AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರವಿಚಂದ್ರನ್​ ಜನ್ಮದಿನಕ್ಕೆ ‘ಕನ್ನಡಿಗ’ ಟೀಸರ್​; ಹೇಗಿರಲಿದೆ ಗುಣಭದ್ರನ ಝಲಕ್?​

Ravichandran Birthday: ಕನ್ನಡಿಗ ಸಿನಿಮಾದಲ್ಲಿ ರವಿಚಂದ್ರನ್​ ಅವರಿಗೆ ಎರಡು ಗೆಟಪ್​ ಇರಲಿದೆ. ಆ ಪೈಕಿ ಗುಣಭದ್ರನ ಗೆಟಪ್​ನ ಝಲಕ್​ ತೋರಿಸಲು ಮೊದಲ ಟೀಸರ್​ ಭಾನುವಾರ (ಮೇ 30) ಬಿಡುಗಡೆ ಆಗುತ್ತಿದೆ.

ರವಿಚಂದ್ರನ್​ ಜನ್ಮದಿನಕ್ಕೆ ‘ಕನ್ನಡಿಗ’ ಟೀಸರ್​; ಹೇಗಿರಲಿದೆ ಗುಣಭದ್ರನ ಝಲಕ್?​
ಕನ್ನಡಿಗ ಸಿನಿಮಾದಲ್ಲಿ ರವಿಚಂದ್ರನ್​
ಮದನ್​ ಕುಮಾರ್​
|

Updated on: May 29, 2021 | 1:27 PM

Share

ಚಿತ್ರರಂಗದಲ್ಲಿ ರವಿಚಂದ್ರನ್​ ಅವರ ಅನುಭವ ಅಪಾರ. ಹಲವು ವರ್ಷಗಳಿಂದ ಬಣ್ಣದ ಲೋಕದಲ್ಲಿ ಸಕ್ರಿಯವಾಗಿರುವ ಅವರು ನೂರಾರು ಬಗೆಯ ಪಾತ್ರಗಳನ್ನು ಮಾಡಿದ್ದಾರೆ. ಅವೆಲ್ಲಕ್ಕಿಂತಲೂ ಭಿನ್ನವಾದ ಪಾತ್ರವನ್ನು ‘ಕನ್ನಡಿಗ’ ಚಿತ್ರದಲ್ಲಿ ಅವರು ನಿಭಾಯಿಸಿದ್ದಾರೆ. ಲಿಪಿಕಾರ ಗುಣಭದ್ರನ ಪಾತ್ರದಲ್ಲಿ ರವಿಚಂದ್ರನ್​ ಕಾಣಿಸಿಕೊಳ್ಳುತ್ತಿದ್ದು, ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಗಿರಿರಾಜ್​ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಕ್ರೇಜಿಸ್ಟಾರ್​ ಜನ್ಮದಿನದ ಪ್ರಯುಕ್ತ ಮೇ 30ರಂದು ‘ಕನ್ನಡಿಗ’ ಸಿನಿಮಾದ ಮೊದಲ ಟೀಸರ್​ ಬಿಡುಗಡೆ ಆಗಲಿದೆ. ರವಿಮಾಮನ ಜನ್ಮದಿನಕ್ಕೆ ಅಭಿಮಾನಿಗಳಿಗೆ ಈ ಮೂಲಕ ಉಡುಗೊರೆ ಸಿಗುತ್ತಿದೆ.

ಈ ಸಿನಿಮಾದಲ್ಲಿ ರವಿಚಂದ್ರನ್​ ಅವರಿಗೆ ಎರಡು ಗೆಟಪ್​ ಇರಲಿದೆ. ಆ ಪೈಕಿ ಗುಣಭದ್ರನ ಗೆಟಪ್​ನ ಝಲಕ್​ ತೋರಿಸಲು ಮೊದಲ ಟೀಸರ್​ ಭಾನುವಾರ (ಮೇ 30) ಬಿಡುಗಡೆ ಆಗುತ್ತಿದೆ. ಈ ಟೀಸರ್​ ಮೂಲಕ ‘ಕನ್ನಡಿಗ’ ಚಿತ್ರತಂಡ ರವಿಚಂದ್ರನ್​ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಲಿದೆ. ಆನಂದ್​ ಆಡಿಯೋ ಯೂಟ್ಯೂಬ್​ ಚಾನೆಲ್​ನಲ್ಲಿ ಟೀಸರ್​ ಹೊರಬರಲಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ಸಿನಿಮಾ ಇಷ್ಟುಹೊತ್ತಿಗೆ ಬಿಡುಗಡೆ ಆಗಬೇಕಿತ್ತು. ಆದರೆ ಕೊರೊನಾ ವೈರಸ್​ ಲಾಕ್​ಡೌನ್​ ಕಾರಣಕ್ಕೆ ರಿಲೀಸ್​ ತಡವಾಗುತ್ತಿದೆ.

2020ರಲ್ಲಿ ಲಾಕ್​ಡೌನ್​ ಸಡಿಲಿಕೆ ಆದ ಬಳಿಕ ‘ಕನ್ನಡಿಗ’ ಸಿನಿಮಾದ ಶೂಟಿಂಗ್​ ಆರಂಭ ಆಗಿತ್ತು. ಪ್ಲ್ಯಾನ್​ ಪ್ರಕಾರವೇ ವೇಗವಾಗಿ ಚಿತ್ರದ ಕೆಲಸಗಳನ್ನು ಮುಗಿಸಿಕೊಂಡು ಸೆನ್ಸಾರ್​ ಪ್ರಮಾಣಪತ್ರವನ್ನೂ ಕಳೆದ ಡಿಸೆಂಬರ್​ ವೇಳೆಗೆ ಪಡೆದುಕೊಳ್ಳಲಾಗಿತ್ತು. ಇನ್ನೇನು ರಿಲೀಸ್​ ಬಗ್ಗೆ ಆಲೋಚನೆ​ ಮಾಡಬೇಕು ಎಂಬಷ್ಟರಲ್ಲಿ ಕೊರೊನಾ ವೈರಸ್​ ಎರಡನೇ ಅಲೆ ಆರಂಭ ಆಯಿತು. ಈಗ ಮತ್ತೆ ಎಲ್ಲ ಕಡೆ ಲಾಕ್​ಡೌನ್​ ಜಾರಿಯಲ್ಲಿದೆ.

‘ಸದ್ಯಕ್ಕಂತೂ ನಾವು ಓಟಿಟಿ ರಿಲೀಸ್​ ಬಗ್ಗೆ ಆಲೋಚನೆ ಮಾಡಿಲ್ಲ. ಈ ಸಿನಿಮಾ ತಯಾರಾಗಿರುವುದೇ ದೊಡ್ಡ ಪರದೆಯ ಅನುಭವಕ್ಕಾಗಿ. ಮುಂದೆ ಲಾಕ್​ಡೌನ್​ ಸಡಿಲಿಕೆ ಆಗಿ ಸರ್ಕಾರ ಯಾವ ರೀತಿಯ ನಿಯಮಗಳನ್ನು ಜಾರಿ ಮಾಡಲಿದೆ ಎಂಬುದನ್ನು ನೋಡಿಕೊಂಡು ರಿಲೀಸ್​ ಪ್ಲ್ಯಾನ್​ ಮಾಡಬೇಕಿದೆ’ ಎಂದಿದ್ದಾರೆ ನಿರ್ದೇಶಕ ಗಿರಿರಾಜ್​. ಈ ಸಿನಿಮಾದಲ್ಲಿ ಹ್ಯಾಟ್ರಿಕ್​ ಹೀರೋ ಶಿವರಾಜ್​ ಕುಮಾರ್​ ಅವರು ಒಂದು ಹಾಡನ್ನು ಹಾಡಿದ್ದಾರೆ. ಅದರ ಚಿತ್ರೀಕರಣ ಬಾಕಿ ಇದೆ.

ಇದನ್ನೂ ಓದಿ:

‘ದೃಶ್ಯ 2’ ಮಾಡೋಕೆ ರವಿಚಂದ್ರನ್​ ರೆಡಿ! ಯುಗಾದಿ ಹಬ್ಬದ ದಿನವೇ ‘ಕ್ರೇಜಿ ಸ್ಟಾರ್​’ ಅಭಿಮಾನಿಗಳಿಗೆ ಸಿಹಿ ಸುದ್ದಿ

Ravichandran: ರವಿಚಂದ್ರನ್​ ಸಿಗರೇಟ್​ ಸೇದ್ತಾರಾ? ಸೋಶಿಯಲ್​ ಮೀಡಿಯಾಗೆ ಬಂದು ಸತ್ಯ ಬಹಿರಂಗಪಡಿಸಿದ ಕ್ರೇಜಿ ಸ್ಟಾರ್​!

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ