AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಹಳ್ಳಿ ಹೈದನಾಗೋಕೆ ರವಿಚಂದ್ರನ್​ ರೆಡಿ; ಆದರೆ ಸಿನಿಮಾ ಶುರುವಾಗೋಕೆ ಎದುರಾಯ್ತು ವಿಘ್ನ

ಏಪ್ರಿಲ್​ ಅಥವಾ ಮೇ ತಿಂಗಳಲ್ಲಿ ಸಿನಿಮಾ ಶೂಟಿಂಗ್​ ಆರಂಭಿಸುವ ಆಲೋಚನೆ ಮಹೇಂದ್ರ ಅವರದ್ದಾಗಿತ್ತು. ಆದರೆ, ಕೊರೊನಾ ವೈರಸ್​ ಎರಡನೇ ಅಲೆ ದೇಶಾದ್ಯಂತ ಹಬ್ಬುತ್ತಿದೆ. ಹೀಗಾಗಿ ಸಿನಿಮಾ ಕೆಲಸಕ್ಕೆ ಬ್ರೇಕ್​ ಬಿದ್ದಿದೆ.

ಮತ್ತೆ ಹಳ್ಳಿ ಹೈದನಾಗೋಕೆ ರವಿಚಂದ್ರನ್​ ರೆಡಿ; ಆದರೆ ಸಿನಿಮಾ ಶುರುವಾಗೋಕೆ ಎದುರಾಯ್ತು ವಿಘ್ನ
ವಿ. ರವಿಚಂದ್ರನ್​
ರಾಜೇಶ್ ದುಗ್ಗುಮನೆ
|

Updated on: May 03, 2021 | 7:48 PM

Share

ಸ್ಯಾಂಡಲ್​ವುಡ್​ನಲ್ಲಿ ಭಿನ್ನ ಚಿತ್ರಗಳನ್ನು ನಿರ್ಮಾಣ ಮಾಡಿ ನಟಿಸಿದ ಖ್ಯಾತಿ ರವಿಚಂದ್ರನ್​ ಅವರಿಗಿದೆ. ಪುಟ್ನಂಜ, ಹಳ್ಳಿ ಮೇಷ್ಟ್ರು, ಅಣ್ಣಯ್ಯ, ರಾಮಾಚಾರಿ, ಸಿಪಾಯಿ ಸೇರಿ ಸಾಕಷ್ಟು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಹಳ್ಳಿ ಹಿನ್ನೆಲೆಯಲ್ಲಿ ಮೂಡಿ ಬಂದ ಈ ಚಿತ್ರಗಳು ಸೂಪರ್​ ಹಿಟ್​ ಆಗಿದ್ದವು. ನಂತರ ರವಿಚಂದ್ರನ್​ ಆ ಶೈಲಿಯ ಸಿನಿಮಾಗಳಿಂದ ದೂರವೇ ಉಳಿದುಕೊಂಡರು. ಈಗ ಅವರು ಮತ್ತೆ ಅದೇ ಮಾದರಿಯ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬರಲು ಸಿದ್ಧರಾಗಿದ್ದಾರೆ.

ಎಸ್​. ಮಹೇಂದ್ರ ಅವರು ಹೊಸ ಸಿನಿಮಾವೊಂದನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ರವಿಚಂದ್ರನ್​ ಹೀರೋ. ಈ ಸಿನಿಮಾದ ಕಥೆ ಹಳ್ಳಿ ಹಿನ್ನೆಲೆಯಲ್ಲಿ ಸಾಗಲಿದೆಯಂತೆ. ಈ ಮೂಲಕ ರವಿಚಂದ್ರನ್​ ಮತ್ತೆ ಹಳ್ಳಿ ಹೈದನಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ವಿಚಾರ ಸದ್ಯ ಅಭಿಮಾನಿಗಳಿಗೆ ಸಾಕಷ್ಟು ಕುತೂಹಲ ಮೂಡಿಸಿದೆ.

ಏಪ್ರಿಲ್​ ಅಥವಾ ಮೇ ತಿಂಗಳಲ್ಲಿ ಸಿನಿಮಾ ಶೂಟಿಂಗ್​ ಆರಂಭಿಸುವ ಆಲೋಚನೆ ಮಹೇಂದ್ರ ಅವರದ್ದಾಗಿತ್ತು. ಆದರೆ, ಕೊರೊನಾ ವೈರಸ್​ ಎರಡನೇ ಅಲೆ ದೇಶಾದ್ಯಂತ ಹಬ್ಬುತ್ತಿದೆ. ಕರ್ನಾಟಕದಲ್ಲಿ ಕೊರೊನಾ ನಿಯಂತ್ರಣಕ್ಕೆ ಕೊರೊನಾ ಕರ್ಫ್ಯೂ ಜಾರಿಗೊಳಿಸಲಾಗಿದೆ. ಇದರಿಂದಾಗಿ, ಸಿನಿಮಾ ಕೆಲಸ ನಿಲ್ಲಿಸಲಾಗಿದೆ. ಹೀಗಾಗಿ ಈ ಸಿನಿಮಾ ಶೂಟಿಂಗ್​ ಮುಂದೂಡಲ್ಪಟ್ಟಿದೆ.

ಮಲಯಾಳಂನಲ್ಲಿ ತೆರೆಕಂಡಿದ್ದ ದೃಶ್ಯಂ ಸಿನಿಮಾ ಕನ್ನಡಕ್ಕೆ ರಿಮೇಕ್​ ಆಗಿತ್ತು. ರಾಜೇಂದ್ರ ಪೊನ್ನಪ್ಪ ಆಗಿ ರವಿಚಂದ್ರನ್​ ಕಾಣಿಸಿಕೊಂಡಿದ್ದರು. ಈಗ ದೃಶ್ಯಂ 2 ಕೂಡ ಕನ್ನಡಕ್ಕೆ ರಿಮೇಕ್​ ಆಗುತ್ತಿದೆ. ರವಿಚಂದ್ರನ್​ ಇದರಲ್ಲಿ ಲೀಡ್​ ರೋಲ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ರವಿಚಂದ್ರನ್​ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಸ್ಯಾಂಡಲ್​ವುಡ್​ನಲ್ಲಿ ಸಾಕಷ್ಟು ಭಿನ್ನ ಚಿತ್ರಗಳನ್ನು ನೀಡಿದ ಖ್ಯಾತಿ ಅವರಿಗಿದೆ. ಆದರೆ ಸೋಶಿಯಲ್​ ಮೀಡಿಯಾ ಕಡೆಗೆ ರವಿಚಂದ್ರನ್​ ತಲೆ ಹಾಕಿರಲಿಲ್ಲ. ಏ.13ರಂದು ಯುಗಾದಿ ಹಬ್ಬದ ಪ್ರಯುಕ್ತ ಅವರು ಸೋಶಿಯಲ್​ ಮೀಡಿಯಾ ಖಾತೆಗಳನ್ನು ತೆರೆದಿದ್ದರು.

ಇದನ್ನೂ ಓದಿ: Ravichandran: ರವಿಚಂದ್ರನ್​ ಸಿಗರೇಟ್​ ಸೇದ್ತಾರಾ? ಸೋಶಿಯಲ್​ ಮೀಡಿಯಾಗೆ ಬಂದು ಸತ್ಯ ಬಹಿರಂಗಪಡಿಸಿದ ಕ್ರೇಜಿ ಸ್ಟಾರ್​!

‘ದೃಶ್ಯ 2’ ಮಾಡೋಕೆ ರವಿಚಂದ್ರನ್​ ರೆಡಿ! ಯುಗಾದಿ ಹಬ್ಬದ ದಿನವೇ ‘ಕ್ರೇಜಿ ಸ್ಟಾರ್​’ ಅಭಿಮಾನಿಗಳಿಗೆ ಸಿಹಿ ಸುದ್ದಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ