್​ಡೌನ್​ ಸಡಿಲಿಕೆ ಆದಾಗ ಶೂಟಿಂಗ್​ ಆರಂಭಿಸಿದ ಈ ಸಿನಿಮಾ ಸೆನ್ಸಾರ್​ ಪ್ರಮಾಣಪತ್ರವನ್ನೂ ಪಡೆದುಕೊಂಡಿತ್ತು. ಇನ್ನೇನು ರಿಲೀಸ್​ ಬಗ್ಗೆ ಆಲೋಚನೆ​ ಮಾಡಬೇಕು ಎಂಬಷ್ಟರಲ್ಲಿ ಕೊರೊನಾ ವೈರಸ್​ ಎರಡನೇ ಅಲೆ ಆರಂಭ ಆಯಿತು. ಈಗ ಮತ್ತೆ ಎಲ್ಲ ಕಡೆ ಲಾಕ್​ಡೌನ್​ ಜಾರಿಯಲ್ಲಿದೆ. ಈ ಸಿನಿಮಾದಲ್ಲಿ ಎರಡು ಶೇಡ್​ನ ಪಾತ್ರವನ್ನು ರವಿಚಂದ್ರನ್​ ನಿಭಾಯಿಸಿದ್ದಾರೆ. ಈ ಚಿತ್ರಕ್ಕೆ ಒಂದು ಹಾಡು ಸೇರಿಸಲಾಗಿದ್ದು, ಅದರ ಶೂಟಿಂಗ್​ ಬಾಕಿ ಇದೆ. ರವಿಚಂದ್ರನ್​ ಜನ್ಮದಿನದ ಪ್ರಯುಕ್ತ ‘ಕನ್ನಡಿಗ’ನ ಮೊದಲ ಟೀಸರ್ ​ಇಂದು ಆನಂದ್​ ಆಡಿಯೋ ಯೂಟ್ಯೂಬ್​ ಚಾನೆಲ್​ನಲ್ಲಿ ಬಿಡುಗಡೆ ಆಗಲಿದೆ.

ಇದನ್ನೂ ಓದಿ:

ರವಿಚಂದ್ರನ್​ ಜನ್ಮದಿನಕ್ಕೆ ‘ಕನ್ನಡಿಗ’ ಟೀಸರ್​; ಹೇಗಿರಲಿದೆ ಗುಣಭದ್ರನ ಝಲಕ್?​

ಮತ್ತೆ ಹಳ್ಳಿ ಹೈದನಾಗೋಕೆ ರವಿಚಂದ್ರನ್​ ರೆಡಿ; ಆದರೆ ಸಿನಿಮಾ ಶುರುವಾಗೋಕೆ ಎದುರಾಯ್ತು ವಿಘ್ನ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ