AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಿಧ ನಗರಗಳಲ್ಲಿ ಬಿಡುಗಡೆ ಆಗಲಿದೆ ರವಿಚಂದ್ರನ್​ ನಟನೆಯ ‘ದ ಜಡ್ಜ್​ಮೆಂಟ್​’ ಸಿನಿಮಾ

‘ದ ಜಡ್ಜ್​ಮೆಂಟ್​’ ಟ್ರೇಲರ್​ ರಿಲೀಸ್​ ಆಗಿದೆ. ರವಿಚಂದ್ರನ್​ ಅವರ ವೃತ್ತಿ ಜೀವನದಲ್ಲಿ ಇದು ಒಂದು ಭಿನ್ನ ಸಿನಿಮಾ. ‘ಸಾಮಾನ್ಯವಾಗಿ ನನ್ನ ಸಿನಿಮಾ‌ಗಳು ಹಾಡುಗಳಿಗೆ ಫೇಮಸ್​. ಆದರೆ ಈ ಸಿನಿಮಾದಲ್ಲಿ ನನಗೆ ಒಂದೂ ಸಾಂಗ್​ ಇಲ್ಲ. ಸಿನಿಮಾದ ಶೀರ್ಷಿಕೆ ‘ದ ಜಡ್ಜ್​ಮೆಂಟ್’. ಆದರೆ ಪ್ರೇಕ್ಷಕರು ನೀಡುವ ಜಡ್ಜ್​ಮೆಂಟ್ ಅಂತಿಮ’ ಎಂದು ರವಿಚಂದ್ರನ್ ಹೇಳಿದ್ದಾರೆ.

ವಿವಿಧ ನಗರಗಳಲ್ಲಿ ಬಿಡುಗಡೆ ಆಗಲಿದೆ ರವಿಚಂದ್ರನ್​ ನಟನೆಯ ‘ದ ಜಡ್ಜ್​ಮೆಂಟ್​’ ಸಿನಿಮಾ
ಲಕ್ಷ್ಮಿ ಗೋಪಾಲಸ್ವಾಮಿ, ರವಿಚಂದ್ರನ್​, ಮೇಘನಾ ಗಾಂವ್ಕರ್
ಮದನ್​ ಕುಮಾರ್​
|

Updated on: May 17, 2024 | 7:52 PM

Share

ಲೋಕಸಭಾ ಚುನಾವಣೆ ಕಾವು ಕಡಿಮೆ ಆಗುತ್ತಿದ್ದಂತೆಯೇ ಸಿನಿಮಾರಂಗದ ಚಟುವಟಿಕೆಗಳು ಗರಿಗೆದರಲಿವೆ. ಅನೇಕ ಸಿನಿಮಾಗಳು (Kannada Cinema) ಬಿಡುಗಡೆಗೆ ಸಜ್ಜಾಗಿವೆ. ‘ಜಿ9 ಕಮ್ಯುನಿಕೇಷನ್​ ಮೀಡಿಯಾ ಆ್ಯಂಡ್​ ಎಂಟರ್​ಟೇನ್ಮೆಂಟ್​’ ಸಂಸ್ಥೆಯ ಮೂಲಕ ನಿರ್ಮಾಣ ಆಗಿರುವ ಕನ್ನಡದ ‘ದ ಜಡ್ಜ್​ಮೆಂಟ್’ ಸಿನಿಮಾ (The Judgement Movie) ಕೂಡ ಬಿಡುಗಡೆ ದಿನಾಂಕ ಘೋಷಿಸಿಕೊಂಡಿದೆ. ಮೇ 24ರಂದು ಈ ಸಿನಿಮಾ ರಿಲೀಸ್​ ಆಗಲಿದೆ. ‘ಕ್ರೇಜಿ ಸ್ಟಾರ್​’ ರವಿಚಂದ್ರನ್ (Ravichandran) ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಇತ್ತೀಚೆಗೆ ‘ದ ಜಡ್ಜ್​ಮೆಂಟ್​’ ಸಿನಿಮಾ ಟ್ರೇಲರ್​ ಅನಾವರಣ ಮಾಡಲಾಯಿತು. ಖ್ಯಾತ ನಿರ್ಮಾಪಕ ಉದಯ್ ಕೆ. ಮಹ್ತಾ ಅವರು ಟ್ರೇಲರ್ ಬಿಡುಗಡೆ ಮಾಡಿದರು. ಈ ಸಿನಿಮಾದಲ್ಲಿ ರವಿಚಂದ್ರನ್ ಅವರು ಲಾಯರ್​ ಪಾತ್ರ ಮಾಡಿದ್ದಾರೆ ಎಂಬುದು ವಿಶೇಷ.

ಗುರುರಾಜ ಕುಲಕರ್ಣಿ ಅವರು ‘ದ ಜಡ್ಜ್​ಮೆಂಟ್​’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ‘ರವಿಚಂದ್ರನ್ ಅವರಿಗಾಗಿಯೇ ಮಾಡಿರುವ ಕಥೆ ಇದು’ ಎಂದು ಅವರು ಹೇಳಿದ್ದಾರೆ. ಆ ಮೂಲಕ ಕುತೂಹಲ ಹೆಚ್ಚಿಸಿದ್ದಾರೆ. ‘ಲೀಗಲ್ ಥ್ರಿಲ್ಲರ್ ಜಾನರ್​ನ ಸಿನಿಮಾ ಇದು. ‘ಯುದ್ಧಕಾಂಡ’ ಸಿನಿಮಾದಲ್ಲಿ ಲಾಯರ್​ ಪಾತ್ರ ಮಾಡಿದ ರವಿಚಂದ್ರನ್ ಅವರ ನಟನೆ ಇಂದಿಗೂ ಜನಪ್ರಿಯವಾಗಿದೆ. ಹಲವು ವರ್ಷಗಳ ಬಳಿಕ ಈ‌ ಸಿನಿಮಾದಲ್ಲಿ ಮತ್ತೆ ಲಾಯರ್​ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದಾರೆ’ ಎಂದು ಗುರುರಾಜ ಕುಲಕರ್ಣಿ ಹೇಳಿದರು.

ಇದನ್ನೂ ಓದಿ: ‘ಚುನಾವಣೆ ಪ್ರಚಾರಕ್ಕೆ ನನ್ನ ಜಾತಿ ಅಡ್ಡ ಬರುತ್ತೆ ಅನ್ಸುತ್ತೆ’: ರವಿಚಂದ್ರನ್​

ಕರ್ನಾಟಕ ಮಾತ್ರವಲ್ಲದೆ ದೆಹಲಿ, ಮುಂಬೈ, ಗೋವಾ, ಲಕ್ನೋ, ಆಂಧ್ರ ಪ್ರದೇಶ ಸೇರಿದಂತೆ ದೇಶದ ಅನೇಕ ನಗರಗಳಲ್ಲಿ ಈ ಸಿನಿಮಾವನ್ನು ‘ರಿಲಯನ್ಸ್ ಎಂಟರ್​ಟೇನ್ಮೆಂಟ್’ ಸಂಸ್ಥೆಯು ಬಿಡುಗಡೆ ಮಾಡಲಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ. ಗುರುರಾಜ್ ಕುಲಕರ್ಣಿ (ನಾಡಗೌಡ), ಶರದ್ ನಾಡಗೌಡ, ರಾಮು ರಾಯಚೂರು, ವಿಶ್ವನಾಥ್ ಗುಪ್ತ, ರಾಜಶೇಖರ ಪಾಟೀಲ್, ಪ್ರತಿಮಾ ಬಿರಾದಾರ್ ಅವರು ಟ್ರೇಲರ್​ ಬಿಡುಗಡೆ ಕಾರ್ಯಕ್ರಮದಲ್ಲಿ ಹಾಜರಿದ್ದರು.

‘ದ ಜಡ್ಜ್​ಮೆಂಟ್​’ ಸಿನಿಮಾ ಟ್ರೇಲರ್​:

ಈ ಸಿನಿಮಾದಲ್ಲಿ ರವಿಚಂದ್ರನ್​ ಜೊತೆ ಲಕ್ಷ್ಮೀ ಗೋಪಾಲಸ್ವಾಮಿ, ಧನ್ಯಾ ರಾಮ್​ಕುಮರ್​, ದಿಗಂತ್ ಮಂಚಾಲೆ, ಮೇಘನಾ ಗಾಂವ್ಕರ್, ಪ್ರಕಾಶ್ ಬೆಳವಾಡಿ, ರಂಗಾಯಣ ರಘು, ರವಿಶಂಕರ್ ಗೌಡ, ಕೃಷ್ಣ ಹೆಬ್ಬಾಳೆ, ರಾಜೇಂದ್ರ ಕಾರಂತ್, ರೇಖಾ ಕೂಡ್ಲಗಿ ಸೇರಿದಂತೆ ಅನೇಕ ಕಲಾವಿದರು ಅಭಿನಯಿಸಿದ್ದಾರೆ. ಅನೂಪ್ ಸೀಳಿನ್ ಅವರು ‘ದ ಜಡ್ಜ್​ಮೆಂಟ್​’ ಸಿನಿಮಾಗೆ ಸಂಗೀತ ನೀಡಿದ್ದು, ಪ್ರಮೋದ್ ಮರವಂತೆ ಸಾಹಿತ್ಯ ಬರೆದಿದ್ದಾರೆ. ಎಂ.ಎಸ್. ರಮೇಶ್ ಸಂಭಾಷಣೆ ಬರೆದಿದ್ದಾರೆ. ಪಿ.ಕೆ.ಹೆಚ್. ದಾಸ್ ಚಾಯಾಗ್ರಹಣ ಮಾಡಿದ್ದಾರೆ. ಕೆಂಪರಾಜ್ ಅವರ ಸಂಕಲನ ಈ ಚಿತ್ರಕ್ಕಿದೆ. ವಾಸುದೇವ ಮೂರ್ತಿ ಅವರು ಚಿತ್ರಕಥೆ ಬರೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?