AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರವಿಚಂದ್ರನ್​ ಜನ್ಮದಿನಕ್ಕೆ ‘ಕನ್ನಡಿಗ’ ಟೀಸರ್​; ಹೇಗಿರಲಿದೆ ಗುಣಭದ್ರನ ಝಲಕ್?​

Ravichandran Birthday: ಕನ್ನಡಿಗ ಸಿನಿಮಾದಲ್ಲಿ ರವಿಚಂದ್ರನ್​ ಅವರಿಗೆ ಎರಡು ಗೆಟಪ್​ ಇರಲಿದೆ. ಆ ಪೈಕಿ ಗುಣಭದ್ರನ ಗೆಟಪ್​ನ ಝಲಕ್​ ತೋರಿಸಲು ಮೊದಲ ಟೀಸರ್​ ಭಾನುವಾರ (ಮೇ 30) ಬಿಡುಗಡೆ ಆಗುತ್ತಿದೆ.

ರವಿಚಂದ್ರನ್​ ಜನ್ಮದಿನಕ್ಕೆ ‘ಕನ್ನಡಿಗ’ ಟೀಸರ್​; ಹೇಗಿರಲಿದೆ ಗುಣಭದ್ರನ ಝಲಕ್?​
ಕನ್ನಡಿಗ ಸಿನಿಮಾದಲ್ಲಿ ರವಿಚಂದ್ರನ್​
Follow us
ಮದನ್​ ಕುಮಾರ್​
|

Updated on: May 29, 2021 | 1:27 PM

ಚಿತ್ರರಂಗದಲ್ಲಿ ರವಿಚಂದ್ರನ್​ ಅವರ ಅನುಭವ ಅಪಾರ. ಹಲವು ವರ್ಷಗಳಿಂದ ಬಣ್ಣದ ಲೋಕದಲ್ಲಿ ಸಕ್ರಿಯವಾಗಿರುವ ಅವರು ನೂರಾರು ಬಗೆಯ ಪಾತ್ರಗಳನ್ನು ಮಾಡಿದ್ದಾರೆ. ಅವೆಲ್ಲಕ್ಕಿಂತಲೂ ಭಿನ್ನವಾದ ಪಾತ್ರವನ್ನು ‘ಕನ್ನಡಿಗ’ ಚಿತ್ರದಲ್ಲಿ ಅವರು ನಿಭಾಯಿಸಿದ್ದಾರೆ. ಲಿಪಿಕಾರ ಗುಣಭದ್ರನ ಪಾತ್ರದಲ್ಲಿ ರವಿಚಂದ್ರನ್​ ಕಾಣಿಸಿಕೊಳ್ಳುತ್ತಿದ್ದು, ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಗಿರಿರಾಜ್​ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಕ್ರೇಜಿಸ್ಟಾರ್​ ಜನ್ಮದಿನದ ಪ್ರಯುಕ್ತ ಮೇ 30ರಂದು ‘ಕನ್ನಡಿಗ’ ಸಿನಿಮಾದ ಮೊದಲ ಟೀಸರ್​ ಬಿಡುಗಡೆ ಆಗಲಿದೆ. ರವಿಮಾಮನ ಜನ್ಮದಿನಕ್ಕೆ ಅಭಿಮಾನಿಗಳಿಗೆ ಈ ಮೂಲಕ ಉಡುಗೊರೆ ಸಿಗುತ್ತಿದೆ.

ಈ ಸಿನಿಮಾದಲ್ಲಿ ರವಿಚಂದ್ರನ್​ ಅವರಿಗೆ ಎರಡು ಗೆಟಪ್​ ಇರಲಿದೆ. ಆ ಪೈಕಿ ಗುಣಭದ್ರನ ಗೆಟಪ್​ನ ಝಲಕ್​ ತೋರಿಸಲು ಮೊದಲ ಟೀಸರ್​ ಭಾನುವಾರ (ಮೇ 30) ಬಿಡುಗಡೆ ಆಗುತ್ತಿದೆ. ಈ ಟೀಸರ್​ ಮೂಲಕ ‘ಕನ್ನಡಿಗ’ ಚಿತ್ರತಂಡ ರವಿಚಂದ್ರನ್​ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಲಿದೆ. ಆನಂದ್​ ಆಡಿಯೋ ಯೂಟ್ಯೂಬ್​ ಚಾನೆಲ್​ನಲ್ಲಿ ಟೀಸರ್​ ಹೊರಬರಲಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ಸಿನಿಮಾ ಇಷ್ಟುಹೊತ್ತಿಗೆ ಬಿಡುಗಡೆ ಆಗಬೇಕಿತ್ತು. ಆದರೆ ಕೊರೊನಾ ವೈರಸ್​ ಲಾಕ್​ಡೌನ್​ ಕಾರಣಕ್ಕೆ ರಿಲೀಸ್​ ತಡವಾಗುತ್ತಿದೆ.

2020ರಲ್ಲಿ ಲಾಕ್​ಡೌನ್​ ಸಡಿಲಿಕೆ ಆದ ಬಳಿಕ ‘ಕನ್ನಡಿಗ’ ಸಿನಿಮಾದ ಶೂಟಿಂಗ್​ ಆರಂಭ ಆಗಿತ್ತು. ಪ್ಲ್ಯಾನ್​ ಪ್ರಕಾರವೇ ವೇಗವಾಗಿ ಚಿತ್ರದ ಕೆಲಸಗಳನ್ನು ಮುಗಿಸಿಕೊಂಡು ಸೆನ್ಸಾರ್​ ಪ್ರಮಾಣಪತ್ರವನ್ನೂ ಕಳೆದ ಡಿಸೆಂಬರ್​ ವೇಳೆಗೆ ಪಡೆದುಕೊಳ್ಳಲಾಗಿತ್ತು. ಇನ್ನೇನು ರಿಲೀಸ್​ ಬಗ್ಗೆ ಆಲೋಚನೆ​ ಮಾಡಬೇಕು ಎಂಬಷ್ಟರಲ್ಲಿ ಕೊರೊನಾ ವೈರಸ್​ ಎರಡನೇ ಅಲೆ ಆರಂಭ ಆಯಿತು. ಈಗ ಮತ್ತೆ ಎಲ್ಲ ಕಡೆ ಲಾಕ್​ಡೌನ್​ ಜಾರಿಯಲ್ಲಿದೆ.

‘ಸದ್ಯಕ್ಕಂತೂ ನಾವು ಓಟಿಟಿ ರಿಲೀಸ್​ ಬಗ್ಗೆ ಆಲೋಚನೆ ಮಾಡಿಲ್ಲ. ಈ ಸಿನಿಮಾ ತಯಾರಾಗಿರುವುದೇ ದೊಡ್ಡ ಪರದೆಯ ಅನುಭವಕ್ಕಾಗಿ. ಮುಂದೆ ಲಾಕ್​ಡೌನ್​ ಸಡಿಲಿಕೆ ಆಗಿ ಸರ್ಕಾರ ಯಾವ ರೀತಿಯ ನಿಯಮಗಳನ್ನು ಜಾರಿ ಮಾಡಲಿದೆ ಎಂಬುದನ್ನು ನೋಡಿಕೊಂಡು ರಿಲೀಸ್​ ಪ್ಲ್ಯಾನ್​ ಮಾಡಬೇಕಿದೆ’ ಎಂದಿದ್ದಾರೆ ನಿರ್ದೇಶಕ ಗಿರಿರಾಜ್​. ಈ ಸಿನಿಮಾದಲ್ಲಿ ಹ್ಯಾಟ್ರಿಕ್​ ಹೀರೋ ಶಿವರಾಜ್​ ಕುಮಾರ್​ ಅವರು ಒಂದು ಹಾಡನ್ನು ಹಾಡಿದ್ದಾರೆ. ಅದರ ಚಿತ್ರೀಕರಣ ಬಾಕಿ ಇದೆ.

ಇದನ್ನೂ ಓದಿ:

‘ದೃಶ್ಯ 2’ ಮಾಡೋಕೆ ರವಿಚಂದ್ರನ್​ ರೆಡಿ! ಯುಗಾದಿ ಹಬ್ಬದ ದಿನವೇ ‘ಕ್ರೇಜಿ ಸ್ಟಾರ್​’ ಅಭಿಮಾನಿಗಳಿಗೆ ಸಿಹಿ ಸುದ್ದಿ

Ravichandran: ರವಿಚಂದ್ರನ್​ ಸಿಗರೇಟ್​ ಸೇದ್ತಾರಾ? ಸೋಶಿಯಲ್​ ಮೀಡಿಯಾಗೆ ಬಂದು ಸತ್ಯ ಬಹಿರಂಗಪಡಿಸಿದ ಕ್ರೇಜಿ ಸ್ಟಾರ್​!

ಗೂಗಲ್ ನಂಬಿ, ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ನೇತಾಡಿದ ಕಾರು
ಗೂಗಲ್ ನಂಬಿ, ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ನೇತಾಡಿದ ಕಾರು
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​