AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Happy Birthday Ravichandran: ರವಿಚಂದ್ರನ್​ 60ನೇ ಹುಟ್ಟುಹಬ್ಬ; ಕನಸುಗಾರನ ಜನ್ಮದಿನಕ್ಕೆ 3 ಹೊಸ ಕನಸುಗಳ ಅನಾವರಣ

Ravichandran Birthday: ನಟನೆ ಜೊತೆಗೆ ನಿರ್ದೇಶನದಲ್ಲೂ ರವಿಚಂದ್ರನ್​ ಯಶಸ್ಸು ಕಂಡವರು. ಹಾಗಾಗಿ ಅವರ ನಿರ್ದೇಶಿಸುವ ಸಿನಿಮಾಗಳ ಬಗ್ಗೆ ಅಭಿಮಾನಿಗಳಿಗೆ ವಿಶೇಷವಾದ ನಿರೀಕ್ಷೆ ಇದ್ದೇ ಇರುತ್ತದೆ.

Happy Birthday Ravichandran: ರವಿಚಂದ್ರನ್​ 60ನೇ ಹುಟ್ಟುಹಬ್ಬ; ಕನಸುಗಾರನ ಜನ್ಮದಿನಕ್ಕೆ 3 ಹೊಸ ಕನಸುಗಳ ಅನಾವರಣ
ರವಿಚಂದ್ರನ್​
ಮದನ್​ ಕುಮಾರ್​
|

Updated on: May 30, 2021 | 8:21 AM

Share

ಕನ್ನಡ ಚಿತ್ರರಂಗದ ಕನಸುಗಾರ ರವಿಚಂದ್ರನ್​ ಅವರಿಗೆ ಇಂದು (ಮೇ 30) ಜನ್ಮದಿನ. ಇಂದು ಅವರು 60ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಸ್ಯಾಂಡಲ್​ವುಡ್​ನಲ್ಲಿ ಹಲವು ಹೊಸಹೊಸ ಕನಸುಗಳನ್ನು ಕಂಡು ಅವುಗಳನ್ನು ನನಸು ಮಾಡಿದ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಕೊರೊನಾ ವೈರಸ್​ ಹಾವಳಿ ಹೆಚ್ಚಾಗಿರುವುದರಿಂದ ಸಾರ್ವಜನಿಕವಾಗಿ ‘ಕ್ರೇಜಿ ಸ್ಟಾರ್​’ ಹುಟ್ಟುಹಬ್ಬವನ್ನು ಆಚರಿಸಲು ಅಭಿಮಾನಿಗಳಿಗೆ ಸಾಧ್ಯವಾಗುತ್ತಿಲ್ಲ. ಸೋಶಿಯಲ್​ ಮೀಡಿಯಾ ಮೂಲಕವೇ ಅವರಿಗೆ ಜನ್ಮದಿನದ ಶುಭ ಹಾರೈಸಲಾಗುತ್ತಿದೆ. ಬರ್ತ್​ಡೇ ಪ್ರಯುಕ್ತ ಅಭಿಮಾನಿಗಳಿಗೆ ರವಿಚಂದ್ರನ್​ ಒಂದು ಗಿಫ್ಟ್​ ನೀಡಿದ್ದಾರೆ.

ಬಣ್ಣದ ಲೋಕಕ್ಕೆ ಕಾಲಿಡುವ ಎಷ್ಟೋ ಜನರಿಗೆ ರವಿಚಂದ್ರನ್​ ಸ್ಫೂರ್ತಿ. ಸೋಲು-ಗೆಲುವು ಏನೇ ಇದ್ದರೂ ರವಿಚಂದ್ರನ್​ ಕನಸು ಕಾಣುವುದನ್ನು ನಿಲ್ಲಿಸಿಲ್ಲ. ಹೊಸ ಉತ್ಸಾಹದೊಂದಿಗೆ ಅವರು ಹೊಸ ಸಿನಿಮಾಗಳನ್ನು ಅನೌನ್ಸ್​ ಮಾಡುತ್ತಲೇ ಇದ್ದಾರೆ. ಸದ್ಯ ‘ರವಿ ಬೋಪಣ್ಣ’, ‘ಕನ್ನಡಿಗ’ ಚಿತ್ರಗಳಲ್ಲಿ ತೊಡಗಿಕೊಂಡಿರುವ ಅವರು ಇನ್ನೂ ಮೂರು ಹೊಸ ಸಿನಿಮಾಗಳ ಬಗ್ಗೆ ಒಂದು ವಿಶೇಷ ವಿಡಿಯೋ ಟೀಸರ್​ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ತಮ್ಮದೇ ಯೂಟ್ಯೂಬ್​ ಚಾನೆಲ್​ ಮೂಲಕ ಮೂರು ಹೊಸ ಪ್ರಾಜೆಕ್ಟ್​ಗಳ ಝಲಕ್​ ತೋರಿಸಿದ್ದಾರೆ.

ನಟನೆ ಜೊತೆಗೆ ನಿರ್ದೇಶನದಲ್ಲೂ ರವಿಚಂದ್ರನ್​ ಯಶಸ್ಸು ಕಂಡವರು. ಹಾಗಾಗಿ ಅವರ ನಿರ್ದೇಶನದ ಸಿನಿಮಾಗಳ ಬಗ್ಗೆ ಅಭಿಮಾನಿಗಳಿಗೆ ವಿಶೇಷವಾದ ನಿರೀಕ್ಷೆ ಇದ್ದೇ ಇರುತ್ತದೆ. ಸದ್ಯ ಅವರು ‘ರವಿ ಬೋಪಣ್ಣ’ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಆ ಬಳಿಕ ‘ಗಾಡ್​’, ‘60’ ಮತ್ತು ‘ಬ್ಯಾಡ್​ ಬಾಯ್ಸ್​’ ಎಂಬ ಸಿನಿಮಾಗಳನ್ನು ನಿರ್ದೇಶಿಸಲಿದ್ದಾರೆ. ಈ ಬಗ್ಗೆ ಅವರು ಟೀಸರ್​ ಮೂಲಕ ಸುಳಿವು ನೀಡಿದ್ದಾರೆ.

ಬಿಎಂ ಗಿರಿರಾಜ್​ ನಿರ್ದೇಶನದ ‘ಕನ್ನಡಿಗ’ ಸಿನಿಮಾದಲ್ಲಿ ರವಿಚಂದ್ರನ್​ ನಟಿಸುತ್ತಿದ್ದಾರೆ. ಕಳೆದ ವರ್ಷ ಲಾಕ್​ಡೌನ್​ ಸಡಿಲಿಕೆ ಆದಾಗ ಶೂಟಿಂಗ್​ ಆರಂಭಿಸಿದ ಈ ಸಿನಿಮಾ ಸೆನ್ಸಾರ್​ ಪ್ರಮಾಣಪತ್ರವನ್ನೂ ಪಡೆದುಕೊಂಡಿತ್ತು. ಇನ್ನೇನು ರಿಲೀಸ್​ ಬಗ್ಗೆ ಆಲೋಚನೆ​ ಮಾಡಬೇಕು ಎಂಬಷ್ಟರಲ್ಲಿ ಕೊರೊನಾ ವೈರಸ್​ ಎರಡನೇ ಅಲೆ ಆರಂಭ ಆಯಿತು. ಈಗ ಮತ್ತೆ ಎಲ್ಲ ಕಡೆ ಲಾಕ್​ಡೌನ್​ ಜಾರಿಯಲ್ಲಿದೆ. ಈ ಸಿನಿಮಾದಲ್ಲಿ ಎರಡು ಶೇಡ್​ನ ಪಾತ್ರವನ್ನು ರವಿಚಂದ್ರನ್​ ನಿಭಾಯಿಸಿದ್ದಾರೆ. ಈ ಚಿತ್ರಕ್ಕೆ ಒಂದು ಹಾಡು ಸೇರಿಸಲಾಗಿದ್ದು, ಅದರ ಶೂಟಿಂಗ್​ ಬಾಕಿ ಇದೆ. ರವಿಚಂದ್ರನ್​ ಜನ್ಮದಿನದ ಪ್ರಯುಕ್ತ ‘ಕನ್ನಡಿಗ’ನ ಮೊದಲ ಟೀಸರ್ ​ಇಂದು ಆನಂದ್​ ಆಡಿಯೋ ಯೂಟ್ಯೂಬ್​ ಚಾನೆಲ್​ನಲ್ಲಿ ಬಿಡುಗಡೆ ಆಗಲಿದೆ.

ಇದನ್ನೂ ಓದಿ:

ರವಿಚಂದ್ರನ್​ ಜನ್ಮದಿನಕ್ಕೆ ‘ಕನ್ನಡಿಗ’ ಟೀಸರ್​; ಹೇಗಿರಲಿದೆ ಗುಣಭದ್ರನ ಝಲಕ್?​

ಮತ್ತೆ ಹಳ್ಳಿ ಹೈದನಾಗೋಕೆ ರವಿಚಂದ್ರನ್​ ರೆಡಿ; ಆದರೆ ಸಿನಿಮಾ ಶುರುವಾಗೋಕೆ ಎದುರಾಯ್ತು ವಿಘ್ನ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?