AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಿಯಾಲಿಟಿ ಶೋಗಳಲ್ಲಿ ಡಬಲ್ ಮೀನಿಂಗ್ ಹೆಚ್ಚಾದಾಗ ಇದು ಬೇಕಿತ್ತಾ ಅನಿಸುತ್ತದೆ..’; ರವಿಚಂದ್ರನ್ ಅಸಮಾಧಾನ

ಪ್ರಸಿದ್ಧ ನಟ ರವಿಚಂದ್ರನ್ ಅವರು ರಿಯಾಲಿಟಿ ಶೋಗಳಲ್ಲಿ ಹೆಚ್ಚುತ್ತಿರುವ ಡಬಲ್ ಮೀನಿಂಗ್ ಡೈಲಾಗ್‌ಗಳ ಬಗ್ಗೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಶೋಗಳ ಲಾಂಗ್ ಶೂಟಿಂಗ್ ಹಾಗೂ ಅತಿಯಾದ ಡಬಲ್ ಮೀನಿಂಗ್ ಅವರಿಗೆ ಬೇಸರ ತಂದಿದೆ ಎಂದು ಹೇಳಿದ್ದಾರೆ. ಆದರೆ, ಜೀವನದಲ್ಲಿ ಒಳ್ಳೆಯ ಕ್ಷಣಗಳನ್ನು ಹೆಚ್ಚು ಗಮನಿಸುವುದು ಮುಖ್ಯ ಎಂದು ಅವರು ಸಲಹೆ ನೀಡಿದ್ದಾರೆ.

‘ರಿಯಾಲಿಟಿ ಶೋಗಳಲ್ಲಿ ಡಬಲ್ ಮೀನಿಂಗ್ ಹೆಚ್ಚಾದಾಗ ಇದು ಬೇಕಿತ್ತಾ ಅನಿಸುತ್ತದೆ..’; ರವಿಚಂದ್ರನ್ ಅಸಮಾಧಾನ
ರವಿಚಂದ್ರನ್
Follow us
ರಾಜೇಶ್ ದುಗ್ಗುಮನೆ
|

Updated on: Apr 07, 2025 | 7:34 AM

ನಟ ರವಿಚಂದ್ರನ್ (Ravichandran) ಅವರು ನಟನೆಯ ಜೊತೆಗೆ ರಿಯಾಲಿಟಿ ಶೋಗಳಲ್ಲೂ ತೊಡಗಿಕೊಳ್ಳುತ್ತಿದ್ದಾರೆ. ಅವರು ಸದ್ಯ ಜೀ ಕನ್ನಡದಲ್ಲಿ ಪ್ರಸಾರ ಕಾಣುವ ‘ಭರ್ಜರಿ ಬ್ಯಾಚುಲರ್ಸ್ 2’ನ ಭಾಗವಾಗಿದ್ದಾರೆ. ಅವರು ಸಿನಿಮಾಗಳಲ್ಲಿ ರೊಮ್ಯಾಂಟಿಕ್ ದೃಶ್ಯಗಳನ್ನು ಮಾಡುತ್ತಾರೆ. ಆದರೆ, ತೆರೆಯ ಹಿಂದೆ ಅವರು ಜಂಟಲ್​ಮ್ಯಾನ್. ಅವರು ಈಗ ಡಬಲ್ ಮೀನಿಂಗ್ ಡೈಲಾಗ್​ ಬಗ್ಗೆ ಬೇಸರ ಹೊರಹಾಕಿದ್ದಾರೆ. ರಿಯಾಲಿಟಿ ಶೋಗಳಲ್ಲಿ ಇದನ್ನು ಹೆಚ್ಚಾಗಿ ಬಳಕೆ ಮಾಡುವುದರ ಬಗ್ಗೆ ಅವರಿಗೆ ಅಸಮಾಧಾನ ಇದೆ. ಆದರೆ, ಅದನ್ನು ಬಿಟ್ಟು ಒಳ್ಳೆಯದನ್ನು ಹೆಕ್ಕಿಕೊಳ್ಳಬೇಕು ಎಂಬುದು ಅವರ ಕಿವಿಮಾತು.

ಇತ್ತೀಚೆಗೆ ನಡೆದ ಕಾರ್ಯಕ್ರಮ ಒಂದರಲ್ಲಿ ರವಿಚಂದ್ರನ್ ಮಾತನಾಡಿದ್ದಾರೆ. ಈ ವಿಡಿಯೋನ ‘ಯುಐಕನ್ನಡ’ ಹೆಸರಿನ ಇನ್​ಸ್ಟಾಗ್ರಾಮ್ ಖಾತೆ ಮೂಲಕ ಹಂಚಿಕೊಳ್ಳಲಾಗಿದೆ. ರವಿಚಂದ್ರನ್ ಅವರು ಮಕ್ಕಳಿಗೆ ಸ್ಫೂರ್ತಿ ತುಂಬುವ ರೀತಿಯಲ್ಲಿ ಮಾತನಾಡಿದ್ದಾರೆ. ಈ ವೇಳೆ ರಿಯಾಲಿಟಿ ಶೋಗಳ ಕಷ್ಟಗಳ ಬಗ್ಗೆ ಹಾಗೂ ಅದರಿಂದ ನಾವೇನು ಕಲಿಯಬೇಕು ಎಂಬುದನ್ನು ಚೆನ್ನಾಗಿ ತಿಳಿಸಿದ್ದಾರೆ.

ಇದನ್ನೂ ಓದಿ
Image
ಗಲ್ರಾನಿಗೆ ವಂಚನೆ ಮಾಡಿದವನಿಗೆ 61 ಲಕ್ಷ ದಂಡ, 6 ತಿಂಗಳು ಜೈಲು ಶಿಕ್ಷೆ
Image
ಸಿಕಂದರ್ ಸೋಲು: ಅಭಿಮಾನಿಗಳ ಮಾತು ಕೇಳಲು ಒಪ್ಪಿದ ಸಲ್ಮಾನ್ ಖಾನ್
Image
‘ಲೇ ಕಳಸ್ರಯ್ಯ ಇವಳನ್ನ’; ಸುಕೃತಾ ಮೇಲೆ ರವಿಚಂದ್ರನ್ ಸಿಟ್ಟಾಗಿದ್ದೇಕೆ?
Image
Bharjari Bachelors: ಜೀ ಕನ್ನಡದಲ್ಲಿ ಹೊಸ ಶೋ ‘ಭರ್ಜರಿ ಬ್ಯಾಚುಲರ್ಸ್’; ಮದುವೆ ಆಗದ ಹುಡುಗರೇ ಇಲ್ಲಿ ಕೇಳಿ..
View this post on Instagram

A post shared by UI Kannada (@uikannada)

‘ನಾನು ಭರ್ಜರಿ ಬ್ಯಾಚುಲರ್ಸ್ ರೀತಿಯ ಶೋ ಮಾಡುತ್ತಿರುತ್ತೇನೆ. ಬೆಳಿಗ್ಗೆ 10 ಗಂಟೆಗೆ ಶೋ ಶೂಟಿಂಗ್ ಆರಂಭ ಆದರೆ, ರಾತ್ರಿ 11 ಗಂಟೆಗವರೆಗೂ ಶೋ ಶೂಟ್ ನಡೆಯುತ್ತದೆ. ಅಲ್ಲಲ್ಲಿ ಬೋರ್ ಹೊಡೆಯುತ್ತೆ, ತುಂಬಾ ಸಿಟ್ಟು ಬರುತ್ತದೆ. ಡಬಲ್ ಮೀನಿಂಗ್ ಜಾಸ್ತಿ ಮಾಡ್ತಾರೆ ಇದು ಬೇಕಿತ್ತಾ ಎನಿಸುತ್ತದೆ. ಶೋ ಮುಗಿದ ಮೇಲೆ ವಿಟಿ ಹಾಕ್ತಾರೆ. ನಾಲ್ಕು ತಿಂಗಳ ವಿಟಿ ಎರಡೂವರೆ ನಿಮಿಷ ಇರುತ್ತದೆ. ಅದೇ ರೀತಿ ಜೀವನದಲ್ಲಿ ಒಳ್ಳೆ ಕ್ಷಣಗಳನ್ನು ಕೂಡಿಕೊಳ್ಳುತ್ತಾ ಹೋಗಬೇಕು. ಇಡೀ ದಿನ ಚೆನ್ನಾಗಿರಲ್ಲ. ಆದರೆ, ಒಂದು ಕ್ಷಣ ಚೆನ್ನಾಗಿರುತ್ತದೆ. ಅದನ್ನು ಹೆಚ್ಚು ಮಾಡಿದಂತೆ ನಿಮ್ಮ ಜೀವನ ಚೆನ್ನಾಗಿರುತ್ತದೆ’ ಎಂದಿದ್ದಾರೆ ರವಿಚಂದ್ರನ್.

ಇದನ್ನೂ ಓದಿ:  ಜೀ ಕನ್ನಡದ ‘ಭರ್ಜರಿ ಬ್ಯಾಚುಲರ್ಸ್’ ಶೋಗೆ ಕಾಲಿಟ್ಟ ಮೋಸ್ಟ್ ಎಲಿಜಬೆಲ್ ಬ್ಯಾಚುಲರ್

‘ನಾನು ಆರನೇ ಕ್ಲಾಸ್ ಫೇಲ್. ಪುಸ್ತಕ ಮುಟ್ಟಲ್ಲ ಎಂದು ಶಪತ ಮಾಡಿದೆ. 7ನೇ ಕ್ಲಾಸ್​ನಲ್ಲಿ ಇದ್ದಾಗ ಟೀಚರ್ ಬಂದು ನನಗೆ ಪ್ರಶ್ನೆ ಕೇಳಿದರು. ನನಗೆ ಉತ್ತರ ಬರಲ್ಲ ಎಂದು ಅವರಿಗೆ ಗೊತ್ತಿತ್ತು. ಆದರೂ ನನಗೆ ಪ್ರಶ್ನೆ ಮಾಡುತ್ತಿದ್ದರು. ಮೊದಲ ಎರಡು ದಿನ ಬೈಸಿಕೊಂಡೆ. ಆ ಬಳಿಕ ಮೂರನೇ ದಿನ ನಾನೇ ಬೆಂಚ್ ಮೇಲೆ ಎದ್ದು ನಿಂತುಕೊಂಡೆ. ಅಂದು ನಿಂತವನು ಇಂದು ಇಲ್ಲಿ ಬಂದು ನಿಂತುಕೊಂಡಿದ್ದೇನೆ’ ಎಂದಿದ್ದಾರೆ ರವಿಚಂದ್ರನ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.