AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ರವಿಚಂದ್ರನ್​ ತಾಯಿ ನಿಧನ: ಪಟ್ಟಮ್ಮಾಳ್​ ವೀರಸ್ವಾಮಿ ಇನ್ನಿಲ್ಲ

ರವಿಚಂದ್ರನ್​ ತಾಯಿ ಪಟ್ಟಮ್ಮಾಳ್​ ವೀರಸ್ವಾಮಿ ನಿಧನಕ್ಕೆ ಚಿತ್ರರಂಗದ ಅನೇಕರು ಕಂಬನಿ ಮಿಡಿಯುತ್ತಿದ್ದಾರೆ. ಇಂದು (ಫೆ.28) ಅಂತ್ಯಕ್ರಿಯೆ ನಡೆಯಲಿದೆ.

Breaking News: ರವಿಚಂದ್ರನ್​ ತಾಯಿ ನಿಧನ: ಪಟ್ಟಮ್ಮಾಳ್​ ವೀರಸ್ವಾಮಿ ಇನ್ನಿಲ್ಲ
ರವಿಚಂದ್ರನ್ ತಾಯಿ ಪಟ್ಟಾಮ್ಮಾಳ್ ವೀರಸ್ವಾಮಿ
TV9 Web
| Edited By: |

Updated on:Feb 28, 2022 | 10:29 AM

Share

ಖ್ಯಾತ ನಟ ರವಿಚಂದ್ರನ್ ಅವರ ತಾಯಿ ಪಟ್ಟಮ್ಮಾಳ್​ ವೀರಸ್ವಾಮಿ (Pattammal Veeraswamy) ಅವರು ಇಂದು (ಫೆ.28) ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಪಟ್ಟಮ್ಮಾಳ್​ ವೀರಸ್ವಾಮಿ ಅವರು ಕೊನೆಯುಸಿರು ಎಳೆದಿದ್ದಾರೆ. ರವಿಚಂದ್ರನ್​ ತಾಯಿ (Ravichandran Mother) ನಿಧನಕ್ಕೆ ಚಿತ್ರರಂಗದ ಅನೇಕರು ಕಂಬನಿ ಮಿಡಿಯುತ್ತಿದ್ದಾರೆ. ಪಟ್ಟಮ್ಮಾಳ್​ ವೀರಸ್ವಾಮಿ ಅವರನ್ನು ಫೆ.28ರ ಮುಂಜಾನೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 6.30ರ ಸುಮಾರಿಗೆ ಅವರು ನಿಧನ ಹೊಂದಿದರು. ಬೆಳಗ್ಗೆ 10.30ಕ್ಕೆ ಪಾರ್ಥಿವ ಶರೀರವನ್ನು ರಾಜಾಜಿನಗರದ ನಿವಾಸಕ್ಕೆ ತರಲಾಗುತ್ತದೆ. ಅಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಇಂದು ಸಂಜೆಯೇ ಅಂತ್ಯಕ್ರಿಯೆ ನಡೆಯಲಿದೆ ಎಂದು ರವಿಚಂದ್ರನ್​ (Ravichandran) ಕುಟುಂಬದವರು ತಿಳಿಸಿದ್ದಾರೆ.

ಅಂತಿಮ ದರ್ಶನ ಪಡೆಯಲಿರುವ ಸೆಲೆಬ್ರಿಟಿಗಳು: ಕನ್ನಡ ಚಿತ್ರರಂಗಕ್ಕೆ ರವಿಚಂದ್ರನ್​ ಕುಟುಂಬದವರು ನೀಡಿರುವ ಕೊಡುಗೆ ಅಪಾರ. ರವಿಚಂದ್ರನ್​ ತಂದೆ ವೀರಾಸ್ವಾಮಿ ಅವರು ಹಲವಾರು ಸಿನಿಮಾಗಳನ್ನು ನಿರ್ಮಿಸಿ ಜನಪ್ರಿಯರಾಗಿದ್ದರು. ರವಿಚಂದ್ರನ್​ ಕುಟುಂಬದಿಂದ ನಿರ್ಮಾಣ ಆದ ಸಿನಿಮಾಗಳಿಂದ ಭವಿಷ್ಯ ಕಟ್ಟಿಕೊಂಡ ಕಲಾವಿದರು ಮತ್ತು ತಂತ್ರಜ್ಞರ ಸಂಖ್ಯೆ ದೊಡ್ಡದಿದೆ. ಹಾಗಾಗಿ ಈ ಕುಟುಂಬದ ಮೇಲೆ ಎಲ್ಲರಿಗೂ ಅಪಾರ ಪ್ರೀತಿ, ಗೌರವ ಇದೆ. ಇಂದು ಬೆಳಗ್ಗೆ 10.30ರ ಬಳಿಕ ರವಿಚಂದ್ರನ್​ ನಿವಾಸದಲ್ಲಿ ಪಟ್ಟಮ್ಮಾಳ್​ ವೀರಸ್ವಾಮಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಬಂದು ಅಂತಿಮ ನಮನ ಸಲ್ಲಿಸಲಿದ್ದಾರೆ.

ರವಿಚಂದ್ರನ್​ ಅವರ ತಾಯಿ ಹಲವು ವರ್ಷಗಳಿಂದ ಹಾಸಿಗೆ ಹಿಡಿದಿದ್ದರು. ಈ ಬಗ್ಗೆ ಟಿವಿ9 ಸಂದರ್ಶನದಲ್ಲಿ ರವಿಚಂದ್ರನ್​ ಮಾತನಾಡಿದ್ದರು. ‘ಅಮ್ಮನಿಗೆ ಅಲ್ಜಮೈರ್​ ಆಗಿದೆ. ಎಲ್ಲರನ್ನೂ ಆಗಾಗ ಮರೆಯುತ್ತಾರೆ. ಆದರೆ ಯಾರನ್ನು ಮರೆತರೂ ನನ್ನನ್ನು ಮತ್ತು ನನ್ನ ಹೆಂಡತಿಯನ್ನು ಅವರು ಮರೆತಿಲ್ಲ. ನನ್ನ ಹೆಂಡತಿಯೇ ಅವರನ್ನು ಹೆಚ್ಚು ಕಾಳಜಿಯಿಂದ ನೋಡಿಕೊಳ್ಳುವುದು. ಅವಳಿಗೆ ಹ್ಯಾಟ್ಸ್​ ಆಫ್​ ಹೇಳಬೇಕು. ಎಲ್ಲವನ್ನೂ ಹಾಸಿಗೆಯಲ್ಲೇ ಮಾಡಿಕೊಳ್ಳುವ ಅಮ್ಮನನ್ನು ನಿಭಾಯಿಸುವುದು ಅಷ್ಟು ಸುಲಭ ಅಲ್ಲ. ನನ್ನ ಹೆಂಡತಿ ಒಂದು ದಿನವೂ ಬೇಸರ ಮಾಡಿಕೊಂಡಿಲ್ಲ’ ಎಂದು ರವಿಚಂದ್ರನ್​ ಹೇಳಿದ್ದರು.

ಹೆಚ್ಚಿನ ಮಾಹಿತಿ ಪಡೆಯಲಾಗುತ್ತಿದೆ. ಅಪ್ಡೇಟ್ ತಿಳಿಯಲು ಪುಟ ರೀಫ್ರೆಶ್ ಮಾಡಿ…

ಇದನ್ನೂ ಓದಿ:

ಪುನೀತ್ ಮಾವ, ಅಶ್ವಿನಿ ತಂದೆ ಹೃದಯಾಘಾತದಿಂದ ನಿಧನ; ರಾಜ್​ ಕುಟುಂಬದಲ್ಲಿ ಮತ್ತೆ ಆವರಿಸಿದ ದುಃಖ

‘ಕಲಾತಪಸ್ವಿ’ ರಾಜೇಶ್​ ಅಂತ್ಯಸಂಸ್ಕಾರ; ಮಾವನ ಅಂತಿಮ ಯಾತ್ರೆಗೆ ಹೆಗಲು ಕೊಟ್ಟ ಅರ್ಜುನ್​ ಸರ್ಜಾ

Published On - 9:13 am, Mon, 28 February 22

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು