AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Happy Birthday Ravichandran: ರವಿಚಂದ್ರನ್​ 60ನೇ ಹುಟ್ಟುಹಬ್ಬ; ಕನಸುಗಾರನ ಜನ್ಮದಿನಕ್ಕೆ 3 ಹೊಸ ಕನಸುಗಳ ಅನಾವರಣ

Ravichandran Birthday: ನಟನೆ ಜೊತೆಗೆ ನಿರ್ದೇಶನದಲ್ಲೂ ರವಿಚಂದ್ರನ್​ ಯಶಸ್ಸು ಕಂಡವರು. ಹಾಗಾಗಿ ಅವರ ನಿರ್ದೇಶಿಸುವ ಸಿನಿಮಾಗಳ ಬಗ್ಗೆ ಅಭಿಮಾನಿಗಳಿಗೆ ವಿಶೇಷವಾದ ನಿರೀಕ್ಷೆ ಇದ್ದೇ ಇರುತ್ತದೆ.

Happy Birthday Ravichandran: ರವಿಚಂದ್ರನ್​ 60ನೇ ಹುಟ್ಟುಹಬ್ಬ; ಕನಸುಗಾರನ ಜನ್ಮದಿನಕ್ಕೆ 3 ಹೊಸ ಕನಸುಗಳ ಅನಾವರಣ
ರವಿಚಂದ್ರನ್​
ಮದನ್​ ಕುಮಾರ್​
|

Updated on: May 30, 2021 | 8:21 AM

Share

ಕನ್ನಡ ಚಿತ್ರರಂಗದ ಕನಸುಗಾರ ರವಿಚಂದ್ರನ್​ ಅವರಿಗೆ ಇಂದು (ಮೇ 30) ಜನ್ಮದಿನ. ಇಂದು ಅವರು 60ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಸ್ಯಾಂಡಲ್​ವುಡ್​ನಲ್ಲಿ ಹಲವು ಹೊಸಹೊಸ ಕನಸುಗಳನ್ನು ಕಂಡು ಅವುಗಳನ್ನು ನನಸು ಮಾಡಿದ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಕೊರೊನಾ ವೈರಸ್​ ಹಾವಳಿ ಹೆಚ್ಚಾಗಿರುವುದರಿಂದ ಸಾರ್ವಜನಿಕವಾಗಿ ‘ಕ್ರೇಜಿ ಸ್ಟಾರ್​’ ಹುಟ್ಟುಹಬ್ಬವನ್ನು ಆಚರಿಸಲು ಅಭಿಮಾನಿಗಳಿಗೆ ಸಾಧ್ಯವಾಗುತ್ತಿಲ್ಲ. ಸೋಶಿಯಲ್​ ಮೀಡಿಯಾ ಮೂಲಕವೇ ಅವರಿಗೆ ಜನ್ಮದಿನದ ಶುಭ ಹಾರೈಸಲಾಗುತ್ತಿದೆ. ಬರ್ತ್​ಡೇ ಪ್ರಯುಕ್ತ ಅಭಿಮಾನಿಗಳಿಗೆ ರವಿಚಂದ್ರನ್​ ಒಂದು ಗಿಫ್ಟ್​ ನೀಡಿದ್ದಾರೆ.

ಬಣ್ಣದ ಲೋಕಕ್ಕೆ ಕಾಲಿಡುವ ಎಷ್ಟೋ ಜನರಿಗೆ ರವಿಚಂದ್ರನ್​ ಸ್ಫೂರ್ತಿ. ಸೋಲು-ಗೆಲುವು ಏನೇ ಇದ್ದರೂ ರವಿಚಂದ್ರನ್​ ಕನಸು ಕಾಣುವುದನ್ನು ನಿಲ್ಲಿಸಿಲ್ಲ. ಹೊಸ ಉತ್ಸಾಹದೊಂದಿಗೆ ಅವರು ಹೊಸ ಸಿನಿಮಾಗಳನ್ನು ಅನೌನ್ಸ್​ ಮಾಡುತ್ತಲೇ ಇದ್ದಾರೆ. ಸದ್ಯ ‘ರವಿ ಬೋಪಣ್ಣ’, ‘ಕನ್ನಡಿಗ’ ಚಿತ್ರಗಳಲ್ಲಿ ತೊಡಗಿಕೊಂಡಿರುವ ಅವರು ಇನ್ನೂ ಮೂರು ಹೊಸ ಸಿನಿಮಾಗಳ ಬಗ್ಗೆ ಒಂದು ವಿಶೇಷ ವಿಡಿಯೋ ಟೀಸರ್​ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ತಮ್ಮದೇ ಯೂಟ್ಯೂಬ್​ ಚಾನೆಲ್​ ಮೂಲಕ ಮೂರು ಹೊಸ ಪ್ರಾಜೆಕ್ಟ್​ಗಳ ಝಲಕ್​ ತೋರಿಸಿದ್ದಾರೆ.

ನಟನೆ ಜೊತೆಗೆ ನಿರ್ದೇಶನದಲ್ಲೂ ರವಿಚಂದ್ರನ್​ ಯಶಸ್ಸು ಕಂಡವರು. ಹಾಗಾಗಿ ಅವರ ನಿರ್ದೇಶನದ ಸಿನಿಮಾಗಳ ಬಗ್ಗೆ ಅಭಿಮಾನಿಗಳಿಗೆ ವಿಶೇಷವಾದ ನಿರೀಕ್ಷೆ ಇದ್ದೇ ಇರುತ್ತದೆ. ಸದ್ಯ ಅವರು ‘ರವಿ ಬೋಪಣ್ಣ’ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಆ ಬಳಿಕ ‘ಗಾಡ್​’, ‘60’ ಮತ್ತು ‘ಬ್ಯಾಡ್​ ಬಾಯ್ಸ್​’ ಎಂಬ ಸಿನಿಮಾಗಳನ್ನು ನಿರ್ದೇಶಿಸಲಿದ್ದಾರೆ. ಈ ಬಗ್ಗೆ ಅವರು ಟೀಸರ್​ ಮೂಲಕ ಸುಳಿವು ನೀಡಿದ್ದಾರೆ.

ಬಿಎಂ ಗಿರಿರಾಜ್​ ನಿರ್ದೇಶನದ ‘ಕನ್ನಡಿಗ’ ಸಿನಿಮಾದಲ್ಲಿ ರವಿಚಂದ್ರನ್​ ನಟಿಸುತ್ತಿದ್ದಾರೆ. ಕಳೆದ ವರ್ಷ ಲಾಕ್​ಡೌನ್​ ಸಡಿಲಿಕೆ ಆದಾಗ ಶೂಟಿಂಗ್​ ಆರಂಭಿಸಿದ ಈ ಸಿನಿಮಾ ಸೆನ್ಸಾರ್​ ಪ್ರಮಾಣಪತ್ರವನ್ನೂ ಪಡೆದುಕೊಂಡಿತ್ತು. ಇನ್ನೇನು ರಿಲೀಸ್​ ಬಗ್ಗೆ ಆಲೋಚನೆ​ ಮಾಡಬೇಕು ಎಂಬಷ್ಟರಲ್ಲಿ ಕೊರೊನಾ ವೈರಸ್​ ಎರಡನೇ ಅಲೆ ಆರಂಭ ಆಯಿತು. ಈಗ ಮತ್ತೆ ಎಲ್ಲ ಕಡೆ ಲಾಕ್​ಡೌನ್​ ಜಾರಿಯಲ್ಲಿದೆ. ಈ ಸಿನಿಮಾದಲ್ಲಿ ಎರಡು ಶೇಡ್​ನ ಪಾತ್ರವನ್ನು ರವಿಚಂದ್ರನ್​ ನಿಭಾಯಿಸಿದ್ದಾರೆ. ಈ ಚಿತ್ರಕ್ಕೆ ಒಂದು ಹಾಡು ಸೇರಿಸಲಾಗಿದ್ದು, ಅದರ ಶೂಟಿಂಗ್​ ಬಾಕಿ ಇದೆ. ರವಿಚಂದ್ರನ್​ ಜನ್ಮದಿನದ ಪ್ರಯುಕ್ತ ‘ಕನ್ನಡಿಗ’ನ ಮೊದಲ ಟೀಸರ್ ​ಇಂದು ಆನಂದ್​ ಆಡಿಯೋ ಯೂಟ್ಯೂಬ್​ ಚಾನೆಲ್​ನಲ್ಲಿ ಬಿಡುಗಡೆ ಆಗಲಿದೆ.

ಇದನ್ನೂ ಓದಿ:

ರವಿಚಂದ್ರನ್​ ಜನ್ಮದಿನಕ್ಕೆ ‘ಕನ್ನಡಿಗ’ ಟೀಸರ್​; ಹೇಗಿರಲಿದೆ ಗುಣಭದ್ರನ ಝಲಕ್?​

ಮತ್ತೆ ಹಳ್ಳಿ ಹೈದನಾಗೋಕೆ ರವಿಚಂದ್ರನ್​ ರೆಡಿ; ಆದರೆ ಸಿನಿಮಾ ಶುರುವಾಗೋಕೆ ಎದುರಾಯ್ತು ವಿಘ್ನ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ