AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

35 ಹಾಡುಗಳ ಚಿತ್ರದೊಂದಿಗೆ ಬಂದ ರವಿಚಂದ್ರನ್; ಬಿಗ್ ಬಾಸ್ ವೇದಿಕೆ ಮೇಲೆ ಘೋಷಣೆ

ರವಿಚಂದ್ರನ್ ಹೊಸ ಸಿನಿಮಾ 'ಐ ಆ್ಯಮ್ ಗಾಡ್' ಬಿಗ್ ಬಾಸ್ ವೇದಿಕೆಯಲ್ಲಿ ಘೋಷಣೆಯಾಗಿದೆ. ಸಂಪೂರ್ಣವಾಗಿ AI ತಂತ್ರಜ್ಞಾನ ಬಳಸಿ, ರವಿಚಂದ್ರನ್ ಅವರೇ ನಿರ್ದೇಶನ, ನಿರ್ಮಾಣ ಸೇರಿದಂತೆ ಎಲ್ಲವನ್ನೂ ನಿಭಾಯಿಸಿದ್ದಾರೆ. ವಿಶೇಷವೆಂದರೆ ಈ ಚಿತ್ರ 30-35 ಹಾಡುಗಳನ್ನು ಒಳಗೊಂಡಿದೆ. ಮೇ 30ರಂದು ಅವರ ಹುಟ್ಟುಹಬ್ಬದಂದು ಸಿನಿಮಾ ಬಿಡುಗಡೆ ಮಾಡುವ ಉದ್ದೇಶ ಹೊಂದಿದ್ದಾರೆ.

35 ಹಾಡುಗಳ ಚಿತ್ರದೊಂದಿಗೆ ಬಂದ ರವಿಚಂದ್ರನ್; ಬಿಗ್ ಬಾಸ್ ವೇದಿಕೆ ಮೇಲೆ ಘೋಷಣೆ
ರವಿಚಂದ್ರನ್-ಗಿಲ್ಲಿ
ರಾಜೇಶ್ ದುಗ್ಗುಮನೆ
|

Updated on: Jan 18, 2026 | 9:50 PM

Share

ರವಿಚಂದ್ರನ್ ಸಿನಿಮಾಗಳಲ್ಲಿ ಹಾಡುಗಳೇ ಹೈಲೈಟ್ ಆಗಿರುತ್ತವೆ. ಅವರು ನೀಡಿದ ಹಲವು ಸಿನಿಮಾಗಳಲ್ಲಿ ಇದು ಕಾಣಿಸಿದೆ. ಈಗ ಅವರು 35 ಹಾಡುಗಳು ಇರು ಸಿನಿಮಾ ಮೂಲಕ ಬರಲು ರೆಡಿ ಆಗಿದ್ದಾರೆ. ಬಿಗ್ ಬಾಸ್ ಫಿನಾಲೆ ವೇದಿಕೆ ಮೇಲೆ ಈ ಬಗ್ಗೆ ಘೋಷಣೆ ಮಾಡಿದ್ದಾರೆ. ಇದನ್ನು ಕೇಳಿ ಅನೇಕರಿಗೆ ಅಚ್ಚರಿ ಆಗಿದೆ.

‘ಐ ಆ್ಯಮ್ ಗಾಡ್’ ಎಂಬುದು ಚಿತ್ರದ ಟೈಟಲ್. ಇದು ಸಂಪೂರ್ಣವಾಗಿ ಎಐ ತಂತ್ರಜ್ಞಾನದಿಂದ ಮಾಡಲ್ಪಟ್ಟ ಸಿನಿಮಾ ಅನ್ನೋದು ವಿಶೇಷ. ಈ ಬಗ್ಗೆ ರವಿಚಂದ್ರನ್ ಅವರು ಮಾಹಿತಿ ನೀಡಿದ್ದಾರೆ. ಒಬ್ಬರನ್ನು ಎಲಿಮಿನೇಟ್ ಮಾಡಲು ರವಿಚಂದ್ರನ್ ಅವರು ಬಿಗ್ ಬಾಸ್ ವೇದಿಕೆಗೆ ಬಂದಿದ್ದರು. ಈ ವೇಳೆ ಅವರು ಸಿನಿಮಾ ಬಗ್ಗೆ ಮಾಹಿತಿ ನೀಡಿದರು.

‘ಎರಡೂವರೆ ವರ್ಷದಿಂದ ಒಂದು ಸಿನಿಮಾ ಮಾಡ್ತಾ ಇದೀನಿ.400 ದಿನ ಶೂಟ್ ಮಾಡಿದ್ದೇನೆ. ಈ ಸಿನಿಮಾನ ಒಬ್ಬನೇ ಮಾಡಿದ್ದೇನೆ. ಎಐ ಇದೆ. ಕ್ಯಾಮೆರಾಮೆನ್ ಬಿಟ್ರೆ ಉಳಿದೆಲ್ಲವನ್ನೂ ನಾನೋಬ್ನೇ ಮಾಡಿದ್ದು. ಐ ಆ್ಯಮ್ ಗಾಡ್ ಚಿತ್ರದ ಹೆಸರು. ಇದಕ್ಕೆ ಮ್ಯೂಸಿಕ್ ಡೈರೆಕ್ಟರ್ ಕೂಡ ಇಲ್ಲ’ ಎಂದರು ರವಿಚಂದ್ರನ್.

ಇದನ್ನೂ ಓದಿ: ರವಿಚಂದ್ರನ್ ಎದುರೇ ರಾಜಾರೋಷವಾಗಿ ಸುಳ್ಳು ಹೇಳಿದ ಗಿಲ್ಲಿ; ಕಂಡು ಹಿಡಿದ ಕ್ರೇಜಿಸ್ಟಾರ್

‘ಐ ಆ್ಯಮ್ ಗಾಡ್ ಸಿನಿಮಾದಲ್ಲಿ 30-35 ಹಾಡು ಬರುತ್ತೆ. ನನ್ನ ಬರ್ತ್​​​ಡೇಗೆ (ಮೇ 30) ಸಿನಿಮಾ ತರಬೇಕು ಎಂಬ ಉದ್ದೇಶ ಇದೆ. ನಾನೇ ಎಲ್ಲವನ್ನೂ ಮಾಡಬೇಕು. ಹೀಗಾಗಿ ಟೈಮ್ ಆಗ್ತಾ ಇದೆ’ ಎಂದು ರವಿಚಂದ್ರನ್ ಮಾಹಿತಿ ನೀಡಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ