AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಿಧ ನಗರಗಳಲ್ಲಿ ಬಿಡುಗಡೆ ಆಗಲಿದೆ ರವಿಚಂದ್ರನ್​ ನಟನೆಯ ‘ದ ಜಡ್ಜ್​ಮೆಂಟ್​’ ಸಿನಿಮಾ

‘ದ ಜಡ್ಜ್​ಮೆಂಟ್​’ ಟ್ರೇಲರ್​ ರಿಲೀಸ್​ ಆಗಿದೆ. ರವಿಚಂದ್ರನ್​ ಅವರ ವೃತ್ತಿ ಜೀವನದಲ್ಲಿ ಇದು ಒಂದು ಭಿನ್ನ ಸಿನಿಮಾ. ‘ಸಾಮಾನ್ಯವಾಗಿ ನನ್ನ ಸಿನಿಮಾ‌ಗಳು ಹಾಡುಗಳಿಗೆ ಫೇಮಸ್​. ಆದರೆ ಈ ಸಿನಿಮಾದಲ್ಲಿ ನನಗೆ ಒಂದೂ ಸಾಂಗ್​ ಇಲ್ಲ. ಸಿನಿಮಾದ ಶೀರ್ಷಿಕೆ ‘ದ ಜಡ್ಜ್​ಮೆಂಟ್’. ಆದರೆ ಪ್ರೇಕ್ಷಕರು ನೀಡುವ ಜಡ್ಜ್​ಮೆಂಟ್ ಅಂತಿಮ’ ಎಂದು ರವಿಚಂದ್ರನ್ ಹೇಳಿದ್ದಾರೆ.

ವಿವಿಧ ನಗರಗಳಲ್ಲಿ ಬಿಡುಗಡೆ ಆಗಲಿದೆ ರವಿಚಂದ್ರನ್​ ನಟನೆಯ ‘ದ ಜಡ್ಜ್​ಮೆಂಟ್​’ ಸಿನಿಮಾ
ಲಕ್ಷ್ಮಿ ಗೋಪಾಲಸ್ವಾಮಿ, ರವಿಚಂದ್ರನ್​, ಮೇಘನಾ ಗಾಂವ್ಕರ್
Follow us
ಮದನ್​ ಕುಮಾರ್​
|

Updated on: May 17, 2024 | 7:52 PM

ಲೋಕಸಭಾ ಚುನಾವಣೆ ಕಾವು ಕಡಿಮೆ ಆಗುತ್ತಿದ್ದಂತೆಯೇ ಸಿನಿಮಾರಂಗದ ಚಟುವಟಿಕೆಗಳು ಗರಿಗೆದರಲಿವೆ. ಅನೇಕ ಸಿನಿಮಾಗಳು (Kannada Cinema) ಬಿಡುಗಡೆಗೆ ಸಜ್ಜಾಗಿವೆ. ‘ಜಿ9 ಕಮ್ಯುನಿಕೇಷನ್​ ಮೀಡಿಯಾ ಆ್ಯಂಡ್​ ಎಂಟರ್​ಟೇನ್ಮೆಂಟ್​’ ಸಂಸ್ಥೆಯ ಮೂಲಕ ನಿರ್ಮಾಣ ಆಗಿರುವ ಕನ್ನಡದ ‘ದ ಜಡ್ಜ್​ಮೆಂಟ್’ ಸಿನಿಮಾ (The Judgement Movie) ಕೂಡ ಬಿಡುಗಡೆ ದಿನಾಂಕ ಘೋಷಿಸಿಕೊಂಡಿದೆ. ಮೇ 24ರಂದು ಈ ಸಿನಿಮಾ ರಿಲೀಸ್​ ಆಗಲಿದೆ. ‘ಕ್ರೇಜಿ ಸ್ಟಾರ್​’ ರವಿಚಂದ್ರನ್ (Ravichandran) ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಇತ್ತೀಚೆಗೆ ‘ದ ಜಡ್ಜ್​ಮೆಂಟ್​’ ಸಿನಿಮಾ ಟ್ರೇಲರ್​ ಅನಾವರಣ ಮಾಡಲಾಯಿತು. ಖ್ಯಾತ ನಿರ್ಮಾಪಕ ಉದಯ್ ಕೆ. ಮಹ್ತಾ ಅವರು ಟ್ರೇಲರ್ ಬಿಡುಗಡೆ ಮಾಡಿದರು. ಈ ಸಿನಿಮಾದಲ್ಲಿ ರವಿಚಂದ್ರನ್ ಅವರು ಲಾಯರ್​ ಪಾತ್ರ ಮಾಡಿದ್ದಾರೆ ಎಂಬುದು ವಿಶೇಷ.

ಗುರುರಾಜ ಕುಲಕರ್ಣಿ ಅವರು ‘ದ ಜಡ್ಜ್​ಮೆಂಟ್​’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ‘ರವಿಚಂದ್ರನ್ ಅವರಿಗಾಗಿಯೇ ಮಾಡಿರುವ ಕಥೆ ಇದು’ ಎಂದು ಅವರು ಹೇಳಿದ್ದಾರೆ. ಆ ಮೂಲಕ ಕುತೂಹಲ ಹೆಚ್ಚಿಸಿದ್ದಾರೆ. ‘ಲೀಗಲ್ ಥ್ರಿಲ್ಲರ್ ಜಾನರ್​ನ ಸಿನಿಮಾ ಇದು. ‘ಯುದ್ಧಕಾಂಡ’ ಸಿನಿಮಾದಲ್ಲಿ ಲಾಯರ್​ ಪಾತ್ರ ಮಾಡಿದ ರವಿಚಂದ್ರನ್ ಅವರ ನಟನೆ ಇಂದಿಗೂ ಜನಪ್ರಿಯವಾಗಿದೆ. ಹಲವು ವರ್ಷಗಳ ಬಳಿಕ ಈ‌ ಸಿನಿಮಾದಲ್ಲಿ ಮತ್ತೆ ಲಾಯರ್​ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದಾರೆ’ ಎಂದು ಗುರುರಾಜ ಕುಲಕರ್ಣಿ ಹೇಳಿದರು.

ಇದನ್ನೂ ಓದಿ: ‘ಚುನಾವಣೆ ಪ್ರಚಾರಕ್ಕೆ ನನ್ನ ಜಾತಿ ಅಡ್ಡ ಬರುತ್ತೆ ಅನ್ಸುತ್ತೆ’: ರವಿಚಂದ್ರನ್​

ಕರ್ನಾಟಕ ಮಾತ್ರವಲ್ಲದೆ ದೆಹಲಿ, ಮುಂಬೈ, ಗೋವಾ, ಲಕ್ನೋ, ಆಂಧ್ರ ಪ್ರದೇಶ ಸೇರಿದಂತೆ ದೇಶದ ಅನೇಕ ನಗರಗಳಲ್ಲಿ ಈ ಸಿನಿಮಾವನ್ನು ‘ರಿಲಯನ್ಸ್ ಎಂಟರ್​ಟೇನ್ಮೆಂಟ್’ ಸಂಸ್ಥೆಯು ಬಿಡುಗಡೆ ಮಾಡಲಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ. ಗುರುರಾಜ್ ಕುಲಕರ್ಣಿ (ನಾಡಗೌಡ), ಶರದ್ ನಾಡಗೌಡ, ರಾಮು ರಾಯಚೂರು, ವಿಶ್ವನಾಥ್ ಗುಪ್ತ, ರಾಜಶೇಖರ ಪಾಟೀಲ್, ಪ್ರತಿಮಾ ಬಿರಾದಾರ್ ಅವರು ಟ್ರೇಲರ್​ ಬಿಡುಗಡೆ ಕಾರ್ಯಕ್ರಮದಲ್ಲಿ ಹಾಜರಿದ್ದರು.

‘ದ ಜಡ್ಜ್​ಮೆಂಟ್​’ ಸಿನಿಮಾ ಟ್ರೇಲರ್​:

ಈ ಸಿನಿಮಾದಲ್ಲಿ ರವಿಚಂದ್ರನ್​ ಜೊತೆ ಲಕ್ಷ್ಮೀ ಗೋಪಾಲಸ್ವಾಮಿ, ಧನ್ಯಾ ರಾಮ್​ಕುಮರ್​, ದಿಗಂತ್ ಮಂಚಾಲೆ, ಮೇಘನಾ ಗಾಂವ್ಕರ್, ಪ್ರಕಾಶ್ ಬೆಳವಾಡಿ, ರಂಗಾಯಣ ರಘು, ರವಿಶಂಕರ್ ಗೌಡ, ಕೃಷ್ಣ ಹೆಬ್ಬಾಳೆ, ರಾಜೇಂದ್ರ ಕಾರಂತ್, ರೇಖಾ ಕೂಡ್ಲಗಿ ಸೇರಿದಂತೆ ಅನೇಕ ಕಲಾವಿದರು ಅಭಿನಯಿಸಿದ್ದಾರೆ. ಅನೂಪ್ ಸೀಳಿನ್ ಅವರು ‘ದ ಜಡ್ಜ್​ಮೆಂಟ್​’ ಸಿನಿಮಾಗೆ ಸಂಗೀತ ನೀಡಿದ್ದು, ಪ್ರಮೋದ್ ಮರವಂತೆ ಸಾಹಿತ್ಯ ಬರೆದಿದ್ದಾರೆ. ಎಂ.ಎಸ್. ರಮೇಶ್ ಸಂಭಾಷಣೆ ಬರೆದಿದ್ದಾರೆ. ಪಿ.ಕೆ.ಹೆಚ್. ದಾಸ್ ಚಾಯಾಗ್ರಹಣ ಮಾಡಿದ್ದಾರೆ. ಕೆಂಪರಾಜ್ ಅವರ ಸಂಕಲನ ಈ ಚಿತ್ರಕ್ಕಿದೆ. ವಾಸುದೇವ ಮೂರ್ತಿ ಅವರು ಚಿತ್ರಕಥೆ ಬರೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ