ಮತ್ತೆ ಹಳ್ಳಿ ಹೈದನಾಗೋಕೆ ರವಿಚಂದ್ರನ್​ ರೆಡಿ; ಆದರೆ ಸಿನಿಮಾ ಶುರುವಾಗೋಕೆ ಎದುರಾಯ್ತು ವಿಘ್ನ

ಏಪ್ರಿಲ್​ ಅಥವಾ ಮೇ ತಿಂಗಳಲ್ಲಿ ಸಿನಿಮಾ ಶೂಟಿಂಗ್​ ಆರಂಭಿಸುವ ಆಲೋಚನೆ ಮಹೇಂದ್ರ ಅವರದ್ದಾಗಿತ್ತು. ಆದರೆ, ಕೊರೊನಾ ವೈರಸ್​ ಎರಡನೇ ಅಲೆ ದೇಶಾದ್ಯಂತ ಹಬ್ಬುತ್ತಿದೆ. ಹೀಗಾಗಿ ಸಿನಿಮಾ ಕೆಲಸಕ್ಕೆ ಬ್ರೇಕ್​ ಬಿದ್ದಿದೆ.

ಮತ್ತೆ ಹಳ್ಳಿ ಹೈದನಾಗೋಕೆ ರವಿಚಂದ್ರನ್​ ರೆಡಿ; ಆದರೆ ಸಿನಿಮಾ ಶುರುವಾಗೋಕೆ ಎದುರಾಯ್ತು ವಿಘ್ನ
ವಿ. ರವಿಚಂದ್ರನ್​

Updated on: May 03, 2021 | 7:48 PM

ಸ್ಯಾಂಡಲ್​ವುಡ್​ನಲ್ಲಿ ಭಿನ್ನ ಚಿತ್ರಗಳನ್ನು ನಿರ್ಮಾಣ ಮಾಡಿ ನಟಿಸಿದ ಖ್ಯಾತಿ ರವಿಚಂದ್ರನ್​ ಅವರಿಗಿದೆ. ಪುಟ್ನಂಜ, ಹಳ್ಳಿ ಮೇಷ್ಟ್ರು, ಅಣ್ಣಯ್ಯ, ರಾಮಾಚಾರಿ, ಸಿಪಾಯಿ ಸೇರಿ ಸಾಕಷ್ಟು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಹಳ್ಳಿ ಹಿನ್ನೆಲೆಯಲ್ಲಿ ಮೂಡಿ ಬಂದ ಈ ಚಿತ್ರಗಳು ಸೂಪರ್​ ಹಿಟ್​ ಆಗಿದ್ದವು. ನಂತರ ರವಿಚಂದ್ರನ್​ ಆ ಶೈಲಿಯ ಸಿನಿಮಾಗಳಿಂದ ದೂರವೇ ಉಳಿದುಕೊಂಡರು. ಈಗ ಅವರು ಮತ್ತೆ ಅದೇ ಮಾದರಿಯ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬರಲು ಸಿದ್ಧರಾಗಿದ್ದಾರೆ.

ಎಸ್​. ಮಹೇಂದ್ರ ಅವರು ಹೊಸ ಸಿನಿಮಾವೊಂದನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ರವಿಚಂದ್ರನ್​ ಹೀರೋ. ಈ ಸಿನಿಮಾದ ಕಥೆ ಹಳ್ಳಿ ಹಿನ್ನೆಲೆಯಲ್ಲಿ ಸಾಗಲಿದೆಯಂತೆ. ಈ ಮೂಲಕ ರವಿಚಂದ್ರನ್​ ಮತ್ತೆ ಹಳ್ಳಿ ಹೈದನಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ವಿಚಾರ ಸದ್ಯ ಅಭಿಮಾನಿಗಳಿಗೆ ಸಾಕಷ್ಟು ಕುತೂಹಲ ಮೂಡಿಸಿದೆ.

ಏಪ್ರಿಲ್​ ಅಥವಾ ಮೇ ತಿಂಗಳಲ್ಲಿ ಸಿನಿಮಾ ಶೂಟಿಂಗ್​ ಆರಂಭಿಸುವ ಆಲೋಚನೆ ಮಹೇಂದ್ರ ಅವರದ್ದಾಗಿತ್ತು. ಆದರೆ, ಕೊರೊನಾ ವೈರಸ್​ ಎರಡನೇ ಅಲೆ ದೇಶಾದ್ಯಂತ ಹಬ್ಬುತ್ತಿದೆ. ಕರ್ನಾಟಕದಲ್ಲಿ ಕೊರೊನಾ ನಿಯಂತ್ರಣಕ್ಕೆ ಕೊರೊನಾ ಕರ್ಫ್ಯೂ ಜಾರಿಗೊಳಿಸಲಾಗಿದೆ. ಇದರಿಂದಾಗಿ, ಸಿನಿಮಾ ಕೆಲಸ ನಿಲ್ಲಿಸಲಾಗಿದೆ. ಹೀಗಾಗಿ ಈ ಸಿನಿಮಾ ಶೂಟಿಂಗ್​ ಮುಂದೂಡಲ್ಪಟ್ಟಿದೆ.

ಮಲಯಾಳಂನಲ್ಲಿ ತೆರೆಕಂಡಿದ್ದ ದೃಶ್ಯಂ ಸಿನಿಮಾ ಕನ್ನಡಕ್ಕೆ ರಿಮೇಕ್​ ಆಗಿತ್ತು. ರಾಜೇಂದ್ರ ಪೊನ್ನಪ್ಪ ಆಗಿ ರವಿಚಂದ್ರನ್​ ಕಾಣಿಸಿಕೊಂಡಿದ್ದರು. ಈಗ ದೃಶ್ಯಂ 2 ಕೂಡ ಕನ್ನಡಕ್ಕೆ ರಿಮೇಕ್​ ಆಗುತ್ತಿದೆ. ರವಿಚಂದ್ರನ್​ ಇದರಲ್ಲಿ ಲೀಡ್​ ರೋಲ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ರವಿಚಂದ್ರನ್​ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಸ್ಯಾಂಡಲ್​ವುಡ್​ನಲ್ಲಿ ಸಾಕಷ್ಟು ಭಿನ್ನ ಚಿತ್ರಗಳನ್ನು ನೀಡಿದ ಖ್ಯಾತಿ ಅವರಿಗಿದೆ. ಆದರೆ ಸೋಶಿಯಲ್​ ಮೀಡಿಯಾ ಕಡೆಗೆ ರವಿಚಂದ್ರನ್​ ತಲೆ ಹಾಕಿರಲಿಲ್ಲ. ಏ.13ರಂದು ಯುಗಾದಿ ಹಬ್ಬದ ಪ್ರಯುಕ್ತ ಅವರು ಸೋಶಿಯಲ್​ ಮೀಡಿಯಾ ಖಾತೆಗಳನ್ನು ತೆರೆದಿದ್ದರು.

ಇದನ್ನೂ ಓದಿ: Ravichandran: ರವಿಚಂದ್ರನ್​ ಸಿಗರೇಟ್​ ಸೇದ್ತಾರಾ? ಸೋಶಿಯಲ್​ ಮೀಡಿಯಾಗೆ ಬಂದು ಸತ್ಯ ಬಹಿರಂಗಪಡಿಸಿದ ಕ್ರೇಜಿ ಸ್ಟಾರ್​!

‘ದೃಶ್ಯ 2’ ಮಾಡೋಕೆ ರವಿಚಂದ್ರನ್​ ರೆಡಿ! ಯುಗಾದಿ ಹಬ್ಬದ ದಿನವೇ ‘ಕ್ರೇಜಿ ಸ್ಟಾರ್​’ ಅಭಿಮಾನಿಗಳಿಗೆ ಸಿಹಿ ಸುದ್ದಿ

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us