AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಹಳ್ಳಿ ಹೈದನಾಗೋಕೆ ರವಿಚಂದ್ರನ್​ ರೆಡಿ; ಆದರೆ ಸಿನಿಮಾ ಶುರುವಾಗೋಕೆ ಎದುರಾಯ್ತು ವಿಘ್ನ

ಏಪ್ರಿಲ್​ ಅಥವಾ ಮೇ ತಿಂಗಳಲ್ಲಿ ಸಿನಿಮಾ ಶೂಟಿಂಗ್​ ಆರಂಭಿಸುವ ಆಲೋಚನೆ ಮಹೇಂದ್ರ ಅವರದ್ದಾಗಿತ್ತು. ಆದರೆ, ಕೊರೊನಾ ವೈರಸ್​ ಎರಡನೇ ಅಲೆ ದೇಶಾದ್ಯಂತ ಹಬ್ಬುತ್ತಿದೆ. ಹೀಗಾಗಿ ಸಿನಿಮಾ ಕೆಲಸಕ್ಕೆ ಬ್ರೇಕ್​ ಬಿದ್ದಿದೆ.

ಮತ್ತೆ ಹಳ್ಳಿ ಹೈದನಾಗೋಕೆ ರವಿಚಂದ್ರನ್​ ರೆಡಿ; ಆದರೆ ಸಿನಿಮಾ ಶುರುವಾಗೋಕೆ ಎದುರಾಯ್ತು ವಿಘ್ನ
ವಿ. ರವಿಚಂದ್ರನ್​
ರಾಜೇಶ್ ದುಗ್ಗುಮನೆ
|

Updated on: May 03, 2021 | 7:48 PM

Share

ಸ್ಯಾಂಡಲ್​ವುಡ್​ನಲ್ಲಿ ಭಿನ್ನ ಚಿತ್ರಗಳನ್ನು ನಿರ್ಮಾಣ ಮಾಡಿ ನಟಿಸಿದ ಖ್ಯಾತಿ ರವಿಚಂದ್ರನ್​ ಅವರಿಗಿದೆ. ಪುಟ್ನಂಜ, ಹಳ್ಳಿ ಮೇಷ್ಟ್ರು, ಅಣ್ಣಯ್ಯ, ರಾಮಾಚಾರಿ, ಸಿಪಾಯಿ ಸೇರಿ ಸಾಕಷ್ಟು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಹಳ್ಳಿ ಹಿನ್ನೆಲೆಯಲ್ಲಿ ಮೂಡಿ ಬಂದ ಈ ಚಿತ್ರಗಳು ಸೂಪರ್​ ಹಿಟ್​ ಆಗಿದ್ದವು. ನಂತರ ರವಿಚಂದ್ರನ್​ ಆ ಶೈಲಿಯ ಸಿನಿಮಾಗಳಿಂದ ದೂರವೇ ಉಳಿದುಕೊಂಡರು. ಈಗ ಅವರು ಮತ್ತೆ ಅದೇ ಮಾದರಿಯ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬರಲು ಸಿದ್ಧರಾಗಿದ್ದಾರೆ.

ಎಸ್​. ಮಹೇಂದ್ರ ಅವರು ಹೊಸ ಸಿನಿಮಾವೊಂದನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ರವಿಚಂದ್ರನ್​ ಹೀರೋ. ಈ ಸಿನಿಮಾದ ಕಥೆ ಹಳ್ಳಿ ಹಿನ್ನೆಲೆಯಲ್ಲಿ ಸಾಗಲಿದೆಯಂತೆ. ಈ ಮೂಲಕ ರವಿಚಂದ್ರನ್​ ಮತ್ತೆ ಹಳ್ಳಿ ಹೈದನಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ವಿಚಾರ ಸದ್ಯ ಅಭಿಮಾನಿಗಳಿಗೆ ಸಾಕಷ್ಟು ಕುತೂಹಲ ಮೂಡಿಸಿದೆ.

ಏಪ್ರಿಲ್​ ಅಥವಾ ಮೇ ತಿಂಗಳಲ್ಲಿ ಸಿನಿಮಾ ಶೂಟಿಂಗ್​ ಆರಂಭಿಸುವ ಆಲೋಚನೆ ಮಹೇಂದ್ರ ಅವರದ್ದಾಗಿತ್ತು. ಆದರೆ, ಕೊರೊನಾ ವೈರಸ್​ ಎರಡನೇ ಅಲೆ ದೇಶಾದ್ಯಂತ ಹಬ್ಬುತ್ತಿದೆ. ಕರ್ನಾಟಕದಲ್ಲಿ ಕೊರೊನಾ ನಿಯಂತ್ರಣಕ್ಕೆ ಕೊರೊನಾ ಕರ್ಫ್ಯೂ ಜಾರಿಗೊಳಿಸಲಾಗಿದೆ. ಇದರಿಂದಾಗಿ, ಸಿನಿಮಾ ಕೆಲಸ ನಿಲ್ಲಿಸಲಾಗಿದೆ. ಹೀಗಾಗಿ ಈ ಸಿನಿಮಾ ಶೂಟಿಂಗ್​ ಮುಂದೂಡಲ್ಪಟ್ಟಿದೆ.

ಮಲಯಾಳಂನಲ್ಲಿ ತೆರೆಕಂಡಿದ್ದ ದೃಶ್ಯಂ ಸಿನಿಮಾ ಕನ್ನಡಕ್ಕೆ ರಿಮೇಕ್​ ಆಗಿತ್ತು. ರಾಜೇಂದ್ರ ಪೊನ್ನಪ್ಪ ಆಗಿ ರವಿಚಂದ್ರನ್​ ಕಾಣಿಸಿಕೊಂಡಿದ್ದರು. ಈಗ ದೃಶ್ಯಂ 2 ಕೂಡ ಕನ್ನಡಕ್ಕೆ ರಿಮೇಕ್​ ಆಗುತ್ತಿದೆ. ರವಿಚಂದ್ರನ್​ ಇದರಲ್ಲಿ ಲೀಡ್​ ರೋಲ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ರವಿಚಂದ್ರನ್​ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಸ್ಯಾಂಡಲ್​ವುಡ್​ನಲ್ಲಿ ಸಾಕಷ್ಟು ಭಿನ್ನ ಚಿತ್ರಗಳನ್ನು ನೀಡಿದ ಖ್ಯಾತಿ ಅವರಿಗಿದೆ. ಆದರೆ ಸೋಶಿಯಲ್​ ಮೀಡಿಯಾ ಕಡೆಗೆ ರವಿಚಂದ್ರನ್​ ತಲೆ ಹಾಕಿರಲಿಲ್ಲ. ಏ.13ರಂದು ಯುಗಾದಿ ಹಬ್ಬದ ಪ್ರಯುಕ್ತ ಅವರು ಸೋಶಿಯಲ್​ ಮೀಡಿಯಾ ಖಾತೆಗಳನ್ನು ತೆರೆದಿದ್ದರು.

ಇದನ್ನೂ ಓದಿ: Ravichandran: ರವಿಚಂದ್ರನ್​ ಸಿಗರೇಟ್​ ಸೇದ್ತಾರಾ? ಸೋಶಿಯಲ್​ ಮೀಡಿಯಾಗೆ ಬಂದು ಸತ್ಯ ಬಹಿರಂಗಪಡಿಸಿದ ಕ್ರೇಜಿ ಸ್ಟಾರ್​!

‘ದೃಶ್ಯ 2’ ಮಾಡೋಕೆ ರವಿಚಂದ್ರನ್​ ರೆಡಿ! ಯುಗಾದಿ ಹಬ್ಬದ ದಿನವೇ ‘ಕ್ರೇಜಿ ಸ್ಟಾರ್​’ ಅಭಿಮಾನಿಗಳಿಗೆ ಸಿಹಿ ಸುದ್ದಿ

Follow Us
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ